ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಮೈಲಾರಲಿಂಗ

June 30, 2007 - 8:36pm — cmariejoseph

ಇಂಡಿಯಾದ ಸಂಸ್ಕೃತಿಯಲ್ಲಿ ಶಿವನಿಗೆ ಇರುವ ಸ್ಥಾನೆ ಅನನ್ಯ. ಅಪ್ಪಟ ದೇಶೀಯ ದೈವವಾದ ಶಿವನಿ ಬೇಡಿದವರಿಗೆ ಎಲ್ಲವನ್ನೂ ಕೊಡುವವನೇ ಹೊರತು ಯಾರೊಂದಿಗೂ ಅನಗತ್ಯವಾಗಿ ಜಗಳಕ್ಕೆ ನಿಂತವನಲ್ಲ. ಸತಿಯು ಸತ್ತಾಗ ಕೆಂಡಾಮಂಡಲವಾದನೇ ಹೊರತು ಕೆಡುಕು ಮಾಡಲಿಲ್ಲ. ಸಮರವೆಂಬುದು ಅಮಂಗಳ ಎಂಬ ಭಾವನೆ ಆತನದು. ಮಹಾಕವಿ ಕುವೆಂಪು ಅವರು ಶಿವ ಎಂಬ ಪದವನ್ನು ಸುಂದರವಾದದ್ದು, ಮಂಗಳಕರವಾದದ್ದು ಎಂಬುದಕ್ಕೆ ಸಂವಾದಿಯಾಗಿ ಬಳಸಿದ್ದಾರೆ. ಸತ್ಯ ಶಿವ ಸೌಂದರ್ಯಕ್ಕೆ ನಮಿಸುವ ನಾವು ನಮ್ಮ ದೇಶದಲ್ಲಿ ಶಿವನಿಗೆ ಮೇರುಸ್ಥಾನವನ್ನೇ ನೀಡಿದ್ದೇವೆ. ಪ್ರಕೃತಿಯ ಆರಾಧಕನಾದ ಮಾನವ ಪ್ರಕೃತಿಯಲ್ಲಿ ಸೌಂದರ್ಯವನ್ನು ಅಂದರೆ ಶಿವನನ್ನು ಕಂಡಿದ್ದಾನೆ. ಕಲ್ಲಬಂಡೆಗಳ ಲಿಂಗರೂಪವೆಲ್ಲ ಶಿವನೇ. ಲಿಂಗರೂಪದ ಬೆಟ್ಟಗಳೆಲ್ಲ ಶಿವನ ತಾಣಗಳು. ಆತ ಮಲೆಯವಾಸಿ. ಕನ್ನಡದ ಮಲೆ+ಅಯ್ಯ> ಮಲೆಯಯ್ಯ> ಮಲ್ಲಯ್ಯನಾಗಿ ವಿಜೃಂಭಿಸಿದ್ದಾನೆ. ಜನಪದರು ಅವನನ್ನು ಮಲೆಮಾದಯ್ಯ, ಪರ್ವತಪ್ಪ, ಗುಡ್ಡಯ್ಯ, ಗಿರಿಯಪ್ಪ, ಗಿರಿಗೌಡ ಇತ್ಯಾದಿಯಾಗಿ ಕರೆದಿದ್ದಾರೆ. ಆದರೆ ಎಲ್ಲೂ ಶಿವನನ್ನು ಮಲ್ಲಾರಿ, ಮೈಲಾರಿ ಎಂದು ಕರೆದ ಉದಾಹರಣೆಯಿಲ್ಲ.
ಈ ನಿಟ್ಟಿನಲ್ಲಿ ನಾವು ಸ್ವಲ್ಪ ವೀರಗಲ್ಲು ಹಾಗೂ ಮಾಸ್ತಿಕಲ್ಲುಗಳ ಹಿನ್ನೆಲೆ ಮುನ್ನೆಲೆಗಳನ್ನು ಮನನ ಮಾಡಬೇಕಾಗುತ್ತದೆ.
ಊರ ಹಿತಕ್ಕಾಗಿಯೋ ಮಾನಿನಿಯರ ರಕ್ಷಣೆಗಾಗಿಯೋ ತನ್ನ ಪಶುಗಳ ಕ್ಷೇಮಕ್ಕಾಗಿಯೋ ಹುತಾತ್ಮನಾದವನ ನೆನೆಪಿಗೆ ಸ್ಮಾರಕ ನೆಟ್ಟು ಪೂಜಿಸುವ ಕಲ್ಲೇ ವೀರಗಲ್ಲು. ಕನ್ನಡ ಸಂಸ್ಕೃತಿ ಎಲ್ಲೆಲ್ಲಿ ಪಸರಿಸಿತ್ತೋ ಅಲ್ಲೆಲ್ಲಾ ಈ ವೀರಗಲ್ಲುಗಳು ಸಾಮಾನ್ಯವಾಗಿ ಕಾಣಸಿಗುತ್ತವೆ. ವೀರಗಲ್ಲುಗಳಲ್ಲಿ ಸಾಮಾನ್ಯವಾಗಿ ೩ ಹಂತಗಳಿದ್ದು ಅತಿ ಕೆಳಗಿನದರಲ್ಲಿ ವೀರನು ಸೆಣಸುತ್ತಿರುವ ದೃಶ್ಯ, ಅದರ ಮೇಲೆ ಅವನು ಸಾಯುವಾಗ ಅಪ್ಸರೆಯರು ಬಂದು ಉಪಚರಿಸುತ್ತಿರುವ ದೃಶ್ಯ, ಎಲ್ಲಕ್ಕಿಂತ ಮೇಲಿನ ಹಂತದಲ್ಲಿ ವೀರನು ಶಿವನ ಸಾನ್ನಿಧ್ಯದಲ್ಲಿ ವಿರಾಜಮಾನನಾದ ದೃಶ್ಯ ಕಂಡುಬರುತ್ತದೆ. ಈ ಸಂಗತಿ ಹೇಗಾಯಿತು ಎಂಬುದನ್ನು ಅರುಹುವ ಪಠ್ಯವನ್ನೂ ಕೆಲ ವೀರಗಲ್ಲುಗಳಲ್ಲಿ ಕೆತ್ತಲಾಗಿರುತ್ತದೆ. ಮತ್ತೂ ಕೆಲವದರಲ್ಲಿ ಯಾವ ಕೆತ್ತನೆಯೂ ಇರದೆ ಬರಿದೇ ಕಲ್ಲೊಂದನ್ನು ಸ್ಮಾರಕವಾಗಿ ನೆಟ್ಟು ಅದರ ಮೇಲೊಂದು ಶಿವಲಿಂಗವಿಟ್ಟು ಹೋದ ಪ್ರಸಂಗಗಳು ಇವೆ. ವೀರನ ಸ್ಮರಣೆಯಲ್ಲಿ ಲಿಂಗಕ್ಕೆ ನಿತ್ಯುಪೂಜೆ ಮಾಡಿ ವರುಷಕ್ಕೊಮ್ಮೆ ಸಂತರ್ಪಣೆ ಮಾಡಿ ಕಾಲಕ್ರಮೇಣ ಕಲ್ಲು ಮರೆತುಹೋಗಿ ಲಿಂಗವೊಂದೇ ಉಳಿದು ಅದೇ ಪ್ರಧಾನವಾಗಿ ಅದಕ್ಕೊಂದು ಮಂದಿರವಾಗಿ ಮುನ್ನಡೆದ ಪ್ರಸಂಗಗಳೂ ಇವೆ.
ಗಂಡನೊಂದಿಗೆ ಚಿತೆಯೇರಿದ ಹೆಣ್ಣಿನ ಸ್ಮರಣೆಗೆ ನಿಲ್ಲಿಸಿದ ಮಾಸ್ತಿ (ಮಹಾಸತಿ) ಕಲ್ಲುಗಳ ಕಥೆಯೂ ಹೀಗೇ ಆಗಿ ಇಂದು ಅವು ಶಕ್ತಿದೇವತೆಗಳ ಗುಡಿಗಳಾಗಿರುವುದು ವೇದ್ಯವಾದ ಸಂಗತಿಯೇ.
ಬಹುಶಃ ಮೈಲಾರಲಿಂಗವೂ ಇಂಥ ಒಂದು ವೀರಸ್ಮರಣೆಯ ಪ್ರತೀಕವಾಗಿದ್ದು ಅನಂತರ ದೈವೀರೂಪ ತಳೆದಿರಬೇಕು. ಈ ಮೈಲಾರಲಿಂಗನ ಭಕ್ತರು ಬ್ರಾಹ್ಮಣರಲ್ಲೂ ಇದ್ದಾರೆಂಬುದೇ ಮತ್ತೊಂದು ವಿಶೇಷ. ಮರಾಟಿಗರು ಪೂಜಿಸುವ ಖಂಡೋಬ (ಖಡ್ಗ ಹಿಡಿದ ವೀರ), ತೆಲುಗರು ಪೂಜಿಸುವ ಮಲ್ಲಿಕಾರ್ಜುನ ಹಾಗೂ ಕನ್ನಡಿಗರ ಮೈಲಾರ ಇವೆಲ್ಲ ವೀರಪುರುಷನೊರ್ವನ ವಿವಿಧ ರೂಪಗಳು. ಏಕೆಂದರೆ ನಮ್ಮ ದೇಶೀ ದೈವವಾದ ಶಿವನು ಎಂದು ಖಡ್ಗ ಹಿಡಿದವನಲ್ಲ.

  • ಮಾಹಿತಿ ಫಲಕ
~.~
  • Login or register to post comments
  • 428 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 1, 2007 - 2:56pm — mahesha

ಉ: ಮೈಲಾರಲಿಂಗ

mahesha's picture

ಜೋಸೆಪರೇ...

ನಿಮ್ಮದು ಮತ್ತೊಂದು ಒಳ್ಳೆಯ ಬರಹ.!!

ವೀರಗಲ್ಲು, ಮಾಸ್ತಿಗಲ್ಲು, ಲಿಂಗ, ಶಿವ, ಇವುಗಳ ಬಗ್ಗೆ ಇಷ್ಟು ಆಳವಾಗಿ, ಸರಳವಾಗಿ ಹೇಳಿವ ನಿಮ್ಮೀ ಬರಹ ತುಂಬ ಚನ್ನಾಗಿದೆ.

ಈ ಸಂಗತಿಯನ್ನು ನೀವು ಹೇಗೆ ಪಡೆದಿರಿ ಎಂದು ಅರುಹುವಿರಾ?

ಈ ಬರಹಕ್ಕೆ ನನ್ನಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 1, 2007 - 3:35pm — muralihr

ಉ: ಮೈಲಾರಲಿಂಗ

muralihr's picture

ಏನ್ ಸ್ವಾಮಿ ಹಿ೦ಗ್ ಅ೦ದ್ರೀ !
ಕುಮಾರವ್ಯಾಸ ಭಾರತದಲ್ಲಿ ಕಿರಾತ ವೇಷ ಧರಿಸಿ ಕುಸ್ತಿ ಮಾಡೋದಿಲ್ವೇನು ?

*******************
ಅರ್ಜುನ : ಎಲೆ ಕಿರಾತ ಮದೀಯ ಬಾಣದ
ಬಲೆಗೆ ನೀ ಮೃಗ ವಾಗದಿರು ನಿ
ನ್ನಳವ ಮೆರೆಯಾ ಬನದ ನರಿ ಮೊಲ ಹುಲ್ಲೆ ಹರಿಣ ನಲಿ
ಗೆಲಿದ ಗರುವನು ನೀನು ನಿನ್ನ್
ಗ್ಗಳಿಕೆ ಗಾವ೦ಜುವೆವು ನಿನ್ನೀ
ದಳಕೆ ಪತಿಯು೦ಟಾದಡಾತನ ಕೊ೦ಡು ಬಾಯೆ೦ದ.\\

ಎನಲು ನಕ್ಕನು ಶ೦ಭು ಭಕ್ತನ
ಮನದ ಧೃತಿಯನು ಭುಜ ಬಲವನಾ
ತನ ಪರಾಕ್ರಮ ಲಕ್ಷ್ಮಿಯನು ಪಾರ್ವತಿಗೆ ತೋರಿಸುತ.

ಗಾಯವನು ಮನ್ನಿಸುತ ಶಿವ ಪೂ
ರಾಯದಲಿ ಮೆಟ್ಟಿದನು ಪಾರ್ಥನ
ಬಾಯೊಳೊಕ್ಕುದು ರುಧಿರ ನಾಸಿಕದೆರಡು ಬಾಹೆಯಲಿ.

ಪಾಪ ರಕ್ತ ಬರುವ ಹಾಗೇ ತನ್ನ ಭಕ್ತನನ್ನು ಹೊಡೆಯುವ ದೈವ ಶಿವನನ್ನು ಬಿಟ್ಟೂ ಮತ್ತೊಬ್ಬನಿಲ್ಲಾ.
ಅದಕ್ಕೆ ಈ ದೇವರುಗಳನ್ನು ಪೂಜಿಸುವ ಗೊಡವೆಗೆ ಹೋಗಿಲ್ಲಾ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 1, 2007 - 5:31pm — mahesha

ಉ: ಮೈಲಾರಲಿಂಗ

mahesha's picture

ಪಾಪ ರಕ್ತ ಬರುವ ಹಾಗೇ ತನ್ನ ಭಕ್ತನನ್ನು ಹೊಡೆಯುವ ದೈವ ಶಿವನನ್ನು ಬಿಟ್ಟೂ ಮತ್ತೊಬ್ಬನಿಲ್ಲಾ.
ಅದಕ್ಕೆ ಈ ದೇವರುಗಳನ್ನು ಪೂಜಿಸುವ ಗೊಡವೆಗೆ ಹೋಗಿಲ್ಲಾ.

ಸಿವ ಸಿವಾ!! ಹಿಂಗಲ್ಲ ಅನ್ನೋರ್‍ನ ಸಿವ ಸುಮ್ಕೆ ಬಿಡಕ್ಕಿಲ್ಲ. ಮುರುಳಿ ಆತ್ಮ.. ನಿಮ್ಗೆ ಏನೋ ಗರಚಾರ ಕಾದಯ್ತೆ! Smiling

ಕನ್ನಡದಲ್ಲಿ ಸಿವನ ಹೆಸರುಗಳು

ನಿಂಗ(ಲಿಂಗ), ಬೋರ(ಬೋಳ), ಮಲೆಯಪ್ಪ, ಮಲ್ಲಪ್ಪ, ಮಲ್ಲ, ಮಾದ, ಮಾದೇವ, ಮುಕ್ಕಣ್ಣ, ನಂಜ, ಬೆಟ್ಟಪ್ಪ, ಗುಡ್ಡಪ್ಪ, ಹಾವಪ್ಪ, ಈರ, ಬೀರ,

ಅಪ್ಪಗಳ ಜಾಗದಲ್ಲಿ ಅಯ್ಯಗಳೂ ಇವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೈಲಾರಲಿಂಗ ಮತ್ತು ತಿರುಪತಿ ತಿಮ್ಮಪ್ಪ
  • ಮಹಾಶಿವರಾತ್ರಿ.....
  • ಎಣ್ಮಯ ಎಂದರೆ ಯಾರು
  • ಶಿವರಾತ್ರಿ
  • ಶಿವರಾತ್ರಿ ಚಿಂತನೆ
Syndicate content

ಲೇಖಕರು

cmariejoseph's picture

ಪೂರ್ಣ ಹೆಸರು
ಮರಿಜೋಸೆಫ್

ಪರಿಚಯ

ಕನ್ನಡ ಕ್ರೈಸ್ತರ ಭಾಷಾ ಚಳವಳಿಯ ಮುಂಚೂಣಿಯಲ್ಲೊಬ್ಬ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು
  • ಅಭಿಮಾನಿ
  • ಬಾರೋ ಸಾಧನಕೇರಿಗೆ...
  • ಹಿಂದಿಚಲನಚಿತ್ರ, ’ಮಧುಮತಿ’ ಯನ್ನು ಗೆಳೆಯರಜೊತೆ ನೋಡುವ ಸಂದರ್ಭ ಬಂತು. ವಾ...ಎಂತಹ ಮಧುರ ಚಿತ್ರೀಕರಣ ! ಈಗ ನೋಡಿದಂತಿದೆ !

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 51 ಅತಿಥಿಗಳು ಆನ್ಲೈನ್ ಇರುವರು.


ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು

— ಮಹಾತ್ಮಾ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator