Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಝೆನ್ ಕತೆಗಳು - ಓ ಎಲ್ ಎನ್ ಸ್ವಾಮಿ

ಝೆನ್ ೧೧: ವಾದದಲ್ಲಿ ಗೆದ್ದಿದ್ದು ಹೀಗೆ

August 31, 2005 - 4:34pm — olnswamy

ಅದೊಂದು ಝೆನ್ ದೇವಾಲಯ. ಅಲ್ಲಿನ ನಿವಾಸಿಗಳನ್ನು ಬೌದ್ಧ ಧರ್ಮಕ್ಕೆ ಸಂಬಂಧಿಸಿದ ಚರ್ಚೆಗಳಲ್ಲಿ ಸೋಲಿಸಿದ ಸಂನ್ಯಾಸಿಗೆ ಅಲ್ಲಿರಲು ಅವಕಾಶ ದೊರೆಯುತ್ತಿತ್ತು.
ಜಪಾನಿನ ಉತ್ತರಭಾಗದಲ್ಲಿದ್ದ ಆ ದೇವಾಲಯದಲ್ಲಿ ಇಬ್ಬರು ಸನ್ಯಾಸಿಗಳಿದ್ದರು. ದೊಡ್ಡವನು ತುಂಬ ಓದಿಕೊಂಡಿದ್ದ, ಚಿಕ್ಕವನು ಮೂರ್ಖ. ಅವನಿಗೆ ಇದ್ದದ್ದು ಒಂದೇ ಕಣ್ಣು.
ಅಲೆಮಾರಿ ಸನ್ಯಾಸಿಯೊಬ್ಬ ಅಲ್ಲಿಗೆ ಬಂದ. ದೇವಾಲಯದಲ್ಲಿ ಉಳಿಯಲು ಅವಕಾಶ ಕೇಳಿದ. ದೊಡ್ಡ ಸನ್ಯಾಸಿ ಅಂದು ದಿನವೆಲ್ಲ ಓದಿ, ಬರೆದು, ವಾದ ಮಾಡಿ ಸುಸ್ತಾಗಿದ್ದ. ಆದ್ದರಿಂದ ಚಿಕ್ಕವನನ್ನು ಕರೆದು ನೀನೇ ವಾದ ಮಾಡು ಎಂದ. ಹುಷಾರು, ಮೌನ ವಾಗ್ವಾದವನ್ನು ಮಾಡುತ್ತೇನೆ ಎಂದು ಮೊದಲೇ ಹೇಳಿಬಿಡು ಎಂದು ಎಚ್ಚರಿಕೆಯನ್ನೂ ನೀಡಿದ.
ಚಿಕ್ಕ ಸನ್ಯಾಸಿ ಮತ್ತು ಅಲೆಮಾರಿ ಸನ್ಯಾಸಿ ಇಬ್ಬರೂ ದೇವಾಲಯದೊಳಗೆ ಹೋಗಿ ಮೌನ ವಾಗ್ವಾದಕ್ಕೆ ಕುಳಿತರು.
ಕೊಂಚ ಹೊತ್ತಿನ ನಂತರ ಅಲೆಮಾರಿ ಸನ್ಯಾಸಿ ವಾಪಸ್ಸು ಬಂದು ಹೇಳಿದ, “ನಿಮ್ಮ ದೇವಾಲಯದ ಚಿಕ್ಕ ಸನ್ಯಾಸಿ ಬಹಳ ಅದ್ಬುತವಾದ ಮನುಷ್ಯ, ನನ್ನನ್ನು ವಾದದಲ್ಲಿ ಸೋಲಿಸಿಬಿಟ್ಟ” ಎಂದು ಹೇಳಿದ.
“ಹೌದೆ? ನಿಮ್ಮ ಮೌನ ವಾಗ್ವಾದದಲ್ಲಿ ಯಾವ ವಿಚಾರವನ್ನು ಚರ್ಚಿಸಿದಿರಿ?” ಎಂದು ಹಿರಿಯ ಸನ್ಯಾಸಿ ಕೇಳಿದ.
ಅಲೆಮಾರಿ ಹೇಳಿದ: “ನಾನು ಮೊದಲು ಒಂದು ಬೆರಳು ತೋರಿಸಿದೆ. ಅದು ಪರಮಜ್ಞಾನವನ್ನು ಪಡೆದ ಬುದ್ಧನ ಅಖಂಡತೆಯ ಸಂಕೇತ. ಅದಕ್ಕೆ ಅವನು ಎರಡು ಬೆರಳು ತೋರಿಸಿದ. ಅದು ಬುದ್ಧ ಮತ್ತು ಅವನ ಬೋಧನೆಗಳನ್ನು ಸೂಚಿಸಿತು. ನಾನು ಮೂರು ಬೆರಳು ತೋರಿಸಿದೆ. ಅಂದರೆ ಬುದ್ಧ, ಅವನ ಚಿಂತನೆಗಳು ಮತ್ತು ಬುದ್ಧನ ಅನುಯಾಯಿಗಳು ಒಟ್ಟು ಮೂರು ಸಂಗತಿಗಳು ಎಂಬುದು ನನ್ನ ಅರ್ಥವಾಗಿತ್ತು. ಅವನು ತನ್ನ ಮುಷ್ಠಿ ಬಿಗಿಹಿಡಿದು ತೋರಿಸಿದ. ಅಂದರೆ ನಾನು ಹೇಳಿದ ಮೂರೂ ಸಂಗತಿಗಳು ಒಂದೇ ಆತ್ಮಜ್ಞಾನದ ಮೂಲದಿಂದ ಬಂದವು ಎಂದು ಸೂಚಿಸಿಬಿಟ್ಟ. ನಾನು ಸೋತೆ. ಇಲ್ಲಿರಲು ನನಗೆ ಹಕ್ಕಿಲ್ಲ. ಹೋಗುತ್ತೇನೆ” ಎಂದು ಹೇಳಿ ಅಲೆಮಾರಿ ಹೊರಟುಹೋದ.
“ಎಲ್ಲಿ ಆ ದುಷ್ಟ” ಎಂದು ಕಿರುಚುತ್ತಾ ಚಿಕ್ಕ ಸನ್ಯಾಸಿ ಬಂದ.
“ಯಾಕೆ, ಏನಾಯಿತು? ನೀನೇ ವಾದದಲ್ಲಿ ಗೆದ್ದೆಯಂತಲ್ಲ” ಎಂದು ಹಿರಿಯ ಸನ್ಯಾಸಿ ಕೇಳಿದ.
“ಗೆದ್ದದ್ದೂ ಇಲ್ಲ, ಎಂಥ ಮಣ್ಣೂ ಇಲ್ಲ. ಎಲ್ಲಿ ಅವನು? ಅವನನ್ನು ಹಿಡಿದು ಬಾರಿಸಬೇಕು” ಎಂದ ಚಿಕ್ಕ ಸನ್ಯಾಸಿ.
“ಮೌನವಾಗ್ವಾದದಲ್ಲಿ ಏನಾಯಿತು ಹೇಳು” ಎಂದ ಹಿರಿಯ ಸನ್ಯಾಸಿ.
ಚಿಕ್ಕ ಸನ್ಯಾಸಿ ಹೇಳಿದ: “ಅವನು ದೇವಾಲಯದಲ್ಲಿ ಕುಳಿತ ಕೂಡಲೆ ಒಂದು ಬೆರಳು ಎತ್ತಿ ತೋರಿಸಿದ. ನನಗೆ ಒಂದೇ ಕಣ್ಣು ಇದೆ ಎಂದು ಅಪಮಾನ ಮಾಡಿದ. ಅವನು ಅಪರಿಚಿತನಾದ್ದರಿಂದ, ಸೌಜನ್ಯ ತೋರಬೇಕೆಂದು ನನ್ನ ಎರಡು ಬೆರಳು ತೋರಿಸಿದೆ. ‘ನಿನಗೆ ಎರಡೂ ಕಣ್ಣು ಇವೆಯಲ್ಲ ಸಂತೋಷ’ ಎಂದು ಅದರ ಅರ್ಥ. ಅದಕ್ಕೆ ಆ ದುಷ್ಟ ಮೂರು ಬೆರಳು ತೋರಿಸಿದ. ‘ನಮ್ಮಿಬ್ಬರಿಗೂ ಸೇರಿ ಒಟ್ಟು ಮೂರೇ ಕಣ್ಣು’ ಎಂದು ಹೇಳಿದಂತೆ ಇತ್ತು. ನನಗೆ ಸಿಟ್ಟು ಬಂದು ಮುಷ್ಠಿ ತೋರಿಸಿದೆ. ಅವನು ಓಡಿ ಹೋದ. ಇಷ್ಟೇ ಆದದ್ದು ಎಂದ.

ಯಾವುದೇ ವಾದ ವಿವಾದ ಇರಲಿ. ಇನ್ನೊಬ್ಬರ ಮಾತನ್ನು ನಮಗೆ ಬೇಕಾದಂತೆ ಅರ್ಥ ಮಾಡಿಕೊಳ್ಳುತ್ತೇವೆ ಅಲ್ಲವೆ? ನಮ್ಮ ಅರ್ಥಕ್ಕೆ ತಕ್ಕಂತೆ ಸೋಲು, ಗೆಲುವು ಎಂದು ನಿರ್ಧಾರ ಮಾಡಿಕೊಳ್ಳುತ್ತೇವೆ. ವಾದ, ಸೋಲು, ಗೆಲುವು ಎಲ್ಲ ಅರ್ಥಹೀನವೇ!

‹ ಝೆನ್ ೧೦ : ಇನ್ನೂ ಮೂರು ದಿನಮೇಲಿನ ಪುಟಕ್ಕೆಝೆನ್ ೨: ಶೌನ್ ಮತ್ತು ಅವನ ತಾಯಿ ›
  • ಝೆನ್ ಕಥೆಗಳು (ಕಥಾ ಮಾಲಿಕೆ)
Ornamental seperator
  • Printer-friendly version
  • Login or register to post comments
  • 1166 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬುದ್ಧ ಮತ್ತು ಬೆಂಕಿ- ಝೆನ್ ಕಥೆ
  • ಝೆನ್ ಕಥೆ ೩೧: ಚೆಲುವು
  • ಇಬ್ಬರು ಸನ್ಯಾಸಿಗಳು ಮತ್ತು ಒಬ್ಬ ತರುಣಿ
  • ಪ್ರಭಾವ
  • ಝೆನ್ ೧: ನಗುವ ಬುದ್ಧ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator