ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಮಾಧವ ನೆಲೆ...

June 7, 2007 - 2:35am — kuchela
mad.jpg

ಮಾಧವ ನೆಲೆ. ಇದು ಮಾಧವನ ನೆಲೆಯೇ. ಶಿವಮೊಗ್ಗದ ಸೋಮಯ್ಯ ಬಂಗ್ಲೆಯಲ್ಲಿರುವ ಈ ‘ನೆಲೆ’ ಚಿಂದಿ ಆಯುವ ಮಕ್ಕಳ ಆಶ್ರಯ ತಾಣ. ಈಗ ಇದಕ್ಕೆ ಒಂದು ವರ್ಷದ ಸಂಭ್ರಮ.
ಚಿಂದಿ ಆಯುತ್ತಾ ಮಕ್ಕಳು ಕ್ರಮೇಣ ದುಶ್ಚಟಗಳ ದಾಸರಾಗಿ, ಅನೈತಿಕ ಚಟುವಟಿಕೆಗಳಲ್ಲಿ ತೊಡಗಿ ಸಮಾಜಕ್ಕೆ ಕಂಟಕರಾಗಿ ಬೆಳೆಯುವ ಸಂಭವವೇ ಹೆಚ್ಚು. ಇದು ಚಿಂತಾಜನಕ ಸಂಗತಿ. ಇದಲ್ಲದೇ ಅನಾಥ ಮಕ್ಕಳು ಲೆಕ್ಕವಿಲ್ಲದಷ್ಟು ಸಂಖ್ಯೆಯಲ್ಲಿ ಇದ್ದಾರೆ. ಈ ಸಮಸ್ಯೆಗೆ ದೊಡ್ಡಮಟ್ಟದಲ್ಲಿ ಅಲ್ಲದಿದ್ದರೂ ಸಣ್ಣ ಪ್ರಮಾಣದಲ್ಲಿ ಮಾದರಿಯಾಗಿ ಹಿಂದುಸೇವಾ ಪ್ರತಿಷ್ಠಾನ ಕಂಡುಕೊಂಡ ಉತ್ತರ ‘ನೆಲೆ’.
‘ನೆಲೆ’ಯ ಕತೃ ಶಿವಮೊಗ್ಗದ ವಿಕಾಸ ಟ್ರಸ್ಟ್. ಅಲ್ಲದೇ ಇದು ಹಿಂದೂಸೇವಾ ಪ್ರತಿಷ್ಠಾನದ ಪ್ರಕಲ್ಪ.
‘ನೆಲೆ’ಯೇ ಇಲ್ಲದ ಮಕ್ಕಳಿಗೆ ನೆಲೆಯನ್ನೊದಗಿಸುವುದು, ಶಿಕ್ಷಣ ಸಂಸ್ಕಾರ ನೀಡುವುದು ಈ ಪ್ರಕಲ್ಪದ ಉದ್ದೇಶ. ಸುಮಾರು ೨೦ ಮಕ್ಕಳು ಇಲ್ಲಿದ್ದು, ಅವರಲ್ಲಿ ಬಹುತೇಕರು ಚಿಂದಿ ಆಯುತ್ತಿದ್ದ ಪುಟ್ಟ ಕಂದಮ್ಮಗಳು. ಈಗ ಪರಿವರ್ತನೆಯ ಅಲೆಯಲ್ಲಿ ತೇಲಲು ಪ್ರಾರಂಭಿಸಿದ್ದಾರೆ.
ತಂದೆ ತಾಯಿಯವರ ವಾತ್ಸಲ್ಯ, ಅಣ್ಣ- ತಮ್ಮ, ಅಕ್ಕ ತಂಗಿಯರ ಪ್ರೀತಿ, ಶಾಲೆಯ ಶಿಕ್ಷಣ, ಸಹ ಪಾಠಿಗಳೊಂದಿಗೆ ಆಟ, ಸಜ್ಜನರ ಸಹವಾಸ ಈ ಎಲ್ಲವುಗಳಿಂದಲೂ ದೂರವಾದ ಸುಮಾರು ೬ರಿಂದ ೧೪ ವಯಸ್ಸಿನವರೆಗಿನ ಮಕ್ಕಳಿಗೆ ಇಲ್ಲಿ ಅವಶ್ಯಕ ವಿದ್ಯಾಭ್ಯಾಸ, ಸತ್ಸಂಸ್ಕಾರ ಹಾಗೂ ಅವರ ಭೌತಿಕ ಮಾನಸಿಕ ಬೆಳವಣಿಗೆಗೆ ಅವಶ್ಯಕವಾದ ಸವಲತ್ತನ್ನು ನೀಡಲಾಗುತ್ತಿದೆ.
ಶಿವಮೊಗ್ಗ, ಶಿಕಾರಿಪುರ, ಶೃಂಗೇರಿ, ಭದ್ರಾವತಿ ಮತ್ತಿತರ ಊರುಗಳ ಅರುಣ, ದೀಪಕ್, ಪುಷ್ಪರಾಜ್, ವೆಂಕಟೇಶ್, ಪಾವನ, ಪ್ರದೀಪ, ಹಾಲೇಶ್, ಕಾರ್ತಿಕ್ ಹೀಗೆ ೨೦ ಮಕ್ಕಳು ನೆಲೆಯಲ್ಲಿ ಆಶ್ರಯ ಪಡೆದಿದ್ದಾರೆ. ೧೦-೧೨ ಮಕ್ಕಳು ದಿನನಿತ್ಯ ಬೆಳಿಗ್ಗೆ ಬಂದು ಊಟ, ಶಿಕ್ಷಣ ಪಡೆದು ಸಂಜೆ ಮನೆಗೆ ತೆರಳುವವರು ಇದ್ದಾರೆ.
ಶಾಲೆಗೆ ಕಳಿಸಲಾಗದ ಪರಿಸ್ಥಿತಿಯಲ್ಲಿರುವ ಕೆಲ ಪೋಷಕರ ಒಂದೆರಡು ಮಕ್ಕಳು ಈ ನೆಲೆಯಲ್ಲಿದ್ದಾರೆ.
ನಗರದ ಖ್ಯಾತ ಶಿಕ್ಷಣ ಸಂಸ್ಥೆಗಳಾದ ವಿಕಾಸ ವಿದ್ಯಾಸಮಿತಿ ಹಾಗೂ ದೇಶೀಯ ವಿದ್ಯಾಶಾಲಾ ಸಮಿತಿ, ತುಂಗಾ ಪ್ರೌಢಶಾಲೆ ಈ ಸೇವೆಗೆ ಕೈ ಜೋಡಿಸಿದ್ದು ಇಲ್ಲಿ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.
ವಿಕಾಸ ವಿದ್ಯಾಸಮಿತಿ ಇಲ್ಲಿನ ಮಕ್ಕಳನ್ನು ತನ್ನದೇ ಶಾಲಾ ವಾಹನದಲ್ಲಿ ಕರೆದುಕೊಂಡು ಹೋಗಿ ತಂದು ಬಿಡುವ ವ್ಯವಸ್ಥೆ ಮಾಡಿದೆ.
ಚಟುವಟಿಕೆ ಹೀಗೆ ನಡೆಯುತ್ತದೆ...
ಬೆಳಿಗ್ಗೆ ೫.೩೦ಕ್ಕೆ ಮಾಧವನ ಮಕ್ಕಳ ಚಟುವಟಿಕೆ ಪ್ರಾರಂಭವಾಗುತ್ತದೆ. ಪ್ರಾತಃಸ್ಮರಣೆ, ವ್ಯಾಯಾಮ, ಯೋಗಾಭ್ಯಾಸ, ಸ್ನಾನ, ಉಪಾಹರ ಮುಗಿಸಿ ನಂತರ ಶಾಲೆಗೆ ತೆರಳುತ್ತಾರೆ. ನಂತರ ಸಂಜೆ ಶಾಲೆಯಿಂದ ಬಂದು ಕ್ರೀಡೆ, ಭಜನೆಯಲ್ಲಿ ಪಾಲ್ಗೊಂದು ಪಠ್ಯ ಅಭ್ಯಾಸಿಸುತ್ತಾರೆ.
ಹಾಗೆಯೇ ಮಕ್ಕಳಲ್ಲಿ ಹುದುಗಿರುವ ಕಲಾತ್ಮಕ ಚಟುವಟಿಕೆಗಳನ್ನು ಹೊರತರುವ ಮೂಲಕ ಅಭಿವೃದ್ಧಿ ಪಡಿಸುವ ಕಾರ್‍ಯ ನಡೆಯುತ್ತಿದೆ.
ಮಕ್ಕಳಿಗೆ ಸಂಸ್ಕಾರ ನೀಡುವ ದೃಷ್ಟಿಯಿಂದ ಬಾಲ ಗೋಕುಲ, ಚಿತ್ರಕಲೆ, ಸಂಗೀತ, ಭರತ ನಾಟ್ಯ, ಯಕ್ಷಗಾನ, ಕೋಲಾಟ, ಕೈಕುಸುಬುಗಳ ತರಬೇತಿಯನ್ನೂ ಪಡೆಯುತ್ತಿದ್ದಾರೆ.
ಇಂತಹ ಮಕ್ಕಳ ಮನೆಮಂದಿಯೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸುವುದರೊಂದಿಗೆ ಆ ಕುಟುಂಬಗಳಿಗೆ ಮತ್ತು ಈ ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸಿ ತನ್ಮೂಲಕ ಸುಖೀ ಸಮಾಜವನ್ನು ನಿರ್ಮಿಸುವುದು ಸಂಸ್ಥೆಯ ಉದ್ದೇಶ.
ಮುದ್ದು ಕಂದಮ್ಮಗಳಿಗಾಗಿ ಮಾಧವನ ನೆಲೆಯಲ್ಲಿ ನಡೆಯುತ್ತಿರುವ ಸೇವಾ ಯಜ್ಞಕ್ಕೆ ಯಾರೊಬ್ಬರೂ ಕೈ ಜೋಡಿಸಬಹುದು. ನಿವೃತ್ತ ಶಿಕ್ಷಕರು ಇಲ್ಲಿನ ವಿದ್ಯಾರ್ಥಿಗಳಿಗೆ ಕೆಲ ಹೊತ್ತು ಪಾಠ ಹೇಳಿಕೊಡಬಹುದು, ವಿಶೇಷ ಕಲೆ ಗೊತ್ತಿರುವವರು ಮಕ್ಕಳಿಗೆ ಆ ಕಲೆಯನ್ನು ಕಲಿಸಬಹುದು, ಇಷ್ಟಲ್ಲದೇ ಊಟ ಉಪಚಾರದ ವ್ಯವಸ್ಥೆ ನೋಡಿಕೊಳ್ಳಬಹುದು. ಮನೆಯಲ್ಲಿ ಯಾರೊಬ್ಬರ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಮತ್ತು ಹಿರಿಯರ ನೆನಪಿನ ದಿನ, ಸಮಾರಂಭ, ಇನ್ನಿತರೆ ದಿನಗಳಂದು ನೆಲೆಗೆ ದೇಣಿಗೆ ನೀಡಿ ಮಕ್ಕಳಿಗೆ ಸಹಕಾರ ನೀಡಬಹುದು.
ಮಾಹಿತಿಗಾಗಿ: ೯೪೮೦೨ ೮೦೯೩೫, ೯೪೪೯೮ ೯೭೧೬೧

  • ಸುದ್ದಿ ಸ್ವಾರಸ್ಯ
~.~
  • Login or register to post comments
  • 426 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 8, 2007 - 1:43pm — nirmala

ಉ: ಮಾಧವ ನೆಲೆ...

nirmala's picture

ಉತ್ತಮವಾದ ಮಾಹಿತಿಯನ್ನೊದಗಿಸಿದ್ದಕ್ಕೆ ಧನ್ಯವಾದಗಳು ಶ್ರೀಕಾಂತ್. ಈ ಬಾರಿ ಶಿವಮೊಗ್ಗಕ್ಕೆ ಹೋದಾಗ ನೆಲೆಗೆ ಭೇಟಿ ಕೊಡುವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶಿಕ್ಷಣದ ವ್ಯವಸ್ಥೆ ಹೇಗಿರಬೇಕು?
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಅಬ್ಬಾ ! ಅದೆಂಥಾ ರಭಸ
  • ಓತದ ಮಟ್ಟಗಳು ಮತ್ತು ಅವುಗಳ ತಾಣಗಳು
  • ಒಂದನೇ ತರಗತಿಯಿಂದ "ಇಂಗ್ಲಿಷ್" ಕಲಿಕೆ - ಒಂದು ಚಿಂತನೆ
Syndicate content

ಲೇಖಕರು

kuchela's picture

ಪೂರ್ಣ ಹೆಸರು
ಶ್ರೀಕಾಂತ್

ಪರಿಚಯ

ಹಾಯ್, ಸಹೃದಯ ಗೆಳೆಯರಿಗೆ ನನ್ನ ನಮನ. ಶ್ರೀಕಾಂತ್ ನನ್ನ ಹೆಸರು. ವಾಸಸ್ಥಳ ಶಿವಮೊಗ್ಗ. ಊರು ಕೋಟ(ದ.ಕ). ಓದಿದ್ದು ಶಿವಮೊಗ್ಗ ಸಹ್ಯಾದ್ರಿ ಕಾಲೇಜ್ ನಲ್ಲಿ, ಬಿಬಿಎಂ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ
  • ಮರಳಿ ಬರಲಿ ಬಾಲ್ಯ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 10:02am
  • amrith
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 7, 2008 - 9:58am
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 7, 2008 - 9:45am
  • mahesha
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:45am
  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 92 ಅತಿಥಿಗಳು ಆನ್ಲೈನ್ ಇರುವರು.


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator