ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ನೋಡ ಬನ್ನಿ ಕುಂದಾದ್ರಿ...

May 16, 2007 - 3:05am — kuchela

ಮೋಡದೊಂದಿಗೆ ಗುದ್ದಾಡಲು, ಆಕಾಶವನ್ನು ಮುಟ್ಟಲು... ಬನ್ನಿ
ಮೋಡದ ಜೊತೆ ಗುದ್ದಾಡಬೇಕೇ? ದೂರದಲ್ಲೆಲ್ಲೋ ಕಾಣುವ ಆಕಾಶವೆಂಬುದನ್ನು ಮುಟ್ಟಬೇಕೆ? ವಿಶಾಲ ಪಶ್ಚಿಮ ಘಟ್ಟವನ್ನು ಒಂದು ಕೇಂದ್ರ ಬಿಂದುವಾಗಿಟ್ಟುಕೊಂಡು ಸುತ್ತಲೂ ನೋಡಬೇಕೆ? ಇನ್ನು ಕರ್ನಾಟಕಕ್ಕೇ ಕರೆಂಟುಕೊಡುವುದಕ್ಕಾಗಿ ಸಾವಿರಾರು ಎಕರೆ ಮುಳುಗಡೆ ಮಾಡಿದಂತೆ ವಾರಾಹಿ ಹಿನ್ನೀರಿನ ಕರಾಳ ದೃಶ್ಯ ನೋಡಬೇಕೆ? ಹಾಗಿದ್ದರೆ ಬನ್ನಿ... ನಿಮ್ಮನ್ನು ಕೈ ಬೀಸಿ ಕರೆಯತ್ತಿದೆ ಕುಂದಾದ್ರಿ ಬೆಟ್ಟ.
ದೂರದಲ್ಲೋ ಕಾಣುವ ಮೋಡ ಈ ಕುಂದಾದ್ರಿಯ ಮೇಲೆ ನಿಂತರೆ ನಿಮ್ಮ ಮಧ್ಯೆ, ನಿಮ್ಮನ್ನು ಸೀಳಿಕೊಂಡೇ ಹೋಗುತ್ತದೆ. ಅದೊಂದು ಹೊಸ ಅನುಭವ ಕೊಡುವ ಸ್ಥಳ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿರುವ ಈ ಕುಂದಾದ್ರಿ ಬೆಟ್ಟ ಚಾರಣಿಗರ ಸ್ವರ್ಗ, ಪ್ರಕೃತಿ ಪ್ರಿಯರ ನೆಚ್ಚಿನ ತಾಣ.
ಸಮುದ್ರಮಟ್ಟದಿಂದ ಸುಮಾರು ೪೫೦೦ ಸಾವಿರ ಅಡಿ ಎತ್ತರದಲ್ಲಿರುವ ಇಲ್ಲಿಂದ ಪ್ರಕೃತಿಯನ್ನು ವೀಕ್ಷಿಸುವುದೇ ಹಬ್ಬ.
ಇತಿಹಾಸ ಹೇಳುತ್ತದೆ...
ಈ ಬೆಟ್ಟದ ಮೇಲೆ ಜೈನ ಬಸದಿ ಇದೆ. ಅಲ್ಲಿ ಶ್ರೀ ಪಾರ್ಶ್ವನಾಥರ ಮೂರ್ತಿ ಇದೆ. ಹಾಗೆಯೇ ಜೈನ ಪಂಥದಲ್ಲಿ ಪ್ರಮುಖರೆನಿಸಿಕೊಂಡ, ಸಾಧಕರಾದ ಕುಂದ ಕುಂದಾಚಾರ್ಯರ ಮುಕ್ತಿ ಸ್ಥಳ ಇಲ್ಲಿದೆ.
ವಿಶೇಷತೆ...
ಇಲ್ಲೇ ಸಣ್ಣ ಪುಷ್ಕರಣಿ ಇದ್ದು, ಅಲ್ಲಿ ವರ್ಷದ ೩೬೫ ದಿನವೂ ನೀರು ಇರುವುದು ವಿಶೇಷ. ಇನ್ನೊಂದು ಪುಟ್ಟದಾದ ತಾವರೆಕೆರೆ. ಅಲ್ಲಿ ತಾವರೆ ಹೂವು ಅರಳಿ ನಿಂತಿರುವುದು ಆಶ್ಚರ್ಯ ತರುತ್ತದೆ.
ಸೂರ್ಯೋದಯ ಮತ್ತು ಸೂರ್ಯಾಸ್ತ ಇಲ್ಲಿನ ಮತ್ತೊಂದು ವಿಶೇಷ.
ಸೂರ್ಯೋದಯದ ಮೊದಲ ಕಿರಣ ಶ್ರೀ ಪಾರ್ಶನಾಥರ ವಿಗ್ರಹದ ಪಾದದ ಮೇಲೆ ಬೀಳಲು ಪ್ರಾರಂಭವಾಗುತ್ತದೆ. ಹಾಗೆಯೇ ಸೂರ್ಯಾಸ್ತ ಕೂಡ ವಿಶೇಷ ಆನಂದಕೊಡುತ್ತದೆ.
ಮೋಡ, ಮಂಜು ಅಷ್ಟಾಗಿ ಇಲ್ಲದ ಸಮಯದಲ್ಲಿ ಕಿಲೋಮೀಟರ್ ಗಟ್ಟಲೇ ದೂರದ ಕರಾವಳಿಯ ಸಮುದ್ರ ಕಡಲಲ್ಲಿ ದೊಡ್ಡ ದೊಡ್ಡ ಹಡಗುಗಳು ಹಾದು ಹೋಗುವುದು ಪುಟ್ಟದಾಗಿ ಕಾಣುತ್ತದೆ.
ಪ್ರತಿ ವರ್ಷ ಜನವರಿಯಲ್ಲಿ ಇಲ್ಲಿ ಜಾತ್ರೆ ನಡೆಯಲಿದ್ದು, ಉತ್ತರ ಭಾರತದಿಂದ ಸಾವಿರಾರು ಜನರು ಇಲ್ಲಿಗೆ ಬಂದು ಪದ್ಮಾವತಿ, ಪಾರ್ಶ್ವನಾಥ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
ಮೊಲ, ಕಾಡೆಮ್ಮೆ ಸಾಕಷ್ಟು ಕಂಡುಬಂದರೆ, ಹುಲಿ ಮುಂತಾದ ಕ್ರೂರ ಪ್ರಾಣಿ ಈ ಭಾಗದಲ್ಲಿ ಇದೆಯಂತೆ.
ಇಲ್ಲಿಗೇ ಸಮೀಪವೇ ಆಗುಂಬೆ, ಜೋಗಿಗುಂಡಿ ಜಲಪಾತವಿದೆ. ೨೯ ಕಿಲೋಮೀಟರ್ ತೆರಳಿದರೆ ಶೃಂಗೇರಿ.
ಮಾರ್ಗಸೂಚಿ: ಶಿವಮೊಗ್ಗ- ಉಡುಪಿ ರಸ್ತೆಯಲ್ಲಿ ತೀರ್ಥಹಳ್ಳಿಯಿಂದ ಆಗುಂಬೆ ಕಡೆಗೆ ಹೋಗುವ ರಸ್ತೆಯಲ್ಲಿ ಕುಂದಾದ್ರಿ ಬರುತ್ತದೆ. ಮುಖ್ಯ ರಸ್ತೆಯಿಂದ ನಾಲ್ಕು ಕಿಲೋಮೀಟರ್ ಒಳ ರಸ್ತೆಯ ಮೂಲಕ ಸಾಗಿದರೆ ನಂತರ ನಂತರ ೪ ಕಿಲೋಮೀಟರ್ ಗುಡ್ಡವೇರಬೇಕು.
ಇಲ್ಲವಾದರೆ ಖಾಸಗಿ ವಾಹನದಲ್ಲಿ ಗುಡ್ಡದ ಮೇಲೆ ತೆರಳಬಹುದು. ಉತ್ತಮ ರಸ್ತೆ ಇದೆ. (ಕಂಡೀಷನ್‌ನಲ್ಲಿರುವ ವಾಹನ ಮಾತ್ರ ಗುಡ್ಡ ಹತ್ತಲು ಸಾಧ್ಯ).

  • ಪ್ರವಾಸ ಕಥನ
~.~
  • Login or register to post comments
  • 405 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 16, 2007 - 1:59pm — anupkumart

ಉ: ನೋಡ ಬನ್ನಿ ಕುಂದಾದ್ರಿ...

anupkumart's picture

ನಾವು ಕಳೆದ ವರ್ಷ ಮಳೆಗಾಲದಲ್ಲಿಯೂ, ಚಳಿಗಾಲದಲ್ಲಿಯೂ ಕುಂದಾದ್ರಿ ನೋಡಿದ್ದೇವೆ. ಮಳೆಗಾಲದಲ್ಲಿ ಭಯಂಕರ ಮಳೆಯಿದ್ದರೂ ಆ ದೃಶ್ಯ ಅಷ್ಟೇ ಭವ್ಯವಾಗಿತ್ತು. ಕುವೆಂಪು ಅವರು ಹೇಳುವ ಹಾಗೆ ’ರುದ್ರ-ರಮಣೀಯ’ ದೃಶ್ಯವೆಂದರೆ ತಪ್ಪಾಗಲಾರದು. ಇನ್ನು ಚಳಿಗಾಲದಲ್ಲಿ ಕೇಳಬೇಕೆ. ಕುಂದಾದ್ರಿ ಏರಿ ಮಂಜಿನ ಕಡಲು ಸೇರಿದೆವು !

Anup MalenaaDu
Manassu MalenaaDinalli...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಗುಂಬೆ/ಶ್ರಂಗೇರಿ/ಹನುಮನ ಗುಂಡಿ ಪ್ರವಾಸ
  • ಗಳಗೇಶ್ವರ ದೇವಸ್ಥಾನ - ಗಳಗನಾಥ
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಬೆಂಕಿ ಬಿದ್ದ ಹುಲ್ಲಿನ ದಾರಿಯಲ್ಲಿ: ಕುಂತಿಬೆಟ್ಟ
Syndicate content

ಲೇಖಕರು

kuchela's picture

ಪೂರ್ಣ ಹೆಸರು
ಶ್ರೀಕಾಂತ್

ಪರಿಚಯ

ಹಾಯ್, ಸಹೃದಯ ಗೆಳೆಯರಿಗೆ ನನ್ನ ನಮನ. ಶ್ರೀಕಾಂತ್ ನನ್ನ ಹೆಸರು. ವಾಸಸ್ಥಳ ಶಿವಮೊಗ್ಗ. ಊರು ಕೋಟ(ದ.ಕ). ಓದಿದ್ದು ಶಿವಮೊಗ್ಗ ಸಹ್ಯಾದ್ರಿ ಕಾಲೇಜ್ ನಲ್ಲಿ, ಬಿಬಿಎಂ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...
  • ಹಿಂದಿಚಲನಚಿತ್ರ, ’ಮಧುಮತಿ’ ಯನ್ನು ಗೆಳೆಯರಜೊತೆ ನೋಡುವ ಸಂದರ್ಭ ಬಂತು. ವಾ...ಎಂತಹ ಮಧುರ ಚಿತ್ರೀಕರಣ ! ಈಗ ನೋಡಿದಂತಿದೆ !

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 44 ಅತಿಥಿಗಳು ಆನ್ಲೈನ್ ಇರುವರು.


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator