ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಮುಂಗೋಪಿ ಗುಂಡ

March 18, 2008 - 10:43am — agilenag
ಗುಂಡ

ಇತ್ತೀಚೆಗೆ ಉಮ್ ರಾಜ್ ಜಾನ್.ಕಾಮ್ ಪ್ರಕಟಿಸಿದ ಒಂದು ಚಿಕ್ಕ ನೀತಿ ಕಥೆ ನನಗೆ ತುಂಬಾ ಇಷ್ಟವಾಯಿತು. ಅದರ ಕನ್ನಡ ಅನುವಾದವನ್ನು ಈ ಕೆಳಗೆ ಕೊಡುತ್ತಿದ್ದೇನೆ. ಸಂಪದದ ಓದುಗರು ಇಷ್ಟಪಡುವರೆಂದು ಭಾವಿಸಿದ್ದೇನೆ.

ಗುಂಡ ತುಂಬಾ ಮುಂಗೋಪಿ. ಯಾವಾಗಲೂ ಅವನು ಮುಖ ಸಿಂಡರಿಸಿಕೊಂಡೇ ಇರುತ್ತಿದ್ದ. ಅದರಿಂದಾಗಿ ಅವನಿಗೆ ಸ್ನೇಹಿತರೂ ಇರಲಿಲ್ಲ, ಶಾಲೆಯಲ್ಲೂ, ಮನೆಯಲ್ಲೂ ಒಬ್ಬಂಟಿಯಾಗಿ ಇರುತ್ತಿದ್ದ. ಒಂದು ದಿನ ಹೀಗೆ ಏನೋ ಯೋಚಿಸುತ್ತಾ ಕುಳಿತಿದ್ದಾಗ, ಅವನಿಗೆ ತನಗೂ ತನ್ನ ಸ್ನೇಹಿತರಿಗೂ ಇರುವ ವ್ಯತ್ಯಾಸವೇನೆಂದು ಹೊಳೆಯಿತು. ಅದರ ಪರಿಹಾರಕ್ಕಾಗಿ ಅವನು ತಕ್ಷಣ ಎದ್ದು ತನ್ನ ತಂದೆಯ ಬಳಿಗೋಡಿದ. ತನ್ನ ಕಷ್ಟವನ್ನು ಹೇಳಿಕೊಂಡ. ಅವನ ತಂದೆ ಅವನಿಗೆ ಒಂದು ಕೇಜಿಯಷ್ಟು ಮೊಳೆಗಳನ್ನು ಕೊಟ್ಟು, "ನಿನಗೆ ಕೋಪ ಬಂದಾಗ, ಯಾರ ಮೇಲೂ ತೋರಿಸಿಕೊಳ್ಳಬೇಡ, ಬದಲಾಗಿ ಇಲ್ಲಿರುವ ಮೊಳೆಗಳಲ್ಲಿ ನಿನಗೆ ಬೇಕಾದಷ್ಟನ್ನು ನಮ್ಮ ಮನೆಯ ಕಾಂಪೌಂಡ್ ಗೋಡೆಗೆ ಹೊಡಿ. ಕೋಪ ಶಮನವಾದಮೇಲೆ ನಿನ್ನ ಬೇರೆ ಕೆಲಸ ನೋಡಿಕೊ" ಎಂದರು. ಅವನು ಅದನ್ನೇ ಪಾಲಿಸುತ್ತಾ ಬಂದ. ಮೊದಲು ಮೊದಲು ಹತ್ತಾರು ಮೊಳೆಗಳನ್ನು ಹೊಡೆಯುತ್ತಿದ್ದವನು, ದಿನ ಕಳೆದಂತೆ ಅದರ ಸಂಖ್ಯೆ ಕಮ್ಮಿ ಮಾಡುತ್ತಾ ಬಂದ. ಅವನ ಕೋಪವೂ ಇಳಿಯುತ್ತಾ ಹೋಯಿತು. ಒಂದು ದಿನ ಕೋಪ ಬರುತ್ತಿದೆ ಎನಿಸುತ್ತಿದ್ದಂತೆಯೇ ಮೊಳೆಯ ಬಳಿಗೋಡಿದ. ಆದರೆ ಅವನಿಗೇ ನಗು ಬಂತು. ಹಿಂದಿರುಗಿ ಬಂದು ತಂದೆಗೆ "ಅಪ್ಪಾ, ನಾನು ಎಂತಹ ಮೂರ್ಖನಾಗಿದ್ದೆ. ಸುಮ್ಮ ಸುಮ್ಮನೆ ಕೋಪ ಮಾಡಿಕೊಳ್ಳುತ್ತಿದ್ದೆ, ಈಗ ನೋಡು ನಾನು ಕೋಪವನ್ನು ಜಯಿಸಿದ್ದೇನೆ" ಎಂದ. ಅವನ ತಂದೆ "ತುಂಬಾ ಸಂತೋಷ ಗುಂಡ. ಆದರೆ, ನೀನು ಕೋಪದಿಂದ ಹೊಡೆದಿರುವ ಮೊಳೆಗಳನ್ನು ಈಗ ಕಿತ್ತು ಹಾಕಿ ಬಾ" ಎಂದರು. ಹಾಗೆಯೇ ಮಾಡಿದ ಗುಂಡ ಮತ್ತೆ ತಂದೆಯ ಎದುರು ನಿಂತ. ಅವನ ತಂದೆ "ಗುಂಡಾ, ನೀನು ಮೊಳೆಯನ್ನೇನೋ ಕಿತ್ತೆ, ಆದರೆ ಆ ಮೊಳೆಗಳು ಕಾಂಪೌಂಡಿಗೆ ಮಾಡಿರುವ ಗಾಯಗಳನ್ನು ಅಳಿಸಲು ಸಾಧ್ಯವೇ ನೋಡು" ಎಂದರು. ಆಗ ಗುಂಡ "ಇಲ್ಲಾಪ್ಪ, ನನ್ನಿಂದ ಅದು ಸಾಧ್ಯವಿಲ್ಲ" ಎಂದ. ಅವನ ತಂದೆ "ಮಗೂ ಹಾಗೆಯೇ ನಾವು ಸಿಟ್ಟಿಗೆದ್ದು ಇನ್ನೊಬ್ಬರ ಮನಸ್ಸಿಗೆ ಗಾಯ ಮಾಡುವುದಕ್ಕೂ ಪರಿಹಾರವಿರುವುದಿಲ್ಲ. ಆದ್ಡರಿಂದ ಇನ್ನೊಬ್ಬರ ಮನಸ್ಸಿಗೆ ಗಾಯವಾಗದ ಹಾಗೆ ನೋಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ" ಎಂದರು. ಗುಂಡ ಸಂತೃಪ್ತನಾದ.

ಎ.ವಿ. ನಾಗರಾಜು

  • ಸಣ್ಣ ಕಥೆ
~.~
  • Login or register to post comments
  • 272 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೀಟಲೆ
  • ಗುಂಡ
  • ಹೊಸ ಮೊಬೈಲ್
  • ಚುನಾವಣೆ - ಗುರುತಿನ ಚೀಟಿ - ಪಾಸ್-ಪೋರ್ಟ್
  • ಮುಂದುವರಿವ ಗುಣ(ಪ್ರೇರಕ ಪ್ರಸಂಗಗಳು)
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಯಾರ ಮುಡಿಗೆ ಸೌಂದರ್ಯ ಕಿರೀಟ...
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಲ೦ಡನ್ ಪ್ರವಾಸಕಥನ ಭಾಗ ೧೨: ಅವರಿಗೆ ವಾತಾವರಣವೇ ಸ್ಮಾರಕ!
  • ಲ೦ಡನ್ ಪ್ರವಾಸಕಥನ ಭಾಗ ೧೨: ಅವರಿಗೆ ವಾತಾವರಣವೇ ಸ್ಮಾರಕ!
  • ಲ೦ಡನ್ ಪ್ರವಾಸಕಥನ ಭಾಗ ೧೨: ಅವರಿಗೆ ವಾತಾವರಣವೇ ಸ್ಮಾರಕ!
  • ‘ಇರುವೆ’ (ನೀ ಎಲ್ಲೆಲ್ಲೂ ಇರುವೆ)ಗಳು ಅಂತರ್ಜಲ ಮಟ್ಟ ಹೆಚ್ಚಿಸುವ ‘ಬ್ಯಾಂಕರ್’ಗಳು!
  • ‘ಸಂತೆ’ ಎಂಬ ವ್ಯಾವಹಾರಿಕ ಚೌಕಾಶಿಯ ‘ನಾಟಕ’!

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 38 ಅತಿಥಿಗಳು ಆನ್ಲೈನ್ ಇರುವರು.


ಅತ್ಮದ ಸತ್ಯವು ಪರಮ ಸತ್ಯದೊಡನೆ ನೆಡೆಸುವ ಸಂಭಾಷಣೆಯೇ ಪ್ರಾರ್ಥನೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator