Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ವಚನ ಚಿಂತನ: ೭: ಮನಸ್ಸು – ಆಸೆ - ಮಾಯೆ

August 3, 2005 - 6:14am — olnswamy

ಹೊನ್ನು ಮಾಯೆಯೆಂಬರು
ಹೊನ್ನು ಮಾಯೆಯಲ್ಲ
ಹೆಣ್ಣು ಮಾಯೆಯೆಂಬರು
ಹೆಣ್ಣು ಮಾಯೆಯಲ್ಲ
ಮಣ್ಣು ಮಾಯೆಯಂಬರು
ಮಣ್ಣು ಮಾಯೆಯಲ್ಲ
ಮನದ ಮುಂದಣ ಆಶೆಯೇ ಮಾಯೆ
ಗುಹೇಶ್ವರ

ಮಾಯೆಯ ಬಗ್ಗೆ ಬಹಳ ಜನ ಮಾತಾಡುತ್ತಾರೆ. ಇಲ್ಲಿ ಅಲ್ಲಮ ಮಾಯೆಯನ್ನು ವಿವರಿಸುವ ರೀತಿ ಬೇರೆಯಾಗಿದೆ.
ಮಾಯೆ ಹೊರಗೆ ಎಲ್ಲೋ ಇಲ್ಲ. ಈ ಲೋಕವೂ ಮಾಯೆ ಅಲ್ಲ. ಹೊನ್ನು, ಹೆಣ್ಣು, ಮಣ್ಣುಗಳು ಮಾಯೆಯಲ್ಲ. ಮಾಯೆ ಎಂಬುದು ಹಾಗೆ ಇಲ್ಲವೇ ಇಲ್ಲ. ಮಾಯೆ ಎಂಬುದು ಇದ್ದರೆ ಅದು ಮನಸ್ಸಿನಲ್ಲಿ ಮೂಡುವ ಆಸೆಗಳಲ್ಲದೆ ಬೇರೆ ಏನೂ ಅಲ್ಲ.
ಕೊಂಚ ವಿವರವಾಗಿ ನೋಡೋಣ. ಹೆಣ್ಣನ್ನು ಕಂಡು ಮನಸ್ಸಿನಲ್ಲಿ ಆಸೆ ಮೂಡೀತು. ಅದಕ್ಕೆ ಆ ಹೆಣ್ಣೇ ಕಾರಣ ಅಂದುಬಿಡುವುದು ಸುಲಭದ, ಬೇಜವಾಬ್ದಾರಿಯ ಮಾತು. ಆಸೆ ಹುಟ್ಟಿದ್ದು ನನ್ನ ಮನಸ್ಸಿನಲ್ಲಿ ಎಂಬ ಅರಿವನ್ನು ಮರೆತಾಗ ಹೆಣ್ಣು ಮಾಯೆ ಎಂದು ಅದರಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಟ್ಟುಪಾಡು, ವಿಧಿ ವಿಧಾನಗಳು, ತಪಸ್ಸು ಕಠಿಣ ಶಿಕ್ಷೆಗಳು, ಧರ್ಮಶಾಸ್ತ್ರಗಳು ಹುಟ್ಟಿಕೊಳ್ಳುತ್ತವೆ. ಆಸೆ ಹುಟ್ಟಿದ್ದು ಮನಸ್ಸಿನೊಳಗೆ ಎಂದು ಅರಿತರೆ ಹೆಣ್ಣನ್ನು ಕುರಿತ ಧೋರಣೆಯೇ ಬದಲಾದೀತು.
ಇದೇ ಮಾತು ಹೊನ್ನಿಗೂ ಸರಿಯೇ. ದುಡ್ಡು ಬೇಕು ಅನ್ನುವುದು ನನ್ನ ಮನಸ್ಸಿನ ಆಸೆ. ದುಡ್ಡೇನೂ ಹಾಗೆ ತನ್ನನ್ನು ಕೂಡಿಟ್ಟುಕೋ ಎನ್ನುವುದಿಲ್ಲವಲ್ಲ. ಭೂಮಿಯಂತೂ ಯಾರದೂ ಅಲ್ಲ, ಆದ್ದರಿಂದಲೇ ಎಲ್ಲರದೂ ಹೌದು. ಆದರೆ ಭೂಮಿ ನನ್ನದೇ ಆಗಬೇಕೆಂಬ ಆಸೆ ಮಾತ್ರ ಮನಸ್ಸಿನೊಳಗೇ ಹುಟ್ಟಿದ್ದು.
ಆಸೆ ವಸ್ತುಗಳಲ್ಲಿ ಇಲ್ಲ, ಬಯಸುವ ಮನಸ್ಸಿನಲ್ಲಿ ಇದೆ. ಹಾಗೆ ಬಯಸುವುದು ಸಹಜ ಎಂದು ನಂಬಿಸುವ ನಮ್ಮ ಸಾಮಾಜಿಕ ಧೋರಣೆಗಳಲ್ಲಿ ಇವೆ.
ನಾವೇ ಹುಟ್ಟಿಸಿಕೊಂಡ ಆಸೆಗಳ ಮೂಲವನ್ನು ನಮ್ಮಿಂದ ಆಚೆ ಹುಡುಕುತ್ತ, ಆ ಹೊರಗಿನ ಸಂಗತಿಗಳು ನಮ್ಮನ್ನು ಕಟ್ಟಿಹಾಕಿವೆ ಎಂದು ಗೊಣಗುತ್ತ, ಪಾರಾಗಲು ಪರಿತಪಿಸುತ್ತ ಇರುವುದೇ ಬಲು ದೊಡ್ಡ ಮಾಯೆ ಇದ್ದೀತು. ಮನದ ಮುಂದಣ ಆಸೆಯೇ ಮಾಯೆ ಎಂಬುದು ನಮ್ಮನ್ನು ನಾವು ನೋಡಿ ಅರಿಯಲು ಇರುವ ಬಲು ದೊಡ್ಡ ಮಂತ್ರ ಅನ್ನಿಸುತ್ತದೆ.

  • ಚಿಂತನೆ
Ornamental seperator
  • Login or register to post comments
  • 1137 hits
  • Email this page
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 27, 2008 - 12:42pm — girish.rajanal

ಉ: ವಚನ ಚಿಂತನ: ೭: ಮನಸ್ಸು – ಆಸೆ - ಮಾಯೆ

girish.rajanal's picture

ಬಹಳ ಚೆನ್ನಾಗಿದೆ ಸರ್‍ ನಿಮ್ಮ ವಿವರಣೆ. ಶರಣರು ಹುಟ್ಟಿದ ನಾಡು ಕರುನಾಡಿನಲ್ಲಿ ಹುಟ್ಟಿದ್ದು ನನ್ನ ಹಿಂದಿನ ಜನುಮದ ಪುಣ್ಯ.
ನಿಮ್ಮ,
ಗಿರೀಶ ರಾಜನಾಳ
ನನಗಿರುವುದು ಒಂದೇ ಕನ್ನಡ.

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾರಾಯಣ ಸ್ಮರಣೆ ಸಾಕು. ಅಲ್ಲಮ್ಮನ ಸ್ಮರಣೆ ಮಾಡುವ. ಸ್ತುತಿ ನಿ೦ದೆಗೆ ಕಿವುಡನಾಗಿರ ಬೇಕು.
  • ಶ್ರೀಬಸವೇಶ್ವರರ ವಚನಗಳು
  • ವಚನ ಚಿಂತನ: ೯: ಸುಮ್ಮಸುಮ್ಮನೆ ದುಃಖ!
  • OLN ರವರ ಪುಸ್ತಕ - ಲೋಕಾಂತ ಏಕಾಂತ
  • ಅನನ್ಯ ಅಲ್ಲಮ (೫)
Syndicate content

ಲೇಖಕರು

olnswamy's picture

ಪರಿಚಯ

ಅಧ್ಯಾಪಕ, ಸಾಹಿತ್ಯ ವಿದ್ಯಾರ್ಥಿ, ಓದುಗ, ಲೇಖಕ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಮೇ, 23, ರಿಂದ ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಧಿಕೃತವಾಗಿ ವಿಮಾನಯಾನ ಪ್ರಾರಂಭಿಸಲಿದೆ !
  • ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
  • ಕಲಿತರೆ ಹೀಗೆ...
  • ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
  • 'ವಿಧ್ಯಾರ್ಥಿಗೂ.......ಕಲೆಗೂ' ಮಧ್ಯ ಇರೋ ಕಲಾ ವಿದ್ಯಾರ್ಥಿಯ 'ಖಾಲಿ' ಮೂರ್ತ ರೂಪ
  • ರವಿವರ್ಮನ ನಾಡಿನಲ್ಲೊ೦ದು ವಾರ
  • ಅನನ್ಯ ಅಲ್ಲಮ - ೮

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 10 ಅತಿಥಿಗಳು ಆನ್ಲೈನ್ ಇರುವರು.

ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.

— ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator