ಗಾಂಧಿ ಎಂಬ ರೂಪಕ, ಜೀವನವೆಂಬ ನಾಟಕ!
ಬಾಳಾಸಾಹೇಬ ಲೋಕಾಪುರ ಅವರು ತಮ್ಮ `ಹುತ್ತ' ಕಾದಂಬರಿಯ ಮೂಲಕ ಬದುಕಿನ ಹಲವು ಮೂಲಭೂತ ಪ್ರಶ್ನೆಗಳಿಗೆ ಮುಖಾಮುಖಿಯಾಗಿದ್ದಾರೆ ಮತ್ತು ತಮ್ಮ ಓದುಗನೂ ಅವುಗಳಿಗೆ ಮುಖಾಮುಖಿಯಾಗುವಂತೆ ಮಾಡಿದ್ದಾರೆ. ತುಂಬ ಪ್ರಾಮಾಣಿಕವಾದ ಬದುಕಿನ ಸತ್ಯದ ಶೋಧ ಇಲ್ಲಿದ್ದು ಕಾದಂಬರಿ ಓದಿನಾಚೆ ಒಂದು ಜಿಜ್ಞಾಸೆಯಾಗಿ ಓದುಗನೊಳಗೆ ಬೆಳೆಯುವ ಕಸು ಹೊಂದಿದೆ. ಅಷ್ಟೇ ಮಹತ್ವದ್ದಾಗಿ ಇದನ್ನು ಸಾಧಿಸುವಾಗ ಅವರು ಕಾದಂಬರಿ ಪ್ರಕಾರದ ಎಲ್ಲ ಅಂಶಗಳಿಗೂ ಸೂಕ್ತ ನ್ಯಾಯ ಸಲ್ಲಿಸಿರುವುದು ಕೂಡ ಗಮನಾರ್ಹವಾಗಿದೆ. ಇಲ್ಲಿನ ಭಾಷೆ, ವಿವರಗಳು ಕಟ್ಟಿಕೊಡುವ ಒಂದು ವಾತಾವರಣ, ಇವುಗಳಿಂದ ಅಲ್ಲಿನ ಬದುಕು ಜೀವಂತಗೊಳ್ಳುವ ಪರಿ ನಿಜಕ್ಕೂ ತುಂಬ ಸಹಜವಾಗಿ, ಲಾಲಿತ್ಯಪೂರ್ಣವಾಗಿ ಬಂದಿದೆ.
- Login or register to post comments
- 524 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version


RSS: