Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಭಾಗ್ಯದ ಲಕ್ಷ್ಮಿ ಬಾರಮ್ಮ

September 23, 2005 - 11:43am — honnung

ಗೀತ ರಚನಕಾರರು: ಪುರಂದರದಾಸರು

ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ

ಹೆಜ್ಜೆಯ ಮೇಲೆ ಹೆಜ್ಜೆಯ ನಿಕ್ಕುತ,
ಗೆಜ್ಜೆಯ ಕಾಲ್ಗಳ ನಾದವ ತೋರುತ,
ಸಜ್ಜನ ಸಾಧು ಪೂಜೆಯ ವೇಳೆಗೆ,
ಮಜ್ಜಿಗೆಯೊಳಗಿನ ಬೆಣ್ಣೆಯಂತೆ,
ಭಾಗ್ಯದ ||

ಕನಕ ವೃಷ್ಟಿಯ ಕರೆಯುತ ಬಾರೇ,
ಮನ ಕಾಮನೆಯ ಸಿದ್ಧಿಯ ತೋರೇ,
ದಿನಕರ ಕೋಟಿ ತೇಜದಿ ಹೊಳೆವ,
ಜನಕ ರಾಯನ ಕುಮಾರಿ ಬಾರೇ,
ಭಾಗ್ಯದ ||

ಅತ್ತಿತ್ತಗಲದೆ ಭಕ್ತರ ಮನೆಯಲಿ,
ನಿತ್ಯ ಮಹೋತ್ಸವ ನಿತ್ಯ ಸುಮಂಗಲ ಸತ್ಯವ ತೋರುತ
ಸಾಧು ಸಜ್ಜನರ ಚಿತ್ತದಿ ಹೊಳೆವ ಪುತ್ತಳಿ ಬೊಂಬೆ
ಭಾಗ್ಯದ ||

ಸಂಖೆ ಇಲ್ಲದ ಭಾಗ್ಯವ ಕೊಟ್ಟು,
ಕಂಕಣ ಕೈಯ ತಿರುವುತ ಬಾರೇ
ಕುಂಕುಮಾಂಕಿತೆ ಪಂಕಜ ಲೋಚನೆ
ವೆಂಕಟ ರಮಣನ ಬಿಂಕದ ರಾಣಿ
ಭಾಗ್ಯದ ||

ಸಕ್ಕರೆ ತುಪ್ಪವ ಹಾಲಿಗೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅರಗಿಣಿ ರಂಗನ
ಚೊಕ್ಕ ಪುರಂದರ ವಿಠ್ಠಲನ ರಾಣಿ
ಭಾಗ್ಯದ ||

ಭಾಗ್ಯದ ಲಕ್ಷ್ಮಿ ಬಾರಮ್ಮ
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮಿ ಬಾರಮ್ಮ

  • ಕಾವ್ಯ ಮತ್ತು ಕವನ
Ornamental seperator
  • Login or register to post comments
  • 506 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಭಾಗ್ಯ
  • ನಕಾಶೆ ನೋಡುವುದರಲ್ಲಿ ನಾರಿಯರು ಹಿಂದೆ?
  • ಬಾರೆ ಬಾರೆ ಪುಟ್ಟಮ್ಮ
  • ಅಚ್ಚಗನ್ನಡದ ಫಲಕ
  • ಕಲ್ಲರಳಿ ಹೂವಾಗಿ - ಕಲ್ಲರಳಿ ಹೂವಾಗಿ....
Syndicate content

ಲೇಖಕರು

honnung's picture

ಪರಿಚಯ

A fellow kannadiga like to see much of Kannada on net world

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮೇ, 23, ರಿಂದ ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಧಿಕೃತವಾಗಿ ವಿಮಾನಯಾನ ಪ್ರಾರಂಭಿಸಲಿದೆ !
  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 6 ಅತಿಥಿಗಳು ಆನ್ಲೈನ್ ಇರುವರು.

ಕರುಣೆಯೇ ಪರಮ ಜ್ಞಾನ.

— ಫಿಲಿಪ್ ಜೇಮ್ಸ್ ಬೈಲಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator