ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಅನ್ನಮ್ಮ ಬೆಟ್ಟದ ಶಿಲುಬೆಯಾತ್ರೆ

June 27, 2007 - 6:59pm — cmariejoseph

ಯೇಸುಕ್ರಿಸ್ತ ಶಿಲುಬೆಗೇರುವ ಮುನ್ನ ಆತನ ವಿರೋಧಿಗಳು ಅವನನ್ನು ಬಂಧಿಸುವ ಪರಿ, ಆತನ ನ್ಯಾಯವಿಚಾರಣೆ, ಅವನಿಗೆ ನೀಡಿದ ಹಿಂಸೆ, ನಂತರ ಶಿಲುಬೆ ಹೊರಿಸಿ ಮೆರವಣಿಗೆ ಮಾಡಿದ್ದು ಇವೆಲ್ಲವನ್ನೂ ಶುಭಶುಕ್ರವಾರಕ್ಕೆ ಮುಂಚಿನ ೪೦ ದಿನಗಳಲ್ಲಿ ಮತ್ತೆ ಮತ್ತೆ ಸ್ಮರಿಸಿಕೊಳ್ಳುವುದು ಕ್ರೈಸ್ತರಲ್ಲಿ ವಾಡಿಕೆ. ಈ ಸರಣೆಯು ಗಾಢವಾಗಿರುವಂತೆ ಮಾಡಲು ಅವರು ಯೇಸುಕ್ರಿಸ್ತನ ಆ ಅಂತಿಮ ಕ್ಷಣಗಳ ವೃತ್ತಾಂತವನ್ನು ಪಾರಾಯಣ ಮಾಡುವ ಇಲ್ಲವೇ ಅಭಿನಯಿಸುವ ಪರಿಪಾಠವೂ ಇದೆ. ಶಿಲುಬೆಯಾತ್ರೆಯ ವಿವಿಧ ಹಂತಗಳನ್ನು ಸೂಚಿಸುವ ಹದಿನಾಲ್ಕು ಚಿತ್ರಪಟಗಳ ಮುಂದೆ ಮೊಣಕಾಲೂರಿ ಪಾರಾಯಣ ಮಾಡುವ ಸಂಪ್ರದಾಯ, ಕ್ರೈಸ್ತಭಕ್ತರು ತಾವೇ ವಿಧಿಸಿಕೊಂಡ ಒಂದು ಕಡ್ಡಾಯ ಪದ್ಧತಿ. ಚರ್ಚಿನ ನಿಯಮವಿಲ್ಲದೆಯೂ ಈ ಶಿಲುಬೆಯಾತ್ರೆ (Stations of the Cross) ದೇಶ ಕಾಲಗಳನ್ನು ಮೀರಿ ನಡೆದುಕೊಂಡು ಬಂದಿದೆ. ಆ ಹದಿನಾಲ್ಕು ಚಿತ್ರಪಟಗಳ ದೃಶ್ಯ ಹಾಗೂ ಶೀರ್ಷಿಕೆಗಳಲ್ಲಿ ಏಕರೂಪತೆ ಇದ್ದರೂ ಪಾರಾಯಣ ಮಾಡುವ ಪಠ್ಯ ಹಾಗೂ ವ್ಯಾಖ್ಯಾನಗಳಲ್ಲಿ ಭಿನ್ನತೆ ಇದೆ. ದೇವಾಲಯಗಳಲ್ಲಿ, ಮನೆಗಳಲ್ಲಿ, ಗುಡ್ಡಗಳಲ್ಲಿ, ರಂಗದಲ್ಲಿ, ಏಕಾಂತದಲ್ಲಿ, ಮೌನದಲ್ಲಿ ಯೇಸುಕ್ರಿಸ್ತನ ಶಿಲುಬೆಯಾತ್ರೆಯನ್ನು ಧ್ಯಾನಿಸುತ್ತಾ ಕ್ರಿಸ್ತನ ನೋವು ಸಂಕಟ (Passion of Christ) ಗಳಲ್ಲಿ ತಾವೂ ಭಾಗಿಯಾಗುವ ಮತ್ತು ತನ್ಮೂಲಕ ಆತ್ಮಶೋಧನೆಗೂ ಆತ್ಮೋನ್ನತಿಗೂ ಕಾರಣವಾಗುವ ಈ ಪ್ರಕ್ರಿಯೆ ಕ್ರೈಸ್ತ ಜೀವನದ ಅವಿಭಾಜ್ಯ ಅಂಗ.

ಬೆಂಗಳೂರಿನ ಹೊರವಲಯದ ಉತ್ತರಹಳ್ಳಿ (Uttarahalli) ಯ ಬಳಿ ಇರುವ ಅನ್ನಮ್ಮ ಬೆಟ್ಟದಲ್ಲಿ ಪ್ರತಿ ತಪಸ್ಸುಕಾಲದ ಐದನೇ ಭಾನುವಾರ ಶಿಲುಬೆಯಾತ್ರೆ ನಡೆಯುತ್ತದೆ. ಸುಮಾರು ೨೦೦ ವರ್ಷಗಳಿಗೆ ಮುನ್ನ ಈ ಬೆಟ್ಟದ ತಪ್ಪಲಿನಲ್ಲಿದ್ದ ಸಾಧ್ವಿ ಹೆಣ್ಣುಮಗಳೊಬ್ಬಳು ಕಾಮುಕ ಸೈನಿಕರಿಂದ ತಪ್ಪಸಿಕೊಳ್ಳಲು ಓಡುತ್ತಾ ಸಾಗಿ ಕೊನೆಗೆ ಬೆಟ್ಟದ ಮೇಲಿನಿಂದ ಹಾರಿ ಪ್ರಾಣಾರ್ಪಣೆ ಮಾಡಿದಳೆಂದೂ ಕೊನೆಗೆ ಅದೇ ಸೈನಿಕರು ಆಕೆಯ ಸಚ್ಚಾರಿತ್ರ್ಯವನ್ನು ಮೆಚ್ಚಿ ಮಣ್ಣು ಮಾಡಿದರೆಂದೂ ಐತಿಹ್ಯವಿದೆ. ಬೆಟ್ಟದ ಬುಡದಲ್ಲಿರುವ ಏಕೈಕ ಕ್ರೈಸ್ತ ಸಮಾಧಿಗೆ ಭಕ್ತರು ವಿಶೇಷವಾಗಿ ಹೆಣ್ಣುಮಕ್ಕಳು ಭಕ್ತಿಯಿಂದ ನಡೆದುಕೊಳ್ಳುತ್ತಾರೆ. ಸಮಾಧಿಯ ಮಣ್ಣನ್ನು ಜನ ಪೂಜ್ಯಭಾವದಿಂದ ತಮ್ಮ ನೆತ್ತಿಯ ಮೇಲೆ ಹಾಕಿಕೊಳ್ಳುತ್ತಾರೆ. ತಪಸ್ಸುಕಾಲ (Lenten season) ದ ಐದನೇ ಭಾನುವಾರ ಇಲ್ಲಿ ದೊಡ್ಡ ಜಾತ್ರೆಯೇ ನೆರೆಯುತ್ತದೆ. ಜನ ವಾಹನಗಳಲ್ಲಿ ಕಾಲ್ನಡಿಗೆಯಲ್ಲಿ ಇಲ್ಲಿಗೆ ಧಾವಿಸುತ್ತಾರೆ. ಬೆಂಗಳೂರು ನಗರಸಾರಿಗೆಯು ಅಂದು ವಿಶೇಷ ಬಸ್ ವ್ಯವಸ್ಥೆಯನ್ನೂ ಮಾಡುತ್ತದೆ.

ಬೆಂಗಳೂರು ಮಹಾನಗರದ ಒಡಲನ್ನು ಸೇರಿಹೋಗಿರುವ ಹಾಗೂ ಹೊರವಲಯದ ಗ್ರಾಮಗಳಲ್ಲಿರುವ ಕನ್ನಡ ಕ್ರೈಸ್ತರ ಜಾನಪದ ದೈವವಾಗಿ ಅನ್ನಮ್ಮನು ಅವರನ್ನೆಲ್ಲ ವರ್ಷಕ್ಕೊಮ್ಮೆ ಸೂಜಿಗಲ್ಲಿನಂತೆ ಸೆಳೆಯುತ್ತಾಳೆ. ಚರ್ಚಿನೊಳಗಡೆಯ ಶಿಷ್ಟ ದೈವದ ಜೊತೆಜೊತೆಗೇ ಮಣ್ಣಿನ ಮಕ್ಕಳ ಸಾಂಸ್ಕೃತಿಕ ಕೊಂಡಿಯಾಗಿ ಜಾನಪದ ದೈವದಂತೆ ಅನ್ನಮ್ಮ ಕಾರ್ಯನಿರ್ವಹಿಸುತ್ತಾಳೆ. ಬೆಟ್ಟದ ತುದಿಯ ಶಿಲುಬೆ ಬಹುದೂರದಿಂದಲೇ ಭಕ್ತರನ್ನು ಕೈಬೀಸಿ ಕರೆಯುತ್ತದೆ. ಇತ್ತೀಚೆಗೆ ಯಾರೋ ಈ ಬೆಟ್ಟದ ಮೇಲೆ ಹನುಮಗಿರಿ ಎಂದು ಬರೆದಿದ್ದಾರೆ. ಬೆಟ್ಟದ ಮೇಲೊಂದು ಗುಡಿಯನ್ನೂ ಕಟ್ಟಿ ಅದರ ಪ್ರಾಚೀನತೆಯನ್ನು ಪುರಾಣಕಾಲಕ್ಕೆ ಒಯ್ಯಲೆತ್ನಿಸಿದ್ದಾರೆ. ಆದರೆ ನೂರಾರು ವರ್ಷಗಳಿಂದ ಹೊಂದಿಕೊಂಡು ಬಾಳುತ್ತಿರುವ ಸ್ಥಳೀಯ ಕ್ರೈಸ್ತ ಕ್ರೈಸ್ತೇತರರು ವಲಸಿಗರ ತರಲೆ ಕೆಲಸಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲವೆಂಬುದೇ ಬೆಂಗಳೂರಿನ ವಿಶೇಷ.

  • ಸ್ಥಳ ಮಹಿಮೆ, ಪುರಾಣ
~.~
  • Login or register to post comments
  • 274 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಗೋಪಾಲಸಾಮಿ' ಬೆಟ್ಟದ ಚೆಲುವಿನ ನೋಟ
  • ಒನಕೆ ಬೆಟ್ಟದ ಇಳಿಜಾರು
  • ಪಶ್ಚಿಮ ಘಟ್ಟವನ್ನ ಉಳಿಸಿ ಜೀವ ಸ೦ಕುಲವನ್ನ ರಕ್ಷಿಸಿ ಎ೦ಬ ಕಾರ್ಯಕ್ರಮಕ್ಕೆ ಆಹ್ವಾನ.
  • ಚಿತ್ರಕಲ್ಲು ದುರ್ಗದ ಮಾತೆ Chitrakalludurga Lady
  • ಕುಂತಿ ಬೆಟ್ಟ: ಹೊಂಡದಲ್ಲಿ ಬೆಟ್ಟದ ನೆರಳು
Syndicate content

ಲೇಖಕರು

cmariejoseph's picture

ಪೂರ್ಣ ಹೆಸರು
ಮರಿಜೋಸೆಫ್

ಪರಿಚಯ

ಕನ್ನಡ ಕ್ರೈಸ್ತರ ಭಾಷಾ ಚಳವಳಿಯ ಮುಂಚೂಣಿಯಲ್ಲೊಬ್ಬ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 49 ಅತಿಥಿಗಳು ಆನ್ಲೈನ್ ಇರುವರು.


ಪ್ರತಿಯೊಬ್ಬರೂ ಮದುವೆಯಾಗಬೇಕು. ಹೆಂಡತಿ ಒಳ್ಳೆಯವಳಾದರೆ ಸುಖವಾಗಿರುವಿ. ಹೆಂಡತಿ ಕೆಟ್ಟವಳಾದರೆ ತತ್ವಜ್ನಾನಿಯಾಗುವಿ.

— ಅರಿಸ್ಟಾಟಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator