August 11, 2012 - 11:20am
ಸೆಳೆದಿಹುದು ಎಳೆಯ ಮುಗುದನ ಚೆಲ್ವ ರೂಪವಿದು
ಕೊಳಲ ನಾದದಿ ತಂಪನೆರೆಯುತಿಹ ಮೊಗದ
ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ
ತಿಳಿಸುತಲಿವನ ಸೊಗವ ತುಸುವಾದರೂ!
ಸಂಸ್ಕೃತ ಮೂಲ (ಲೀಲಾಶುಕನ ಕೃಷ್ಣ ಕರ್ಣಾಮೃತ, ಮೊದಲ ಆಶ್ವಾಸ, ಪದ್ಯ ೭) :
ಕಮನೀಯ ಕಿಶೋರ ಮುಗ್ಧ ಮೂರ್ತೇಃ
ಕಲವೇಣುಕ್ವಣಿತಾರ್ದ್ರಾನನೇಂದೋಃ
ಮಮ ವಾಚಿ ವಿಜೃಂಭತಾಂ ಮುರಾರೇಃ
ಮಧುರಿಂಣಃ ಕಣಿಕಾಪಿ ಕಾಪಿ ಕಾಪಿ
-ಹಂಸಾನಂದಿ
ಚಿತ್ರ ಕೃಪೆ: ಪೂರ್ಣಿಮಾ ರಾಮಪ್ರಸಾದ್
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:









ಪ್ರತಿಕ್ರಿಯೆಗಳು
ಉ: ಎಳೆಯನ ಚೆಲುವು
>>ಕಳೆಯಿನಿತು ಬರಲೆನ್ನ ಪದಗಳಲಿ ಅತಿಶಯದಿ>
ನುಡಿಗಳಲಿ ಎಂದಿದ್ದರೆ ಒಪ್ಪುವುದಲ್ಲವೆ? (ವಾಚಿ)