Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ನಿಮಗೂ ಹೀಗೆ ಅನಿಸಿದೆಯೆ?

April 17, 2008 - 5:11pm — Chamaraj

ಹಲವಾರು ಬಾರಿ ಹಾಗನ್ನಿಸಿದೆ.

ಸತ್ಯ ಏನೆಂಬುದು ಗೊತ್ತಿರುತ್ತದೆ. ಆದರೆ, ಹೇಳಲಾಗುವುದಿಲ್ಲ. ಭಂಡತನದಿಂದ ತನ್ನ ನಿರ್ಣಯವನ್ನು ಜಾರಿಗೊಳಿಸುವ ವ್ಯಕ್ತಿ ತಪ್ಪು ಮಾಡುತ್ತಿದ್ದಾನೆ ಎಂದು ತಿಳಿದಿದ್ದರೂ, ಅದನ್ನು ಹೇಳಲಾಗುವುದಿಲ್ಲ.

ಏಕೆ ಹಾಗಾಗುತ್ತದೆ?

ನಾನು ಸತ್ಯ ಹೇಳಿದರೆ ನಮ್ಮ ಇದ್ದಬದ್ದ ಸಂಬಂಧ ಅಲ್ಲಿಗೇ ಮುಕ್ತಾಯವಾಗುತ್ತದೆ ಎಂಬುದು ನನಗೆ ಗೊತ್ತು. ಅದು ವೃತ್ತಿಪರ ಆಗಿರಬಹುದು ಅಥವಾ ವೈಯಕ್ತಿಕವಾಗಿರಬಹುದು- ಒಟ್ಟಿನಲ್ಲಿ ನಮ್ಮ ಸಂಬಂಧ ಅಂತ್ಯಗೊಳ್ಳುತ್ತದೆ.

ತುಂಬ ಸಾರಿ ನೋಡಿದ್ದೇನೆ: ಸಾಮಾನ್ಯವಾಗಿ ದಡ್ಡರು ಉನ್ನತ ಸ್ಥಾನದಲ್ಲಿ ಕೂತಿರುತ್ತಾರೆ. ಪ್ರತಿಭಾವಂತರನ್ನು ಕಂಡರೆ ಅವರಿಗೆ ಅಸೂಯೆ, ಕೀಳರಿಮೆ. ಅದನ್ನು ಹೋಗಲಾಡಿಸಲು ಗತ್ತು ನಟಿಸುತ್ತಾರೆ. ತಮಗೆ ಎಲ್ಲದೂ ಗೊತ್ತಿದೆ ಎಂಬ ಮುಖವಾಡ ತೊಡುತ್ತಾರೆ. ಅದೇ ಹೊತ್ತಿಗೆ, ತನ್ನ ಹುಳುಕು ಯಾರಿಗಾದರೂ ಗೊತ್ತಾದರೆ ಹೇಗೆ ಎಂಬ ಅಳುಕೂ ಅವರನ್ನು ಕಾಡುತ್ತಿರುತ್ತದೆ. ಹೀಗಾಗಿ, ಕೆಲಸ ಗೊತ್ತಿರುವವರನ್ನು ಕಂಡರೆ ಭಯ. ಅವರನ್ನು ಕಾಡಲು ಶುರು ಮಾಡುತ್ತಾರೆ. ಅವರು ಮಾಡಿದ್ದೆಲ್ಲ ತಪ್ಪು ಎನ್ನುತ್ತಾರೆ. ಬೆಳೆಯಲು ಸಾಧ್ಯವಿರುವ ಬಾಗಿಲುಗಳನ್ನೆಲ್ಲ ಮುಚ್ಚುತ್ತಾರೆ. ತಾವಿಲ್ಲದಾಗ ಬಾಗಿಲು ತೆಗೆದುಕೊಂಡು ಬಂದರೆ? ಎಂಬ ಅಳುಕಿನಿಂದಾಗಿ, ಹೊರಗೇ ಕಾವಲು ನಿಲ್ಲುತ್ತಾರೆ.

ಇದು ನಿಜಕ್ಕೂ ದುರ್ಭರ ಪರಿಸ್ಥಿತಿ. ಅವಕಾಶ ನಿರಾಕರಿಸಲ್ಪಟ್ಟ ವ್ಯಕ್ತಿಯೂ ಬೆಳೆಯುವುದಿಲ್ಲ, ಆತನ ಕಾವಲಿಗೆ ನಿಂತವನೂ ಬೆಳೆಯಲಾರ. ಇಂಥ ಪರಿಸ್ಥಿತಿ ಉಂಟಾದಾಗ, ಇಬ್ಬರು ವ್ಯಕ್ತಿಗಳು ಮಾತ್ರವಲ್ಲ, ಸಂಸ್ಥೆ ಕೂಡ ಹಾಳಾಗುತ್ತದೆ. ಆಗ ಏನು ಮಾಡಬೇಕು?

ನಾನು, ಮೌನವಾಗಿ ಇದ್ದುಬಿಡುತ್ತೇನೆ. ಗತ್ತು ತೋರಿಸುವವನಿಗೇ ಮೊದಲ ಬ್ಯಾಟಿಂಗ್ ಭಾಗ್ಯ ದಕ್ಕಲಿ. ಅವನದೇ ಮಾತು ನಡೆಯಲಿ. ತನ್ನ ಗತ್ತು ಮತ್ತು ಶಕ್ತಿ ಪ್ರದರ್ಶನದ ಅತಿರೇಕದಲ್ಲಿ ಆತನ ದೌರ್ಬಲ್ಯ ಬಲು ಬೇಗ ಬಯಲಾಗುತ್ತ ಹೋಗುತ್ತದೆ.

ಮೌನವಾಗಿದ್ದುಕೊಂಡು ಓದು-ಬರೆಹ ಮುಂದುವರೆಸಿಕೊಂಡು ಹೋಗುತ್ತೇನೆ. ಅದೊಂಥರಾ ವನವಾಸದ ಸುಖ. ಏನೋ ಶಾಂತಿ, ನೆಮ್ಮದಿ ತರುವ ಮೌನ. ಅಧ್ಯಯನದಲ್ಲಿ ಮುಳುಗಿದಂತೆ, ಅತ್ತ ಗತ್ತು ಯಾವತ್ತೋ ಕರಗಿರುತ್ತದೆ. ಹುಳುಕು ಹೊರಬಿದ್ದಿರುತ್ತದೆ. ಒಮ್ಮೊಮ್ಮೆ ವರ್ಷಗಟ್ಟಲೇ ಕಾಯಬೇಕಾಗಬಹುದು.

ಅಷ್ಟೊಂದು ಸಮಾಧಾನ/ಅನಿವಾರ್ಯತೆ ನನಗಿದ್ದರೆ ಕಾಯುತ್ತೇನೆ. ಇಲ್ಲದಿದ್ದರೆ, ಎದ್ದು ಹೋಗುತ್ತೇನೆ.

ಏಕೆಂದರೆ, ಬದುಕಿನಲ್ಲಿ ಮುಚ್ಚಿದ ಬಾಗಿಲುಗಳಿಗಿಂತ ತೆರೆದ ಬಾಗಿಲುಗಳೇ ಹೆಚ್ಚು. ಅದು ನನ್ನ ನಂಬಿಕೆಯಷ್ಟೇ ಅಲ್ಲ, ಅನುಭವವೂ ಹೌದು.

- ಚಾಮರಾಜ ಸವಡಿ

Ornamental seperator
  • Login or register to post comments
  • 89 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಿಮಗೂ ಹೀಗೆ ಅನಿಸಿದೆಯೆ?
  • ಕಚೇರಿ ಎಂದರೆ ಸುಮ್ಮನೇನಾ?
  • ಕಚೇರಿ ಎಂದರೆ ಸುಮ್ಮನೇನಾ?
  • ಅಸೂಯೆ ಎಂಬ ತಡೆಗೋಡೆ...
  • ಅಸೂಯೆ ಎಂಬ ತಡೆಗೋಡೆ...
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

See my blog: chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:10pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:00pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator