ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ) ಸಂಚಿಕೆ-1

August 18, 2006 - 7:13pm — ritershivaram

ಕಲ್ಯಾಣಾದ್ಭುತ ಗಾತ್ರಾಯ ಕಾಮಿತಾರ್ಥ ಪ್ರದಾಯಿನೇ |
ಶ್ರೀಮದ್ವೆಂಕಟನಾಥಾಯ ಶ್ರೀನಿವಾಸಾಯತೇನಮಃ ||
ಜಗತ್ತು ತ್ರಿಗುಣಾತ್ಮಕವಾಗಿದೆ. ಇಲ್ಲಿ ಮೂರು ಭಾಗ ಜಲಾವೃತವಾಗಿದೆ. ಒಂದು ಭಾಗ ಮಾತ್ರ ಭೂಮಿ. ಈ ಒಂದು ಭಾಗ ಭೂಮಿಯಲ್ಲಿ ಮೂರು ಭಾಗ ಪರಮ ಪಾಪಿಗಳೆ ತುಂಬಿದ್ದಾರೆ. ಹೌದು, ಪರಮ ಪಾಪಿಗಳಿಗೇ ಸುಭಿಕ್ಷ ಕಾಲವೆಂದರು ನಮ್ಮ ಹರಿದಾಸರು 15ನೇ ಶತಮಾನದಲ್ಲಿಯೆ. ಈಗ ಜನ ಸಂಖ್ಯೆ ಹೆಚ್ಚುತ್ತಲೇ ಇದೆ ಪರಮ ಪಾಪಿಗಳೂ ಹೆಚ್ಚುತ್ತಲೆ ಇದ್ದಾರೆ. ಹೌದು, ಮೂರು ಭಾಗ ಪರಮ ಪಾಪಿಗಳಾದರೆ, ಇನ್ನೊಂದು ಭಾಗದಲ್ಲಿ ಸಾತ್ವಿಕರು. ಈ ಸಾತ್ವಿಕರಿಂದಲೇ ಇಡೀ ಜಗತ್ತು ಅಸ್ತಿತ್ವದಲ್ಲಿರುವುದು; ಚಲನೆಯಲ್ಲಿರುವುದು. ಜಗತ್ತಿನಲ್ಲಿ ಸಾತ್ವಿಕ ಶಕ್ತಿಯೆ ಮೇಲು. ನಾವು ಯಾರ ಜೊತೆ ಬದುಕ ಬೇಕೆಂಬುದ ನಮ್ಮ ಆಯ್ಕೆಗಷ್ಟೇ ಎದಿರಾಗಿ ಬಿಡುವ ಸವಾಲು ಅಲ್ಲವೇ...?

ತಿರುಪತಿ ತಿರುಮಲೇಶ ಸಂಪತ್ತಿನ ಸ್ವಾಮಿ, ಬಡ್ಡಿ ಕಾಸಿನವನೆಂದೇ ಭಾವಿಸುವುದಲ್ಲ. ಅವನು ಸಾತ್ವಿಕ ಸಂಪನ್ನ. ಇಡೀ ಜಗತ್ತಿಗೆ ಸಾತ್ವಿಕ ಶಕ್ತಿ ಸಾರಲೆಂದೇ ಭೂಮಿಗಿಳಿದು ಬಂದ ಭಗವಂತನವನು ಎಂಬ ಸತ್ಯ ತಿಳಿದವರೂ ಕಡಿಮೆಯೆ . ಭಕ್ತಿ ಭಾವದಿಂದ ಅವನಿಗೆ ಹರಕೆ ಕಾಣಿಕಗಳನ್ನೊಪ್ಪಿಸಿದರೆ ಸಾಕು, ತಮ್ಮ ಇಷ್ಟಾರ್ಥಗಳು ಸಿದ್ಧಿಸುವುವೆಂದು ನಂಬಿರುವ ಸಮುದಾಯ ಬಹಳ ದೊಡ್ಡದು. ಸಾಮಾನ್ಯವಾಗಿ ರಾಮಾಯಣ ,ಮಹಾ ಭಾರತ ಈ ಎರಡು ಮಹಾ ಪುರಾಣ ಕಥೆಗಳು ಎಲ್ಲಕಾಲಕ್ಕೂ
ಸಮಕಾಲೀನ ಜೀವನ ಮೌಲ್ಯಗಳನ್ನು ಒದಗಿಸುತ್ತವೆ ಎಂಬ ಭಾವನೆಯೆ ಪ್ರಚಲಿತದಲ್ಲಿದೆ.. ಇವುಗಳನ್ನು ಹೊರತು ಪಡಿಸಿ ಬೇರೆ ಯಾವುದಾದರೂ ಪುರಾಣ ಕಥೆ ನಮ್ಮ ಬದುಕಿಗೆ ಮೌಲಿಕ ವೆನಿಸೀತೇ.... ಸಾರ್ವಕಾಲಿಕ ಸತ್ಯವನ್ನು ತೆರೆದಿಡಬಲ್ಲದೇ ಎಂಬ ಶೋಧನೆಯಲ್ಲಿ ನಾನಿದ್ದಾಗ ಮೂಡಿ ಬಂದ ಕೃತಿ “ಸಪ್ತಗಿರಿ ಸಂಪದ”. 1997ರಲ್ಲಿ ಪ್ರಕಟವಾದ ಈ ನನ್ನ ಪೌರಾಣಿಕ ಕೃತಿ ಸಾಕಷ್ಟು ಜನ ಮನ್ನಣೆ ಗಳಿಸಿತಾದರೂ , ಈ ಪ್ರಚಾರ ಪ್ರಪಂಚದಲ್ಲಿ ನನ್ನಂಥ ಸಾಮಾನ್ಯ ಲೇಖಕನಿಗೆ ಅದು ಇಷ್ಟವಿಲ್ಲದ ಹಾಗೂ ಸಾಧ್ಯವೂ ಆಗದ ಮಾತಲ್ಲವೇ... ಈ ಬರಹಗಾರನ ಬದುಕಿನಲ್ಲೊಂದು ಮಹತ್ವದ ಕೃತಿಯಾಗಿರುವ ಈ “ಸಪ್ತಗಿರಿ ಸಂಪದ” ವನ್ನು ಅದೇ ಹೆಸರಿನ ಸಂಪದ.ನೆಟ್ ವೆಬ್ ಸೈಟ್ ನಲ್ಲಿ ಪೌರಾಣಿಕ ಕಾದಂಬರಿಯಾಗಿ ಬ್ಲಾಗ್ ಮಾಡ ಬಯಸಿದ್ದೇನೆ. ದಯವಿಟ್ಟು ಇದನ್ನೊಂದು ಧಾರ್ಮಿಕ ಕೃತಿಯೆಂದು ನೀವು ಊಹಿಸಿದಿರಾದರೆ ಖಂಡಿತ ತಪ್ಪಾದೀತು!. ಮುಖ್ಯವಾಗಿ ಇಂದಿನ ಪೀಳಿಗೆಯ ಎಲ್ಲ ಧರ್ಮೀಯರೂ ಇಷ್ಟ ಪಡುವಂತಹ ಸಾಮಾಜಿಕ ಮೌಲ್ಯಗಳು ಈ ಕೃತಿಯಲ್ಲಿದೆ ಎಂದು ಘಂಟಾಘೋಷವಾಗಿ ಹೇಳಬಲ್ಲೆ. ಈ ಸಪ್ತಗಿರಿ ಸಂಪದದ ಸಾರವಿರುವುದೇ ಜಗತ್ತಿನಲ್ಲಿ ಸಭ್ಯನಾಗಿ ರುವುದು ಸಭ್ಯಗೃಹಸ್ತನಾಗಿ ಬದುಕುವುದನ್ನು ಬಿಟ್ಟರೆ ಬೇರೇನಿದೆ ಎಂದು ಹೇಳಿದರೆ ಏನೂ ಹೇಳಿದಂತಾಗದು....
ನೀವೂ ತಿರುಪತಿ ಪುಣ್ಯ ಕ್ಷೇತ್ರವನ್ನು ಸಂದರ್ಶಿಸಿರಬಹುದು. ನಾನು ಮೊದಲ ಬಾರಿಗೆ ಭೇಟಿ ಕೊಟ್ಟಾಗ ಯಾಕೆ ಇಲ್ಲಿ ಜನ ತಂಡೋಪತಂಡವಾಗಿ ಬರುತ್ತಾರೆ. ತಮ್ಮ ಹರಕೆ ಕಾಣಿಕೆಗಳನ್ನೊಪ್ಸಿ ಮುಂದಿನ ಬದುಕಿಗೆ ಅದೇನನ್ನು ಕೊಂಡೊಯ್ಯುತ್ತಾರೆಂದು ತುಂಬಾ ತಲೆ ಕೆಡಿಸಿಕೊಂಡವನು. ಅಲ್ಲಿ ಸಿಗುವ ಮಗ್ಗಿ ಪುಸ್ತಕಗಳ ಮಾದರಿಯ ಸ್ಥಳ ಪುರಾಣ ಕಥೆಯಿಂದ ಬದುಕಿಗೆ ಭಕ್ತಿಯೊಂದನ್ನು ಹೊರುತು ಪಡಿಸಿ ಬೇರೇನನ್ನೂ ಕಾಣದವನಾಗಿ, ಜಗತ್ತಿನಲ್ಲಿ ಈ ದೇವರ ದರ್ಶನ ಮಾಡುತ್ತಿದ್ದಂತೆ ಪಾಮರರೂ ,ಪಾಪಿಗಳು, ಜ್ಞಾನಿಗಳೆಲ್ಲರೂ ಒಕ್ಕೊರಲಿನಿಂದ “ಗೋವಿಂದಾ” ಎಂದು ಕೈಮುಗಿಯುವುದೇಕೆಂದು ಚಿಂತಾಕ್ರಾಂತನಾದವನು. ಇಲ್ಲ, ಇಲ್ಲಿ ಸಹಸ್ರಾರು ಜನರು ಪ್ರತಿದಿನವೂ ದೇವರ ದರ್ಶನಕ್ಕಾಗಿ ಬರುತ್ತಿದ್ದಾರೆಂದರೆ, ಇಲ್ಲಿ ಅದೆಂಥ ಚುಂಬಕ ಶಕ್ತಿ ಇದ್ದೀತು! ಅದೇ ಸಾತ್ವಿಕ ಶಕ್ತಿಯೆ...? ಭೃಗು ಮಹರ್ಷಿಯಿಂದ ಪರೀಕ್ಷೆಗೊಳಗಾಗಿ ತಾನೆ ಸಾತ್ವಿಕನೆಂದು ಶೃತ ಪಡಿಸಿದ ಶ್ರೀಹರಿ, ಆ ಸಾತ್ವಿಕ ಸಂದೇಶವು ಆ ಮೂರು ಲೋಕಗಳಿಗೆ ಮಾತ್ರ ಸೀಮಿತವೆನಿಸದೇ ಇಡೀ ಜಗತ್ತಿಗೆ ಸಾರಲೆಂದು ಶ್ರೀಹರಿ ಶ್ರೀನಿವಾಸನಾಗಿ ಬಂದನೆಂಬುದನ್ನು ಸಾಮಾನ್ಯವಾಗಿ ಲಭ್ಯವಿರುವ ಸ್ಥಳಪುರಾಣ ಕಥೆ ಪುಸ್ತಕಗಳಲ್ಲಿ ಕಾಣಸಿಗಲಾರದು. ಕೇವಲ ಭಕ್ತಿ ಪ್ರಧಾನವಷ್ಟೇ ಅವುಗಳಲ್ಲಿ. ಇಂದಿನ ಯುವ ಪೀಳಿಗೆಗೆ ಏನೆಲ್ಲವನ್ನೂ ಪ್ರಾಕ್ಟಿಕಲ್ ಲೈಫ್ ಗೆಂದೇ ಹೋಲಿಸಿನೊಡುವಂತಹ ಸಂದರ್ಭದಲ್ಲಿ ಬದುಕುತ್ತಿರುವ ಹಿರಿಯರಾದ ನಾವು ಅವರ ಅನೇಕ ಪ್ರಶ್ನೆಗಳಿಗೆ ಉತ್ತರಿಸಲಾರೆವು.

-ಎಚ್.ಶಿವರಾಂ 18 ಆಗಸ್ಟ್ ,2006

  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ)
~.~
  • Login or register to post comments
  • 703 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಪ್ತಗಿರಿ ಸಂಪದ (ಪುರಾಣ ಕಥಾನಕ)
  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ) - ಸಂಚಿಕೆ-2
  • ಸಪ್ತಗಿರಿ ಸಂಪದ(ಪೌರಾಣಿಕ ಕಥಾನಕ) ಸಂಚಿಕೆ-3
  • ಸಪ್ತಗಿರಿ ಸಂಪದ(ಪುರಾಣ ಕಥಾನಕ) ಸಂಚಿಕೆ-3
  • ಪುರಾಣಗಳು/ಉಪನಿಷತ್ ಗಳು.
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 9 ಅತಿಥಿಗಳು ಆನ್ಲೈನ್ ಇರುವರು.


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator