ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮರಗಳ ಮಹತ್ವ

June 7, 2008 - 10:32pm — kannadakanda

ಅಶ್ವತ್ಥಮೇಕಂ ಪಿಚುಮಂದಮೇಕಮ್
ನ್ಯಗ್ರೋಧಮೇಕಂ ದಶ ತಿಂತ್ರಿಣೀಶ್ಚ
ಕಪಿತ್ಥಬಿಲ್ವಾಮಲಕಾಮ್ರವೃಕ್ಷಾನ್
ಧರ್ಮಾರ್ಥಮಾರೋಪ್ಯ ಸ ಯಾತಿ ನಾಕಂ||

ಹೀಗೆಂದರು ಹಿರಿಯರು. ಇದಱರ್ಥ: ಒಂದು ಅರಳಿ ಮರ, ಒಂದು ಬೇವಿನ ಮರ, ಒಂದು ಆಲದ ಮರ, ಹತ್ತು ಹುಣಿಸೇಮರ ಹಾಗೂ ಸಾಕಷ್ಟು ಬೇಲ, ಬಿಲ್ವ, ನೆಲ್ಲಿ ಮತ್ತು ಮಾವಿನ ಮರಗಳನ್ನು ಧರ್ಮಾರ್ಥಕ್ಕಾಗಿ (ತನ್ನದಲ್ಲದ ಇತರರ ಒಳಿತಿಗಾಗಿ) ಬೆಳೆಸಿ ಒಬ್ಬನು ಸ್ವರ್ಗಕ್ಕೆ ಹೋಗುತ್ತಾನೆ.

ಇಲ್ಲಿ ಉಲ್ಲೇಖಿಸಿದ ವೃಕ್ಷಗಳ ಬಗ್ಗೆ ವಿಚಾರಿಸಿ ನೋಡಿದಾಗ ನಮ್ಮ ಹಿರಿಯರಿಗೆ ಮರಗಳ ಮಹತ್ವದ ಅಱಿವಿರುವುದು ಗೊತ್ತಾಗುತ್ತದೆ. ಈ ಮೇಲಿನ ಎಲ್ಲಾ ವೃಕ್ಷಗಳು ಬಹುವರ್ಷೀಯ (Perrennial) ಸಸ್ಯಗಳು. ಅರಳಿ, ಆಲ, ಬೇವು ನೆರಳನ್ನು ಕೊಡುವ ಮರಗಳು. ಇವುಗಳು ಇಂಗಾಲದ ಡೈ ಆಕ್ಸೈಡ್‌ನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವುಳ್ಳವುಗಳು. ಹಾಗೆಯೇ ಈ ವೃಕ್ಷಗಳು ಓಜೋನ್ ಪದರವನ್ನು ಸಂರಕ್ಷಿಸುವಲ್ಲಿ ಮಹತ್ತರ ಪಾತ್ರವಹಿಸುತ್ತವೆ. ಹಾಗೆಯೇ ನೆಲದಲ್ಲಿ ನೀರನ್ನು ಹಿಡಿದಿಡುತ್ತವೆ. ಬಿಲ್ವ ಮರವು ಪೂಜೆಗೆ ಶ್ರೇಷ್ಠವಾಗಿದ್ದು ಔಷಧೀಯ ಗುಣಗಳನ್ನು ಹೊಂದಿದೆ. ಬೇಲವು ಬೇಸಿಗೆಯಲ್ಲಿ ತಂಪಾದ ಪಾನೀಯ ತಯಾರಿಸಲು ಬೇಕಾದ ಹಣ್ಣುಗಳನ್ನು ಒದಗಿಸುತ್ತದೆ. ನೆಲ್ಲಿಯು ಔಷಧೀಯ ಗುಣ ಹೊಂದಿರುವ ಕಾಯಿಗಳನ್ನು ಬಿಡುತ್ತದೆ. ನೆಲ್ಲಿಕಾಯಿಗಳನ್ನು jam ಮತ್ತು ಉಪ್ಪಿನಕಾಯಿಗಳ ತಯಾರಿಕೆಯಲ್ಲಿ ಬೞಸುತ್ತಾರೆ. ಮಾವಿನ ಹಣ್ಣು ಹಣ್ಣುಗಳ ರಾಜನೇ ಆಗಿದ್ದು ರುಚಿಯಾದ ಹಣ್ಣುಗಳಿಗೆ ಪ್ರಸಿದ್ಧವಾಗಿದೆ. ಈ ಹಣ್ಣುಗಳಿಂದ ರುಚಿಯಾದ ಪಾನೀಯವನ್ನು ತಯಾರಿಸುತ್ತಾರೆ. ಹಾಗೆಯೇ ಮಾವಿನ ಹಣ್ಣುಗಳಿಂದಲೂ jam ತಯಾರಿಸುತ್ತಾರೆ. ಕೆಲವು ಜಾತಿಯ ಮಾವಿನ ಕಾಯಿಗಳನ್ನು ಉಪ್ಪಿನಕಾಯಿ ತಯಾರಿಸಲು ಬೞಸುತ್ತಾರೆ. ಹುಣಿಸೇಮರಗಳು ಬಯಲುಸೀಮೆಯಲ್ಲಿ ನೆರಳನ್ನು ಕೊಡುವುದರ ಜೊತೆಗೆ ಇದರ ಹಣ್ಣನ್ನು ಎಲ್ಲರಿಗೂ ಗೊತ್ತಿರುವಂತೆ ಅಡಿಗೆಯಲ್ಲಿ ರುಚಿಗಾಗಿ ಬೞಸುತ್ತಾರೆ. ಹೀಗಾಗಿ ನಮ್ಮ ಹಿರಿಯರಿಗೆ ಮರಗಳ ಮಹತ್ವ ಗೊತ್ತಿರುವುದು ಸ್ಪಷ್ಟವಾಗುತ್ತದೆ.

ಹಾಗಾಗಿ ನಾವು ನಮ್ಮ ಹಿರಿಯರು ಮರಗಳ ಬಗ್ಗೆ ತಿಳಿದಿದ್ದ ಮಹತ್ವವನ್ನು ಸರಿಯಾಗಿ ಅಱಿಯುವುದು ತೀರಾ ಅವಶ್ಯಕವಾಗಿದೆ ಹಾಗೂ ಈ ಒಂದು ಒಳ್ಳೆಯ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

  • ವಿಮರ್ಶೆ
~.~
  • Login or register to post comments
  • 218 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಾವಿನ ಹೂವೆ, ನೀನೂ ಸುಂದರವಾಗಿರುವೆ
  • ಹತ್ತು ಹತ್ತು ಇಪ್ಪತ್ತು...
  • ನನ್ನ ಲೇಖನಗಳನ್ನು ಸದ್ಯಕ್ಕೆ ಮುಗಿಸಿದ್ದೇನೆ
  • ಸುಭಾಷಿತ: ಐದು ಮರಗಳ ಸ್ವರ್ಗ
  • ತಾತ
Syndicate content

ಲೇಖಕರು

kannadakanda's picture

ಪೂರ್ಣ ಹೆಸರು
Anantha Krishna K S

ಪರಿಚಯ

I am an assistant professor in Computer Science. Very much interested in Old Kannada language.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 138 ಅತಿಥಿಗಳು ಆನ್ಲೈನ್ ಇರುವರು.


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator