ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಭರತೇಶ ವೈಭವದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ - ಕಲ್ಪು ೧೧

February 1, 2008 - 11:02pm — Sunil Jayaprakash

ಭರತೇಶ ವೈಭವದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಸಂಬಂಧಪಟ್ಟಂತೆ ಅನೇಕ ಪದ್ಯಗಳು ದೊರೆಯುತ್ತವೆ. ಸದ್ಯಕ್ಕೆ ಇಷ್ಟನ್ನು ಹಾಕಿರುತ್ತೇನೆ.

ಅಳೆವಂತೆ ರಾಗವ ತುಳಿವಂತೆ ಜಾಡ್ಯವ
ಹಿಳಿವಂತೆ ಮೋಹನರಸವ
ತೊಳೆವಂತೆ ಮನವ ಸಂಜೀವನಾಮೃತವು
ತಳಿವಂತೆ ರಾಗದೋರಿದರು

ಹಬ್ಬಿಸುವಂತೆ ರಾಗವ ಸ್ವರ್ಗಲೋಕಕೆ
ಯೆಬ್ಬಿಸುವಂತೆ ರೋಮಗಳ
ಕಬ್ಬಿನಬಿಲ್ಲು ಜೇವೊಡೆದಂತೆ ಪಾಡಿದ
ರೊಬ್ಬೊಬ್ಬರಿಂಪು ನುಂಪಿನೊಳು

ತಾಳಮೇಳವನನುಗೊಳಿಸಿ ಸಂಗೀತದ
ಬಾಲೆಯರಾಯೆಂದು ಕೂಡೆ
ಅಳಾಪದೆಗೆದರು ಕಾಂಬೋದಿರಾಗವ
ನಾಲಿಸಿ ನೃಪತಲೆದೂಗೆ

ಭರತೇಶ ವೈಭವದಲ್ಲಿ ಇನ್ನೂ ಅನೇಕ ರಾಗಗಳ ಪ್ರಸ್ತಾಪ ಆಗಿದೆ. ಅವುಗಳ ಬಗ್ಗೆಯೂ ಮುಂದೆ ಬರೆದೇನು.

  • ಕಾವ್ಯ ಮತ್ತು ಕವನ
~.~
  • Login or register to post comments
  • 314 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 15, 2008 - 3:20pm — sankul

ಉ: ಭರತೇಶ ವೈಭವದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ - ಕಲ್ಪು ೧೧

sankul's picture

ಸುನೀಲರೆ ನಿಮ್ಮ ರತ್ನಾಕರವರ್ಣಿಯ ಭರತೇಶ ವೈಭವದ ವಿವರಣೆ ಸ್ವಾರಸ್ಯಕರವಾಗಿದೆ. ನಿಮ್ಮ ವಿವರಣೆಗೆ ಕಲಶವಿಟ್ಟಂತೆ ಬೆನಕರ ಸಮಾನಾಂತರ ಸಂಸ್ಕೃತ ಪದ್ಯಗಳು ಮತ್ತು ವಿಸ್ತೃತ ವಿವರಣೆಯಿದೆ. ಬೇರೆ ಜನರ ಪ್ರಶ್ನೆಗಳು ಮತ್ತು ವಿವರಣೆಗಳು ಕೂಡ ಭರತೇಶ ವೈಭವದ ಮೆರಗನ್ನು ಮತ್ತಷ್ಟು ಹೆಚ್ಚಿಸಿವೆ. ನೀವು ಕೊಡುತ್ತಿರುವ ರೀತಿಯ ವಿವರಣೆ ಶಾಲೆಯಲ್ಲಿ ಸಿಕ್ಕರೆ ಭಾಷಾ ಕಲಿಕೆ ಸುಲಭವೂ ಮನೋರಂಜನಿಯವೂ ಆಗುವದರಲ್ಲಿ ಸಂಶಯವಿಲ್ಲ. ಇಲ್ಲಿರುವ ಎಲ್ಲ ಒಳ್ಳೆಯ ಅಂಶಗಳನ್ನು ಸೇರಿಸಿ ಇದನ್ನು ಪುಸ್ತಕ ರೂಪದಲ್ಲಿ ತರುವ ಬಗ್ಗೆ ವಿಚಾರ ಮಾಡ್ರಿ.
-ಸಂಜೀವ ಕುಲಕರ್ಣಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
February 19, 2008 - 5:01pm — Sunil Jayaprakash

ಉ: ಭರತೇಶ ವೈಭವದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ - ಕಲ್ಪು ೧೧

Sunil Jayaprakash's picture

ಸಂಜೀವ ಕುಲಕರ್ಣಿಯವರೆ, ನನ್ನಿ. ನಿಜ. ಬೆನಕ ಅವರಿಂದ ಕಲಿಯೋದು ಬಹಳಷ್ಟಿದೆ. ಕಳೆದ ವಾರ ಪುಸ್ತಕ ಸಂತೆಯಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನವರು ಪ್ರಕಟಿಸಿರುವ, "ರತ್ನಾಕರವರ್ಣಿ - ಕವಿಕಾವ್ಯವಿಚಾರ ವಿಚಾರ ಸಂಕಿರಣ" - ವಿವಿಧ ಲೇಖಕರು ಎಂಬ ಪುಸ್ತಕ ಸಿಕ್ಕಿತು. ಅದರಲ್ಲಿ ಇನ್ನೂ ಹೆಚ್ಚಿನ ವಿಚಾರಗಳಿವೆ. ಎಲ್ಲರೂ ಓದಿ ಖುಷಿಪಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಭರತೇಶ ವೈಭವ ಕಲ್ಪು ೧೨ - ಕಾಳಿದಾಸನ ನೆನಪು
  • ಭರತೇಶ ವೈಭವ ಕಲ್ಪು ೧೪ - ಪ್ರಾಸದೊಡನೆ ಆಟ
  • ಭರತೇಶ ವೈಭವ ಮತ್ತು ಕನ್ನಡ ನುಡಿಗಟ್ಟುಗಳು - ಕಲ್ಪು ೧೦
  • ಭರತೇಶ ವೈಭವದಲ್ಲಿ ಕನ್ನಡ ನುಡಿಗಟ್ಟುಗಳು - ಕಲ್ಪು ೮
  • ಭರತೇಶ ವೈಭವದಲ್ಲಿ ಬೊಂಬೆಯಾಟ - ಕಲ್ಪು ೫
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator