ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಜವರಾಯನಿಗಿಲ್ಲ ಕರುಣೆ ಒಂದಿನಿತೂ

June 2, 2008 - 9:01pm — roopablrao
ಮಗು

ನಡುಬೀದಿಯಲ್ಲಿ ನಿಂತ ಅವಳು ಗಿರಾಕಿಗಾಗಿ ಅತ್ತಿತ್ತ ನೋಡುತ್ತಿದ್ದರೂ ಮನಸಿನ ಕಣ್ಣಿನ ಮುಂದೆ ಮಾತ್ರ ಹಸಿವು ಎಂದು ಅಳುತ್ತಿದ್ದ ತನ್ನ ಕಂದನ ಚಿತ್ರವೇ ಕುಣಿಯುತ್ತಿತು. ಯಾರದರೂ ಸಿಕ್ಕರೆ ಸಾಕು ಕಾಸು ತೆಗೆದುಕೊಂಡು ಮೊದಲು ಮಗುವಿಗೆ ಇಡ್ಲಿ ಕೊಡಿಸಿ ನಂತರ ಬರುವುದಾಗಿ ಹೇಳಬೇಕು
ನೆನ್ನೆವರೆಗೆ ಬಂದ ಹಣವನ್ನೆಲ್ಲಾ ಸಾರಾಯಿ ಅಂಗಡಿಗೆ ಸುರಿದಿದ್ದ ಅವಳನ್ನು ಈ ದಂಧೆ ಇಳಿಸಿದವ---ಬೇರಾರು ಅಲ್ಲ ಅವಳ ಗಂಡನೇ .ಆ ಊರಿನಿಂದ ಈ ಕಾಣದ ಊರಿಗೆ ಕರೆತಂದು ಒಂದು ಲಾಡ್ಜ್ನಲ್ಲಿ ಇಳಿಸಿ ಒಂದಷ್ಟು ಗಿರಾಕಿಗಳನ್ನು ಕರೆತಂದ . ನಂತರ ಅವರಿಂದ ಹಣ ಪಡೆದುಕೊಂಡವ ಪತ್ತೆಯೇ ಇಲ್ಲ ಬೆಳಗಿನಿಂದ.
ಮಗು ಹಸಿವೂ ಎಂದು ಭೋರ್‍ಗರೆದು ಅಳುತ್ತಿತು. ಬೆಳಗ್ಗೆ ಎದ್ದಾಗ ಬಿಸ್ಕೆಟ್ ಕೊಟ್ಟದ್ದಷ್ಟೆ .ಅವಳ ಹೊಟ್ಟೆಗೂ ಏನೂ ಇಲ್ಲ ಮಗುವಿಗೂ ಏನೂ ಇಲ್ಲ. ಏನಾದರಾಗಲಿ ಎಂದು ಮಗುವನ್ನು ಮಲಗಿಸಿ ಬಳಿಯಲ್ಲೇ ಇದ್ದ ಬಸ್ ಸ್ಟಾಪ್‌ಗ್ಗೆ ಬಂದು ನಿಂತಿದ್ದಳು.
ಅವಳನ್ನು ಗಂಡಸರು ನೋಡುತಿದ್ದರೇನೊ ನಿಜ ಆದರೆ ಬಳಿ ಬರುವ ಧೈರ್ಯ ಇರಲಿಲ್ಲವೆನ್ನಿಸುತವಳಿಗೆ
ಹಾಗಾಗಿ ಕಣ್ಣಲ್ಲೆ ಸನ್ನೆ ಮಾಡಿದಳು .
ಅವಳ ವಯಸು 30 ರ ಸಮೀಪ ಇರಬಹುದೇನೊ ಆದರೆ ಸಮಯ ಅದನ್ನು ಇನ್ನೂ ಹೆಚ್ಚಿಸಿತ್ತು. ಗುಳಿ ಬಿದ್ದ ಕಣ್ಣುಗಳಿಗೆ ಹಚ್ಚಿದ ಕಾಡಿಗೆ ಇಂದ ಇನ್ನೂ ಭಯಂಕರವಾಗಿ ಕಾಣುತಿದ್ದಳು.
ಹ್ಯಾಗೊ ಒಬ್ಬ ಬಂದ . ಚೌಕಾಸಿ ಮಾಡಿ 500 ರೂ ಗಳಿಂದ 200 ಕ್ಕೆ ಇಳಿಯಿತು ಅವಳ ರೇಟ್.
ಮಗುವಿಗೆ ಇಡ್ಲಿ ಕೊಡಿಸಿ ಇಲ್ಲೇ ಬರುವುದಾಗಿ ಹೇಳಿ ಬಳಿಯಲ್ಲಿನ ಅಂಗಡಿಯಿಂದ ಇಡ್ಲಿ , ಚಾಕ್ಲೆಟ್ ತೆಗೆದುಕೊಂಡು ಸಂಭ್ರಮದಿಂದ ಲಾಡ್ಜಿನೆಡ್ಗೆ ಧಾವಿಸುತ್ತಿದ್ದಂತೆ......................
ಅದ್ಲ್ಲಿದ್ದನೋ ಜವರಾಯ ಲಾರಿಯೊಂದರ ರೂಪದಲ್ಲಿ ಬಂದವನೇ ಅವಳ ಪ್ರಾಣ ಹೀರಿ ನಡೆದೇ ಬಿಟ್ಟ.
ಲಾರಿ ಹೋದ ನಂತರ ಅಲ್ಲಿದ್ದಿದ್ದು ಅವಳ ಜಜ್ಜಿ ಹೋದ ಶರೀರ ಹಾಗೂ ಚೆಲ್ಲಾಪಿಲ್ಲಿಯಾದ ಇಡ್ಲಿ , ಚಾಕ್ಲೆಟ್......................................................................

ಇತ್ತ ಮಗು ಅಮ್ಮ ಬರುತ್ತಾಳೆ ಎಂದು ಅಳುತ್ತಾ ಕಾಯುತ್ತಲೇ ಇತ್ತು................................................

  • ಸಣ್ಣ ಕಥೆ
~.~
  • Login or register to post comments
  • 861 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 2, 2008 - 10:49pm — hamsanandi

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

hamsanandi's picture

ಚಿಕ್ಕದಾಗಿದ್ದರೂ ಮನಸ್ಸಿಗೆ ತಟ್ಟುವಂತಿದೆ..

ಒಮ್ಮೆಗೇ ನಿರಂಜನರ (ಅವರದ್ದೇ ಇರಬೇಕು, ಯಾರಾದರೂ ಗೊತ್ತಿದ್ದರೆ ತಿಳಿಸಿ) ’ಕೊನೆಯ ಗಿರಾಕಿ’ ಅನ್ನುವ ಸಣ್ಣ ಕಥೆ, ಮತ್ತೆ ಅಶ್ವತ್ಥರ ಇನ್ನೊಂದು ಕಥೆ ( ಹೆಸರಂತೂ ಮರೆತಿದ್ದೇನೆ) ನೆನಪಾದವು.

-ಹಂಸಾನಂದಿ
ಪುರಂದರ ದಾಸರ ರಚನೆಗಳಿಗಾಗಿ ಇಲ್ಲಿ ಚಿಟಕಿಸಿ :- http://purandara.wordpress.com/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 3, 2008 - 4:20pm — roopablrao

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

roopablrao's picture

ತುಂಬಾ ಧನ್ಯವಾದಗಳು
ಇಂತಹ ಘಟನೆಗಳು ದಿನನಿತ್ಯದ ಬದುಕಿನಲ್ಲಿ ನಡೆದರೂ ಯಾರಿಗೂ ತಿಳಿಯುವುದಿಲ್ಲ

http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 2, 2008 - 11:35pm — rameshbalaganchi

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

rameshbalaganchi's picture

"ಜವರಾಯ ಬಂದರೆ ಬರಿಗೈಲಿ ಬರಲಿಲ್ಲ
ಕುಡುಗೋಲು ಕೋಲಲೊಂದ್ಹೆಗಲೇರಿ ಕೋಲೆನ್ನ ಕೋಲೆ" ಎಂಬ ಜನಪದ ಕಾವ್ಯ ನೆನಪಿಗೆ ಬಂತು

"ಏರಿದವನು ಚಿಕ್ಕವನಿರಬೇಕು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 3, 2008 - 3:39pm — shashikannada

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

shashikannada's picture

ಆಕಸ್ಮತ್ತಾಗಿ ನಿಮ್ಮ ಬ್ಲಾಗ್ ಓದಿದೆ. ನಿಮ್ಮ ಬರವಣಿಗೆ ಚೆನ್ನಾಗಿದೆ. ನಿಮ್ಮ ಪ್ರಯತ್ನ ಕೂಡ ಮೆಚ್ಚುವಂಥದ್ದೆ. ಅಪರೂಪಕ್ಕೊಮ್ಮೆ ಸ್ವಲ್ಪ ಭಿನ್ನವಾದ ಹೆಣ್ಣಿನ ಬಗ್ಗೆ ಓದಿದ ಖುಷಿಯಾಯಿತು. ಗಂಡಸರ ಬಗೆಗಿನ ನಿಮ್ಮ ಅಭಿಪ್ರಾಯ ತಕ್ಕ ಮಟ್ಟಿಗೆ ಸರಿ. ಆದರೆ, ಎಲ್ಲಾ ಗಂಡಸರನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಬೇಡಿ. ನಿಮ್ಮೆಲ್ಲಾ ಪ್ರಯತ್ನಗಳಿಗೆ ಶುಭ ಕೋರುವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 3, 2008 - 4:22pm — roopablrao

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

roopablrao's picture

ಶಶಿಯವರೇ
ನನಗೇನೂ ಗಂಡಸರ ಬಗೆಗೆ ಕೆಟ್ಟ ಅಭಿಪ್ರಾಯ ಇಲ್ಲ
ಒಂದೇ ತಕ್ಕಡಿಯಲ್ಲಿ ಇಡೋ ಮಾತೆಲ್ಲಿ

ಬರವಣಿಗೆ ಚೆನ್ನಾಗಿದೆ ಎಂದಿದ್ದಕ್ಕೆ ಧನ್ಯವಾದಗಳು
http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 4, 2008 - 8:07pm — agilenag

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

agilenag's picture

ಲೇಖನ ಹೃದಯ ಮಿಡಿಸುವಂತಿದೆ. ಆದರೆ ಕಣ್ಣು ಬಿಡುವ ಮೊದಲೇ ಈ ಕ್ರೂರ ಲೋಕವೆಂಬ ಅಂಧಕಾರಕ್ಕೆ ಕಾಲಿರಿಸಿದ ಆ ಅನಾಥ ಮಗುವಿನ ಬಗ್ಗೆ ಆಕೆಗಿಂತಲೂ ಹೆಚ್ಚಿನ ಅನುಕಂಪ ಮೂಡಿ ಬಂದಿತು. ಇಂದಿನ ದಿನಮಾನಗಳಲ್ಲಿ ಇಂತಹ ಪ್ರಸಂಗಗಳನ್ನು ದಿನ ನಿತ್ಯ ಪತ್ರಿಕೆಗಳು ಪ್ರಕಟಮಾಡುತ್ತಿವೆ. ಕಸದ ತೊಟ್ಟಿಯಲ್ಲಿ ಅಥವಾ ಮೋರಿಯಲ್ಲಿ ಚೊಚ್ಚಿಲ ಮಕ್ಕಳು ಸಿಗುತ್ತಿದ್ದು, ಹರಯದ ’ಮದ’ದಲ್ಲಿ ಮೆರೆಯುತ್ತಿರುವ ಹೆಣ್ಣು-ಗಂಡುಗಳ ಅನೈತಿಕ ಸಂಬಂಧದಿಂದಾಗಿ ಉದ್ಭವಿಸಿದ ಇಂತಹ ಬೇಡದ ಮಕ್ಕಳು ಮುಂದಿನ ಸಮಾಜ ಕಂಟಕರಾಗಿ ಬೆಳೆಯುವ ಸಾಧ್ಯತೆಗಳು ಹೆಚ್ಚು. ಇದರ ಬಗ್ಗೆಯೂ ಯೋಚನೆ ಮಾಡಬೇಕಲ್ಲವೇ ರೂಪಾರವರೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 4, 2008 - 8:13pm — roopablrao

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

roopablrao's picture

ಇದು ನಿತ್ಯ ನಡೆಯುವ ಗೋಳು ಸಾರ್
ಇದಕ್ಕೆ ಯಾರು ಹೊಣೆ. ?

http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 5, 2008 - 2:01am — Rajeshwari

ಉ: ಜವರಾಯನಿಗಿಲ್ಲ ಕರುಣೆ ಒಂದಿನಿತೂ

Rajeshwari's picture

ನಿಜಕ್ಕೂ ಮನ ಕಲಕುವಂತಿದೆ , ತಂದೆ ಮಾಡಿದ ಪಾಪಕ್ಕೆ ಈಗ ಆ ಮಗು ಶಿಕ್ಷೆಗೆ ಗುರಿಯಾಗಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಡಿಗೆಯವರ ಪುರಾಣ - ಭಾಗ -೨
  • ಲವ್ ಅಟ್ ಫಸ್ಟ್ ಸೈಟ್ ?
  • ಇಬ್ಬರು ಸನ್ಯಾಸಿಗಳು ಮತ್ತು ಒಬ್ಬ ತರುಣಿ
  • ಮರಳಿ ಗೂಡಿಗೆ ಬಂತು ಮರಿ ಹಕ್ಕಿ
  • ಆ ಹುಡುಗಿ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ
  • Google Chrome ಮತ್ತು Java Applet
  • ಗೂಗಲ್ ಕ್ರೋಮ್ ಕ್ರಾಶ್ ಆಯ್ತಂತೆ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಪುರಂದರದಾಸರ ಎರಡು ಪದಗಳು
    September 5, 2008 - 9:17pm
  • cmariejoseph
    ಉ: ಚಂದಿರನ ನೋಡಿದವ
    September 5, 2008 - 8:56pm
  • cmariejoseph
    ಉ: IT - ಸಿಂಪ್ಟಮ್ಸ
    September 5, 2008 - 8:39pm
  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 102 ಅತಿಥಿಗಳು ಆನ್ಲೈನ್ ಇರುವರು.


ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator