ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ನನಸಾಗುವುದಿಲ್ಲ ಏಕೀ ಕನಸುಗಳು?

December 22, 2006 - 3:54am — Shyam Kishore

**** ನನಸಾಗುವುದಿಲ್ಲ ಏಕೀ ಕನಸುಗಳು? *****

ಏನೆಲ್ಲ ಕಲ್ಪನೆಗಳು ಬಾಲ್ಯದಲ್ಲಿ, ಎಳೆಯ ಮನದಲ್ಲಿ;
ಬದುಕೆಂದರೆ ಶುಭ್ರ, ವಿಶಾಲ, ತಿಳಿನೀಲಿ ಬಾಂದಳದಂತೆ,
ಗರಿಗೆದರಿ ಮನದುಂಬಿ ಹಾರಾಡಬಹುದಾದ ಆಂಗಣದಂತೆ,
ಬದುಕೆಂದರೆ ಅನಂತ, ನಿಗೂಢ, ತಾರೆಗಳ ತೋಟದಂತೆ.

ಏನೆಲ್ಲ ಕನಸುಗಳು ಬಾಲ್ಯದಲ್ಲಿ, ಎಳೆಯ ಮನದಲ್ಲಿ;
ವಿಜ್ಞಾನಿಯಾಗಿ ಹೊಸತೇನನ್ನೋ ಕಂಡುಹಿಡಿದಂತೆ,
ಗಗನಯಾತ್ರಿಯಾಗಿ ತಿಂಗಳನ ಅಂಗಳದಿ ನಡೆದಾಡಿದಂತೆ,
ಹಿಮಕವಿದ ಉನ್ನತ ಗಿರಿ-ಶಿಖರಗಳನ್ನು ಮೆಟ್ಟಿ ನಿಂತಂತೆ!

ಏನೆಲ್ಲ ತುಡಿತಗಳು ಬಾಲ್ಯದಲ್ಲಿ, ಎಳೆಯ ಮನದಲ್ಲಿ;
ಹತ್ತು ಮಂದಿಗೆ ಪಾಠ ಕಲಿಸುವ ಗುರುವು ನಾವಾದಂತೆ,
ಚಿತ್ರಕಾರನಾಗಿ ಹೊಸ ಬಣ್ಣಗಳಲಿ ಜಗವ ತೋಯಿಸಿದಂತೆ,
ವೈದ್ಯನಾಗಿ ಜನರ ಸೇವೆಯಲ್ಲಿಯೇ ಧನ್ಯತೆಯ ಪಡೆದಂತೆ!

ಏನೆಲ್ಲ ಆದರ್ಶಗಳು ಬಾಲ್ಯದಲ್ಲಿ, ಎಳೆಯ ಮನದಲ್ಲಿ;
ನವಭಾರತ ನಿರ್ಮಾಣವೆಂಬ ಯಜ್ಞದಲ್ಲಿ ಭಾಗಿಗಳಾದಂತೆ,
ಗಾಂಧಿ, ಸುಭಾಷರ ಧ್ಯೇಯಗಳಿಗೆ ಮರುಜೀವವಿತ್ತಂತೆ,
ನಮ್ಮ ಸಾಧನೆಯ ಚೆಂಬೆಳಕಲ್ಲಿ ಸಮಾಜವನ್ನು ಬೆಳಗಿದಂತೆ.

ನಾವು ಬೆಳೆದಂತೆ ನಮ್ಮ ಕನಸುಗಳ ರಾಶಿ ಕರಗುವುದು ಏಕೆ?
ಯಾಂತ್ರಿಕ ಬಾಳಬಂಡಿಯೋಟವೇ ಕೇಂದ್ರವಾಗುವುದು ಏಕೆ?
ಇಷ್ಟೆಲ್ಲ ತುಡಿತಗಳು, ಕನಸುಗಳು, ನನಸಾಗುವುದಿಲ್ಲವೇಕೆ?
ನಮ್ಮ ಕನಸುಗಳ ಸ್ಫೂರ್ತಿ ಸೆಲೆಯೇ ಬತ್ತಿ ಹೋಗುವುದೇಕೆ?

  • ಕಾವ್ಯ ಮತ್ತು ಕವನ
~.~
  • Login or register to post comments
  • 451 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 22, 2006 - 10:28am — hisushrutha

Re: ನನಸಾಗುವುದಿಲ್ಲ ಏಕೀ ಕನಸುಗಳು?

hisushrutha's picture

ತುಂಬಾ ಸುಂದರ ಕವನ ಕಿಶೋರ್. ಚಿಕ್ಕವನಿದ್ದಾಗ ನಾನಂತೂ ಬಸ್ ಡ್ರೈವರ್ ಆಗಬೇಕು ಅಂದುಕೊಂಡಿದ್ದೆ Smiling

http://hisushrutha.blogspot.com/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
December 22, 2006 - 10:40am — betala

Re: ನನಸಾಗುವುದಿಲ್ಲ ಏಕೀ ಕನಸುಗಳು?

betala's picture

ನಿಮ್ಮ ಕನಸುಗಳು ಸೂಪರ್ ಅಗಿದೆ...

ಅದನ್ನ ನನಸು ಮಾಡಲು ಈ ನನ್ನ ಕವಿತೆ ಓದಿ Eye-wink Smiling

http://sampada.net/blog/betala/11/12/2006/2555

-ನಿಮ್ಮ ಬೆಂಬಿಡದ ಬೇತಾಳ .....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
December 22, 2006 - 12:31pm — Shyam Kishore

Re: ನನಸಾಗುವುದಿಲ್ಲ ಏಕೀ ಕನಸುಗಳು?

Shyam Kishore's picture

ಬೇತಾಳ ಮಹಾಶಯರೇ (ತಪ್ಪು ತಿಳೀಬೇಡೀಪ್ಪ! ನಿಮ್ಮ ಕಾವ್ಯನಾಮದಿಂದ ಸಂಬೋಧಿಸಿದ್ದೇನೆ ಅಷ್ಟೆ),

ನಿಮ್ಮ ಕವನ (ಕನಸುಗಳು ಎಲ್ಲಿ) ಓದಿದೆ. ಚೆನ್ನಾಗಿದೆ. ಸುನೀಲ್ ಹೇಳಿದಂತೆ ನೀರಿನಲ್ಲಿ ನೆನೆದ ಕಲ್ಲುಗಳ ಉಪಮೆ ಸುಂದರವಾಗಿದೆ.

ಕನಸು ಅಂದ ತಕ್ಷಣ ನನಗೆ ನೆನಪಾಗೋದು "ನಾದವಿರದ ಬದುಕೆ..." ಕವನ.

"ಕಲೆಯೆಷ್ಟೆ ಇದ್ದರೇನು,ಕನಸಿರದ ಬಾಳು ಬಾಳೇ?
ಮಳೆಬಿಲ್ಲು ಸಿಂಗರಿಸದ ಕರಿಮುಗಿಲಿನೊಂದು ಮಾಲೆ..."

ಎಂತಹ ಸುಂದರವಾದ ಸಾಲುಗಳು ಅಲ್ಲವೇ?

-ಶ್ಯಾಮ್ ಕಿಶೋರ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನಸುಗಳು
  • ಕನಸುಗಳು ಎಲ್ಲಿ ?
  • ನೂರು ಕನಸುಗಳು
  • ನನ್ನ ಕನಸುಗಳು
  • ಜಡಭರತನ ಕನಸುಗಳು- ಜಿ.ಬಿ.ಜೋಷಿಯವರ ಪುಸ್ತಕ.-- ನಮ್ಮ ಕನಸುಗಳಿಗೆ ಏನು ಅರ್ಥ ?
Syndicate content

ಲೇಖಕರು

Shyam Kishore's picture

ಪರಿಚಯ

ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು.
ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
  • ಪರಂಪರೆ-ಪ್ರವಾಹ-ಪ್ರತಿರೋಧ
  • ದುಶ್ಚಟವಿಲ್ಲದವರೆಲ್ಲಾ ಗಾಂಧಿಯಾಗುತ್ತಾರೆ ಎಂದಾದರೆ…?
  • ’ರಾಕ್ ಬ್ರಿಡ್ಜ್ ಮೆಮೋರಿಯಲ್ ಸ್ಟೇಟ್ ಪಾರ್ಕ್”
  • ಗುರುದತ್ ಎಂಬ ದುರಂತ ನಾಯಕ
  • ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
  • ಕುಮಾರ ಪರ್ವತದಲ್ಲಿ ಚಾರಣ

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 7:46am
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು-47 ಭಾರತ:ಹುಚ್ಚರೇ ಹೆಚ್ಚು!
    October 13, 2008 - 7:45am
  • venkatesh
    ಉ: ಅಮೃತ್ ಮಂಗ್ಳೂರ್ ಯಾಕೊ ಕಾಣ್ವಲ್ರಲ್ಲ ; ಬ್ಯಾಸ್ರಿಕೆಆಯ್ತೇನ್ರಿ, ಎಲ್ ಹೋಗ್ಯಾರ್ರಿ ?
    October 13, 2008 - 7:10am
  • kannadakanda
    ಉ: ಸಪ್ತಸ್ವರಗಳು
    October 13, 2008 - 7:05am
  • kannadakanda
    ಉ: ಸಪ್ತಸ್ವರಗಳು
    October 13, 2008 - 7:02am
  • Paramesh H
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 7:02am
  • jp.nevara
    ಉ: ನಮ್ಮ ಬಾಳು
    October 13, 2008 - 6:27am
  • ASHOKKUMAR
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 5:31am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
    October 13, 2008 - 5:28am
  • venkatesh
    ಉ: ಪರ್ಯಟಕ ಮಿತ್ರರ ಜೊತೆಯಲ್ಲಿ !
    October 13, 2008 - 4:54am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 71 ಅತಿಥಿಗಳು ಆನ್ಲೈನ್ ಇರುವರು.


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator