"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "
ಸಂಪದದಲ್ಲಿ...
ನನ್ನ ಹಳ್ಳಿ
ನನ್ನ ಹಳ್ಳಿ
ಹಳ್ಳಿಯ ಸೌಂದರ್ಯ ಸೊಬಗು
ಹಚ್ಚ ಹಸಿರಿನ ಕಾಂತಿಯ ಮೆರಗು
ದಟ್ಟವಾದ ಮರಗಳ ಸಾಲು
ಪ್ರಕೃತಿಯ ಉಳಿವಿಗೆ ಇದರ ಸವಾಲು
ತಣ್ಣನೆಯ ಗಾಳಿಯ ತಂಪು
ಸೊಗಸಾದ ಹಕ್ಕಿಯ ಧ್ವನಿಯ ಇಂಪು
ಸತ್ಯ ನಿಷ್ಟತೆಗೆ ಹೆಸರಾದ ಜನ
ಮೋಸವರಿಯದ ಮುಗ್ಧ ಜನ
ಅಜ್ಜಿಯು ಹೇಳುವ ಚೆಂದದ ಕಥೆ
ಮಾಸಿಹೋದ ನೆನಪುಗಳ ವ್ಯಥೆ
ಜನರಾಡುವ ಕಸ್ತೂರಿ ಕನ್ನಡ
ಕೇಳಲು ನಿಂತರೆ ಮಹಾದಾನಂದ
ಉಳಿದಿದೆ ಸಂಸ್ಕೃತಿಯ ಬೇರು
ಸರ್ವರೂ ಒಂದಾಗಿ ಬಾಳುವ ಊರು
ಹುಟ್ಟಿದರೆ ಹುಟ್ಟಬೇಕು ಹಳ್ಳಿಯಲಿ
ಸೌಂದರ್ಯ ಸಾರುವ ಶಾಂತಿಧಾಮದಲಿ
-* ಮಾ.ಕೃ.ಮ*
- Login or register to post comments
- 751 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version


RSS: