ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೇದಿಕಾ ಪ್ರದರ್ಶನ

November 29, 2007 - 8:15pm — agilenag
ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಚಿತ್ರ

ಪ್ರಿಯ ಸಂಪದ ಬಾಂಧವರೆ,
ಇತ್ತೀಚೆಗೆ, ಅಂದರೆ ೧೮-೧೧-೨೦೦೭ರಂದು ಹಾಸನದ ಶ್ರೀ ಶೈಲ ವಲ್ಲಭ ಭಜನ ಮಂಡಳಿಯವರು ಒಂದು ಮನೋಹರವಾದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು ಅಲ್ಲಿನ ಆರ್ಯ ವೈಸ್ಯ ಮಂಡಲಿಯ ಸಹಯೋಗದೊಂದಿಗೆ ನಿಯೋಜಿಸಿದ್ದರು. ಇದು ತಿರುಪತಿ ತಿರುಮಲ ದೇವಸ್ಥಾನದ ಹರಿದಾಸ ಸಾಹಿತ್ಯ ಯೋಜನೆಯ ಕಾರ್ಯಕ್ರಮವೂ ಆಗಿತ್ತು. ಈ ಯೋಜನೆಯ ಅಡಿಯಲ್ಲಿ ಸ್ಥಳೀಯ ಸಂಸ್ಥೆಗಳು ಸಭಾ ಭವನ, ಪ್ರಚಾರ ಇತ್ಯಾದಿಗಳ ಜವಾಬ್ಧಾರಿ ವಹಿಸಿಕೊಂಡರೆ, ತಿ.ತಿ.ದೇವಸ್ಥಾನವು ಉಚಿತವಾಗಿ ಯೋಜನಾ ತಂಡವನ್ನು ಕಳುಹಿಸಿ, ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೇದಿಕಾ ಪ್ರಾತ್ಯಕ್ಷಿಯನ್ನು ಪ್ರಸ್ತುತ ಪಡಿಸುತ್ತದೆ. ತಿರುಪತಿಯಿಂದ ಹೋಗಿ ಬರುವ ವೆಚ್ಚ ಇತ್ಯಾದಿಗಳನ್ನು ತಿ.ತಿ.ದೇ. ವಹಿಸಿಕೊಳ್ಳುವುದಲ್ಲದೆ, ಈ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ವಂತಿಗೆ, ಕಾಣಿಕೆ ಇತ್ಯಾದಿಗಳನ್ನು ತೆಗೆದುಕೊಳ್ಳುವುದಿಲ್ಲ. ಈ ಯೋಜನೆಯು ಕೇವಲ ಹಿಂದೂ ಧರ್ಮದ ಪರಿಚಯ ಹಾಗು ನಮ್ಮ ಕಲೆ ಹಾಗು ಸಂಸ್ಕೃತಿಯನ್ನು ಇಂದಿನ/ಮುಂದಿನ ಪೀಳಿಗೆಗೆ ತಿಳಿಸಿಕೊಡುವುದೇ ಆಗಿದೆ. ಈ ಪ್ರಸ್ತುತ ಸಂದರ್ಭದಲ್ಲಿ ಭಜನ ಮಂಡಳಿಯು ಹಾಸನದ ಕಲಾ ಭವನದಲ್ಲಿ ಎಲ್ಲಾ ಏರ್ಪಾಡನ್ನೂ ನಡೆಸಿದ್ದು, ಎಂದರೆ ಭವನದ ಬಾಡಿಗೆ, ವಿಡಿಯೋ ಕವರೇಜ್, ಸ್ಥಳೀಯ ಹಾಗು ಸಮಾಜದ ಪ್ರಮುಖ ವ್ಯಕ್ತಿಗಳಿಗೆ ಅಭಿನಂದನೆ ಇತ್ಯಾದಿಗಳು ಹಾಗು ಕಾರ್ಯಕ್ರಮಕ್ಕೆ ಬಂದವರಿಗೆಲ್ಲರಿಗೂ ಪ್ರಸಾದ ಹಂಚಿಕೆ (ಊಟ ಮಾಡಿದಷ್ಟೇ ಸಮೃದ್ಧವಾಗಿತ್ತು) ಇತ್ಯಾದಿಗಳನ್ನು ಸುಮಾರು ರೂ. ೫ ಲಕ್ಷ ವೆಚ್ಚದಲ್ಲಿ ಆಯೋಜಿಸಿತ್ತು. ಈ ಪ್ರಾತ್ಯಕ್ಷಿಕೆ ಹಾಗು ಪ್ರಸಾದ ಹಂಚಿಕೆ ಇತ್ಯಾದಿಗಳೆಲ್ಲವೂ ಜಾತಿ, ಮತಗಳ ಭೇದ ಭಾವವಿಲ್ಲದೆ ಪ್ರತಿಯೊಬ್ಬರಿಗೂ ಮುಕ್ತವಾಗಿದ್ದು, ಯಾರು ಬೇಕಾದರೂ ಮುಂಚಿತವಾಗಿ ಪಾಸ್ ಪಡೆದು ಭಾಗವಹಿಸಲು ಅವಕಾಶವಿತ್ತು. ಸನ್ಮಾನ್ಯ ಆನಂದತೀರ್ಥಾಚಾರ್ಯರವರು ತಿ.ತಿ.ದೇವಸ್ಥಾನದ ಪ್ರತಿನಿಧಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ವೀಕ್ಷಕರಿಗೆ ತಾವೇ ತಿ.ತಿ.ದೇವಸ್ಥಾನದಲ್ಲಿ ಸ್ವಾಮಿಯ ಕಲ್ಯಾಣೋತ್ಸವವನ್ನು ಖುದ್ದಾಗಿ ವೀಕ್ಷಿಸಿದ ಅನುಭವವಾಯಿತು.
ಈಕೂಡ ತತ್ಸಂಬಂಧವಾಗಿ ತೆಗೆದ ಛಾಯಾಚಿತ್ರವೊಂದನ್ನು ಸಂಪದದ ಓದುಗರಿಗಾಗಿ ನೀಡುತ್ತಿದ್ದೇನೆ. ೧೬ ಸ್ಲೈಡುಗಳಿವೆ. ಆದರೆ, ಸ್ಥಳದ ಅಭಾವದಿಂದಾಗಿ ಕೇವಲ ಒಂದೇ ಚಿತ್ರವನ್ನು ಈ ಮೂಲಕ ಕಳುಹಿಸಲು ಸಾಧ್ಯವಾಗುತ್ತಿದೆ. ವೀಕ್ಷಿಸಿ ಆನಂದಿಸಿ, ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಪ್ರಾರ್ಥನೆ.
ಇಂತಹ ಕಾರ್ಯಕ್ರಮವನ್ನು ಇಚ್ಚಿಸುವ ಯಾರುಬೇಕಾದರೂ ಆಯೋಜಿಸಬಹುದು. ತಿ.ತಿ.ದೇವಸ್ಥಾನಕ್ಕೆ ೨-೩ ತಿಂಗಳು ಮುಂಚಿತವಾಗಿ ತಿಳಿಸಿದರೆ ಅನುಕೂಲವಾಗುತ್ತದೆಂದು ತಿಳಿಸಿರುತ್ತಾರೆ.

ಎ.ವಿ. ನಾಗರಾಜು
೯೮೪೫೪೯೬೪೫೯

  • ಅಧ್ಯಾತ್ಮ
~.~
  • Login or register to post comments
  • 313 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶಿವರಾತ್ರಿ
  • ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಚಿತ್ರ
  • ದೊಡ್ಡಗದ್ದವಳ್ಳಿಯ ಮಹಾಲಕ್ಷ್ಮೀ ದೇವಾಲಯದಲ್ಲಿರುವ ಬೇತಾಳಗಳ ಮೂರ್ತಿಗಳು
  • ಕನ್ನಡ ಸಾಹಿತ್ಯ.ಕಾನ ಕಾರ್ಯಕ್ರಮ
  • ಶ್ರೀನಿವಾಸ ಕಲ್ಯಾಣ
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 1:33pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 1:32pm
  • ASHOKKUMAR
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 12:57pm
  • harshab
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 7, 2008 - 12:52pm
  • Shivakumar.Revadi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 7, 2008 - 12:44pm
  • anil.ramesh
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:44pm
  • savithasr
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:30pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೭
    October 7, 2008 - 12:29pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 196 ಅತಿಥಿಗಳು ಆನ್ಲೈನ್ ಇರುವರು.


ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ

— --- ಟಿ.ಪಿ.ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator