ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಅರಳೀಮರ,ಆಲದಮರ,ಅತ್ತಿಮರ.

June 19, 2008 - 11:58pm — ಗಣೇಶ

ಅರಳೀಮರ (ಅಶ್ವತ್ಥ, ಪಿಪ್ಪಲ..)-
ನಮ್ಮ ದೇಶದ ಎಲ್ಲೆಡೆ ಬೆಳೆಯುವ ಮರ. ಇದರ ತುಂಬಾ ಎಲೆಗಳಿರುತ್ತವೆ. ಸ್ವಲ್ಪ ಗಾಳಿಗೂ ಅಲ್ಲಾಡುತ್ತಾ ಪರಪರ ಶಬ್ದ ಮಾಡುತ್ತಿರುವುದು. ಅದಕ್ಕೇ ಈ ಮರಕ್ಕೆ ‘ಚಲಪತ್ರ’ ಎಂಬ ಹೆಸರೂ ಇದೆ.
ಆಲದಂತೆ ಈ ಮರಕ್ಕೂ ಬೀಳಲುಗಳಿದ್ದರೂ ಗಾತ್ರದಲ್ಲಿ
ಸಣ್ಣ ಮತ್ತು ತೆಳುವಾಗಿರುವುದು.(पीपल कि दाडी Smiling )

ಈ ವೃಕ್ಷದ ಅಡಿಯಲ್ಲೇ ಕುಳಿತು ಅಖಂಡ ೪೯ ದಿನ ಧ್ಯಾನಿಸಿ,
ಜ್ಞಾನೋದಯವಾದ ಬುದ್ಧನಿಂದಾಗಿ ಇದಕ್ಕೆ ‘ಬೋಧಿ ವೃಕ್ಷ’ ಎನ್ನುವರು.

ಆನೆಗಳಿಗೆ ಇದರ ಎಲೆ ಪ್ರಿಯ ಖಾದ್ಯ ದ್ರವ್ಯ. ೪-೬ ದಿನ ಆನೆಗಳಿಗೆ ಇದರ ಎಲೆ ತಿನ್ನಲು ಸಿಗದಿದ್ದರೆ ಉನ್ಮತ್ತಗೊಳ್ಳುವುದಂತೆ. ಅದಕ್ಕೇ ಅಶ್ವತ್ಥಕ್ಕೆ
‘ಗಜಾಶನ, ಗಜಭಕ್ಷ್ಯ’ ಎಂಬ ಹೆಸರು ಬಂತು.

ಹಿಂದಿ ಹೆಸರು- ಪೀಪಲ್, ಪೀಪರ್

ಇಂಗ್ಲೀಷ್ನಲ್ಲಿ-sacred fig, peepul tree.

ಬಾಟನಿಕಲ್ ಹೆಸರು- Ficus religiosa. (Ficus rumphii ಇತ್ಯಾದಿ ಹಲವು ಪ್ರಭೇದಗಳಿವೆ)

ಅರಳಿಮರದಲ್ಲಿ ಭೂತಪ್ರೇತಗಳು ವಾಸಿಸುವುದಿಲ್ಲ ಎಂಬ ನಂಬಿಕೆ. ದೇವಸ್ಥಾನಗಳ ಸಮೀಪ ಅರಳೀಮರ,ಅಥವಾ ಅರಳೀಮರದ ಸಮೀಪ ದೇವಸ್ಥಾನಗಳು ಏಳುವುದು ಸಾಮಾನ್ಯ.

ಈ ಮರದ ಅಡಿಯಲ್ಲಿ ನಾಗನ ಕಲ್ಲುಗಳನಿಟ್ಟು ಪೂಜಿಸುವರು. ಮಕ್ಕಳಾಗದ ದಂಪತಿಗಳು ಅಶ್ವತ್ಥಕ್ಕೆ ಸುತ್ತು ಹಾಕಿ ನಾಗನ ಕಲ್ಲಿಗೆ ಪೂಜೆ ಸಲ್ಲಿಸಿದರೆ ಮಕ್ಕಳಾಗುವುದಂತೆ.

ಸಿನಿಮಾಗಳಲ್ಲಿ, ಅರಳೀ ಮರದ ಅಡಿಯ ಕಟ್ಟೆಯಲ್ಲಿ, ಹಳ್ಳಿಯ ಸಮಸ್ತ ಜನರು ಸೇರಿ, ಚರ್ಚೆ,ಜಗಳ,ನ್ಯಾಯತೀರ್ಮಾನ ಮಾಡುವುದನ್ನು ನೋಡಿಯೇ ಇರುತ್ತೀರಿ. ಕನ್ನಡದ ಹೆಸರಾಂತ, ಜನಪ್ರಿಯ ನಟ-ಅಶ್ವತ್ಥ.
*************************
ಆಲದ ಮರ- ಭಾರತದ ‘ರಾಷ್ಟ್ರವೃಕ್ಷ’.
ಹಿಂದಿಯಲ್ಲಿ ‘ಬರಗದ್’ ಎನ್ನುವರು.
ಇದರ ನೆರಳಲ್ಲಿ ಬನಿಯಾ(ಹಿಂದೂ ವರ್ತಕರು)ಗಳು ತಮ್ಮ ವ್ಯಾಪಾರ ಮಾಡುತ್ತಿದ್ದುದರಿಂದ ಇದನ್ನು banyan tree ಎಂದು ವಿದೇಶೀಯರು ಕರೆದರು.

ಸಂಸ್ಕೃತದಲ್ಲಿ ಇದನ್ನು ‘ನ್ಯಗ್ರೋಧ’ ಎಂದು ಕರೆಯುವರು. ಬಿಸಿಲು, ಮಳೆ ಕೆಳಗೆ
ಬೀಳುವುದರಿಂದ ತಡೆಯುವುದು ಎಂದು ಇದರ ಅರ್ಥ. ( ನ್ಯಕ್ ಅಧೋದೇಶೇ
ಸೂರ್ಯತಾಪ ವರ್ಷಾದಿ ರೋಧನಾತ್..)

ಬೆಂಗಳೂರಲ್ಲಿರುವ ದೊಡ್ಡಾಲದ ಮರವನ್ನು ನೋಡಲು ಮರೆಯದಿರಿ.
************************
ಅತ್ತಿಮರ-

ಸಂ - ಉದುಂಬರ.
ಹಿಂ - ಗೂಲರ್
ಬಾ.ಹೆಸರು - Ficus glomerata

ಇದರಲ್ಲಿ ಸಣ್ಣತ್ತಿ,ದೊಡ್ಡತ್ತಿ,ಕಲ್ಲತ್ತಿ,ನೀರು‌ಅತ್ತಿ ಎಂದು ಭೇದವಿದೆ.
ಸಿನೆಮಾ ಹಾಡು ‘ಅತ್ತಿಯಾ ಹಣ್ಣು ಅಂಜೂರವೇ..’ ನೆನಪಿದೆಯಾ?
***********************
ಈಗ ಒಂದು ಪ್ರಶ್ನೆ:
ಈ ಮೂರೂ ಮರಗಳ ಸಂಸ್ಕೃತ ಹೆಸರು ಒಟ್ಟಾಗಿ ‘ನ್ಯಗ್ರೋಧೋದುಂಬರೋsಶ್ವತ್ಥ’. ಅಲ್ಲವೇ.
ವಿಷ್ಣು ಸಹಸ್ರನಾಮದಲ್ಲಿ ೮೮ನೇ ಶ್ಲೋಕ-
‘ಸುಲಭಃ.. .. .. ..
ನ್ಯಗ್ರೋಧೋದುಂಬರೋಶ್ವತ್ಥಶ್ಚಾಣೂರಾಂಧ್ರ ನಿಷೂದನಃ’ ಎಂದಿದೆ.

ಸರ್ವ ವೃಕ್ಷಗಳಲ್ಲಿ ‘ಅಶ್ವತ್ಥ’ ನಾನೇ ಎಂದು ಗೀತೆಯಲ್ಲಿ ಕೃಷ್ಣ ಹೇಳಿರುವನು.
ನ್ಯಗ್ರೋಧ, ಉದುಂಬರ 'ವೃಕ್ಷಗಳೂ' ವಿಷ್ಣುವಿನ ಸಹಸ್ರ ನಾಮಗಳಲ್ಲಿ ಸೇರಿರುವುದೇ?

-ಗಣೇಶ.

  • ಜ್ಞಾನವಾಹಿನಿ
~.~
  • Login or register to post comments
  • 696 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 20, 2008 - 10:56am — Aravind M.S

ಉ: ಅರಳೀಮರ,ಆಲದಮರ,ಅತ್ತಿಮರ.

Aravind M.S's picture

ಗಣೇಶ್ ರವರಿಗೆ ನಮಸ್ಕಾರ,

ಲೇಖನಕ್ಕೆ ಧನ್ಯವಾದಗಳು. ಆಲದ ಮರಕ್ಕೆ ಕೆಳಗೆ ಸೂಚಿಸಿದ ಗುಣಗಳಿರುವುದರಿಂದ ಅದು ಪುರುಷಪ್ರಾಯವಾದುದೆಂದು, ತ್ರಿಮೂರ್ತಿಸ್ವರೂಪಿಯೆಂದು ಪರಿಗಣಿಸಲ್ಪಟ್ಟಿದೆ :
೧. ಇದರ ಬೇರುಗಳಿಂದ ಕಷಾಯ ಮಾಡಿ ಕುಡಿದರೆ ಗರ್ಭ ನಿಲ್ಲುತ್ತದೆ. ಆದ್ದರಿಂದ - ಬೇರುಗಳು ಬ್ರಹ್ಮ / ಸೃಷ್ಟಿಶಕ್ತಿಯ ಪ್ರತೀಕ
೨. ಇದರ ಕಾಂಡ, ಕೊಂಬೆಗಳು ಔಷದೀಯ ಗುಣಗಳು ಹೊಂದಿದೆ. ಇದರಿಂದ ಮಾಡುವ ಹೋಮದ ಧೂಪ ಆರೋಗ್ಯಕ್ಕೆ ಒಳ್ಳೆಯದು. ಆದ್ದರಿಂದ -ಕೊಂಬೆ, ಕಾಂಡ ವಿಷ್ಣು / ಸ್ಥಿತಿಶಕ್ತಿಯ ಪ್ರತೀಕ
೩. ಎಲೆ, ಚಿಗುರಿನ ಕಷಾಯ ಗರ್ಭ ಪಾತಕ್ಕೆ ಉಪಯೋಗಿಸಲಾಗುತ್ತದೆ. ಆದ್ದರಿಂದ - ಎಲೆಗಳು ರುದ್ರ / ಲಯಶಕ್ತಿಯ ಪ್ರತೀಕ

ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ "ನಾನು ವೃಕ್ಷಗಳಲ್ಲಿ ಅಶ್ವತ್ಥ, ಋಷಿಗಳಲ್ಲಿ ಕಶ್ಯಪ, ಮುಂತಾಗಿ ತನ್ನ ವಿಶ್ವರೂಪದರ್ಶನದಲ್ಲಿ ಹೇಳುತ್ತಾನೆ"

ಹೀಗೆ ಅರಳೀ ಮರ ಪುರುಷ ಸಂಕೇತವಾಗಿದೆ. ಅದೇ ರೀತಿ ಆಲದ ಮರ ಸ್ತ್ರೀ ಸಂಕೇತವಾಗಿದೆ (ಪ್ರಾಯಶಃ ಅದರ ಅಗಾಧ ಬೇರುಗಳ ಕಾರಣದಿಂದ). ಈ ಕಾರಣಗಳಿಂದ ಅರಳೀ ಮರ - ಆಲದ ಮರದ ವಿವಾಹದ ಆಚಾರವು ನಡೆಯುತ್ತವೆ

(ಸಂಗ್ರಹ - ವಿದುರಾಷ್ವತ್ಥ ಸ್ಥಳ ಪುರಾಣ)

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 20, 2008 - 2:17pm — benaka

ಉ: ಅರಳೀಮರ,ಆಲದಮರ,ಅತ್ತಿಮರ.

benaka's picture

ಅರಳೀಮರಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ.
ತಲೆಕೆಳಗಾದ ಅರಳೀಮರ ಇಡೀ ಬ್ರಹ್ಮಾಂಡದ ರೂಪವೆನ್ನುತ್ತದೆ ಭಗವದ್ಗೀತೆ!

ಹದಿನೈದನೇ ಅಧ್ಯಾಯವಾದ ಪುರುಷೋತ್ತಮಯೋಗದಲ್ಲಿ ಕೃಷ್ಣ ಹೀಗೆನ್ನುತ್ತಾನೆ:

ಊರ್ಧ್ವಮೂಲಮಧಃಶಾಖಂ ಅಶ್ವತ್ಥಂ ಪ್ರಾಹುರವ್ಯಯಂ|
ಛಂದಾಂಸಿ ಯಸ್ಯ ಪರ್ಣಾನಿ ಯಸ್ತಂ ವೇದ ಸ ವೇದವಿತ್|| (ಭ.ಗೀ.೧೫-೧)

->ಬುಡಮೇಲಾಗಿ, ಕೊಂಬೆಕೆಳಗಾದ ಅರಳಿಯನ್ನು ಅಳಿಯದೆನ್ನುವರು.
ಋಚೆ(ಛಂದಸ್ಸು)ಗಳೇ ಎಲೆಗಳಾಗಿರುವ ಈ ಮರವನರಿತವನು ವೇದಗಳ ತಿಳಿದಂತೆ!

ಅಧಶ್ಚೋರ್ಧ್ವಂ ಪ್ರಸೃತಾಸ್ತಸ್ಯ ಶಾಖಾ ಗುಣಪ್ರವೃದ್ಧಾ ವಿಷಯಪ್ರವಾಲಾಃ|
ಅಧಶ್ಚ ಮೂಲಾನ್ಯನುಸಂತತಾನಿ ಕರ್ಮಾನುಬಂಧೀನಿ ಮನುಷ್ಯಲೋಕೇ|| (ಭ.ಗೀ.೧೫-೨)

->ಕೆಳಗೂ ಮೇಲೆಯೂ ಹರಡಿರುವ ಅದರ ಟೊಂಗೆಗಳು ತ್ರಿಗುಣಾತ್ಮಕವಾಗಿ ಚಿಗುರೊಡೆದ ಐಹಿಕ ವಿಷಯಗಳು.
ಮೇಲಿನಿಂದ ಕೆಳಗೂ(ಬುಡದಿಂದ ಎಲೆವರೆಗೂ) ಜೋತುಬಿದ್ದಿರುವ ಬೇರುಗಳು ಮನುಜಲೋಕದ ಕರ್ಮಬಂಧನವನ್ನು ತೋರುತ್ತವೆ!

ನಿಮ್ಮವ

ಬೆನಕ

ಕನ್ನಡಪುಟ.ಬ್ಲಾಗ್‍ಸ್ಪಾಟ್.ಕಾಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 20, 2008 - 11:41pm — ಗಣೇಶ

ಉ: ಅರಳೀಮರ,ಆಲದಮರ,ಅತ್ತಿಮರ.

ಗಣೇಶ's picture

ಅಶ್ವತ್ಥ ಮತ್ತು ಆಲದ ಬಗ್ಗೆ ಇನ್ನಷ್ಟು ವಿವರ ನೀಡಿದ ಅರವಿಂದ ಮತ್ತು ಬೆನಕರಿಗೆ ಧನ್ಯವಾದಗಳು.
-ಗಣೇಶ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೆಸರು ಬರೆಯುವುದು ಹೇಗೆ?
  • ಹಣ್ಣುಗಳು
  • ಒಂದೆಲಗ (ಬ್ರಾಹ್ಮಿ)
  • ನಿನ್ನ ಹೆಸರು
  • Avestan ವೇದ-ಭಾಷೆಯ ಮಾತೃಭಾಷೆ.
Syndicate content

ಲೇಖಕರು

ಗಣೇಶ's picture

ಪರಿಚಯ

ಕನ್ನಡ ಬಲು ಇಷ್ಟ
ಇಂಗ್ಲೀಷ್/ಕಂಪ್ಯೂಟರ್ ಸ್ವಲ್ಪ ಕಷ್ಟ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
  • ಕೊಲಂಬಿಯ ಪಟ್ಟಣದ ಸಂತೆ !
  • ವಾರಾಂತ್ಯ ಹೇಗಿತ್ತು?
  • ಬಾಲ್ಯದ ನೆನಪುಗಳು
  • ಖಾಲಿ ಹಾಳೆ"
  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 138 ಅತಿಥಿಗಳು ಆನ್ಲೈನ್ ಇರುವರು.


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator