ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ರಾಯರು ಬಂದರು ಮಾವನ ಮನೆಗೆ

November 20, 2005 - 4:17pm — shankara

ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ

ರಾಯರು ಬಂದರು ಮಾವನ ಮನೆಗೆ ರಾತ್ರಿಯಾಗಿತ್ತು
ಹುಣ್ಣಿಮೆ ಹರಸಿದ ಬಾನಿನ ನಡುವೆ
ಚಂದಿರ ಬಂದಿತ್ತು, ತುಂಬಿದ ಚಂದಿರ ಬಂದಿತ್ತು |ಪ್|

ಮಾವನ ಮನೆಯಲಿ ಮಲ್ಲಿಗೆ ಹೂಗಳ ಪರಿಮಳ ತುಂಬಿತ್ತು
ಬಾಗಿಲ ಬಳಿ ಕಾಲಿಗೆ ಬಿಸಿ ನೀರಿನ ತಂಬಿಗೆ ಬಂದಿತ್ತು
ಒಳಗಡೆ ದೀಪದ ಬೆಳಕಿತ್ತು |೧|

ಘಮ ಘಮಿಸುವ ಮೃಷ್ಟಾನ್ನದ ಭೋಜನ ರಾಯರ ಕಾದಿತ್ತು
ಬೆಳ್ಳಿಯ ಬಟ್ಟಲ ಗಸ-ಗಸೆ ಪಾಯಸ ರಾಯರ ಕರೆದಿತ್ತು
ಭೂಮಿಗೆ ಸ್ವರ್ಗವೆ ಇಳಿದಿತ್ತು |೨|

ಚಪ್ಪರಗಾಲಿನ ಮಂಚದ ಮೇಗಡೆ ಮೆತ್ತನೆ ಹಾಸಿತ್ತು
ಅಪ್ಪಟ ರೇಶಿಮೆ ದಿಂಬಿನ ಅಂಚಿಗೆ ಚಿತ್ರದ ಹೂವಿತ್ತು
ಪದುಮಳು ಹಾಕಿದ ಹೂವಿತ್ತು |೩|

ಚಿಗುರೆಲೆ ಬಣ್ಣದ ಅಡಿಕೆಯ ತಂದಳು ನಾದಿನಿ ನಸು ನಗುತ
ಬಿಸಿ ಬಿಸಿ ಹಾಲಿನ ಬಟ್ಟಲು ತಂದರು ಅಕ್ಕರೆಯಲಿ ಮಾವ
ಮಡದಿಯ ಸದ್ದೆ ಇರಲಿಲ್ಲ |೪|

ಮಡದಿಯ ತಂಗಿಯ ಕರೆದಿಂತೆಂದರು ಅಕ್ಕನ ಕರೆಯಮ್ಮ
ಮೆಲು ದನಿಯಲಿ ನಾದಿನಿ ಇಂತೆಂದಳು ಪದುಮಳು ಒಳಗಿಲ್ಲ
ನಕ್ಕಳು, ರಾಯರು ನಗಲಿಲ್ಲ |೫|

ಏರುತ ಇಳಿಯುತ ಬಂದರು ರಾಯರು ದೂರದ ಊರಿಂದ
ಕಣ್ಣನು ಕಡಿದರು ನಿದ್ರೆಯು ಬಾರದು ಪದುಮಳು ಒಳಗಿಲ್ಲ
ಪದುಮಳ ಬಳೆಗಳ ಧ್ವನಿ ಇಲ್ಲ |೬|

ಬೆಳಗಾಯಿತು ಸರಿ ಹೊರಡುವೆನಂದರು ರಾಯರು ಮುನಿಸಿನಲಿ
ಒಳಮನೆಯಲಿ ನೀರಾಯಿತು ಎಂದಳು ನಾದಿನಿ ರಾಗದಲಿ
ಯಾರಿಗೆ ಎನ್ನಲು ಹರುಶದಲಿ |೭|

ಪದುಮಳು ಬಂದಳು ಹೂವನು ಮುಡಿಯುತ
ರಾಯರ ಕೊಣೆಯಲಿ |೮|

  • ಕಾವ್ಯ ಮತ್ತು ಕವನ
~.~
  • Login or register to post comments
  • 640 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಳ್ಳಿಯ ಬಟ್ಟಲು
  • ಕ್ರೈಸ್ತ ಕೋಲಾಟದ ಪದಗಳು
  • ವಿಧಿಯಾಟ (ವಿರೋಧಾಭಾಸ)
  • 'ಕಾಯಿಸು' , 'ಬಿಸಿ ಮಾಡು' ಇವುಗಳ ಬೇರೆತನವೇನು?
  • ಮೈಸೂರು ಸ್ಮೆಲ್ಲಿಗೆ … ಗಟ್ಟಿ ಹಿಡಿಯಿರಿ ಮೂಗನು!
Syndicate content

ಲೇಖಕರು

shankara's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator