ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ತ ರಾ ಸು ಮತ್ತು ಮಾಸ್ತಿ ಒಂದೇ ಸ್ಥಳಮಹಿಮೆ ಬಗ್ಗೆ ಬರೆದಿದ್ದರೇ?

March 11, 2007 - 8:22pm — ASHOKKUMAR

ತರಾಸು ಅವರ "ಹಂಸಗೀತೆ" ಕಾದಂಬರಿಯನ್ನು ಓದುತ್ತಿದ್ದೇನೆ. ಅದರಲ್ಲಿ ವೀರಣ್ಣಜ್ಜ ಎಂಬ ಅರ್ಚಕರ ಕತೆ ಬರುತ್ತದೆ. ಅರ್ಚಕರು ಓರ್ವ ಮಹಿಳೆಯನ್ನು ಇಟ್ಟುಕೊಂಡಿದ್ದು, ಪೂಜೆ ಮುಗಿಸಿ ಅವಳನ್ನು ಭೇಟಿಯಾಗುವ ಕ್ರಮ ಇಟ್ಟುಕೊಂಡಿದ್ದರಂತೆ.ಪಾಳೆಯಗಾರರು ಆಗಮಿಸಿದ ಬಳಿಕವಷ್ಟೆ ಮಹಾಪೂಜೆ ಮಾಡುವ ಅವರು ಒಂದು ದಿನ ಎಷ್ಟು ಕಾದರೂ ಅವರು ಬರದಿದ್ದಾಗ, ಪೂಜೆ ಮುಗಿಸಿ ಮನೆಗೆ ತೆರಳುತ್ತಾರೆ. ಅಲ್ಲಿ ಅವರ ಹೆಂಗಸು ಹೂ ಮುಡಿದುಕೊಂಡು,ಊಟ ಮುಗಿಸಿ,ಮಲಗಬೇಕೆನ್ನುವಷ್ಟರಲ್ಲಿ ಪಾಳೆಯಗಾರರ ಆಗಮನದ ಸೂಚನೆ ಸಿಗುತ್ತದೆ. ಪಾಳೆಯಗಾರರಿಗೆ ಅಸಮಾಧಾನವಾದೀತೆಂಬ ಹೆದರಿಕೆಯಿಂದ, ಸ್ತ್ರೀಗೆ ಮುಡಿಸಿದ ಹೂವನ್ನು ಮತ್ತೆ ತೆಗೆದುಕೊಂಡು,ದೇವಾಲಯಕ್ಕೆ ಬಂದು,ಪೂಜೆ ಮತ್ತೆ ಮಾಡಿ,ಪಾಳೆಯಗಾರರಿಗೆ ಪ್ರಸಾದರೂಪವಾಗಿ,ಹೂವನ್ನಿತ್ತಾಗ,ಅದರಲ್ಲಿ ಕೂದಲನ್ನು ನೋಡಿ ಪಾಳೆಯಗಾರರು ಕಿಡಿಕಿಡಿಯಾದರೆ, ಅರ್ಚಕರು ಅದು ದೇವರ ಮುಡಿಯ ಕೂದಲು ಎಂದು ಸಾಧಿಸುತ್ತಾರೆ.ಮಾತಿಗೆ ಮಾತು ಬೆಳೆದು,ಮರುದಿನ ಹಗಲು ಪಾಳೆಯಗಾರರು ದೇವಸ್ಥಾನಕ್ಕೆ ಆಗಮಿಸಿ,ದೇವರ ಮುಡಿಯನ್ನು ಪರೀಕ್ಷಿಸುವುದು ಎಂದಾಗುತ್ತದೆ.

ಆಶ್ಚರ್ಯವೆಂದರೆ,ಮಾಸ್ತಿಯವರ ಸಣ್ಣಕತೆಯೊಂದರಲ್ಲಿ,ಇಂತಹದ್ದೇ ಐತಿಹ್ಯದ ಬಗ್ಗೆ ಕತೆಯಿದೆ. ಆದರೆ ಅಂತ್ಯವನ್ನು ತರಾಸು ಅವರಿಗಿಂತ ಭಿನ್ನವಾಗಿ ಮಾಸ್ತಿಯವರು ನಿರೂಪಿಸಿದ್ದಾರೆ.ಮಾಸ್ತಿಯವರು ತಮ್ಮ ಕತೆಯಲ್ಲಿ ಅರ್ಚಕ ದಿಕ್ಕು ಕಾಣದೆ, ದೇವರ ಮುಂದೆ ಪ್ರಾರ್ಥಿಸುತ್ತಾ,ಅಲ್ಲೇ ನಿದ್ದೆ ಹೋದ ಸಂದರ್ಭದಲ್ಲಿ (ಬಹುಶ:) ಅರ್ಚಕರ ಮಗಳು ತನ್ನ ಮುಡಿಯನ್ನು ಕತ್ತರಿಸಿ,ಶಿವಲಿಂಗದ ಮೇಲಿಟ್ಟು,ಅವರನ್ನು ಸಂಕಟದಿಂದ ಪಾರು ಮಾಡಿದಂತೆ ನೈಜವಾಗಿ ಚಿತ್ರಿಸಿದ್ದಾರೆ. ತರಾಸು ಕಾದಂಬರಿಯಲ್ಲಿ ಅರ್ಚಕರು ಮತ್ತು ವೆಂಕಟಸುಬ್ಬಯ್ಯ ಎಂಬ ಸಂಗೀತ ಕಲಾವಿದರು ತನ್ಮಯದಿಂದ ಧ್ಯಾನಿಸಿ, ಪಾಳೆಯಗಾರರು ಬರುವಾಗ,ಶಿವಲಿಂಗದ ಮೇಲೆ ಮುಡಿ ಬಂದಿರುತ್ತದೆ.ಅದು ನೈಜವೇ ಎಂದು ನೋಡಲು ಪಾಳೆಯಗಾರರು ಅದನ್ನು ಕಿತ್ತಾಗ, ಅದರಿಂದ ರಕ್ತ ಬರುತ್ತದೆ ಎಂಬ ಐತಿಹ್ಯದ ಬಗ್ಗೆ ಬರೆದಿದ್ದಾರೆ.

ಈರ್ವರು ಮಹನೀಯರು ಬರೆದ ಐತಿಹ್ಯ ಒಂದೇ ಸ್ಥಳದ ಬಗ್ಗೆಯೇ?ಮಾಸ್ತಿಯವರ ಕತೆ ನಾನು ಹಿಂದೆ ಓದಿದ್ದೆ.ಪುಸ್ತಕದ ಪ್ರತಿ ನನ್ನಲ್ಲಿ ಲಭ್ಯವಿಲ್ಲ.

  • ಸ್ಥಳ ಮಹಿಮೆ, ಪುರಾಣ
~.~
  • Login or register to post comments
  • 527 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 13, 2007 - 7:17pm — vasista2k

Re: ತ ರಾ ಸು ಮತ್ತು ಮಾಸ್ತಿ ಒಂದೇ ಸ್ಥಳಮಹಿಮೆ ಬಗ್ಗೆ ಬರೆದಿದ್ದರೇ?

vasista2k's picture

ನಮಸ್ಕಾರ,

ನನಗೆ ಅನ್ನಿಸುವುದೇನೆಂನ್ದರೆ, ಮಾಸ್ತಿ ಮತ್ತು ತರಾಸು ಅವರ ಮನಸ್ಸಿನಲ್ಲಿ ಬೇರೆ ಬೇರೆ ಉದ್ದೇಶವಿದ್ದು, ಬೇರೆ ಕೂನೆಯೊಂದಿಗೆ ಮುಗಿಸಿದರು... ಒಬ್ಬರು ಭಕ್ತಿ ಮಾರ್ಗ ಅಥವ ದೇವರ ಬಗ್ಗೆ ಬರೆದರೆ ಇನ್ನೊಬ್ಬರು ಸಾಮಾನ್ಯ ಜೀವನದಲ್ಲಿ ನಡೆಯುವ ಎಲ್ಲರು ನಂಬುವಂತೆ ಬರೆದರು.. ಹಾಗಾಗಿ ಇದು ಸ್ತಳದ ಕಥೆಗಿಂತ ಮನುಷ್ಯನ ಕಥೆ..

vasista
9945694337

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • .ಪಾಳೆಯಗಾರನೆಂದರೆ ಇಮ್ಮಡಿ ಜಗದೇವರಾಯ!
  • ಗ್ನು/ಲಿನಕ್ಸ್ ಹಬ್ಬ - Volunteers meet :: ಶಶಿಶೇಖರ್
  • ಅಕ್ಚ್ಯುಲ್ ಲಕ್ಷ್ಮೀ !!
  • ಹೊಳಲ್ಕೆರೆಯ ತೂಗುತಲೆ ಗಣೇಶ- ದೇವಸ್ಥಾನ ಕಟ್ಟುವ ಮೊದಲು !
  • ಭಾರತೀಯ ಹಿಂದೂ ದೇವಸ್ಥಾನ ---- ಕೊಲಂಬಸ್
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 41 ಅತಿಥಿಗಳು ಆನ್ಲೈನ್ ಇರುವರು.


ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator