ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ಮೈಸೂರು ಸ್ಮೆಲ್ಲಿಗೆ … ಗಟ್ಟಿ ಹಿಡಿಯಿರಿ ಮೂಗನು!

November 20, 2007 - 8:26pm — Ennares

( ದಿವಂಗತ ನರಸಿಂಹಸ್ವಾಮಿಯವರನ್ನು ನೆನೆಸಿ, ನಮಿಸಿ, ಕ್ಷಮೆಯಾಚಿಸುತ್ತ)

- ನವರತ್ನ ಸುಧೀರ್ ನೋಡಿರಣ್ಣ ಹೇಗಿದೆ ಕರ್‍... ನಾಟಕ

ಮದುವೆ ಮುರಿದು ತಿಂಗಳಿಲ್ಲ ನೋಡಿರಣ್ಣ ಹೇಗಿದೆ

ಯಡ್ಡಿ ಕೂಗಿದಾಗಲೆಲ್ಲ ಬರುವನಣ್ಣ ಕುಮಾರನು

ಹಿಂದೆ ಮುಂದೆ ನೋಡದೆ ಗೌಡರ ಮಾತ ಕೇಳದೆ

ಯಾರೆ ಎಷ್ಟು ಉಗಿದರೇನು ಬಿದ್ದು ಬಿದ್ದು ನಕ್ಕರೇನು

ಜನರ ಬಾಯಿಗಿಲ್ಲ ಬೀಗ ಹೃದಯದೊಳಗೆ ಪ್ರೇಮರಾಗ

ಮರಳಿ ಅರಳಿ ಭಾಜಪವನು ತಾನೆ ಕೂಗಿ ಬೇಡಿ ಕರೆದು

ಅವರ ಹರಸಿ ಕರೆವುದು ಬಂಧುಮಿತ್ರ ಎನುವುದು

ಕೆಂದಾವರೆಯನು ಅರಳಿಸಿ ಅಪ್ಪಿ ಮುತ್ತನಿಡುವುದು.

ಇಂದು ಮುತ್ತನ್ನಿಡುವುದು ನಾಳೆ ಕಚ್ಚಾಡುವುದು

ನಮ್ಕುಮಾರನ್ ನಾಟಕ ಮಾಡೋದೆಲ್ಲಾ ಪಾತಕ

ಇವನದದೆಂಥಾ ಜಾತಕ ಕರ್ -ನಾಟಕದ ಕಂಟಕ

ನೋಡಿರಣ್ಣ ಹೇಗಿದೆ ಕರುನಾಡ ಭಾಗ್ಯ ಹೀಗೇಕಿದೆ?

*** 

ಯಡ್ಡಿಯು ಬಂದರು ಗೌಡರ ಮನೆಗೆ ರಾತ್ರಿಯಾಗಿತ್ತು.

ಯಡ್ಡಿಯು ಬಂದರು ಗೌಡರ ಮನೆಗೆ ರಾತ್ರಿಯಾಗಿತ್ತು

ಚಂದ್ರನೆ ಕಾಣದ ಬಾನಿನಲೆಲ್ಲಾ ಮುಗಿಲೇ ತುಂಬಿತ್ತು

ಬಾನಲಿ ಕಾರ್ಮುಗಿಲು ಕವಿದಿತ್ತು.

ಗೌಡರಮನೆಯಲಿ ಹಳಸಿದ ಸಾರಿನ ನಾತವೆ ತುಂಬಿತ್ತು.

ಹೊರಗೆನಿಂತ ಜನಜಂಗುಳಿಯಿದ್ದೂ ಒಳಗಡೆ ದೀಪವಾರಿ ನೀರವ ಕವಿದಿತ್ತು.

ರೇವಣ್ಣನ ಗುಸುಪಿಸು ಮಾತನು ಕೇಳುತ ಕೂತಿದ್ದರು ಗೌಡ

ಕುರ್ಚಿಯ ಕನಸಲಿ ಮುಳುಗಿದ ಯಡ್ಡಿಗೆ ಸ್ವರ್ಗವೇ ದಕ್ಕಿತ್ತು.

ಪ್ರಮಾಣ ವಚನಕೆ ಕರೆಯಲು ಬಂದೆನು ನಿಮ್ಮನು ನಾನೆನುತ ಯಡ್ಡಿಯು ಹೇಳಲು

ಊರಲ್ಲಿದ್ದರೆ ಖಂಡಿತ ಬರುವೆನು ಎಂದರು ಗೌಡರು ಬಿಗುವಿನಲಿ

ಹೊತ್ತಾಯಿತು ಸರಿ ಹೊರಡುವೆನೆಂದರು ಯಡ್ಡಿಯು ಹರುಷದಲಿ

ಹೋಗೋ ಮಗನೆ ಹೋಗುವೆ ಎಲ್ಲಿಗೆ ನೋಡುವೆ ಅಂದರು ಗೌಡರು ಮನಸಿನಲಿ.

**

ನಿನ್ನ ಪ್ರೇಮದ ಪರಿಯ

ನಿನ್ನ ಪ್ರೇಮದಪರಿಯ ನಾನರಿಯೆ ಕುಮಾರಣ್ಣ

ನಿನ್ನೊಳಿದೆ ನನ್ನ ಮನಸು

ಅಧಿಕಾರದಾಸೆಯಿಂದುಕ್ಕುವುದು ಕಡಲಾಗಿ

ನಿನ್ನ ಬೆಂಬಲವನರಸಿ

ನಿನ್ನೊಳಿದೆ ನನ್ನ ಮನಸು

ಗೌಡರಾ ಹೃದಯದಲಿ ಸ್ವಲ್ಪವೂ ಒಲವಿಲ್ಲ

ಅಂತರಿತು ಯಾರೇನೆಲ್ಲ ಹೇಳಿದರೂ

ನಿನ್ನ ಬೆಂಬಲವರಸಿ

ನಾನು ಬಂದಿಹೆನು

ನಿನ್ನೊಳಿದೆ ನನ್ನ ಮನಸು

ನಂಬಿ ಕೆಟ್ಟವರಿಲ್ಲ ಎಂಬ ಮಾತನು ನಂಬಿ

ನೀ ಹೇಳಿದನು ನಂಬಿ

ಮಾನ ಮನೆಯಲಿ ಬಿಟ್ಟು

ಜೊತೆಸೇರುವೆನು

ನಿನ್ನೊಳಿದೆ ನನ್ನ ಮನಸು

 

 

  • ಲಲಿತ ಪ್ರಬಂಧ, ಹಾಸ್ಯ
~.~
  • Login or register to post comments
  • 480 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 21, 2007 - 12:40pm — csomsekraiah

ಉ: ಮೈಸೂರು ಸ್ಮೆಲ್ಲಿಗೆ … ಗಟ್ಟಿ ಹಿಡಿಯಿರಿ ಮೂಗನು!

csomsekraiah's picture

ಪೆನ್ನೂ ನಿನ್ನದೇ; ಕವನವೂ ನಿನ್ನದೇ ಎಷ್ತು ಚಂದ ಬರೆದಿದ್ದೀ ಸುಧೀರ್, ಗೌಡನೂ ರಾಜಕಾರಣಿಯೇ ಯಡ್ಡಿಯೂ ರಾಜಕಾರಣಿಯೇ ಮುಳುಗಿತಲ್ಲ ಅವರ ಹಡಗು, ಇವರ ನಂಬಿದರೆ ಎಲ್ಲವೂ ಮುಳುಗುವುದೇ ನಿಜವು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
November 21, 2007 - 2:18pm — shreekant.mishrikoti

ಉ: ಮೈಸೂರು ಸ್ಮೆಲ್ಲಿಗೆ … ಗಟ್ಟಿ ಹಿಡಿಯಿರಿ ಮೂಗನು!

shreekant.mishrikoti's picture

ಬೊಂಬಾಟ್ !

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೇಮದ ಓಲೆ
  • ಅಂದಗಾತಿ
  • ಓ ನನ್ನ ಜೀವವೇ
  • ಕನಸ್ಸು
  • ಹೃದಯದ ಭಾವ
Syndicate content

ಲೇಖಕರು

Ennares's picture

ಪೂರ್ಣ ಹೆಸರು
ನವರತ್ನ ಸುಧೀರ್

ಪರಿಚಯ

ನಿವೃತ್ತ ಲೋಹಶಾಸ್ತ್ರಜ್ನ. ಹಿಂದೂಸ್ತಾನಿ ಸಂಗೀತ ಕೇಳುವ, ಪುಸ್ತಕ ಓದುವ, ಬ್ಲಾಗಿಸುವ ಹವ್ಯಾಸ. ನಾಟಕದ ಗೀಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಂಗಾರದ ಅರಮನೆ
  • ಗುರಿಯ ಮೊಸರನ್ನದಲ್ಲೇಕೆ ಪ್ರೇಮದ ಕಲ್ಲು?
  • 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
  • ಸಹಜ ಕೃಷಿ ಹರಿಕಾರ ಮಸನೊಬು ಫುಕುಓಕಾ ಮರಳಿ ಮಣ್ಣಿಗೆ.
  • ಬಸವಣ್ಣನಾಗಬೇಕೆಂದು ಬಯಸಿದ ಯಡಿಯೂರಪ್ಪ ಅಮೆರಿಕದಲ್ಲಿ ಮೂಗಬಸವನಾದದ್ದು!
  • ತಪ್ಪಿ ನಡೆಸ ಸರ್ಕಾರ
  • ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 10:05am
  • gururajkodkani
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:56am
  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator