Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ನ್ಯಾನೊ ಮತ್ತು ವೈಚಾರಿಕ ಸಣ್ಣತನ

April 17, 2008 - 5:12pm — Chamaraj

ಬಹುತೇಕ ಭಾರತೀಯರ ಸಂಕುಚಿತ ಮನಃಸ್ಥಿತಿಯನ್ನು ಎರಡು ಪ್ರಮುಖ ಬೆಳವಣಿಗೆಗಳು ಬಹಿರಂಗಪಡಿಸಿವೆ.

ಮೊದಲನೆಯದು, ಕಳೆದ ಒಂದೆರಡು ತಿಂಗಳುಗಳಿಂದ ನಡೆದಿರುವ ಉಡುಪಿ ಪರ್ಯಾಯ ವಿವಾದ. ಎರಡನೆಯದು, ವಾರಾಂತ್ಯದಲ್ಲಿ ಪ್ರದರ್ಶಿಸಲ್ಪಟ್ಟ ಜಗತ್ತಿನ ಅತಿ ಕಡಿಮೆ ಬೆಲೆಯ ಕಾರು ’ನ್ಯಾನೊ’.

ಪರ್ಯಾಯ ಪೀಠ, ಕೃಷ್ಣ ಪೂಜೆ ಹಾಗೂ ಪುತ್ತಿಗೆ ಶ್ರೀಗಳ ವಿದೇಶಿ ಪಯಣದ ಕಥೆಯನ್ನು ಓದುತ್ತಿದ್ದರೆ ನಗೆ ಬರುತ್ತದೆ, ವಿಷಾದವೂ ಆಗುತ್ತದೆ. ಏಕೆಂದರೆ, ಕೃಷ್ಣ ಅತ್ಯಂತ ಮುಕ್ತ ಮನಸ್ಸಿನಿಂದ ಬದುಕಿದ ವ್ಯಕ್ತಿ. ಜೀವನ ಪ್ರೀತಿಯನ್ನು ಕಡೆತನಕ ಉಳಿಸಿಕೊಂಡು ಬಂದ ವ್ಯಕ್ತಿ. ಯಾವ ಪಾರಂಪರಿಕ ಕಟ್ಟುಪಾಡುಗಳಿಗೂ ಬಂಧಿಯಾಗದೆ, ತನ್ನ ಕಾಲದ ಎಲ್ಲ ಮೂಢ ನಂಬಿಕೆಗಳನ್ನು ಹಾಗೂ ಆಷಾಡಭೂತಿತನ (ಹಿಪೊಕ್ರಸಿ)ವನ್ನು ವಿರೋಧಿಸಿದ್ದ ವ್ಯಕ್ತಿ ಆತ. ಎಲ್ಲರ ನಂಬಿಕೆಗೆ ವಿರುದ್ಧವಾಗಿ, ಎಲ್ಲರ ಕನಸುಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡ ಈ ಅಪರೂಪದ ವ್ಯಕ್ತಿಯ ಪೂಜೆಯ ಹೆಸರಿನಲ್ಲಿ ನಮ್ಮ ಧಾರ್ಮಿಕ ಹಿರಿ ತಲೆಗಳು ಮಾಡುತ್ತಿರುವುದಾದರೂ ಏನು?

ಕೃಷ್ಣ ಪಂಥ ಸಾವಿರಾರು ವರ್ಷಗಳ ಹಿಂದೆಯೇ ಸಾಗರ ದಾಟಿತ್ತು. ಆಧುನಿಕ ಕಾಲದಲ್ಲಿ ಇಸ್ಕಾನ್ ಆ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದೆ. ಧಾರ್ಮಿಕ ನಂಬಿಕೆಗಳಿಗೆ ದೇಶಗಳ, ನದಿ-ಕಡಲುಗಳ ಗಡಿಗಳು ಇರುವುದಿಲ್ಲ. ಒಂದು ವೇಳೆ ಅಂತಹ ಕಟ್ಟುಪಾಡುಗಳಡಿ ಯಾವುದಾದರೂ ಧರ್ಮ ಅಥವಾ ನಂಬಿಕೆ ಸಿಕ್ಕಿಕೊಂಡಿದ್ದರೆ, ಅದು ಖಂಡಿತ ಧರ್ಮವಲ್ಲ.

ಹೀಗಿದ್ದರೂ, ಉಡುಪಿ ಅಷ್ಟಮಠಗಳ ಬಹುತೇಕ ಶ್ರೀಗಳು ಯಾವುದೇ ನೆಲೆಗಟ್ಟಿಲ್ಲದ, ತರ್ಕಬದ್ಧವಲ್ಲದ ನಂಬಿಕೆಗೆ ಜೋತು ಬಿದ್ದು, ತಮ್ಮದೇ ಪಂಥದ ವ್ಯಕ್ತಿಯ ಸಹಜ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ಪೇಜಾವರ ಶ್ರೀಗಳಂತಹ ಧಾರ್ಮಿಕ ರಾಜಕಾರಣಿಗಳು ಕೈಜೋಡಿಸಿದ್ದಾರೆ. ವಿವಾದಗಳಿದ್ದಲ್ಲಿ ಸಾಮಾನ್ಯವಾಗಿ ಚಿದಾನಂದಮೂರ್ತಿಗಳು, ಚಂಪಾ-ವಾಟಾಳ್-ಪಾಟೀಲ ಪುಟ್ಟಪ್ಪರಂಥವರು ಇದ್ದೇ ಇರುತ್ತಾರೆ. ಆದರೆ, ಈಗ ಆ ಸಾಲಿಗೆ ಪೇಜಾವರ ಶ್ರೀಗಳೂ ಸೇರಿದ್ದು ವಿಷಾದಕರ.

ನಮಗೆ ಕೃಷ್ಣನ ಸಂದೇಶ ಮುಖ್ಯವೇ, ಆತನನ್ನು ಪೂಜಿಸುವ ವಿಧಿ-ವಿಧಾನಗಳು ಮುಖ್ಯವೆ? ’ಪತ್ರಂ ಪುಷ್ಪಂ ಫಲಂ ತೋಯಂ...’ ಎಂದಿದ್ದಾನೆ ಕೃಷ್ಣ ಗೀತೆಯಲ್ಲಿ. ಎಲೆ, ಹೂ, ಹಣ್ಣು- ಹೀಗೆ ಯಾವುದನ್ನು ನನಗೆ ಅರ್ಪಿಸಿದರೂ ಅದು ಪ್ರಿಯವೇ. ಎಲ್ಲಕ್ಕಿಂತ ಪ್ರಿಯ ಭಕ್ತಿ ತುಂಬಿದ ಪ್ರಾರ್ಥನೆ’ ಎಂದು ಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದನ್ನು ಅಷ್ಟಮಠಗಳ ನಾಯಕರು, ಅವರ ನಂಬಿಕೆಗಳನ್ನು ಬೆಂಬಲಿಸುವ ಕುರುಡು ಮನಸ್ಸುಗಳು ಎಂದಾದರೂ ಅರ್ಥ ಮಾಡಿಕೊಳ್ಳುವುದು ಸಾಧ್ಯವೆ?

******

ಎರಡನೆಯದು, ಟಾಟಾ ಮೋಟಾರ್ಸ್ ಬಿಡುಗಡೆ ಮಾಡಿರುವ ೧ ಲಕ್ಷ ರೂಪಾಯಿ ಬೆಲೆಯ ನ್ಯಾನೊ ಕಾರಿನ ಬಗ್ಗೆ.
ಮಾಧ್ಯಮದಲ್ಲಿ ಕಾರಿನ ಭರಾಟೆಯಂತೂ ಜೋರಾಗಿಯೇ ಇದೆ. ವಾದ-ಪ್ರತಿವಾದಗಳೂ ಕೇಳಿ ಬಂದಿವೆ. ಅವುಗಳ ಪೈಕಿ ನನ್ನ ಗಮನ ಸೆಳೆದ ಒಂದೆರಡು ವಾದಗಳ ಬಗ್ಗೆ ಇಲ್ಲಿ ಪ್ರಸ್ತಾಪಿಸುತ್ತೇನೆ.

ಒಬ್ಬ ಮಹನೀಯರು, ’ಟಾಟಾ ಮಾಡಿದ್ದು ಒಂದಿಷ್ಟೂ ಸರಿಯಿಲ್ಲ. ಕಡಿಮೆ ವೆಚ್ಚೆದಲ್ಲಿ ಕಾರು ದೊರೆಯುವಂತಾದರೆ ಮೊದಲೇ ಗಿಜಿಗುಟ್ಟುತ್ತಿರುವ ಭಾರತದ ರಸ್ತೆಗಳು ಉಸಿರುಕಟ್ಟುವಂತಾಗುತ್ತವೆ. ವಾಯು ಮಾಲಿನ್ಯ ಹೆಚ್ಚುತ್ತದೆ. ಸಹಾಯಧನದ ಮರ್ಜಿಯಲ್ಲಿರುವ ತೈಲೋತ್ಪನ್ನಗಳ ಆಮದು ಇನ್ನಷ್ಟು ಹೆಚ್ಚಿ, ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಉಂಟಾಗುತ್ತದ’ ಎಂದು ’ಟೈಮ್ಸ್ ಆಫ್ ಇಂಡಿಯಾ’ದಲ್ಲಿ ಹೇಳಿದ್ದಾರೆ.

ವಾರೆವ್ಹಾ ಆಷಾಡಭೂತಿತನವೇ!

ಹತ್ತಾರು ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ, ಬಡ ರೈತರಿಂದ ಭೂಮಿ ವಶಪಡಿಸಿಕೊಂಡು ವಿಮಾನ ನಿಲ್ದಾಣ ಮಾಡಿದರೆ ಈ ಮಹನೀಯರು ಅದನ್ನು ಪ್ರಗತಿ ಎಂದು ಬಣ್ಣಿಸುತ್ತಾರೆ. ರೈತನ ಭೂಮಿಯನ್ನು ಕ್ಷುಲ್ಲಕ ಬೆಲೆಗೆ ಕೊಂಡು ಐ.ಟಿ. ಕಂಪನಿ ಮಾಡಿದರೆ, ಅದನ್ನು ದೇಶ ಹೆಮ್ಮೆ ಪಡಬೇಕಾದ ಬೆಳವಣಿಗೆ ಎಂದು ಮೆಚ್ಚುತ್ತಾರೆ. ಆದರೆ, ಮಧ್ಯಮವರ್ಗದ ವ್ಯಕ್ತಿಯೊಬ್ಬ, ತನ್ನ ಬಜೆಟ್‌ಗೆ ನಿಲುಕುವ ಮಿತಿಯಲ್ಲಿ ಕಾರೇ ದೊರೆಯುತ್ತದೆ ಎಂದು ಸಂಭ್ರಮಿಸಿದರೆ, ಈ ವ್ಯಕ್ತಿಗೆ ಅದು ವಾತಾವರಣಕ್ಕೆ, ವಾಹನ ಸಂದಣಿಗೆ, ದೇಶದ ಕೀಸೆಗೆ ನುಗ್ಗಲು ಯತ್ನಿಸುತ್ತಿರುವ ಭೂತದಂತೆ ಕಾಣುತ್ತದೆ.

ನಿಜವಾದ ಆಷಾಡಭೂತಿತನ ಎಂದರೆ ಇದೇ ಇರಬೇಕು.

ಮಧ್ಯಮವರ್ಗದವರು, ಅವರಿಗಿಂತ ಕೆಳಗಿರುವವರು ಆರ್ಥಿಕವಾಗಿ ಮುಂದೆ ಬರಬಾರದು ಎಂಬ ಸಣ್ಣತನ ಬಿಟ್ಟರೆ ಈ ವಾದದಲ್ಲಿ ಮೆಚ್ಚುವಂಥದ್ದು ಏನೂ ಕಾಣುತ್ತಿಲ್ಲ. ಕೆಲವೇ ಕೆಲವು ಜನರು ಬಳಸುವ ವಿಮಾನ ನಿಲ್ದಾಣಕ್ಕೆ ಹತ್ತಾರು ಸಾವಿರ ಕೋಟಿ ರೂಪಾಯಿಗಳು, ಸಾವಿರಾರು ಎಕರೆ ಭೂಮಿ ಖರ್ಚಾದರೆ ಪರವಾಗಿಲ್ಲ. ಆದರೆ, ತನ್ನ ಮಿತಿಯಲ್ಲಿ ನಿಲುಕುವ ಒಂದು ಕಾರನ್ನು ಮಧ್ಯಮವರ್ಗದ ವ್ಯಕ್ತಿ ಖರೀದಿಸಲು ಉತ್ಸುಕನಾದರೆ, ಅದರ ಹಿಂದೆ ವಿನಾಶದ ಭೀತಿ ಕಾಣುತ್ತದೆ. ಅಡುಗೆ ಅನಿಲ ಖರೀದಿಸಲು ಶಕ್ತನಲ್ಲದ ವ್ಯಕ್ತಿ ಸೌದೆ ಉರಿ ಹಚ್ಚಿ ಅಡುಗೆ ಮಾಡಿದರೆ, ಅದನ್ನು ಪರಿಸರ ಮಾಲಿನ್ಯ ಕ್ರಮ ಎಂದು ಬಣ್ಣಿಸಿದಂತಿದೆ ಈ ಮಹನೀಯರ ವಾದ.

ಇದಕ್ಕೂ, ಅಷ್ಟಮಠಗಳ ಶ್ರೀಗಳು ಎಬ್ಬಿಸುತ್ತಿರುವ ವೈಚಾರಿಕ ಮಾಲಿನ್ಯಕ್ಕೂ ಏನೂ ವ್ಯತ್ಯಾಸವಿಲ್ಲ. ಎರಡೂ ಬೌದ್ಧಿಕ ಅಧಃಪತನದ ಸಂಕೇತಗಳೇ.

- ಚಾಮರಾಜ ಸವಡಿ

Ornamental seperator
  • Login or register to post comments
  • 90 hits
  • Email this page
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನ್ಯಾನೊ ಮತ್ತು ವೈಚಾರಿಕ ಸಣ್ಣತನ
  • ಅಸೂಯೆ ಎಂಬ ತಡೆಗೋಡೆ...
  • ಅಸೂಯೆ ಎಂಬ ತಡೆಗೋಡೆ...
  • ಕೃಷ್ಣ, ಕ್ರಿಸ್ತ ಮತ್ತು ಯೋಗಾಯೋಗ
  • ರತನ್ ಟಾಟಾ ರವರ ಸಣ್ಣ ಕಾರು, " ನ್ಯಾನೊ," ದೇಶಕ್ಕೆ ಸಮರ್ಪಣೆ !
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

See my blog: chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮
  • ಜನಪದ ಕಥೆ

ಇತ್ತೀಚಿನ ಪ್ರತಿಕ್ರಿಯೆಗಳು

  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:10pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:00pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 17 ಅತಿಥಿಗಳು ಆನ್ಲೈನ್ ಇರುವರು.

ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.

— ಸಮರ್ಥ ರಾಮದಾಸ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator