ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಸಪ್ತಗಿರಿ ಸಂಪದ(ಪೌರಾಣಿಕ ಕಥಾನಕ) ಸಂಚಿಕೆ-3

August 23, 2006 - 1:27pm — ritershivaram

ದೇವರು ಎಲ್ಲಿದ್ದಾನೆ? ಇಲ್ಲ ಅವನು ಇದ್ದಿದ್ದರೆ ಇಷ್ಟೆಲ್ಲಾ ಅನಾಹುತಗಳು ಆಗುತ್ತಿರಲಿಲ್ಲ ಎಂದು ಹೇಳುತ್ತೇವೆ. ಅಂಥವರು ಈಗಾಗಲೇ ಹೇಳಿದಂತೆ ಈ ಜಗತ್ತಿನ ತ್ರಿಗುಣಾತ್ಮಕ ತತ್ವವನ್ನು ಮನಗಾಣಬೇಕಾಗುತ್ತದೆ. ಈಗ ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಪರಪಮ ಪಾಪಿಗಳೂ ಹೆಚ್ಚುತ್ತಲೇ ಇದ್ದಾರಷ್ಟೇ... ಕೇವಲ ಕಾಲುಭಾಗ ಮಾತ್ರವೆ ಆದರೂ ಸಾತ್ವಿಕ ಶಕ್ತಿ ಯಾವಾಗಲೂ ಬೆಂಕಿ ಮುಚ್ಚಿದ ಕೆಂಡದಂತೆಯೆ ಇರುತ್ತದೆಯಲ್ಲ... ಅದು ಸಿಡಿದೆದ್ದ ಸಂದರ್ಭಗಳಲ್ಲೆಲ್ಲ ಪಾಪಿಗಳ ದಮನವಾಗುತ್ತಲೆ ಇರುತ್ತದೆಯಾದರೂ ನಾವು ಅವರ ಸಂಖ್ಯೆ ಹೆಚ್ಚುತ್ತಲೆ ಇರುವುದು ಇನ್ನೂ ನಡೆದೇ ತೀರುವುದರಿಂದ, ಎಷ್ಟೇ ದುಷ್ಟ ನಿಗ್ರಹವಾದರೂ ಕೂಡ ನಮಗೆ ತೃಪ್ತಿ ಇಲ್ಲವಾಗಿರುತ್ತದೆ
ದೇವರಿಲ್ಲ ಎಂದು ಸುಲಭವಾಗಿ ಹೇಳಿಬಿಡುವ ವ್ಯಕ್ತಿ ತಾನು ಸ್ವತಃ ದೇವರೇ ಆಗಿರಬೇಕಷ್ಟೇ. ಆತನ ಅಪರಾಧಗಳಿಗೆ ಕ್ಷಮೆ ಎಂಬುದೇ ಇಲ್ಲವಲ್ಲ... ! ಹಾಗೆಯೆ, ದೇವರಿದ್ದಾನೆಂದು ಪರಮ ಭಕ್ತಿಯಿಂದ ಮಾಡಬಾರದ ಪಾತಕಗಳನ್ನೂ ಮಾಡುವ ವ್ಯಕ್ತಿ ಕೂಡ ಕ್ಷಮಾರ್ಹನಲ್ಲ; ಅವನಿಗೆ ಆ ದೇವರೇ ಅವನ ಜೀವಿತದಲ್ಲಿ ನಾವೇ ಕಾಣುವಂತೆ ಶಿಕ್ಷೆ ವಿಧಿಸದಿರಲಾರ. ಶಿಶುಪಾಲ ನೂರೊಂದು ತಪ್ಪು ಮಾಡುವವರೆಗೆ ಶ್ರೀ ಕೃಷ್ಣ ಕಾದು ಕುಳಿತವನಂತೆ ನಾವು ಅಂಥ ಪಾತಕಿಗಳ ಪಾಪದ ಕೊಡ ತುಂಬುವ ತನಕವೂ ಕಾಯುವುದು ಅನಿವಾರ್ಯ.....
ದೇವರು, ಮನುಷ್ಯನಿಗೆ ದೈವತ್ವದಲ್ಲಿ ನಂಬಿಕೆ ಎಂದರೆ- ಸತ್ಯ ಧರ್ಮ, ಪ್ರಾಮಾಣಿಕತೆ, ಇತರರಿಗೆ ಉಪದ್ರವ ಕೊಡದೇನೆ, ದ್ವೇಷಾಸೂಯೆಗಳಿಗೆ ಮನ ತೆರದೇನೆ, ಕಷ್ಟಕಾರ್ಪಣ್ಯಗಳನ್ನು ಎದುರಿಸುತ್ತಲೇ ಬದುಕನ್ನು ನಿಭಾಯಿಸುವುದು. ಯಾವಾಗಲೂ, ಸಭ್ಯರಿಗೆ, ಜ್ಞಾನಿಗಳಿಗೇ ಈ ಜಗತ್ತಿನಲ್ಲಿ ತೊಂದರೆಗಳು ಅಧಿಕ. ಅದು ವಿಧಿ ನಿಯಮವೇ ಸರಿ. ಅದನ್ನು ಮೀರಿ ಅಡ್ಡ ದಾರಿ ಹಿಡಿಯುವುದೆಂದರೆ ಅಪಗತಿ ತಂದು ಕೊಂಡಂತೆಯೆ ಸರಿ. ಅಷ್ಟೇಕೆ , ಮಾನವೀಯ ಪ್ರಜ್ಞೆಯೊಂದಿದ್ದರೆ, ಸಾಲದು ದೈವ ಶ್ರದ್ಧೆ ಇರಲೇಬೇಕು. ನೀವೇ ಯೋಚಿಸಿ; ಅದಿಲ್ಲದಿದ್ದರೆ, ಈ ಜಗತ್ತು ತನ್ನ ವ್ಯಾಪಾರ ವ್ಯವಹಾರದಲ್ಲಿಯೂ ನಂಬಿಕೆಯುಳ್ಳವರಿಲ್ಲದೇನೆ ಸ್ತಗಿತಗೊಳ್ಳುವುದಿಲ್ಲವೇ? ವ್ಯವಹಾರದಲ್ಲಿ ಎಷ್ಟೇ ಲೆಕ್ಕಪತ್ರಗಳು, ದಾಖಲೆಗಳಿರಲಿ ನಂಬಿಕೆಯ ಮೇಲೇ ಕೊಟ್ಯಂತರ ರೂ.ಗಳ ವಹಿವಾಟು ನಡೆಯುತ್ತಲೇ ಇರುವುದನ್ನು ಕಾಣುತ್ತಲೇ ಇದ್ದೇವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು, ಬೃಹತ್ ಬಂಡವಾಳ ಶಾಹಿಗಳೂ ಇಂದಿಗೂ ದೇವರನ್ನು ನಂಬದೇನೆ ತಮ್ಮ ಹಣ ಹೂಡಿಕೆ ಮಾಡದಿರುವವರು ವಿರಳವೇ ಸರಿ. ಕೋಟಿಗಟ್ಟಲೆ ಚೆಲ್ಲುವ ಚಿತ್ರೋದ್ಯಮಿಗಳಂತೂ, ದೇವರು ಹಾಗೂ ತಮ್ಮ ಭವಿಷ್ಯದಲ್ಲಿ ನಂಬಿಕೆ ಎಂದಿಗೂ ಬಿಡಲಾರರಲ್ಲ...!
*********

ಸಪ್ತಗಿರಿಯೊಡೆಯನ ಕಥಾನಕದಲ್ಲಿ ಸಾತ್ವಿಕತೆ ಮತ್ತು ಸಾತ್ವಿಕ ಶಕ್ತಿ ಏನೆಂಬುದನ್ನು ಆ ಶ್ರೀನಿವಾಸನ ಕಥೆಯ ಮೂಲಕವೇ ನಾವು ತಿಳಿಯೋಣ ಇನ್ನೊಮ್ಮೆ ಹೇಳುವೆ- ನೀವು ಈ ಹಿಂದೆ ಓದಿಕೊಂಡಿರಬಹುದಾದ ಶ್ರೀನಿವಾಸ ಕಲ್ಯಾಣ ಅಥವಾ ವೆಂಕಟೇಶ ಪುರಾಣ ಕಥೆಗೆ ಕಿಂಚಿತ್ ಲೋಪವಿಲ್ಲದೇನೆ ಆ ಭಗವಂತನ ಪ್ರೇರೇಪಣೆಯಂತೆಯೆ ನಾನು ಹೇಳಿರುವ ಈ ಕಥೆಯಲ್ಲಿ , ನಿಮಗೆ ಸತ್ವಗುಣದ ಹಿರಿಮೆಯನ್ನು ಸಾರುವ ಎಂದಿಗೂ ಸಾರ್ವಕಾಲಿಕವೆನಿಸುವ ಜೀವನ ಮೌಲ್ಯಗಳು ಪುಟಪುಟಗಳಲ್ಲೂ ಕಾಣಸಿಗುವುದಾದರೆ , ಅದೂ ಆ ದೇವ ದೇವನ ಮಹಿಮೆಯೇ ಅಲ್ಲದೆ ಇನ್ನೇನು! ದ್ವಾಪರಯುಗದಲ್ಲಿ ಶ್ರೀಕೃಷ್ಣನ ಅವತಾರ ಮುಗಿದಿತ್ತು. ಆನಂತರವೇ ಕಲಿಯುಗದಲ್ಲಿ ಶ್ರೀನಿವಾಸನು ಕಾಣಿಸಿಕೊಂಡಿರುವುದು. ದಶಾವ ತಾರಗಳಲ್ಲಿ ಇದೊಂದು ಅವತಾರವೇನಲ್ಲ ಆದರೂ ಕಲಿಯುಗದ ಜನರಿಗೆ ಶ್ರೀನಿವಾಸ ಅವತಾರ ಸ್ವರೂಪಿಯೆ. ಸೃಷ್ಟಿಕರ್ತನ ಬ್ರಹ್ಮಲೋಕದಿಂದ ಈ ಕಥಾನಕದ ಆರಂಭ. ಅಂದೊಮ್ಮೆ ಬ್ರಹ್ಮದೇವನಿಗೆ ಭವಲೋಕದ ಸ್ಥಿತಿಗತಿಗಳ ಕುರಿತು ದೊಡ್ಡ ಚಿಂತೆ. ಆತನ ಶೃತಿ ಸೂತ್ರಗಳು ಉತ್ತರಿಸದಿರಲಾರದೂ ಇದೆಯೇನು? ಸೃಷ್ಟಿಗೆ ಮೂಲಾಧಾರವಾದ, ಏಕಸೂತ್ರವಾದ ಒಂದು ಸಾಮರ್ಥ್ಯವಿದೆ. ಅದೇ “ಸತ್” ಚರಾಚರ ಜಗತ್ತಿನ ಅಸ್ತಿತ್ವಶಕ್ತಿ. ಅದಕ್ಕೆ ಹತ್ತಿರ ಹತ್ತಿರವಾಗತ್ತಾ ಬದುಕುವುದೇ ಮನುಷ್ಯನ ಐಹಿಕ ಸಾಧನೆ. ಆ ಪರಿಯಲ್ಲಿ ಯಥಾರ್ಥವನ್ನು ಮನಗಾಣವುದೇ ಜೀವಿತದ ಧರ್ಮ. ಸತ್ ಶಕ್ತಿಗೆ ತಲೆ ಬಾಗುವುದೆಂದರೇನೆ ಮಾನವ ಧರ್ಮ ಪಾಲಿಸಿದಂತೆ. ಧಾರ್ಮಿಕತೆ ಎಂದರೆ ಒಂದು ಜಾತಿ, ಪಂಗಡವಲ್ಲ; ಯಾವ ಜನಾಂಗದವರೇ ಆಗಲಿಎನ್ನುವುದರ ಬದಲು,ಯಾವ ಧರ್ಮೀಯರೆ ಆಗಲೆಂದು ಹೇಳುವುದು ನಿಜಕ್ಕೂ ತಪ್ಪಾಗುತ್ತದೆ. ನಾವು ದೈವತ್ವದ ಅಳತೆಗೋಲಾಗಿರುವ ದೈವಿಕತೆಗೆ ತಲೆಬಾಗುವುದೆಂದರೆ ಒಂದು ಜಾತಿ ಅಥವಾ ಪಂಗಡ ತೋರಿದ ಪದ್ಧತಿಗಳಿಗೆಂದೇನೂ ಅಲ್ಲ, ಯಾಕೆಂದರೆ, ದೈವಿಕತೆಯ ಇನ್ನೊಂದು ಮುಖವೇ ಧಾರ್ಮಿಕತೆ. ಎಲ್ಲ ಜಾತಿ-ಪಂಗಡದವರಿಗೂ ದೇವರೊಬ್ಬನೇ.. ಧಾರ್ಮಿಕತೆ ದೈವಿಕತೆಯೂ ಒಂದೇ ಅಂತೆಯೇ, ಎಲ್ಲ ಧರ್ಮೀಯರೂ ಎಂದು ಸಂಬೋಧಿಸಿದಾಗ ಎಲ್ಲ ಜಾತಿಯವರೂ ಎಂದೇ ತಿಳಿಯುವುದರಲ್ಲೇ ತಪ್ಪು ಮಾಡುತ್ತೇವಲ್ಲವೇ...
-ಶಿವರಾಂ ಎಚ್. 23 ಆಗಸ್ಟ್ ,2006

ಮುಂದಿನ ಸಂಚಿಕೆಗಳಿಗೆ ಇಲ್ಲಿ ನೋಡಿ-
[http://sapthagirisampada.blogspot.com|ಸಪ್ತಗಿರಿ ಸಂಪದ]

  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ)
~.~
  • Login or register to post comments
  • 687 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಪ್ತಗಿರಿ ಸಂಪದ(ಪುರಾಣ ಕಥಾನಕ) ಸಂಚಿಕೆ-3
  • ಸಪ್ತಗಿರಿ ಸಂಪದ (ಪುರಾಣ ಕಥಾನಕ)
  • ದೇವರು ಮತ್ತು ನಾವು
  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ) ಸಂಚಿಕೆ-1
  • ಸಪ್ತಗಿರಿ ಸಂಪದ (ಪೌರಾಣಿಕ ಕಥಾನಕ) - ಸಂಚಿಕೆ-2
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ವಿಧ್ಯಾಭ್ಯಾಸ ಮತ್ತು ಕಾಲೇಜು
  • ದಾಸವಾಳಕ್ಕೆ ಇರುವೆಗಳ ದಾಳಿ: ಕತ್ತರಿಸಿದ ಬುಲ್-ಬುಲ್ ಕರುಳ ಬಳ್ಳಿ
  • ಬ್ರಹ್ಮ ಕಮಲ.
  • ಲ೦ಡನ್ ಪ್ರವಾಸಕಥನ ಭಾಗ ೯: ಫ್ರೆ೦ಚ್-ಮೇಡ್ ದುರ೦ತದ ಲ೦ಡನ್ ರಸಸ್ವಾಧನೆ
  • ಕಾಶ್ಮೀರದ ಹುಡುಗಿಯ ಕತೆ
  • ಪ್ರತಿಭಟನೆಗಳು, ಮೆರವಣಿಗೆ, ಬಂದ್..ಸಹ ವೃತ್ತಿಯೇ?
  • ಜಿಪುಣ

ಇತ್ತೀಚಿನ ಪ್ರತಿಕ್ರಿಯೆಗಳು

  • csomsekraiah
    ಉ: ಕಾಶ್ಮೀರದ ಹುಡುಗಿಯ ಕತೆ
    July 4, 2008 - 7:20pm
  • ಸಂಗನಗೌಡ
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 6:51pm
  • ಸಂಗನಗೌಡ
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 6:50pm
  • ವೈಭವ
    ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
    July 4, 2008 - 6:36pm
  • ಸಂಗನಗೌಡ
    ಉ: ಕನ್ನಡ ಅಂಕಿಗಳು ಮಾಡಿದ ಪಾಪವೇನು?
    July 4, 2008 - 6:36pm
  • ಸಂಗನಗೌಡ
    ಉ: ಕನ್ನಡ ಅಂಕಿಗಳು ಮಾಡಿದ ಪಾಪವೇನು?
    July 4, 2008 - 6:33pm
  • ಸಂಗನಗೌಡ
    ಉ: ಕನ್ನಡ ಅಂಕಿಗಳು ಮಾಡಿದ ಪಾಪವೇನು?
    July 4, 2008 - 6:31pm
  • cmariejoseph
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 4, 2008 - 6:20pm
  • cmariejoseph
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 4, 2008 - 6:07pm
  • roshan_netla
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 5:59pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.

— ಹೋರೇಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator