ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಶ್ರೀಬಸವೇಶ್ವರರ ವಚನಗಳು-3

June 18, 2008 - 11:58pm — sushil
 ಭಕ್ತಿಭಂಡಾರಿ ಬಸವಣ್ಣನವರು

****ಜಾತಿ ಪದ್ಧತಿ 'ಸಲ್ಲ' ಎಂದ ಬಸವಣ್ಣ****

ಎಲ್ಲ ಕೆಲಸಗಳೂ ಸಮವೇ. ಕಾಯಕದಲ್ಲಿ ಮೇಲು-ಕೀಳು ಎಂಬುದಿಲ್ಲ. ಜಗದಲಿ ಕಿವಿಯಿಂದ ಹುಟ್ಟಿದವರಾರು ಇಲ್ಲ..
ಹೀಗಿರುವಾಗ ಉಚ್ಚನೀಚ ಭಾವನೆಗಳು ಸಲ್ಲ. ಬಸವಣ್ಣನವರು ವ್ಯಕ್ತಿಯ ಶ್ರೇಷ್ಟತೆ
ನಿರ್ಣಯ ಆಗುವುದು ಹುಟ್ಟಿದ ಜಾತಿಯಿಂದಲ್ಲ ಬದುಕುವ ರೀತಿಯಿಂದ ಎಂದು ಈ ವಚನದಲ್ಲಿ ಮಾರ್ಮಿಕವಾಗಿ
ತಿಳಿಸಿದ್ದಾರೆ.

ಕಾಸಿ ಕಮ್ಮಾರನಾದ,ಬೀಸಿ ಮಡಿವಾಳನಾದ,
ಹಾಸನಿಕ್ಕಿ ಸಾಲಿಗನಾದ,ವೇದವನೋದಿ ಹಾರುವನಾದ
ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ?
ಇದು ಕಾರಣ ಕೂಡಲಸಂಗಮದೇವಾ,
ಲಿಂಗಸ್ಥಲವನರಿದವನೆ ಕುಲಜನು!

ಹಾಗೆಯೇ ಜಾತಿಭೇದಜನಿತ ವೈಷಮ್ಯವನ್ನು ತೊರೆದು ಸೋದರತ್ವದ,ಬಂಧುತ್ವದ ಭಾವದಿಂದ ಅನ್ಯೋನ್ಯವಾಗಿ
ಬದುಕಲು ಕರೆಕೊಡುತ್ತ ಅವರೆನ್ನುತಾರೆ..

ಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯಾ;
ಇವನಮ್ಮವ ಇವನಮ್ಮವ ಇವನಮ್ಮವನೆಂದೆನಿಸಯ್ಯಾ,
ಕೂಡಲಸಂಗಮದೇವಾ,
ನಿಮ್ಮ ಮನೆಯ ಮಗನೆಂದೆನಿಸಯ್ಯಾ.

ಹುಟ್ಟಿನಿಂದ ಬರುವ ಜಾತಿಯಿಂದ ವ್ಯಕ್ತಿ ಶ್ರೇಷ್ಟನಾಗುವುದಿಲ್ಲ. ಇನ್ನೊಬ್ಬರ ಹಿತವನ್ನೇ ಬಯಸುವ ಶರಣರು..ಅವರು
ಕುಲಜರು ಎಂದು ಶ್ರೇಷ್ಟತೆಗೆ ಹೊಸ ಮಾನದಂಡವನ್ನೇ ನೀಡಿದ್ದಾರೆ ಅಣ್ಣನವರು.

ಕೊಲುವನೇ ಮಾದಿಗ,ಹೊಲಸು ತಿಂಬವನೇ ಹೊಲೆಯ!
ಕುಲವೇನೋ ಅವಂದಿರ ಕುಲವೇನೋ?
ಸಕಲ ಜೀವಾತ್ಮರಿಗೆ ಲೇಸನೆ ಬಯಸುವ
ನಮ್ಮ ಕೂಡಲಸಂಗನ ಶರಣರೆ ಕುಲಜರು!

ಬಸವಣ್ಣನವರು ಕಾಯಕ,ದಾಸೋಹದಿಂದ ಪರಿಪೂರ್ಣರಾದ ಶರಣರನ್ನು ಜಾತಿಯ ಮೇಲೆ ಬಿಂಬಿಸಿದರೆ
ಕೂಡಲಸಂಗ ನಗದಿರುವನೇ ಎಂದು ಈ ವಚನದಲ್ಲಿ ಕೇಳುತ್ತಾರೆ. ಜಾತಿರಹಿತ ಸಮಾಜ ಕಟ್ಟಲು ಕಂಕಣಬದ್ಧರಾದ
ಬಸವಣ್ಣನವರು ದೇವರೊಲುಮೆಗೆ,ಬಾಳಿನ ಹಿರಿಮೆಗೆ ಬೇಕಾದುದು ಜಾತಿಯಲ್ಲ,"ಬದುಕುವ ರೀತಿ" ಎಂದು
ಮತ್ತೊಮ್ಮೆ ಸಾರಿ ಹೇಳಿದ್ದಾರೆ.

ಸೆಟ್ಟಿಯೆಂಬೆನೇ ಸಿರಿಯಾಳನ?
ಮಡಿವಾಳನೆಂಬೆನೆ ಮಾಚಯ್ಯನ?
ಡೋಹರನೆಂಬೆನೆ ಕಕ್ಕಯ್ಯನ? ಮಾದಾರನೆಂಬೆನೆ ಚೆನ್ನಯ್ಯನ?
ಆನು ಹಾರುವನೆಂದಡೆ ಕೂಡಲಸಂಗಯ್ಯ ನಗುವನಯ್ಯಾ.

  • ಅಧ್ಯಾತ್ಮ
~.~
  • Login or register to post comments
  • 428 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 19, 2008 - 10:29am — harshab

ಉ: ಬಸವಣ್ಣನವರ ವಚನಗಳು-3

harshab's picture

ಚೆನ್ನಾಗಿ ಬರೆದಿದ್ದೀರಿ ಸುಶೀಲ್. ಇದನ್ನು ಹೀಗೆ ಮುಂದುವರೆಸಿ. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2008 - 12:33pm — girish.rajanal

ಉ: ಬಸವಣ್ಣನವರ ವಚನಗಳು-3

girish.rajanal's picture

ಸುಶಿಲ್,
’ವೇದವನೋದಿ ಹಾರುವನಾದ’ ಈ ಸಾಲಿನಲ್ಲಿ ಹಾರುವ ಅಂದ್ರೆ ಏನಂತ ಗೊತ್ತಾಗಲಿಲ್ಲ. ದಯವಿಟ್ಟು ತಿಳಿಸಿ.
ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2008 - 1:02pm — ಶ್ರೀನಿಧಿ

ಉ: ಬಸವಣ್ಣನವರ ವಚನಗಳು-3

ಶ್ರೀನಿಧಿ's picture

ಹಾರುವ - ಬ್ರಾಹ್ಮಣ

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2008 - 2:35pm — Sunil Jayaprakash

ಉ: ಬಸವಣ್ಣನವರ ವಚನಗಳು-3

Sunil Jayaprakash's picture

ಇದಕ್ಕೆ ಶ್ರೀನಿಧಿ ಆಗ್ಲೇ ಉತ್ರಿಸಿದ್ದಾನೆ, ನಾನು ಸ್ವಲ್ಪ ಕೊಸರು ಸೇರಿಸುತ್ತೇನೆ. ಹಾರುವ, ಹಾರವ, ಹಾರ್ವ, ಪಾರ್ವ, ಪಾರ್ಬ - ಬ್ರಾಹ್ಮಣ, ಪಾರ್ವಿತಿ (ಮೇಣ್ ಪಾರ್ವತಿ) - ಬ್ರಾಹ್ಮಣ ಹೆಂಗಸು. ಪಾರ್ - ನ್ಯಾಯ, ಪಾರ್ಮನೆ - ನ್ಯಾಯದೇಗುಲ,

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2008 - 8:54pm — ಮನಹ್ಪಠಲ

ಉ: ಬಸವಣ್ಣನವರ ವಚನಗಳು-3

ಮನಹ್ಪಠಲ's picture

ನಮ್ಮ ಮೈಸೂರ್ ಕಡೆ ಹಳ್ಳೀಗಳಲ್ಲಿ ಬ್ರಾಮ್ರನ್ನ ಹಾರುವಯ್ಯ, ಹಾರುವಯನ್ನೋರು ಅ೦ತೆಲ್ಲಾ ಕರೀತಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 20, 2008 - 4:46pm — savithru

ಉ: ಬಸವಣ್ಣನವರ ವಚನಗಳು-3

savithru's picture

ಹಾರೈಸುವವ ಹಾರವ! Smiling

ಸವಿತೃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2008 - 5:24pm — ಸಂಗನಗೌಡ

ಉ: ಬಸವಣ್ಣನವರ ವಚನಗಳು-3

ಸಂಗನಗೌಡ's picture

ತುಂಬ ಚೆನ್ನಾಗಿ ಬರೆದಿದ್ದೀರ ಸುಶೀಲ್.

-------------------------------------------------------------

ದೇವರು ನಗುವದನ್ನು ನೋಡಲು ಅವನಿಗೆ ನಿಮ್ಮ ಯೋಜನೆಗಳ ಬಗ್ಗೆ ಹೇಳಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 19, 2008 - 9:12pm — sushil

ಉ: ಬಸವಣ್ಣನವರ ವಚನಗಳು-3

sushil's picture

ಸಂಭಾಷಣೆ ಖುಷಿ ಕೊಟ್ಟಿದೆ. Smiling
ಪ್ರತಿಕ್ರಯಿಸಿದ ಎಲ್ಲರಿಗೂ ಧನ್ಯವಾದಗಳು.ನಿಮ್ಮ ಪ್ರೋತ್ಸಾಹ ಹೀಗೇ ಇರಲಿ.

-ಸುಶೀಲ್.
ಜಗದಲಿ ಎಲ್ಲವ ತಿಳಿಯುತಲಿ ನಾವು ತಿಳಿಯದಾದೆವು ನಮ್ಮನ್ನೆ!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶ್ರೀಬಸವೇಶ್ವರರ ವಚನಗಳು
  • ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ
  • ಬಸವಣ್ಣ
  • ಬಸವ ಜಯಂತಿಗೆ ರಜೆ!
  • ಭಕ್ತಿಭಂಡಾರಿ ಬಸವಣ್ಣನವರು
Syndicate content

ಲೇಖಕರು

sushil's picture

ಪೂರ್ಣ ಹೆಸರು
ಸುಶೀಲ್ ಕುಮಾರ್

ಪರಿಚಯ

ಪುಸ್ತಕ,ಚಿತ್ರಕಲೆ,ಸಂಗೀತ ನನ್ನ ಸ್ನೇಹಿತರು.ತಾಯಿಗೆ ತಾಯ್ನಾಡಿಗೆ ಒಳ್ಳೆ ಮಗನಾಗೋ ಆಸೆ Sticking out tongue

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪ್ರಧಾನಿಯವರ ಆರೋಗ್ಯ ಕಾಪಾಡಲು ಮನವ
  • ಬಿಡುಗಡೆಯ ನಂತರದ ಬೇಡಿಗಳು (೪)
  • ತಿಳಿ ಹಾಸ್ಯ ಮರೆತಿಲ್ಲ!
  • ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
  • ಕಾಡುಕೋಳಿಯ ಜಾಡು ಹಿಡಿದು...
  • ಅನ್ ಸೈಕ್ಲೋಪೀಡಿಯಾ - (ವಿಷಯ)ಮುಕ್ತ ವಿಶ್ವಕೋಶ
  • ಕೋಸಿ-ಬಿಹಾರದ ಕಣ್ಣೀರು

ಇತ್ತೀಚಿನ ಪ್ರತಿಕ್ರಿಯೆಗಳು

  • csomsekraiah
    ಉ: ಬಿಡುಗಡೆಯ ನಂತರದ ಬೇಡಿಗಳು (೩)
    August 30, 2008 - 5:12pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 5:01pm
  • cmariejoseph
    ಉ: ಒಂದು ನಾಯಿ ಕತೆ
    August 30, 2008 - 5:00pm
  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:49pm
  • ಸಂಗನಗೌಡ
    ಉ: ಬಾ ತಬ್ಬಿಕೋ :-)
    August 30, 2008 - 4:41pm
  • dhanu.vijai
    ಉ: ಬಾ ತಬ್ಬಿಕೋ :-)
    August 30, 2008 - 4:18pm
  • dhanu.vijai
    ಉ: ಕಾದಿರುವೆ ನಿನಗಾಗಿ
    August 30, 2008 - 4:14pm
  • ಸಂಗನಗೌಡ
    ಉ: ಕಾದಿರುವೆ ನಿನಗಾಗಿ
    August 30, 2008 - 3:36pm
  • kadakolla05
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 2:09pm
  • srinivasps
    ಉ: ಕಚೇರಿ ಎಂಬ ನರಕ-೧
    August 30, 2008 - 1:56pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 28 ಅತಿಥಿಗಳು ಆನ್ಲೈನ್ ಇರುವರು.


ಅರಿತೆನೆಂದರಿತವನು ಶ್ರೇಷ್ಠ! ಅವನ ಹಿಂಬಾಲಿಸು.
ಅರಿತೆನೆಂದರಿಯದವ ಸುಪ್ತ! ಅವನ ಮೇಲೆಬ್ಬಿಸು.
ಅರಿಯೆನೆಂದರಿತವನು ಮುಗ್ಧ! ಅವನಿಗೆ ಕಲಿಸು.
ಅರಿಯೆನೆಂದರಿಯದವ ಮೂರ್ಖ! ಮೊದಲವನ ದೂರಕೆ ಸರಿಸು.

— ಚೀನಾದ 'ಕನ್‍ಫ್ಯೂಶಿಯನಿಸಂ' ನ ನುಡಿಗಟ್ಟು.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator