Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ವಚನ ಚಿಂತನ: ೬: ಮನಸ್ಸು ಕೋತಿ

August 2, 2005 - 6:05am — olnswamy

ಇನ್ನೇವೆನಿನ್ನೇವೆನಯ್ಯಾ
ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು
ಎನ್ನ ನಿಂದಲ್ಲಿ ನಿಲಲೀಯದು
ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ
ಕ್ಷಣದಲ್ಲಿಆಕಾಶಕ್ಕೆ ಐದುತ್ತಿದೆ
ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ
ಕೂಡಲಸಂಗಮದೇವಾ
ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ
ಎಂದು ನಿಮ್ಮೊಡಗೂಡುವೆನಯ್ಯಾ

ಮನಸ್ಸು ಘನ ಮಾತ್ರವಲ್ಲ ಕೋತಿಯೂ ಹೌದು. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಎತ್ತಿ ಮರುಕ್ಷಣಕ್ಕೆ ನನ್ನನ್ನು ದಿಕ್ಕಾಪಾಲು ಮಾಡುತ್ತಿದೆ. ನಿಂದಲ್ಲಿ ನಿಲಲು ಆಗದಿದ್ದರೆ ಕೂಡಲಸಂಗಮನೊಡನೆ ಕೂಡುವುದು ಹೇಗೆ? ಕೋತಿ ಮನಸ್ಸಿನ ದಾಳಿ ಎಂದು ನಿಲ್ಲುತ್ತದೆ.
ಈ ಪ್ರಶ್ನೆ ಬಹುಶಃ ನಮ್ಮೆಲ್ಲರದೂ ಹೌದು. ಮನಸ್ಸು ಕೋತಿಯಂತೆ ಅಲ್ಲ, ಮನಸ್ಸೇ ಕೋತಿ. ಹಾಗಿದ್ದಮೇಲೆ ಚಪಲತೆಯೇ ಅದರ ಗುಣ. ಅದನ್ನು ಒಂದೆಡೆಯಲ್ಲಿ ಸುಮ್ಮನೆ ಇರುವಂತೆ ಮಾಡುವುದು ಅಸಾಧ್ಯ ಮತ್ತು ಅಸಹಜ.
ಆದ್ದರಿಂದಲೇ ಮನಸ್ಸನ್ನು ನಿಯಂತ್ರಿಸುವ ಎಲ್ಲ ಪ್ರಯತ್ನಗಳೂ ಸಾಧನೆಗಳೂ ವ್ಯರ್ಥ. ಕೋತಿತನದ ಬಗ್ಗೆ “ಅರಿವು” ಇಟ್ಟುಕೊಳ್ಳುವುದೊಂದೇ ನಾವು ಮಾಡಬಹುದಾದ ಕೆಲಸ.
ಇಲ್ಲಿ ಇನ್ನೊಂದು ಸೂಕ್ಷ್ಮವನ್ನೂ ಗಮನಿಸಿ. ನಾನು ಬೇರೆ ನನ್ನ ಮನಸ್ಸು ಬೇರೆ, ಏನು ಮಾಡಲಿ ಎಂಬ ತಹತಹ ಇಲ್ಲಿದೆ. ಹಾಗೆ ನೋಡಿದರೆ ನಾನು ಎಂಬುದು ನನ್ನ ಮನಸ್ಸಿಗಿಂತ ಭಿನ್ನ ಅಲ್ಲವೇ ಅಲ್ಲ. “ಮನಸ್ಸಿನಲ್ಲಿ ಯೋಚನೆಗಳು ಮೂಡುತ್ತವೆ” ಎನ್ನುವುದು ತಪ್ಪು, ಯೋಚನೆಗಳ ಮೊತ್ತವೇ ಮನಸ್ಸು ಎಂಬುದು ಸರಿ. ನಾನು ಆಕಾಶದೆತ್ತರ, ನಾನು ಚದರಿ ದಿಕ್ಕಾಪಾಲು ಎಂಬ ಯೋಚನೆಗಳೇ ನನ್ನ ಮನಸ್ಸು. ನಾನು ಮತ್ತು ಮನಸ್ಸು ಬೇರೆ ಬೇರೆ ಎಂದುಕೊಂಡದ್ದರಿಂದಲೇ ಮನಸ್ಸು ನನ್ನ ಮೇಲೆ ದಾಳಿ ಮಾಡುತ್ತಿದೆ ಅನ್ನಿಸುತ್ತದೆ.
ನಾನು ಬೇರೆಯಲ್ಲ, ನನ್ನ ಮನಸ್ಸು ಬೇರೆಯಲ್ಲ ಎಂದು ತಿಳಿದಾಗ ಕೋತಿ ಮನಸ್ಸಿನ ದಾಳಿ ನಿಲ್ಲುತ್ತದೆ. ಅದು ಯಾವಾಗ ಎಂಬುದೇ ಪ್ರಶ್ನೆ. ಆದ್ದರಿಂದಲೇ “ದಾಳಿಯನೆಂದಿಗೆ ನೀಗಿ” ಎಂಬ ಮಾತು ಬಂದಿದೆ. ಮನಸ್ಸಿನ ಸ್ವರೂಪದ ಬಗ್ಗೆ ಅರಿವು ಮೂಡಿದ ಕ್ಷಣವೇ ಮನಸ್ಸಿನ ಕೋತಿತನ ಮಾಯವಾಗುತ್ತದೆ, ಕೂಡಲಸಂಗಮ ದೊರೆಯುತ್ತಾನೆ.

  • ಚಿಂತನೆ
Ornamental seperator
  • Login or register to post comments
  • 1140 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಚನ ಚಿಂತನ ೪ : ಮನಸ್ಸು ಹೀಗೆ..
  • ಮನಸ್ಸಿನ ಮನಸ್ಸೆ...
  • ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ?
  • ವಚನ ಚಿಂತನ: ೫: ಮನಸ್ಸು ಘನ
  • ವಚನ ಚಿಂತನ: ೭: ಮನಸ್ಸು – ಆಸೆ - ಮಾಯೆ
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪ್ರತ್ಯಕ್ಷ ನೋಡಿದರೂ...
  • ನಶಿಸುತ್ತಿರುವ ಶಬ್ದ ಬಳಕೆ
  • ಎಚ್ಚರ! ಡ್ಯೂಪ್ಲಿಕೇಟ್ Volvo ಸೇವೆ ಲಭ್ಯವಿದೆ
  • ಭಾರತದ ಜ್ಞಾನಾವತಾರ
  • ಹೆಣ್ಣು ಜೀವವಿಮುಖಿ, ಜೀವವಿರೋಧಿಯಾಗುವ ಕ್ಷಣ
  • ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
  • ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
  • ವೈಭವ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 11, 2008 - 8:45pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 11, 2008 - 8:29pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 4 ಅತಿಥಿಗಳು ಆನ್ಲೈನ್ ಇರುವರು.

ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator