ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕಾಳಿಂಗ ಸರ್ಪಕ್ಕೂ ರಾಜಧಾನಿ ಈ ಆಗುಂಬೆ

May 25, 2007 - 3:12am — kuchela

ಎಂಥ ಚೆಂದ ನಮ್ಮ ಆಗುಂಬೆ. ಆ ಆಗುಂಬೆಗೆ ಅದೆಷ್ಟೋ ಗರಿಗಳು. ಪ್ರಕೃತಿ, ಸೂರ್ಯಾಸ್ತಮಾನ, ಮಳೆಯ ರಾಜಧಾನಿ ಹೀಗೆ. ಈ ಚೆಂದಕ್ಕೆ ಮತ್ತೊಂದು ಗರಿ ಅದು. ಈಗ ಕಾಳಿಂಗಸರ್ಪಗಳ ರಾಜಧಾನಿಯೂ ಹೌದು ಎಂಬುದು ದೃಢಪಟ್ಟಿದೆಯಂತೆ.
ಕಾಳಿಂಗ ಸರ್ಪ ಅಲಿಯಾಸ್ ಕಿಂಗ್‌ಕೋಬ್ರಾ ಜಗತ್ತಿನ ವಿಷದ ಹಾವುಗಳಲ್ಲಿಯೇ ಅತ್ಯಂತ ದೊಡ್ಡದಾದ ಹಾವು. ಇದನ್ನು ದೃಡ ಪಡಿಸಿರುವವರು ವಿಶ್ವದ ಖ್ಯಾತ ಉರಗ ತಜ್ಞ ವಿಟೇಕರ್.
೧೯೭೧ರಲ್ಲಿ ಆಗುಂಬೆಗೆ ಭೇಟಿ ನೀಡಿದ್ದ ವಿಟೇಕರ್‌ಗೆ ಮೊದಲು ಇಲ್ಲಿನ ಮನೆಯೊಂದರಲ್ಲಿ ೯ ಅಡಿ ಉದ್ದದ ಕಾಳಿಂಗ ದರ್ಶನವಾಯಿತು. ಇದಾದ ಕೆಲವೇ ದಿನಗಳಲ್ಲಿ ಇನ್ನೊಂದು ಕಾಳಿಂಗ ಹಾವು ಕಾಣಿಸಿಕೊಂಡಿತು. ಮತ್ತು ಕಾಳಿಂಗನ ಬಗ್ಗೆ ಇಲ್ಲಿನ ಜನರು, ಅಂಗಡಿ ಕಟ್ಟೆಗಳಲ್ಲಿ ಮಾತನಾಡಲು ಪ್ರಾರಂಭಿಸಿದಾಗ ಅವರಿಗೆ ಕುತೂಹಲ ಹೆಚ್ಚಿತು. ನಂತರ ಕಾಳಿಂಗನಬಗ್ಗೆ ರಿಸರ್ಚ್ ಮಾಡಲು ನಿರ್ಧರಿಸಿಯೇ ಬಿಟ್ಟರಂತೆ. ಹೀಗೆ ವಿವರಿಸಿದ್ದು ಅವರ ಶಿಷ್ಯ ಗೌರಿಶಂಕರ್.
ಈ ಕಾಳಿಂಗ ರಾಜಧಾನಿಯಲ್ಲಿಗ ‘ರಾಜರ’ ರಿಸರ್ಚ್ ನಡೆಯುತ್ತಿದೆ. ಅವರ ಹಾವ- ಭಾವ, ಸಂತಾನ... ಹೀಗೆ ದಾಖಲಾತಿ ಆಂದೋಲನ.
ಈ ಆಂದೋಲನದ ಪ್ರಥಮ ಮಾಹಿತಿ ಪ್ರಕಾರ ಆಂಗುಬೆ ಕಾಳಿಂಗನ ರಾಜಧಾನಿ ಎಂಬುದು ಬಹುತೇಕ ಖಚಿತವಾಗುವಂತೆ ಅಂಶಗಳು ಕಂಡುಬಂದಿವೆ.
ಆಗುಂಬೆಯಲ್ಲಿ ವಿಟೇಕರ್ ನೇತೃತ್ವದಲ್ಲಿ ಪ್ರಾರಂಭವಾಗಿರುವ ಮಳೆಕಾಡು ಸಂಶೋಧನಾ ಕೇಂದ್ರದಲ್ಲಿ ಈಗ ಈ ಪ್ರಕ್ರಿಯೆ ಪ್ರಾರಂಭವಾಗಿದ್ದು ಇನ್ನೊಂದು ವರ್ಷದಲ್ಲಿ ಕಾಳಿಂಗ ಸರ್ಪದ ಸಾಕಷಷ್ಟು ಮಾಹಿತಿ ಸಿದ್ದವಾಗುತ್ತದೆ.
ಇದರ ಬಗ್ಗೆ ರಿಸರ್ಚ್ ನಡೆಸಿ ಪ್ರಪಂಚಕ್ಕೆ ಮಾಹಿತಿ ನೀಡಲು ವಿಟೇಕರ್ ನೇತೃತ್ವದ ತಂಡ ಶ್ರಮಿಸುತ್ತಿದೆ.
ಕಳೆದ ೨೨ ತಿಂಗಳಿಂದ ಮಳೆಕಾಡು ಸಂಶೋಧನಾ ಕೇಂದ್ರ ಈ ಕುರಿತು ತನ್ನ ಚಟುವಟಿಕೆ ಪ್ರಾರಂಭಿಸಿದ್ದು, ಪ್ರಸ್ತುತ ಪಶ್ಚಿಮ ಘಟ್ಟದಲ್ಲಿ ಕಾಳಿಂಗನ ನಡೆದಾಟದ ಬಗ್ಗೆ ಅಬ್ಸರ್‌ವೇಶನ್ ಕಾರ್‍ಯ ನಡೆದಿದೆ.
‘ನಾವೀಗ ರೇಡಿಯೋ ಟೆಲಿಮೀಟರ್ ಮತ್ತು ಮೆಡಿಕಲ್ ಕ್ಯುಟೆರಿ ತಂತ್ರಜ್ಞಾನದ ಮೂಲಕ ಪರಿಶೀಲನಾ ಕಾರ್‍ಯ ನಡೆಸಲು ಸಿದ್ದತೆ ನಡೆಸುತ್ತಿದ್ದೇವೆ. ಇದನ್ನು ಬಳಸಲು ಅರಣ್ಯ ಇಲಾಖೆಯಿಂದ ಪರ್‍ಮಿಶನ್ ಬೇಕು. ನಂತರ ಕಾಳಿಂಗ ಸರ್ಪದ ಮೇಲೆ ಪ್ರಯೋಗ ಪ್ರಾರಂಭವಾಗುತ್ತದೆ’ ಎನ್ನುತ್ತಾರೆ ಸಂಶೋಧನಾ ಕೇಂದ್ರದ ಮುಖ್ಯ ಅಧಿಕಾರಿ ಪಿ. ಗೌರಿಶಂಕರ್.
ಗೌರಿಶಂಕರ್ ಹೇಳುವಂತೆ, ಅವರು ಇಲ್ಲಿಗೆ ಬಂದ ನಂತರ ಸಮೀಪದ ಮನೆ, ಕೊಟ್ಟಿಗೆ, ಬಾವಿಯಲ್ಲಿ ಕಂಡುಬಂದ೫೦ಕ್ಕೂ ಹೆಚ್ಚು ಕಾಳಿಂಗ ಸರ್ಪಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಹಿಡಿದಿದ್ದಾರೆ. ಅದೂ ಸುತ್ತಮುತ್ತಲ ಹಳ್ಳಿಗಳ ಮನೆಗಳಲ್ಲಿ ಸೇರಿಕೊಂಡಿರುವ ಕಾಳಿಂಗನನ್ನು ಹಿಡಿಯಲಾಗಿದೆ. ಹಾಗೆ ಅದನ್ನು ಅಲ್ಲೇ ಸಮೀಪದ ಕಾಡಿನಲ್ಲಿ ಬಿಡಲಾಗಿದೆ.
ಈ ವರೆಗೆ ಕಾಡಿನಲ್ಲಿ ಸಿಕ್ಕ ಕಾಳಿಂಗನ ಮೊಟ್ಟೆಗಳನ್ನು ಸಂಗ್ರಹಿಸಲಾಗಿತ್ತು. ನಂತರ ೧೮ ತಿಂಗಳಲ್ಲಿ ಸುಮಾರು ೧೧೯ ಮರಿಗಳನ್ನು ಪುನಃ ಕಾಡಿಗೆ ಬಿಡಲಾಗಿದೆ.

ಕಾಳಿಂಗನ ಬಗ್ಗೆ...
ದೊಡ್ಡದಾದ ಶರೀರ, ನುಣುಪಾದ ಹೊಳೆಯುವ ಹುರುಪೆಗಳು; ಪ್ರಧಾನವಾಗಿ ಶರೀರದ ಮುಂಭಾಗದಲ್ಲಿ ವಿಶಿಷ್ಟವಾದ ಬಿಳಿಯ ಅಡ್ಡ ಪಟ್ಟೆಗಳು, ದೊಡ್ಡದಾದ ಕಲೆ, ಹುರುಪೆಗಳ ತುದಿಯಲ್ಲಿ ಕಪ್ಪು ಬಣ್ಣವಿರುತ್ತದೆ.
ಹುಟ್ಟಿದಾಗ ೫೦ ಸೆಂಟಿಮೀಟರ್ ಇದ್ದು, ಸರಾಸರಿ ಮೂರು ಮೀಟರ್ ಇರುತ್ತದೆ. ಇನ್ನು ಗರಿಷ್ಠ ೫ ಮೀಟರ್ ಇರುತ್ತದೆ.
ಬೃಹತ್ ಗಾತ್ರದ ಕಾಳಿಂಗ ಸರ್ಪದ ದೊಡ್ಡ ತಲೆಯು ಗುತ್ತಿಗೆಗಿಂತ ಸ್ವಲ್ಪ ಅಗಲವಾಗಿರುತ್ತದೆ. ತಲೆಯ ಹುರುಪೆಗಳ ತುದಿಯಲ್ಲಿ ಕಪ್ಪು ಬಣ್ಣ ಇರುತ್ತದೆ.
ಹಳದಿಯಿಂದ ದಟ್ಟವಾದ ಆಲಿವ್ ಹಸಿರಿನವರೆಗೆ ಶರೀರದ ಒಟ್ಟು ಬಣ್ಣದಲ್ಲಿ ವ್ಯತ್ಯಾಸವಿರುತ್ತದೆ. ಆದರೆ ಬಾಲವು ಕೆಲವೊಮ್ಮೆ ಕಡು ಕಪ್ಪು ಬಣ್ಣ ಇರುತ್ತದೆ.
ಶರೀರದ ತಳ ಭಾಗದ ಬಣ್ಣವು ಮೇಲ್ಘಾಗದ ಬಣ್ಣದಂತೆಯೇ ಇದ್ದು, ಸ್ವಲ್ಪ ತಿಳಿಯಾಗಿರುತ್ತದೆ.
ಇದು ಪ್ರಧಾನವಾಗಿ ಹಾವುಗಳನ್ನು ಮತ್ತು ಕೆಲವೊಮ್ಮೆ ಹಲ್ಲಿಗಳನ್ನು ತಿನ್ನುತ್ತವೆ. ಕೇರೆ ಹಾವು ಮತ್ತು ಚೌಕಳಿ ಬೆನ್ನೇಣು ಹಾವುಗಳಂತಹ ದೊಡ್ಡ ಹಾವುಗಳೇ ಇದರ ಪ್ರಮುಖ ಆಹಾರವಾಗಿರುವುದಂತೆ ಕಾಣುತ್ತದೆ. ಗರಿಷ್ಟ ವಯೋಮಾನ ೩೦ ವರ್ಷ.
ಇದರ ವಿಷ ನಾಗರ ಹಾವಿನ ವಿಷಕ್ಕಿಂತ ಕಡಿಮೆ ಪರಿಣಾಮ ಉಂಟುಮಾಡುವಂಥದ್ದು. ಆದರೆ ವಿಷ ಆನೆಯನ್ನೂ ಸಾಹಿಸಬಲ್ಲದು.
ಥೈಲ್ಯಾಂಡಿನಲ್ಲಿ ಮಾತ್ರ ಈ ಹಾವಿನ ಕಡಿತದ ಚಿಕಿತ್ಸೆಗೆ ಬೇಕಾದ ಪ್ರತಿ ವಿಷ ದೊರೆಯುತ್ತದೆ.
ಭಾರತದಲ್ಲಿ ಇವು ಅಪರೂಪವಾದರೂ ಬಹುತೇಕ ಪಶ್ಚಿಘಟ್ಟದಲ್ಲೇ ಹೆಚ್ಚಾಗಿ ಇದೆ. ಅಸ್ಸಾಂನ ಕಾಫಿ ಟೀ ತೋಟಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ.
ಆವಾಸ ಸ್ಥಾನ ಹೆಚ್ಚಾಗಿ ಮಳೆ ಬೀಳುವ ಪ್ರದೇಶ, ಮತ್ತು ದಟ್ಟ ಸಸ್ಯ ರಾಶಿ ಇರುವೆಡೆ.
ಹೆಣ್ಣು ಕಾಳಿಂಗ ಎಲೆಗಳಿಂದ ಗೂಡನ್ನು ನಿರ್ಮಿಸುತ್ತದೆ. ಗೂಡು ನಿರ್ಮಿಸಿಕೊಳ್ಳುವ ಜಗತ್ತಿನ ಏಕೈಕ ಹಾವುಕೂಡ ಇದಾಗಿದೆ.
ಇನ್ನೊಂದು ಮಹತ್ವದ ಅಂಶ ಎಂದರೆ ಕಾಳಿಂಗ ಆಕ್ರಮಣದ ಸ್ವಭಾವ ಎಂದೆಲ್ಲಾ ಕೇಳಿದ್ದೇವೆ. ಆದರೆ ಅದು ಹೆಚ್ಚಿನ ಮಟ್ಟಗೆ ಕಲ್ಪನೆಯೇ. ದಾಖಲೆಗಳು ಹೇಳುವ ಪ್ರಕಾರ ಇವು ಸಾಧು ಸ್ವಭಾವದ ಸರ್ಪಗಳು. ಆಕ್ರಮಣ ಮಾಡಲು ಇಷ್ಟಪಡವು ಮತ್ತು ಸಾಧ್ಯವಾದಾಗಲೆಲ್ಲಾ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತವೆ.
ನಿಸರ್ಗದ ನಡುವೆ ನೋಡಲು ಕಾಳಿಂಗ ಸರ್ಪ ನಿಜವಾಗಿಯೂ ಭಯಾನಕವಾಗಿವೆ. ಅದನ್ನು ಗಾಯಗೊಳಿಸಿದಾಗ ಅಥವಾ ನಿರ್ಬಂಧಿಸಿದಾಗ ಮಾತ್ರ ಅದು ಬಾಯ್ತೆರೆದು ಜೋರಾಗಿ ಬುಸುಗುಟ್ಟುತ್ತಾ ಆಕ್ರಮಣದ ಮಾಡಿದ ವ್ಯಕ್ತಿಯ ಮೇಲೆರಗಬಹುದು.
ಇತರೆ ಹಾವುಗಳಿಗೆ ಅಪರೂಪದವಾದ ಪ್ರಜ್ಞೆ ಹಾಗೂ ಬುದ್ಧಿವಂತಿಕೆಯಿಂದ ಕಾಳಿಂಗ ಸರ್ಪಗಳು ವರ್ತಿಸುತ್ತವೆ.

  • ಜ್ಞಾನವಾಹಿನಿ
~.~
  • Login or register to post comments
  • 469 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 25, 2007 - 9:51pm — ASHOKKUMAR

ಉ: ಕಾಳಿಂಗ ಸರ್ಪಕ್ಕೂ ರಾಜಧಾನಿ ಈ ಆಗುಂಬೆ

ASHOKKUMAR's picture

ಕಾಳಿಂಗ ಸರ್ಪಕ್ಕೂ ರೇಡಿಯೋ ಕಾಲರ್ ತೊಡಿಸುವುದಿಲ್ಲವಷ್ಟೆ? Smiling
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 26, 2007 - 5:03pm — ರಘುನಂದನ

ಉ: ಕಾಳಿಂಗ ಸರ್ಪಕ್ಕೂ ರಾಜಧಾನಿ ಈ ಆಗುಂಬೆ

ರಘುನಂದನ's picture

ಶಿವಮೊಗ್ಗದಲ್ಲಿ ನೆಹರೂ ಪಾರ್ಕು ಇದೆಯಲ್ಲ, ಜನ ಪಾರ್ಕಿನೊಳಗೆ ಹಾಯ್ದು ಪಾರ್ಕಿನ ಇನ್ನೊಂದು ಬದಿಯನ್ನು ತಲುಪುವುದು ರೂಢಿ. ಒಂದು ಬದಿಯ ಗೇಟಿಗೆ ಹತ್ತಿರವಾಗಿ ಒಂದು ಪುಟ್ಟ ಪ್ರಾಣಿಗಳ ಪಂಜರದಲ್ಲಿ ಮಂಗ, ಪಾರಿವಾಳ ಇತ್ಯಾದಿಗಳನ್ನು ಸಲಹಿದ್ದಾರೆ(ಸಲಹಿದ್ದರು) ಇವುಗಳ ಪಂಜರದ ನಂತರ ಇನ್ನೊಂದು ಚಿಕ್ಕ ಮನೆಯಂಥಾದ್ದನ್ನು ನಿರ್ಮಿಸಿ ಒಳಗಡೆ ಹಲವಾರು ಹಾವುಗಳನ್ನು ಬಿಟ್ಟಿದ್ದರು. ಅದರಲ್ಲಿಯೇ ಇನ್ನೊಂದು ಭಾಗವನ್ನು ಮಾಡಿ ಅದರಲ್ಲಿ ನಾಲ್ಕಾರು ಕಾಳಿಂಗಸರ್ಪಗಳನ್ನೂ ಬಿಟ್ಟಿದ್ದರು. ಹೊರಗಿನಿಂದ ನೋಡಲು ಅನುಕೂಲವಾಗುವಂತೆ ಜರಡಿಯಂತಹ ಜಾಲರಿಯನ್ನು ಬಿಗಿದು ಅದರ ಮೇಲೆ "ಅಪ್ಪಣೆಯಿಲ್ಲದೆ ಒಳಗೆ ಪ್ರವೇಶವಿಲ್ಲ" ಎನ್ನುವ ಬೋರ್ಡನ್ನೂ ನೇತು ಹಾಕಿದ್ದರು! ಅಪ್ಪಣೆ ಕೊಟ್ಟರೂ ಕಾಳಿಂಗಸರ್ಪಗಳಿರುವ ಕಿಷ್ಕಿಂಧೆಯಂತಹ ಕೋಣೆಯೊಳಗೆ ಹೋಗುವ ಧೀರ ಶಿವಮೊಗ್ಗದಲ್ಲಿ ಯಾರಿರಬಹುದೆಂದು ನನಗೆ ಗೊತ್ತಾಗಲಿಲ್ಲ. ಇದು ಐದಾರು ವರ್ಷಗಳ ಹಿಂದೆ ನೋಡಿದ್ದು. ಈಗ ಏನಿದೆಯೋ?. ಬಹುಶಃ ಆ ಹಾವುಗಳು ಯಾರದೋ ಬೆಲ್ಟುಗಳಾಗಿ ಪರಿವರ್ತನೆಯಾಗಿರಲಿಕ್ಕೂ ಸಾಕು.

ಅಂದ ಹಾಗೆ : ಕಾಳಿಂಗಸರ್ಪಕ್ಕೆ ರೇಡಿಯೋಕಾಲರ್ ತೊಡಿಸಿ ಅದರ ಬಗ್ಗೆ ಅಧ್ಯಯನ ಮಾಡುತ್ತಿದ್ದುದನ್ನು ನ್ಯಾಶನಲ್ ಜಿಯೋಗ್ರಫಿಯಲ್ಲಿ ನೋಡಿದ ನೆನಪು.

ಎನಗಿಂತ ಕಿರಿಯರಿಲ್ಲ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 26, 2007 - 5:12pm — ASHOKKUMAR

ಉ: ಕಾಳಿಂಗ ಸರ್ಪಕ್ಕೂ ರಾಜಧಾನಿ ಈ ಆಗುಂಬೆ

ASHOKKUMAR's picture

ಆ ಬೋರ್ಡ್ ಕಾಳಿಂಗ ಸರ್ಪಗಳೇ ಹಾಕಿರಬಹುದು ಎನ್ನುವುದು ನನ್ನ ಗುಮಾನಿ. Smiling
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾಳಿಂಗ ಮರ್ದನ
  • ಕಾಳಿಂಗ ಮರ್ದನ
  • 'ಕೊಟ್ಟ ಭಾಷೆಗೆ ತಪ್ಪಲಾರೆನು'- ಪುಣ್ಯಕೋಟಿಯ ಕುರಿತು ಇನ್ನೊಂದು ಲೇಖನ .
  • ಬರಿ ಸುಳ್ಳು, ಸ್ವಲ್ಪ ಮಳ್ಳು-೨
  • ಬರಿ ಸುಳ್ಳು, ಸ್ವಲ್ಪ ಮಳ್ಳು-೨
Syndicate content

ಲೇಖಕರು

kuchela's picture

ಪೂರ್ಣ ಹೆಸರು
ಶ್ರೀಕಾಂತ್

ಪರಿಚಯ

ಹಾಯ್, ಸಹೃದಯ ಗೆಳೆಯರಿಗೆ ನನ್ನ ನಮನ. ಶ್ರೀಕಾಂತ್ ನನ್ನ ಹೆಸರು. ವಾಸಸ್ಥಳ ಶಿವಮೊಗ್ಗ. ಊರು ಕೋಟ(ದ.ಕ). ಓದಿದ್ದು ಶಿವಮೊಗ್ಗ ಸಹ್ಯಾದ್ರಿ ಕಾಲೇಜ್ ನಲ್ಲಿ, ಬಿಬಿಎಂ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
  • ಗೂಗಲ್ ಅನುವಾದಕ... ಅವಾಂತರ
  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 87 ಅತಿಥಿಗಳು ಆನ್ಲೈನ್ ಇರುವರು.


ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು.
ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು.
ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು.
ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.

— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator