Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಶ್ರೀಬಸವೇಶ್ವರರ ವಚನಗಳು

May 8, 2008 - 5:52pm — sushil
ವಿಶ್ವಗುರು,ಭಕ್ತಿಭಂಡಾರಿ,ಕಾಯಕಯೋಗಿ,ತ್ರಿವಿಧ ದಾಸೋಹಿ  ಬಸವಣ್ಣನವರು||

ದಯವಿಲ್ಲದ ಧರ್ಮವಾವುದಯ್ಯಾ ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ
ದಯವೇ ಧರ್ಮದ ಮೂಲವಯ್ಯೂ
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯೂ !!

ತನಗೆ ಮುನಿವವರಿಗೆ ತಾ ಮುನಿಯಲೇಕಯ್ಯಾ?
ತನಗಾದ ಆಗೇನು? ಅವರಿಗಾದ ಚೇಗೇನು?
ತನುವಿನ ಕೋಪ ತನ್ನ ಹಿರಿಯತನದ ಕೇಡು?
ಮನದಾ ಕೋಪ ತನ್ನರಿವಿನಾ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ !!

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ!
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ!
ಕೂಟಕ್ಕೆ ಸ್ರೀಯಾಗಿ ಕೂಡಿದಳು ಮಾಯೆ!
ಇದಾವ ಪರಿಯಲ್ಲಿ ಕಾಡಿತ್ತು ಮಾಯೆ?
ಈ ಮಾಯೆಯ ಕಳವೊಡೆ ಎನ್ನಳವಲ್ಲ;
ನೀವೇ ಬಲ್ಲಿರಿ ಕೂಡಲಸಂಗಮದೇವಾ!!

ನೆಲವೊಂದೆ ಹೊಲೆಗೇರಿ ಶಿವಾಲಯಕ್ಕೆ
ಜಲವೊಂದೆ ಶೌಚಾಚಮನಕ್ಕೆ
ಕುಲವೊಂದೆ ತನ್ನ ತಾನರಿದವಂಗೆ
ಫಲವೊಂದೆ ಷಡುದರುಶನ ಮುಕ್ತಿಗೆ
ನಿಲವೊಂದೆ ಕೂಡಲಸಂಗಮದೇವಾ ನಿಮ್ಮನರಿದವಂಗೆ !!

ತನು ನಿಮ್ಮದೆಂದ ಬಳಿಕ ಎನಗೆ ಬೇರೆ ತನುವಿಲ್ಲ
ಮನ ನಿಮ್ಮದೆಂದ ಬಳಿಕ ಬೇರೆ ಮನವಿಲ್ಲ
ಧನ ನಿಮ್ಮದೆಂದ ಬಳಿಕ ಎನಗೆ ಬೇರೆ ಧನವಿಲ್ಲ
ಇಂತೀ ತ್ರಿವಿಧವೂ ನಿಮ್ಮದೆಂದರಿದ ಬಳಿಕ ಎನಗೆ ಬೇರೆ
ವಿಚಾರವುಂಟೆ ಕೂಡಲಸಂಗಮದೇವಾ!!

ಕಳಬೇಡ ಕೊಲಬೇಡ
ಹುಸಿಯ ನುಡಿಯಲು ಬೇಡ
ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ
ಇದೇ ಅಂತರಂಗ ಶುದ್ಧಿ ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ!!

ತಂದೆ ನೀನು ತಾಯಿ ನೀನು
ಬಂಧು ನೀನು ಬಳಗ ನೀನು
ನೀನಲ್ಲದೆ ಮತ್ತಾರೂ ಇಲ್ಲವಯ್ಯಾ
ಕೂಡಲಸಂಗಮದೇವಾ
ಹಾಲಲ್ಲದ್ದು ನೀರಲ್ಲದ್ದು ನಿಮ್ಮ ಧರ್ಮ!!

  • ಅಧ್ಯಾತ್ಮ
Ornamental seperator
  • Login or register to post comments
  • 168 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 9, 2008 - 1:58pm — muralihr

ಉ: ಶ್ರೀಬಸವೇಶ್ವರರ ವಚನಗಳು

muralihr's picture

ನಿಮ್ಮ ಹತ್ತಿರಾ ಸಮಗ್ರ ವಚನಗಳು ಉ೦ಟೋ ?? ನ೦ಗೇ ಒ೦ದು ವಚನ ಬೇಕಾಗಿತ್ತು.

  • Login or register to post comments
  • link
  • Email this ಪ್ರತಿಕ್ರಿಯೆ
May 10, 2008 - 4:08pm — csomsekraiah

ಉ: ಶ್ರೀಬಸವೇಶ್ವರರ ವಚನಗಳು

csomsekraiah's picture

ಮುರಳೀಧರ್ ಯಾವ ವಚನ ಎಂದು ಹೇಳಿ ಪ್ರಯತ್ನಿಸೋಣ

  • Login or register to post comments
  • link
  • Email this ಪ್ರತಿಕ್ರಿಯೆ
May 10, 2008 - 9:16pm — muralihr

ಉ: ಶ್ರೀಬಸವೇಶ್ವರರ ವಚನಗಳು

muralihr's picture

ಬೀದಿ ನಾಯಿಯ ಕಣ್ಣ ಮೂಲಕ ಜಗವ ನೋಡು ಅ೦ತಾ ಒ೦ದು ವಚನವಿದೆಯ೦ತೆ .. ಯಾರೋ ಬಸವಣ್ಣನವರು ಬರೆದದ್ದು ಅ೦ತಾ ಹೇಳಿದ್ದರು.
ಅದಕ್ಕೆ ಚೆಕ್ ಮಾಡ್ ಬೇಕಿತ್ತು...

  • Login or register to post comments
  • link
  • Email this ಪ್ರತಿಕ್ರಿಯೆ
May 11, 2008 - 12:55pm — csomsekraiah

ಉ: ಶ್ರೀಬಸವೇಶ್ವರರ ವಚನಗಳು

csomsekraiah's picture

ನೀವು ತಿಳಿಸಿದ ರೀತಿಯ ವಚನ ನನ್ನ ಕಣ್ಣಿಗೆ ಬಿದ್ದಿಲ್ಲ , ಆಸಕ್ತಿದಾಯಕವಾಗಿದೆ , ಹುಡುಕುತ್ತೇನೆ , ನನಗೆ ಮೊದಲು ಸಿಕ್ಕರೆ ನಿಮಗೆ ತಿಳಿಸುತ್ತೇನೆ . ನಿಮಗೆ ಸಿಕ್ಕರೆ ತಿಳಿಸಿ .

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇದು ಭೋದಿಸುವ ವಿಷಯವಲ್ಲ ,ಕಾರ್ಯ ರೂಪಕ್ಕೆ ತರಬೇಕು
  • "ಕಳಬೇಡ ಕೊಲಬೇಡ"
  • ವಚನ
  • ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ?
Syndicate content

ಲೇಖಕರು

sushil's picture

ಪೂರ್ಣ ಹೆಸರು
ಸುಶೀಲ್ ಕುಮಾರ್.ಎಸ್.ಬಿ.

ಪರಿಚಯ

ನಮಸ್ಕಾರ ಈ ಬಳ್ಳಾರಿ ಹುಡುಗ ಪಕ್ಕಾ ಕನ್ನಡ ಪ್ರೇಮಿ ಕಣ್ರೀ.ಪುಸ್ತಕ ಓದುವುದು,ಚಿತ್ರ ಬಿಡಿಸುವುದು,ಸಂಗೀತ ಇತ್ಯಾದಿ..ನನ್ನ ಹವ್ಯಾಸಗಳು.ಸದ್ಯಕ್ಕೆ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿ.ಸದಾ ಹರ್ಷಚಿತ್ತ.ಎಲ್ಲ ಕನ್ನಡ ಹಾಗು ಸಂಪದ ಪ್ರೇಮಿಗಳಿಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ನಮಸ್ಕಾರಗಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪ್ರತ್ಯಕ್ಷ ನೋಡಿದರೂ...
  • ನಶಿಸುತ್ತಿರುವ ಶಬ್ದ ಬಳಕೆ
  • ಎಚ್ಚರ! ಡ್ಯೂಪ್ಲಿಕೇಟ್ Volvo ಸೇವೆ ಲಭ್ಯವಿದೆ
  • ಭಾರತದ ಜ್ಞಾನಾವತಾರ
  • ಹೆಣ್ಣು ಜೀವವಿಮುಖಿ, ಜೀವವಿರೋಧಿಯಾಗುವ ಕ್ಷಣ
  • ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
  • ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ

ಇತ್ತೀಚಿನ ಪ್ರತಿಕ್ರಿಯೆಗಳು

  • ವೈಭವ
    ಉ: ಸುಭಾಷಿತಗಳು
    May 12, 2008 - 8:10am
  • ವೈಭವ
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 8:07am
  • kalpana
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 7:16am
  • venkatesh
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 6:51am
  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 6 ಅತಿಥಿಗಳು ಆನ್ಲೈನ್ ಇರುವರು.

ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator