ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕೆಂಪಾದವೊ... ಎಲ್ಲ ಕೆಂಪಾದವೋ...

June 11, 2007 - 1:45pm — kuchela

‘ಪೊಲೀಸರಿಗೆ ಮಾಹಿತಿ ನೀಡುತ್ತೀಯ ಎಂದು ನನ್ನ ಪತಿಯನ್ನು ಎಳೆದು ಒಂದೇ ಸಮನೆ ಹೊಡೆಯತೊಡಗಿದರು. ತನಗೂ ಪೊಲೀಸರಿಗೂ ಸಂಬಂಧ ಇಲ್ಲ ಎಂದು ನನ್ನ ಪತಿ ಪರಿಪರಿಯಾಗಿ ಬೇಡಿಕೊಂಡರು, ನಾನು ಮತ್ತು ಮಗ ಬಿಟ್ಟು ಬಿಡಿ ಎಂದು ನಕ್ಸಲರ ಕಾಲಿಗೆ ಬಿದ್ದೆವು, ಆದರೂ ಅವರಿಗೆ ಕರುಣೆ ಬರಲಿಲ್ಲ’...

ಈ ಆಕ್ರಂದನದ ನೋವು ಅದೆಷ್ಟು ಮನ ಮುಟ್ಟಿರಬಹುದೋ? ಅದೂ ಬೆಂಗಳೂರಿನಲ್ಲಿ ಕುಳಿತ ಮಂದಿಗೇನು ಗೊತ್ತಾಗಬೇಕು...

ನೆನಪಾಯ್ತಾ, ಜೂನ್ ರಾತ್ರಿ ೭.೫೦ರ ಸುಮಾರಿಗೆ ಶೃಂಗೇರಿಯಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಗಂಡಘಟ್ಟದಲ್ಲಿ ಒಂದು ಮುಗ್ದ ಜೀವ ಹಾರಿಹೋಯಿತು. ನೆಂಟರ ಮನೆಯಲ್ಲಿ ನಡೆಯುವ ತೊಟ್ಟಿಲು ಶಾಸ್ತ್ರಕ್ಕೆ ಹೊರಟ ವೆಂಕಟೇಶ್ ನಕ್ಸಲರ ಆಕ್ರೋಶಕ್ಕೆ ತನ್ನ ಕುಟುಂಬ, ನೆಲ ಎಲ್ಲವನ್ನೂ ಬಿಟ್ಟು ಹೊರಟೇ ಹೋದರು.
ಪತ್ನಿ, ಮಗನ ಆರ್ತನಾದದಿಂದ ನಕ್ಸಲರ ಮನ ಕರಗಲೂ ಇಲ್ಲ. ಅವರ ಹಾರಿಸಿದ ಗುಂಡು, ಬೀಸಿದ ಲಾಂಗಿನ ಹೊಡೆತಕ್ಕೆ ಜರ್ಜರಿತವಾಗಿ ಬಿದ್ದಿತ್ತು ವೆಂಕಟೇಶನ ದೇಹ.
ವರ್ಷದ ಹಿಂದೆ ಚಂದ್ರಯ್ಯನನ್ನು ಅಡ್ಡಡ್ಡಾ ಮಲಗಿಸಿ ಇನ್ನೂ ಸರಿಯಾಗದ ರೀತಿಯಲ್ಲಿ ಮೈಮೂಳೆ ಮುರಿದಾಗಿದೆ. ಶೇಷಯ್ಯ ಗೌಡ್ಲುವನ್ನು ಮನೆ ಮುಂದೇ ಅಟ್ಟಾಡಿಸಿಕೊಂಡು ಕೊಂದಾಗಿದೆ.

...
ಈಗ ಮತ್ತೆ ಮಲೆನಾಡಲ್ಲಿ ಪೊಲೀಸರ ಓಡಾಟ. ಅಲ್ಲಲ್ಲಿ ಸಭೆ, ಕೂಬಿಂಗ್. ಹಾಗೇ ಅತ್ತಿಂದಿತ್ತ ಬಾಲ ಸುಟ್ಟ ಬೆಕ್ಕಿನಿಂದ ತಿರುಗಾಡುತ್ತಿದ್ದಾರೆ. ಆದರೇನು ಪ್ರಯೋಜನ ಮತ್ತೊಂದು ಮುಗ್ದ ಜೀವ ಹೋಗಿಯಾಗಿದೆ.
ಮಲೆನಾಡಲ್ಲಿ ಕೆಂಪುಗಾಳಿ ಬೀಸಿದ್ದರ ಪ್ರತಿಫಲವಾಗಿ ಇದೀಗ ಏಳನೇ ಜೀವ ಹೋಗಿದೆ. ಅದೆಷ್ಟೋ ನೆಮ್ಮದಿ ಕೆಟ್ಟಿದೆ. ಅಕ್ಕಪಕ್ಕದವರನ್ನೂ ನಂಬದ ಸ್ಥಿತಿ. ನೆಮ್ಮದಿಗೆ ಕಲ್ಲು ಬಿದ್ದಿದೆ.
ಅತ್ತ ನಕ್ಸಲರ ಸಹವಾಸವೂ ಇತ್ತ ಪೊಲೀಸರಿಂದಲೂ ದೂರ ಇರಲಾಗದೆ ಬೆಂಕಿಯಿಂದ ಬಾಣಲೆಗೆ ಎಂಬಂತೆ ತತ್ತರಿಸಿ ಹೋಗಿದ್ದಾರೆ.
ನಕ್ಸಲರ ಪ್ರತಿಕಾರ ಭಾವನೆಗೆ ಈಗ ಬಲಿಯಾದ ವೆಂಕಟೇಶ್ ಕೆಸಮುಡಿ ಎನ್‌ಕೌಂಟರ್‌ಗೆ ಉತ್ತರವಂತೆ. ಆತ ಪೊಲೀಸರ ಇನ್‌ಫಾರ್‍ಮರ್ ಎಂಬ ಆರೋಪ. ಹೇಗಿದೆ ಪರಿಸ್ಥಿತಿ. ಪ್ರತೀಕಾರದ ನೆಪ. ಆದರೆ ಗಂಡಘಟ್ಟದಲ್ಲಿ ವೆಂಕಟೇಶನಿಗೆ ಉತ್ತಮ ಹೆಸರಿತ್ತು. ಸಣ್ಣ ವ್ಯಾಪಾರ ಮಾಡಿಕೊಂಡು ಈತ ಜೀವನ ನಿರ್ವಹಿಸುತ್ತಿದ್ದ. ಸ್ಥಳೀಯರು ಹೇಳುವಂತೆ ಈತನು ನಕ್ಸಲರ ತಂಟೆಗೆ ಹೋದವನೇ ಅಲ್ಲ.
ಈ ಮುಂಚೆ ಹೆಮ್ಮಿಗೆ ಚಂದ್ರಕಾಂತನ ಮೇಲೆ ಹಲ್ಲೆ ನಡೆಸಿದ ನಕ್ಸಲರು ೨೦೦೫ ರ ಮೇ ೧೭ರಂದುಶೇಷೇಗೌಡ್ಲು ಹತ್ಯೆ ಮಾಡಿದ್ದರು. ಜಿಲ್ಲೆಯಲ್ಲಿ ವೆಂಕಟೇಶ್ ನಕ್ಸಲರಿಗೆ ಎರಡನೇ ಬಲಿಯಾಯಿತು.
ಸಾಕೇತ ರಾಜನ್ ಸಾವಿಗೆ ಸೇಡು ತೀರಿಸಿಕೊಳ್ಳಲು ಶೇಷಯ್ಯಗೌಡ್ಲು ಹತ್ಯೆ ಮಾಡಿದ್ದರೆ, ದಿನಕರನ ಸಾವಿಗೆ ವೆಂಕಟೇಶ್‌ನನ್ನು ಹತ್ಯೆ ಮಾಡಲಾಗಿದೆ.
ಉದ್ಯಾನವ್ಯಾಪ್ತಿ ಪ್ರದೇಶದಲ್ಲಿ ನಕ್ಸಲರು ತಮ್ಮ ಕುರಿತು ಜನರಿಗೆ ತೀವ್ರ ಭಯ ಮೂಡಿಸುವ ಪ್ರಯತ್ನವಾಗಿ ವೆಂಕಟೇಶನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಸರ್ಕಾರದ ವಿರುದ್ಧ ಒಂದು ರೀತಿಯ ಸೇಡಿನ ಭಾವನೆ ಜನರಲ್ಲೂ ವ್ಯಾಪಿಸತೊಡಗಲು ಪ್ರಾರಂಭವಾಗಿದೆ. ತಮ್ಮ ನೆರೆ ಹೊರೆಯವರ ಮೇಲೆ ದಾಳಿ ನಡೆಯುತ್ತಿದೆ. ಮುಂದೊಂದು ದಿನ ತಮ್ಮ ಮೇಲೂ ನಡೆದೀತೆಂಬ ಆತಂಕ ಹೆಚ್ಚಿದೆ. ಸರ್ಕಾರ ಜನರ ರಕ್ಷಣೆಗೆ ಬರದೇ ತೆಪ್ಪಗೆ ಕುಳಿತಿರುವುದಕ್ಕೆ ಅಸಮಾಧಾನದ ಹೊಗೆ ಎದ್ದಿದೆ. ಅದು ಶೃಂಗೇರಿ ಬಂದ್ ಮೂಲಕ ವ್ಯಕ್ತವಾಯಿತು.

ಪರಿಹಾರ ಕೊಟ್ಟರೆ ಮುಗೀತೆ...
ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಟ್ಟಂತೆ ಸರ್ಕಾರ ಈಗ ಪರಿಹಾರ ಕೊಟ್ಟಿದೆ. ಆದರೆ ಅದರ ಮುಂದೀಗ ದೊಡ್ಡ ಸವಾಲಿದೆ. ಎಂ.ಪಿ. ಪ್ರಕಾಶ್ ಹೀಗೆ ಹೇಳುತ್ತಾರೆ... ‘ನಕ್ಸಲರನ್ನು ಮದ್ದು ಗುಂಡಿನಿಂದ ಮಟ್ಟ ಹಾಕಲು ಸಾಧ್ಯವಿಲ್ಲ, ಆ ಪ್ರದೇಶದಲ್ಲಿ ಅಭಿವೃದ್ಧಿ ಮಾಡಬೇಕು ಅಷ್ಟೇ’.
ಹೀಗೇ ಹೇಳಿದರೆ ಆಯಿತೇ ಎಂಬುದು ಪ್ರಶ್ನೆ. ಈ ಭಾಗದಲ್ಲಿ ನಡೆಯುವ ದೊಡ್ಡ ಮಟ್ಟದ ನಕ್ಸಲ್ ಸಂಬಂಧಿತ ಘಟನೆ ನಂತರ ಸರ್ಕಾರದಿಂದ ಬರುತ್ತಿರುವ ಮಾತು. ಆದರೆ ಉಪಯೋಗವಾಗೇ ಇಲ್ಲ. ಇಂತಹ ಘಟನೆಗೆ ಸರ್ಕಾರವೂ ಹೊಣೆ ಹೋರಲೇಬೇಕಾಗಿದೆ. ಘಟನೆ ಪುನರಾವರ್ತನೆ ಯಾಗದಂತೆ ನೋಡಿಕೊಳ್ಳಬೇಕಾಗಿದೆ.
ಮಾನವ ಹಕ್ಕು ಆಯೋಗ ನಕ್ಸಲರ ಹತ್ಯೆಯಾದಾಗ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಏನೆಲ್ಲಾ ಮಾಡಿತೆಂದುಗೊತ್ತಿದೆ. ಆದೇ ನಕ್ಸಲರಿಂದ ಜೀವವೊಂದು ಹೋಯಿತೆಂದರೆ ಅದು ತಣ್ಣಗಾಗಿ ಬಿಡುತ್ತಿದೆ.
ಅದೇ ರೀತಿ ರಾಜ್ಯದಲ್ಲಿ ನಕ್ಸಲ್ ನಿಗ್ರಹ ದಳ ರೂಪುಗೊಂಡರೂ ನಕ್ಸಲೀಯರನ್ನು ನಿಗ್ರಹಿಸುವ ತೀರಾ ಹಿಂದುಳಿದಿದೆ. ನಕ್ಸಲೀಯರು ಮಲೆನಾಡಿಗೆ ಅಡಿಯಿಟ್ಟು ಐದು ವರ್ಷಗಳೇ ಕಳೆದಿವೆ. ಈ ಐದು ವರ್ಷಗಳಲ್ಲಿ ನಡೆದಿರುವ ಒಟ್ಟಾರೆ ಘಟನೆಗಳನ್ನು ಗಮನಿಸಿದರೆ ಪೊಲೀಸರಿಗಿಂತ ನಕ್ಸಲರದೇ ಮೇಲುಗೈ.
ಕೆರೆಕಟ್ಟೆ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಕಚೇರಿ ಮೇಲೆ ದಾಳಿ ನಡೆಯಿತು. ಜೀಪು, ಕಂಪ್ಯೂಟರ್, ವಿಸಿಆರ್ ಮತ್ತು ಕಡತ ಬೆಂಕಿಗೆ ಆಹುತಿಯಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಜೀವಭಯದಲ್ಲಿ ಕೆಲಸ ಮಾಡುವ ಹಾಗಾಯಿತು.
ಪಶ್ಚಿಮಘಟ್ಟದ ದಟ್ಟ ಕಾನನ ಮಧ್ಯೆ ಹಸಿರಿನಿಂದ ಕಂಗೊಳಿಸುತ್ತಿದ್ದ ಮಲೆನಾಡಿನಲ್ಲಿ ರಕ್ತದ ಕೋಡಿ. ಶಾಂತಿಯ ನೆಲವೀಡಲ್ಲಿ ಈಗ ಗುಂಡಿನ ಸದ್ದು, ಕಾಳಗ, ಚಕಮಕಿ, ಅಪಹರಣ, ಹಲ್ಲೆ, ಕಾರ್ಯಾಚರಣೆ ಕೊನೆಗೆ ಸಾವಿನಲ್ಲಿ ಮುಕ್ತಾಯ. ಹೀಗೆ ಮಲೆನಾಡಿನಿಂದ ತುಂಗೆ, ಭದ್ರ ಹಾಗೇ ನೇತ್ರಾವತಿ ನದಿ ಹರಿಯುತ್ತಿದ್ದು ಅದರೊಂದಿಗೆ ರಕ್ತೇಶ್ವರಿ ಹರಿಯಲು ಸಿದ್ದತೆ ನಡೆಸಿದ್ದಾಳೆ. ರಕ್ತದ ತೊಟ್ಟು ಬೀಳಲಾರಂಭಿಸಿದೆ. ಹಲಿ ಗೂಡಿದರೆ ಹಳ್ಳ, ಹಳ್ಳ ಸೇರಿ ನದಿ....
ನಕ್ಸಲರ ವಿರುದ್ಧ ಈಗ ಪ್ರಬಲ ಜನಾಂದೋಲನ ಹುಟ್ಟಬೇಕಾದ್ದೊಂದೇ ಈ ಎಲ್ಲಾ ಸಮಸ್ಯೆ ಉತ್ತರವೇ?

ಕೆಂಪಾದವೊ... ಎಲ್ಲ ಕೆಂಪಾದವೋ...
ಹಸಿರಿದ್ದ ಗಿಡಮರ, ಬೆಳ್ಳಗಿದ್ದ ಹೂವೆಲ್ಲಾ
ನೆತ್ತಾರು ಸುರಿದಂಗೆ ಕೆಂಪಾದವೋ
ಹೂವು ಬಳ್ಳಿಗಳೆಲ್ಲಾ ಕೆಂಪಾದವೋ,
ಊರು ಕಂದಮ್ಮಗಳು ಕೆಂಪಾದವೋ
....
ಭೂಮಿಯು ಎಲ್ಲಾನು ಕೆಂಪಾದವೋ...

ಲಂಕೇಶ ಅವರ ಈ ಸಾಹಿತ್ಯ ಮಲೆನಾಡಿಗೆ ಈಗ ಅನ್ವಯ.

  • ಪ್ರಚಲಿತ
~.~
  • Login or register to post comments
  • 565 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 11, 2007 - 2:05pm — muralihr

ಉ: ಕೆಂಪಾದವೊ... ಎಲ್ಲ ಕೆಂಪಾದವೋ...

muralihr's picture

ಒಳ್ಳೆ ಬರವಣಿಗೆ ! ಆದರೆ ಸರ್ಕಾರ ಏನು ಮಾಡೋಕ್ಕ್ ಆಗುತ್ತೆ ?
ರಾಜಕಾರಣಿಗೆಳಿಗೆ ಇವೆಲ್ಲಾ (war, terrorism , bomb, AK 47 ) ಇದ್ರೇ ತಾನೇ ಬದುಕೋಕ್ಕ್ ಆಗೋದು ..
ನಾವೇನು ಮಾಡ ಬಹುದು ಅನ್ನುವುದು ಮುಖ್ಯ??

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2007 - 2:24pm — jaiguruji

ಉ: ಕೆಂಪಾದವೊ... ಎಲ್ಲ ಕೆಂಪಾದವೋ...

jaiguruji's picture

ಏನು ಮಾಡಬಹುದು ಅಂತ ನಿಮಗನ್ನಿಸುತ್ತೆ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2007 - 4:28pm — muralihr

ಉ: ಕೆಂಪಾದವೊ... ಎಲ್ಲ ಕೆಂಪಾದವೋ...

muralihr's picture

ಮಾವೋ ವಾದದ ಹಿ೦ದೆ ಇರುವ ದುಷ್ಟತನವನ್ನು ಪ್ರಚಾರ ಮಾಡಬಹುದು. ನಾವೆಲ್ಲರೂ ಚರಿತ್ರೆಯನ್ನು ಓದಿ ಮರೆತು ಬಿಡ್ತೀವಿ.
ಆದರೆ "ಮಾವೋ " ಬರೆದ "ರRed Book" ಪುಸ್ತಕದಿ೦ದ ಆದ೦ತಹ ಹಿ೦ಸೆ ಮಾರ್ಕ್ಸ್ ವಾದದಿ೦ದ ನಡೆದ ಹಿ೦ಸೆ ಗಿನ್ನಾ
ಕಡಿಮೆಯಿಲ್ಲಾ.
Li Zhensheng' ಎ೦ಬ ಫೋಟೋ ಗ್ರಾಫರ್ ಆಗ ನಡೆದ ಅನಾಹುತಗಳನ್ನು ರಹಸ್ಯವಾಗಿ ಚಿತ್ರಿಸಿದ್ದಾನೆ.
http://red-colornewssoldier.com/

Li Zhensheng's work is not just reportage — it asserts a personal point-of-view, a way of understanding events as they happen. Beyond simply covering the unfolding Cultural Revolution, Li gives it an epic dimension, beauty in its forms. What we first notice is the compositional quality: the square—Li often used a 2 1/4 camera—is very "full"; the image occupies the entire frame. Li mastered this notoriously difficult format, framing his shots with precision, resting his composition on the edges of the image, giving it energy, and creating tension between the different zones.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 14, 2007 - 1:08pm — muralihr

ಉ: ಕೆಂಪಾದವೊ... ಎಲ್ಲ ಕೆಂಪಾದವೋ...

muralihr's picture

http://naxalwatch.blogspot.com/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸುರಿವ ಮಳೆ, ತಣ್ಣಗೆ ಬೀಸುವ ಗಾಳಿಯಲ್ಲೂ ಹರಿಯುತ್ತಿದೆ ಬೆವರು...!
  • ಪಟ್ಟಿ ಪ್ರಭಾವ : ನಕ್ಸಲರ ಹೋರಾಟ ಮತ್ತು ಬೆಂಬಲಿಗರ ಹಾರಾಟ !
  • ಕದಡುತ್ತಿರುವ ಮಲೆನಾಡಿನ ನೆಮ್ಮದಿ..!
  • ಹಿನ್ನೀರಿನಲ್ಲಿ ಬೆರೆತ ಕಣ್ಣೀರು (ರಕ್ತಕಣ್ಣೀರು?)
  • ಪೊಲೀಸರ ಮೇಲೆ ಅನುಮಾನ...ಸರೀನಾ?
Syndicate content

ಲೇಖಕರು

kuchela's picture

ಪೂರ್ಣ ಹೆಸರು
ಶ್ರೀಕಾಂತ್

ಪರಿಚಯ

ಹಾಯ್, ಸಹೃದಯ ಗೆಳೆಯರಿಗೆ ನನ್ನ ನಮನ. ಶ್ರೀಕಾಂತ್ ನನ್ನ ಹೆಸರು. ವಾಸಸ್ಥಳ ಶಿವಮೊಗ್ಗ. ಊರು ಕೋಟ(ದ.ಕ). ಓದಿದ್ದು ಶಿವಮೊಗ್ಗ ಸಹ್ಯಾದ್ರಿ ಕಾಲೇಜ್ ನಲ್ಲಿ, ಬಿಬಿಎಂ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ
  • ಮರಳಿ ಬರಲಿ ಬಾಲ್ಯ

ಇತ್ತೀಚಿನ ಪ್ರತಿಕ್ರಿಯೆಗಳು

  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 7, 2008 - 9:45am
  • mahesha
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:45am
  • srinivasps
    ಉ: ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
    October 7, 2008 - 9:16am
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 8:48am
  • mahesha
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:45am
  • savithasr
    ಉ: ಗಾಂಧೀಸ್ಮರಣೆ
    October 7, 2008 - 8:28am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 8:01am
  • shylaswamy
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
    October 7, 2008 - 7:58am
  • Sunil Jayaprakash
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
    October 7, 2008 - 7:57am
  • Sunil Jayaprakash
    ಉ: ಸ್ವಲ್ಪನಗಿ
    October 7, 2008 - 7:42am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 81 ಅತಿಥಿಗಳು ಆನ್ಲೈನ್ ಇರುವರು.


ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator