ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕೊಡಚಾದ್ರಿಗೆ ಬೇಕಿತ್ತೇ ರಸ್ತೆ-ರೆಸಾರ್ಟು?

January 4, 2008 - 2:26pm — ಮಂಜುಬೊಮ್ನಳ್ಳಿ
ಗೂಗಲ್ ಅರ್ಥ್ ನಲ್ಲಿ ಕೊಡಚಾದ್ರಿ ಬೆಟ್ಟ

ಕೊಡಚಾದ್ರಿ ಸುದ್ದಿಯಲ್ಲಿದೆ. ಅಲ್ಲಿಗೆ ೧೦ ಕೋಟಿ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಸಮೀಪದ ನಾಗೋಡಿಯಲ್ಲಿ ೩ ಕೋಟಿ ರೂ.ನ ರೆಸಾರ್ಟ್ ಇವುಗಳ ಅಗತ್ಯವನ್ನು ಪ್ರಶ್ನಿಸಿ ಕೇಮಾರು ಸಾಂದಿಪನಿ ಆಶ್ರಮದ ಈಶವಿಠಲದಾಸ ಸ್ವಾಮಿ ಮತ್ತು ಹಿಂದೂ ಸೇನೆಯ ಪ್ರಮೋದ ಮುತಾಲಿಕ ಹೈಕೊರ್ಟಿನಲ್ಲಿ ಕೇಸು ಜಡಿದಿದ್ದಾರೆ. ಕೋರ್ಟು ಕಾರಣ ಕೇಳಿ ಸರ್ಕಾರಕ್ಕೆ ನೋಟೀಸ್ ನೀಡಿದೆ.
ಇತ್ತ ಮಾಜಿ ಶಾಸಕ ಅರಗ ಜ್ನಾನೇಂದ್ರ ರಸ್ತೆ - ರೆಸಾರ್ಟು ಅಂದ್ರೆ ಕೊಡಚಾದ್ರಿಯ ಅಭಿವ್ರದ್ಧಿ. ‘ಡೆವಲಪ್ಮೆಂಟು’ ಆದ್ರೆ ಸ್ಥಳೀಯರ ಜೀವನ ಮಟ್ಟ ಉತ್ತಮಗೊಳ್ಳುತ್ತದೆ. ಇದನ್ನು ಬೇಡ ಅನ್ನೋರು ಅಭಿವ್ರದ್ಧಿ ವಿರೋಧಿಗಳು ಅನ್ನುತ್ತಿದ್ದಾರೆ. ಸ್ವಿಮ್ಮಿಂಗ್ ಪೂಲ್ ಇರೋ ರೆಸಾರ್ಟು ಜನಸಾಮಾನ್ಯರಿಗಲ್ಲ ಅನ್ನೋದಂತೂ ನಿಜ, ಅದು ಹೇಗೆ ಸ್ಥಳೀಯರಿಗೆ ಸಹಾಯ ಮಾಡುತ್ತದೋ ಗೊತ್ತಿಲ್ಲ.
ಕೇಮಾರು ಸ್ವಾಮಿಜಿಯ ಕಾವಿ ಬಟ್ಟೆಗೆ ಹಸಿರು ಛಾಯೆ ಬಂದಿದ್ದರೆ ಸ್ವಲ್ಪ ಸಮಾಧಾನವಾಗುತ್ತಿತ್ತೇನೋ. ಕೊಡಚಾದ್ರಿ ಧಾರ್ಮಿಕ-ಆಧ್ಯಾತ್ಮಿಕ ಶಕ್ತಿಕೇಂದ್ರ, ರಸ್ತೆ ಅಲ್ಲಿಯ ಅಧ್ಯಾತ್ಮಿಕ ವಾತಾವರಣಕ್ಕೆ ಘಾಸಿ ಮಾಡುತ್ತದೆ, ಅಲ್ಲಿಗೆ ಜೀಪುಗಳು ಬರೋದೂ ಬೇಡ ಅನ್ನುವ ಇವರಿಗೆ ಕೊಡಚಾದ್ರಿ ಪರಿಸರದ ಅಪರೂಪದ ಅತಿ ಸೂಕ್ಷ್ಮ ಜೈವಿಕ ವ್ಯವಸ್ಥೆಯ ಕುರಿತಾಗಲೀ, ರಮ್ಯಾದ್ಭುತ ನಿಸರ್ಗ ಸ್ರಷ್ಟಿಯ ಬಗ್ಗೆಯಾಗಲೀ ಅದೆಷ್ಟು ಕಾಳಜಿಯಿದೆಯೋ ತಿಳಿಯದು.
ಬೆಟ್ಟಕ್ಕೆ ರಸ್ತೆ ಅಂದ್ರೆ ಮಾಲಿನ್ಯದ ರಹದಾರಿ, ಕೊಡಚಾದ್ರಿ ತನ್ನೆಲ್ಲ ನಿಸರ್ಗ ಸಂಪತ್ತಿನೊಂದಿಗೆ ಮೂಲರೂಪದಲ್ಲಿ ಉಳಿಯಬೇಕು ಎನ್ನುವ ಅಭಿಪ್ರಾಯವಿರುವವರೂ ಸಹ ನಿಧಾನಕ್ಕೆ ಕೊಡಚಾದ್ರಿ ಪರಿಸರ ಸಂರಕ್ಷಣ ವೇದಿಕೆಗೆ ಬೆಂಬಲ ಸೂಚಿಸತೊಡಗಿದ್ದಾರೆ. ಕಾಂಕ್ರೀಟ್ ರಸ್ತೆ ಪ್ರವಾಸಿಗರಿಗೆ, ಭಕ್ತಾದಿಗಳಿಗೆ ಹೇಗೆ ಅನುಕೂಲವೋ ಹಾಗೆ ಕಳ್ಳನಾಟಾ ಹೊಡೆಯುವವರಿಗೆ, ಅನಧಿಕ್ರತ ಗಣಿಗಾರಿಕೆಗೆ, ಪ್ಲಾಸ್ಟಿಕ್ ಸಂಸ್ಕ್ರತಿಯ ಸ್ವೇಛ್ಚಾಚಾರಕ್ಕೆ ಹಾದಿಯಾಗಲಿದೆ ಎನ್ನುವ ಭಯಮಿಶ್ರಿತ ಕಳಕಳಿ ಅವರದು.
ಕೊಡಚಾದ್ರಿಯ ರಸ್ತೆ-ರೆಸಾರ್ಟಿನ ವಿಷಯ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತ ಸಾಗಿದೆ. ಲಾಭ-ನಷ್ಟಗಳ ಲೆಕ್ಕಚಾರ ನಡೆದಿದೆ. ರಸ್ತೆ-ರೆಸಾರ್ಟಿನ ನೆಪದಲ್ಲಿ ಸ್ವಹಿತ ರಾಜಕೀಯದ ಗಾಳಿಯಿಂದಲೇ ಕೊಡಚಾದ್ರಿ ಪರಿಸರ ಮಲಿನಗೊಳ್ಳುವ ಅಪಾಯ ಕಾಣಿಸುತ್ತಿದೆ.

  • ಪ್ರಚಲಿತ
~.~
  • Login or register to post comments
  • 362 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 4, 2008 - 6:10pm — rameshbalaganchi

ಉ: ಕೊಡಚಾದ್ರಿಗೆ ಬೇಕಿತ್ತೇ ರಸ್ತೆ-ರೆಸಾರ್ಟು?

rameshbalaganchi's picture

ನಿಮ್ಮ ಲೇಖನಕ್ಕಾಗಿ ಧನ್ಯವಾದಗಳು.
ಸಹಾಯಕ್ಕಾಗಿ ನೀವು ಬಳಸಿಕೊಂಡಿರುವ ಗೂಗಲ್ ಅರ್ತ್ (ಅಧವಾ ವಿಕಿಮ್ಯಾಪಿಯಾ)ದ ಚಿತ್ರ ಉಪಯುಕ್ತವಾಗಿದೆ. ಯಾವಾಗ ನಾವು Globalisationಗೆ ತೆರೆದುಕೊಂಡೆವೋ ಆವತ್ತಿಂದ ಬೇಡವಾದ್ದೆಲ್ಲ ಹೀಗೆ ನಮ್ಮ ಹೆಗಲೇರುತ್ತಿವೆ. ಏನು ಮಾಡುವುದು? ಹೋರಾಟಕ್ಕೆ ನಿಂತರೆ ಮನೆಗೆಲಸವನ್ನೂ ಬಿಟ್ಟು ಅದೇ ಬದುಕು ಮಾಡಬೇಕಾಗುತ್ತದೆ. ಜನಸಾಮಾನ್ಯರು ಮತ್ತು infrastructural develpment ಹೆಸರು ಹೇಳಿ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ. ಅನಂತಮೂರ್ತಿಯವರ ನೇತೃತ್ವದಲ್ಲಿ ನಾವೆಲ್ಲ ಕುದುರೆಮುಖ ಅದಿರು ಕಂಪೆನಿಯ ವಿರುದ್ಧ ಹೋರಾಟಕ್ಕೆ ನಿಂತಾಗ ಶ್ರೀ ಆರಗ ಜ್ಞಾನೇಂದ್ರ ಕೂಡ ನಮ್ಮ ಜೊತೆಗೂಡಿದ್ದರು. ಈಗೇಕೆ ಹೀಗೆ ಮಾಡಿದರೋ?!!. ಜೊತೆಗೆ ಆಗುಂಬೆಯಲ್ಲಿ ಕೂಡ ಒಂದು ರೆಸಾರ್ಟ್ ಶ್ರುರುವಾಗುವ ಲಕ್ಷಣ ಕಂಡಾಗ ಅನೇಕ ಸ್ಥಳೀಯ ಸಂಸ್ಥೆಗಳು ಹೋರಾಟಕ್ಕಿಳಿದು ಯಶಸ್ವಿಯಾದವು ಕೂಡ. ಪ್ರಬಲ ಸಂಘಟನೆ, ಸ್ಥಳೀಯರ ಸಹಕಾರ ಮತ್ತು ಮಾಧ್ಯಮಗಳ ಬೆಂಬಲ ಇದ್ದರೆ ಈ ಪ್ರಯತ್ನವನ್ನೂ ವಿಫಲಗೊಳಿಸಬಹುದೇನೋ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
January 10, 2008 - 5:19pm — girish.rajanal

ಉ: ಕೊಡಚಾದ್ರಿಗೆ ಬೇಕಿತ್ತೇ ರಸ್ತೆ-ರೆಸಾರ್ಟು?

girish.rajanal's picture

ಜಾಗತೀಕರಣ ಮತ್ತು ಉದಾರಿಕರಣ ನಮ್ಮ ದೇಶದ ಸಮಾನ ಶತ್ರುಗಳು..

ಗಿರೀಶ ರಾಜನಾಳ
Be Indian, Buy Indian.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮ್ಮುರ ರಸ್ತೆ
  • ಗೂಗಲ್ ಅರ್ಥ್ ನಲ್ಲಿ ಕೊಡಚಾದ್ರಿ ಬೆಟ್ಟ
  • ವಾಯುವ್ಯನೋ ಅಥವಾ ವಾಯವ್ಯನೋ
  • ಮೇಘರಾಜನೂರಿಗೆ ಮಳೆಗಾಲದ ಚಾರಣ
  • ಪ್ಲಾಸ್ಟಿಕ್ ರಸ್ತೆ
Syndicate content

ಲೇಖಕರು

ಮಂಜುಬೊಮ್ನಳ್ಳಿ's picture

ಪರಿಚಯ

ಇರಲೇ ಬೇಕಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 2:22pm
  • createam
    ಉ: ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
    October 7, 2008 - 2:21pm
  • mahesha
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:16pm
  • savithasr
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:15pm
  • anivaasi
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:08pm
  • mahesha
    ಉ: ಕಡೇಹುಟ್ಟು
    October 7, 2008 - 1:51pm
  • mahesha
    ಉ: ಕಡೇಹುಟ್ಟು
    October 7, 2008 - 1:48pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:45pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 176 ಅತಿಥಿಗಳು ಆನ್ಲೈನ್ ಇರುವರು.


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator