ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಬೆಂಗಳೂರಿನ ರಂಗಶಂಕರದಲ್ಲಿ ನಮ್ ಟೀಮ್ ತಂಡದ ‘ಗುಣಮುಖ’

May 28, 2007 - 3:42am — halaswamyrs


ಗುಣಮುಖ

ಬೆಂಗಳೂರಿನ ರಂಗಶಂಕರದಲ್ಲಿ ನಮ್ ಟೀಮ್ ತಂಡದ ‘ಗುಣಮುಖ’ ನಾಟಕವು ಮೇ ೩೧, ೨೦೦೭ರಂದು ಸಂಜೆ ೭.೩೦ಕ್ಕೆ ಪ್ರದರ್ಶನಗೊಳ್ಳಲಿದೆ.

ಪಿ. ಲಂಕೇಶರ ಪ್ರಮುಖ ನಾಟಕ ಗುಣಮುಖ. ಎಲ್ಲ ಕಾಲಕ್ಕೂ ಸಲ್ಲುವ ವಿಷಯವನ್ನು ಅಳವಡಿಸಿಕೊಂಡಿರುವ ಈ ಕೃತಿ ಇಂದು ಹೆಚ್ಚು ಪ್ರಸ್ತುತ. ನಾಡಿನ ರಂಗತಂಡಗಳನ್ನು ಈ ನಾಟಕವನ್ನು ಮತ್ತೆಮತ್ತೆ ರಂಗದ ಮೇಲೆ ತರುತ್ತಿರುವುದೇ ಅದಕ್ಕೆ ಸಾಕ್ಷಿ.

ಪರ್ಷಿಯಾ ದೇಶದ ರಾಜ ನಾದಿರ್ ಭಾರತ ಮೇಲೆ ದಾಳಿ ಮಾಡಿ ಮೊಘಲ್ ಚಕ್ರವರ್ತಿ ನಜರುದ್ದೀನ್‌ನನ್ನು ಸೋಲಿಸುತ್ತಾನೆ. ಲೋಲುಪ ದೊರೆ ನಜರುದ್ದೀನ್‌ಗೆ ರಾಜ್ಯವನ್ನು ರಕ್ಷಿಸಿಕೊಳ್ಳಲು ಆಗುವುದೇ ಇಲ್ಲ. ತನ್ನ ಮಂತ್ರಿಗಳ ಕುತಂತ್ರವೂ ಆತನ ಸೋಲಿಗೆ ಕಾಣವಾಗುತ್ತದೆ.

ಸತತ ಯುದ್ಧದಿಂದ ನಾದಿರ್ ಮನಸ್ಥಿತಿಯೇ ವಿಕೃತವಾಗಿರುತ್ತದೆ. ದಿವಾನ್ ಸಾದತ್‌ಖಾನ್‌ಗೆ ಎಲ್ಲರೆದುರೇ ಒದ್ದು ಅವಮಾನಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಾನೆ. ದೊರೆ ನಜರುದ್ದೀನ್ ಕೆನ್ನೆಗೆ ಹೊಡೆಯುತ್ತಾನೆ. ದಿವಾನ್ ಮುಲ್ಕ್‌ನನ್ನು ಕೊಲ್ಲುತ್ತಾನೆ.

ನಾದಿರ್ ಷಾನ ಈ ರಕ್ತಪಿಪಾಸುತನದ ಕಾಯಿಲೆಗೆ ಯಾವ ಹಕೀಮರೂ ಸರಿಯಾದ ಔಷಧ ನೀಡುವುದಿಲ್ಲ. ಕೊನೆಗೆ ಹಕೀಮ್ ಅಲಾವಿಖಾನ್ ಆತನಿಗೆ ಯಾವುದೇ ಔಷಧ ನೀಡದೆ ಆತನ ಕಾಯಿಲೆಯನ್ನು ಗುಣಪಡಿಸುತ್ತಾನೆ. ಆತನಲ್ಲಿರುವ ರಕ್ತಪಿಪಾಸುವನ್ನು ಇಲ್ಲವಾಗಿಸುವುದೇ ಅಲಾವಿಖಾನ್ ನೀಡುವ ಚಿಕಿತ್ಸೆ.

ನಿರ್ದೇಶಕರು

ಶಿವಮೊಗ್ಗದ ನಮ್ ಟೀಮ್ ತಂಡವು ಈ ನಾಟಕವನ್ನು ಖ್ಯಾತ ರಂಗನಿರ್ದೇಶಕ ನಟರಾಜ ಹೊನ್ನವಳ್ಳಿ ಅವರ ನಿರ್ದೇಶನದಲ್ಲಿ ಸಿದ್ಧಪಡಿಸಿದೆ. ನಟರಾಜ ಹೊನ್ನವಳ್ಳಿ ನೀನಾಸಂ ಪದವೀಧರರು. ಅವರು ನಿರ್ದೇಶಿಸಿದ ಮಲ್ಲಿನಾಥನ ಧ್ಯಾನ, ಜುಗಾರಿ ಕ್ರಾಸ್, ಸುಯಿಸೈಡ್ ನೋಟ್, ಕಾಕನ ಕೋಟೆ, ಮಾಸ್ತಿ ಕಥಾವಾಚಿಕೆ ಮುಂತಾದ ನಾಟಕಗಳು ಪ್ರಮಖವಾದವು.

ನಮ್ ಟೀಮ್?!

ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ರಂಗಚಟುವಟಿಕೆಯಲ್ಲಿ ನಿರತವಾಗಿರುವ ನಮ್ ಟೀಮ್ ರಂಗತಂಡವು ಕಳೆದ ೭ ವರ್ಷದಲ್ಲಿ ೨೧ ನಾಟಕಗಳನ್ನು ಪ್ರಯೋಗಿಸಿದೆ. ನಾಡಿನ ಪ್ರಮುಖ ತಂಡಗಳ ೩೪ ನಾಟಕಗಳನ್ನು ಶಿವಮೊಗ್ಗದಲ್ಲಿ ಆಯೋಜಿಸಿದೆ. ರಂಗರಂಗು, ರಂಗಸುಗ್ಗಿ, ಚಳಿಗಾಲದ ನಾಟಕೋತ್ಸವ, ನೀನಾಸಂ ನಾಟಕೋತ್ಸವ ಸೇರಿದಂತೆ ಹಲವು ಕಾರ್ಯಕ್ರಮವನ್ನು ಆಯೋಜಿಸಿದೆ. ನಾಟಕ ಅಕಾಡೆಮಿ ಶಿವಮೊಗ್ಗದಲ್ಲಿ ಆಯೋಜಿಸಿದ್ದ ದೇಸಿ ರಂಗೋತ್ಸವ ಕಾರ್ಯಕ್ರಮದ ಸಂಯೋಜನೆಯನ್ನು ನಿರ್ವಹಿಸಿದೆ.

ಆಹ್ವಾನ

ರಂಗಶಂಕರದಲ್ಲಿ ಮೇ ೩೧ರಂದು ನಾಟಕ ವೀಕ್ಷಿಸಿ, ಅಭಿಪ್ರಾಯ ತಿಳಿಸಿ, ರಂಗನಿರಂತರತೆಗೆ ಸಹಕಾರ ನೀಡಿ

  • ನಾಟಕ
~.~
  • Login or register to post comments
  • 418 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಷ್ಟೊಂದು ಕನ್ನಡ ಬ್ಲಾಗುಗಳನ್ನು ದಿನಾಲೂ ಓದುವುದು ಹೇಗೆ? (ಗೂಗಲ್ ರೀಡರ್)
  • ಎಂದೂ ಮುಳಗದ ಬೋಟು...
  • ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ
  • ಕನವರಿಕೆಯೊಳು ಕಂಡೆ ಕಳವಳವ..!!
  • ಅಲೆಮಾರಿಯಾದಾಗಿನ ಅವಿಸ್ಮರಣೀಯ ಅನುಭವಗಳು - ಭಾಗ ೪
Syndicate content

ಲೇಖಕರು

halaswamyrs's picture

ಪರಿಚಯ

ಬಂದೆ ಸುಮ್ಮನೆ ಇಲ್ಲಿಗೆ.....

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 1:33pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 1:32pm
  • ASHOKKUMAR
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 12:57pm
  • harshab
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 7, 2008 - 12:52pm
  • Shivakumar.Revadi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 7, 2008 - 12:44pm
  • anil.ramesh
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:44pm
  • savithasr
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:30pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:29pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 206 ಅತಿಥಿಗಳು ಆನ್ಲೈನ್ ಇರುವರು.


ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator