ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಬಾಲ್ಯದ ನೆನಪು

January 4, 2008 - 10:44am — shekarsss

ಬೆಟ್ಟ ಗುಡ್ಡಗಳಲ್ಲಿ
ದಟ್ಟ ಕಾಡುಗಳಲ್ಲಿ
ಕಳೆದು ಹೋಗುವ
ಆಸೆ ನನಗಿಂದು

ಕೊಬ್ಬಿದ ಎಮ್ಮೆಯನತ್ತಿ
ಊರ ಕೇರಿಯ ಸುತ್ತಿ
ಪಕ್ಕದ ಕೆರೆಯಲ್ಲಿ ಜಗ್ಗಿ
ಮಿಂದು ಬರುವಾಸೆ

ಚಡ್ಡಿ ಸ್ನೇಹಿತರೊಡನೆ
ರೆಂಬೆ ಕೊಂಬೆಯ ಹತ್ತಿ
ಅಂಗಿ ಚಡ್ಡಿಯ ಅರಿದು
ಕೈಯಿ ಕಾಲನು ಪರಚುವಾಸೆ

ಗೋಲಿ ಆಟವ ಆಡಿ
ಈಜು ಕೊಳದಲಿ ಧುಮುಕಿ
ಮರಳು ದಂಡೆಗಳಲ್ಲಿ
ಬಿಸಿಲು ಕಾಯುವ ಆಸೆ

ಜಾತಿ ಕೋಳಿಯ ಕದ್ದು
ಊರ ಹೊಲದ ನಡುವೆ
ಉಪ್ಪು ಕಾರವ ಅರಿದು
ಸುಟ್ಟು ತಿನ್ನುವ ಆಸೆ

ಊರ ಹೈದರ ಜೊತೆಗೆ
ಒತಿಕ್ಯಾತವನಟ್ಟಿ
ಕಲ್ಲು ಮುಳ್ಳನು ತುಳಿದು
ಕಲ್ಲು ಬೀಸುವ ಆಸೆ

ಗೆಳೆಯಾರಿಬ್ಬರು ಕೂಡಿ
ಬೀಡಿ ಕಟ್ಟನು ಹಿಡಿದು
ಗುಡಿಯ ಕದವ ಜಡಿದು
ಒಮ್ಮೆ ಸೇದಿ ಬಿಡುವಾಸೆ

ಆಡುವ ಆಟಗಳಲ್ಲಿ
ಎಷ್ಟೇ ಜಗಳಗಳಿರಲಿ
ಸಂಜೆ ಹೊತ್ತಿಗೆ ಮರೆತು
ಸಿನಿಮಾ ನೋಡುವ ಆಸೆ

ನೆನಪು ಬಂದಾಗೆಲ್ಲ
ತುಂಟ ಹುಡುಗರನೊಮ್ಮೆ
ನನ್ನ ಊರಿಗೆ ಹೋಗಿ
ನೋಡಿ ಬರುವಾಸೆ

  • ಕಾವ್ಯ ಮತ್ತು ಕವನ
~.~
  • Login or register to post comments
  • 211 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕದ್ದು ಕದ್ದು ನೋಡಿ
  • ನಿನ್ನ ನೆನೆಪು
  • ಕಲ್ಲು-ಕೋಟೆಗಳ ನಡುವಲ್ಲೊಂದು ಕಣಿವೆ
  • ಮತ್ತಷ್ಟು ಗಾದೆಗಳು - ೩
  • ನಾವು ಆಡುತ್ತಿದ್ದ ಆಟಗಳು
Syndicate content

ಲೇಖಕರು

shekarsss's picture

ಪೂರ್ಣ ಹೆಸರು
ಚ೦ದಿನ

ಪರಿಚಯ

ಕಲಿ, ನಲಿ, ಓದು, ಬರಹದೊ೦ದಿಗೆ ಉದ್ಯೋಗ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 53 ಅತಿಥಿಗಳು ಆನ್ಲೈನ್ ಇರುವರು.


ಬರಹಗಾರನಿಗಿರಬೇಕಾದ ಅತ್ಯುಚ್ಚ ನಿಷ್ಠೆಯೆಂದರೆ ಭಾಷೆಗಿರುವ ಅವನ ಒಲವು.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator