Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಅಣ್ಣಾವ್ರಿಗೊಂದು ನುಡಿನಮನ

December 28, 2006 - 8:02am — Shyam Kishore

ಅಣ್ಣಾವ್ರೇ, ಇಂದು ನಮ್ಮೊಂದಿಗಿಲ್ಲ ನೀವು ಎಂದರೆ ನಂಬಲಾಗುತ್ತಿಲ್ಲ
ನಿಮ್ಮ ಪಾತ್ರಗಳ ಗುಂಗಿನಿಂದ ಹೊರಬರಲು ಏಕೋ ಸಾಧ್ಯವಾಗುತ್ತಿಲ್ಲ.
ಬೆಳ್ಳಿತೆರೆಯ "ಬಂಗಾರದ ಮನುಷ್ಯ" ನಿಮಗೆ ಅರ್ಪಣೆ ನನ್ನೀ ಕವನ;
ನೀವು ಕಟ್ಟಿಕೊಟ್ಟ ಬಣ್ಣ-ಬಣ್ಣದ ಕನಸುಗಳಿಗಿದು ನನ್ನ ನುಡಿ ನಮನ.

ಸಾಧು-ಸಂತರಿಗೆ, ಇತಿಹಾಸದ ರಾಜರಿಗೆ ಜೀವ ತುಂಬಿದಿರಿ ನೀವು;
ಕನಕನಾಗಿ ಬಾಗಿಲನು ತೆರೆಯೆಂದು ಬೇಡಿದಾಗ ತಳಮಳಿಸಿದ್ದು ನಾವು.
ಕಾಳಿದಾಸನ "ಮಾಣಿಕ್ಯ ವೀಣೆ"ಯನು ಬಣ್ಣಿಸಲು ಪದಗಳೇ ಸಿಗುತ್ತಿಲ್ಲ;
ರಣಧೀರ, ಕೃಷ್ಣದೇವರಾಯರಂತೂ ಸದಾ ಮನದಲ್ಲೇ ನೆಲಸಿರುವರಲ್ಲ!

ಮರೆಯಲಾದೀತೇ ಮಣ್ಣಿನ ಜೊತೆ ಮಗುವನ್ನೂ ತುಳಿದ ಕುಂಬಾರನನ್ನು?
ಮಯೂರನ ಕತ್ತಿವರಸೆಯನ್ನು, ಅರ್ಜುನ-ಬಭ್ರುವಾಹನರ ಕಾಳಗವನ್ನು?
ಪಾತ್ರದೊಳಗೊಂದಾಗುತ್ತಿದ್ದ ನಿಮ್ಮಭಿನಯದ ಉತ್ತುಂಗ ಆ "ಹರಿಶ್ಚಂದ್ರ",
ಕಿರೀಟವನ್ನಿಟ್ಟು ಅರಸನುಡುಗೆ ತೊಟ್ಟರಂತೂ ಸಾಕ್ಷಾತ್ ಧರೆಗಿಳಿದ ಇಂದ್ರ!

ಕನ್ನಡವೇ ನನ್ನ ಪ್ರಾಣವೆನ್ನುತ್ತಾ ನಾಡು-ನುಡಿಗಳಿಗಾಗಿ ಹೋರಾಡಿದಿರಿ,
ರಾಜಕೀಯಕ್ಕಿಳಿಯದೆಯೆ ಅಭಿಮಾನಿಗಳೆದೆಯೆಂಬ ರಾಜ್ಯವನು ಆಳಿದಿರಿ.
ಶಾಲೆ-ಆಸ್ಪತ್ರೆಗಳನ್ನೇಕೆ ಕಟ್ಟಿಸಲಿಲ್ಲ? ಎಂದು ಕೇಳಲು ಮನಸ್ಸೊಪ್ಪುತ್ತಿಲ್ಲ;
ಸಾಕು ಬಿಡಿ, ತಲೆಮಾರುಗಳೆರಡರಲ್ಲಿ ಕನ್ನಡದ ಕಿಚ್ಚು ಹೊತ್ತಿಸಿದಿರಲ್ಲ.

ಅಣ್ಣಾವ್ರೇ, ಸಾಕೆನ್ನಿಸಿತೇಕೆ "ರಾಜಕುಮಾರ"ನೆಂಬೀ ಅಮೋಘ ಪಾತ್ರ?
ಮರೆಯಾದರೇನು ನೀವು, ಮನದಲ್ಲಿ ನಿಮ್ಮ ಪಾತ್ರಗಳದ್ದೇ ನಿತ್ಯಚೈತ್ರ.
ಆ ದೇವರಿಗೂ ನೋಡಬೇಕೆನ್ನಿಸಿತೇನೋ ನಿಮ್ಮನ್ನು ಅವನ ಪಾತ್ರದಲ್ಲಿ!
ಪುನಃ ಬಂದುಬಿಡಿ ಬೇಗ, ತೆರವಾಗಿಹುದು ಸ್ಥಾನ ನಮ್ಮ ಹೃದಯಗಳಲ್ಲಿ.

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 491 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಕ್ತಾಯ
  • ರಾಜ್-ತಾಜ್
  • ಝೆನ್ ಕಥೆ ೩೩: ಸಾವಧಾನ!
  • ನಾಳೆ ನೀವೂ ಮಾಯ.............
  • "ಮಗ"
Syndicate content

ಲೇಖಕರು

Shyam Kishore's picture

ಪರಿಚಯ

ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು.
ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮೇ, 23, ರಿಂದ ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಧಿಕೃತವಾಗಿ ವಿಮಾನಯಾನ ಪ್ರಾರಂಭಿಸಲಿದೆ !
  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 7 ಅತಿಥಿಗಳು ಆನ್ಲೈನ್ ಇರುವರು.

ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator