ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಸುಧಾ ಮ್ಯಾಗಜೀನ್ ಓದಲು ಒಂದು ಫೈರ್ಫಾಕ್ಸ್ ಪ್ಲಗಿನ್

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಬೆಂಗಳೂರಿನ ನೆಲ

October 17, 2007 - 5:46am — anivaasi

ಬೆಂಗಳೂರಿನ ದಾರಿಯಲ್ಲಿ ಸಿಕ್ಕುವ ಸಿಂಗಪುರವೋ, ಕೌಲಾಲಂಪುರವೋ ಬಂದು ಮುಟ್ಟುವವರೆಗೂ ಎಲ್ಲಾ ಯಾಂತ್ರಿಕವಾಗಿ ಆಗತ್ತೆ. ಸಿಡ್ನಿಯಲ್ಲಿ ಬ್ಯಾಗೇಜ್ ಚಕಿನ್, ಸಿಂಗಪುರದಲ್ಲಿ ಇಳಿದು, ಏರ್ಪೋರ್ಟ್‌ ಸುತ್ತಿ, ಮತ್ತೆ ವಿಮಾನ ಹತ್ತುವುದು ಎಲ್ಲ. ಆದರೆ ಅಲ್ಲಿಂದ ಮತ್ತೆ ವಿಮಾನದಲ್ಲಿ ಹಾರುವಾಗ, ನೆಲ ನನ್ನಿಂದ ದೂರ ಸರಿಯುವಾಗ ಅಲ್ಲಿಯವರೆಗಿದ್ದ ಯಾಂತ್ರಿಕತೆ ಮಾಯವಾಗಿ ಒಂದು ರೀತಿಯ ಮಾಂತ್ರಿಕತೆ, ಭಾವುಕತೆ ಆವರಿಸಿಕೊಳ್ಳುವುದು ಪ್ರತಿ ಸಲದ ಅನುಭವ.

ಈ ಸಲವೂ ಸಿಂಗಪುರದಿಂದ ವಿಮಾನ ಮೇಲೇರುತ್ತಿದ್ದಂತೆ ವಿಚಿತ್ರವಾಗಿ ಕವಿಯುವ ಈ ಭಾವ ಏನು ಅಂತ ಪ್ರತಿಸಲದಂತೆ ನೋಡಿಕೊಳ್ಳುತ್ತೇನೆ. ನಾನೀಗ ಇಲ್ಲಿ ಬಿಡುತ್ತಿರುವ ನೆಲವನ್ನ ಮತ್ತೆ ಮುಟ್ಟುವುದು ಇಂಡಿಯಾದಲ್ಲಿ, ನನ್ನ ಪ್ರೀತಿಯ ಬೆಂಗಳೂರಲ್ಲಿ ಅನ್ನುವುದು ದಟ್ಟವಾಗಿ ಸುತ್ತಿಕೊಂಡಿತು. ಎರಡೆರಡು ವರ್ಷಕ್ಕೊಮ್ಮೆ ಬರುತ್ತಿದ್ದರೂ ಇದೇನು ಹೀಗೆ ಅಂತ ತಿಳಿಯುವುದಿಲ್ಲ.

ನೆಲದಲ್ಲಿ ರಾತ್ರಿ ದೀಪಗಳ ಚುಕ್ಕೆಯಲ್ಲಿ ಹರಡಿಕೊಂಡಿರುವ ಬೆಂಗಳೂರು ಪ್ರತಿಸಲವೂ ಸುಂದರವಾಗಿ ಕಾಣತ್ತೆ. ಪಿಳಿಪಿಳಿಸುವ ದೀಪದಲ್ಲಿ ಈಗೀಗ ಬಿಳಿ ಮತ್ತು ಕಿತ್ತಳೆ ಬಣ್ಣ ಕೂಡಿಕೊಂಡಿದೆ. ವಿಮಾನ ಇಳಿಯುತ್ತಿದ್ದಂತೆ ಕಾಣುವ ರಸ್ತೆಗಳಲ್ಲಿ ಓಡಾಡುವ ವಾಹನಗಳು ಕೂಡ ಸಣ್ಣ ಮಗುವಿನಂತೆ ಒಳಗೊಳಗೇ ರೋಮಾಂಚನ ಬೆಂಗಳೂರನ್ನು ತಬ್ಬಿಕೊಳ್ಳುವಂತೆ ವಿಮಾನ ನೇರವಾಗಿ ಆ ದೀಪಗಳ ರಾಶಿಯ ನಡುವೇ ಇಳಿಯುತ್ತದೆ, ನೆಲ ಮುಟ್ಟುತ್ತದೆ, ತೆವಳಿ ಬಂದು ನಿಲ್ಲುತ್ತದೆ. ಇವೆಲ್ಲಾ ಏನನ್ನೋ ಎದುರು ನೋಡುತ್ತಿರುವ ಕಾತರದಲ್ಲಿ ತುಂಬಾ ದೀರ್ಘ ಅನಿಸುತ್ತಿದೆ.

ಹೊರಗೆ ಮಳೆಯಲ್ಲಿ ತೇವವಾದ ನೆಲ ಏರ್ಪೋರ್ಟಿನ ದೊಡ್ಡ ದೊಡ್ಡ ದೀಪಗಳ ಬೆಳಕಲ್ಲಿ ಮಿರಿಮಿರಿ ಮಿಂಚುತ್ತಿದ್ದೆ. ಇಳಿಯುವ ಕಾತರ. ವಿಮಾನಕ್ಕೆ ಸಿಕ್ಕಿಸಿದ ತೂಬಿಗೆ ಕಾಲಿಡುತ್ತಿದ್ದಂತೆ ತೂಬಿನ ಮಾಡು ತೂತಾಗಿ ಮಳೆಯ ನೀರು ದಳದಳ ಎಂದು ಸುರಿಯುತ್ತಿದೆ. ಅಲ್ಲಿ ಕಾಲಿಟ್ಟು ಜಾರದಿರಲಿ ಎಂದು ದಿನಪತ್ರಿಕೆಯ ಹಾಳೆಗಳನ್ನೆಲ್ಲಾ ಹರಡಿದ್ದಾರೆ. ಅದು ಇನ್ನೂ ಪಿತಪಿತ ಮಾಡಿಬಿಟ್ಟಿದೆ. ಒಳಗೊಳಗೇ ನಗುತ್ತೇನೆ. ಭಾವುಕನಾಗಿರಲು ಬೆಂಗಳೂರು ಬಿಡುವುದಿಲ್ಲ. ಇಮ್ಮಿಗ್ರೇಷನ್‌ನವ ಕಣ್ಣಿಗೆ ಕಣ್ಣು ಕೊಡಲಿಲ್ಲ. ಕನ್ನಡದಲ್ಲಿ ಮಾತಾಡಲು ಸಿಕ್ಕುವ ಮೊದಲಿಗ. ಮಾತಾಡಲಿಲ್ಲ. ಕ್ಷಣದಲ್ಲಿ ಪಾಸ್‌ಪೋರ್ಟ್ ಗುದ್ದಿ ನನ್ನತ್ತ ತಳ್ಳಿ ನನ್ನ ಹಿಂದಿನವರನ್ನು ಕೈಬೀಸಿ ಕರೆದ. ಥ್ಯಾಂಕ್ಸ್ ಹೇಳಿ ಹೊರ ಬಂದೆ.

ಅಲ್ಲಿಂದ ಕೆಳಗಿಳಿಯುವ ಎಸ್ಕಲೇಟರ್‍ ಕೆಟ್ಟಿರಬೇಕು. ಆದರೆ ಅದರ ತುಂಬಾ ಮತ್ತು ಪಕ್ಕದ ಮೆಟ್ಟಿಲ ತುಂಬಾ ಜನ. ಏನೋ ಅನಾಹುತ ಆದವರಂತೆ ತುಂಬಿಕೊಂಡಿದ್ದರು. ಓಹೋ. ಕೆಳಗೆ ಹಾಲಿನಲ್ಲಿ ಕಿಕ್ಕಿರಿದಿರುವ ಜನ. ಸ್ಥಳವಿಲ್ಲ. ಅದಕ್ಕೆ ಎಸ್ಕೆಲೇಟರ್‍ ಆರಿಸಿದ್ದಾರೆ. ಮನೆಯವರನ್ನು ಕಾಣುವ ಕಾತರದ ಕೊನೆಯ ಕ್ಷಣಗಳು. ಸುಲಭವಲ್ಲ. ತಿಣಕಿ, ತೂರಿ, ಹಾರಿ, ನನ್ನ ಸಾಮಾನು ಪಡೆದು ಹೊರಬಂದೆ.

ಹೌದು ಬೆಂಗಳೂರು ಭಾವುಕನಾಗಿರಲು ಬಿಡುವುದಿಲ್ಲ. ಒಳಗೊಳಗೇ ಪ್ರೀತಿಯಿಂದ ನಕ್ಕೆ.

~.~
  • anivaasi ರವರ ಬ್ಲಾಗ್
  • Login or register to post comments
  • 381 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 17, 2007 - 8:48am — ವೈಭವ

ಉ: ಬೆಂಗಳೂರಿನ ನೆಲ

ವೈಭವ's picture

ನಿಮ್ಮ ಪಳಗು/ಅನುಭವ ನನಗೂ ಆಗಿದೆ. ಇನ್ನೊಂದು ಮೊದಲ ಬಾರಿ ನಾನು ಹಾರಿದಾಗ ಸನ್ ಪ್ರಾನ್ಸಿಸ್ಕೊದಲ್ಲಿ ಏನೋ ಪೆಸಿಪಿಕ್ ಒಳಗೆ ಬಾನೋಡ ಇಳೀತಾ ಇದೆ ಅನ್ಸುತ್ತೆ.

ಮೇಲಿಂದ ನಮ್ಮ ಬೆಂದಕಾಳೂರು ಬೊಂಬಾಟ್. !!

----
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 17, 2007 - 9:17am — kpbolumbu

ಉ: ಬೆಂಗಳೂರಿನ ನೆಲ

kpbolumbu's picture

Quote:
ಕನ್ನಡದಲ್ಲಿ ಮಾತಾಡಲು ಸಿಕ್ಕುವ ಮೊದಲಿಗ. ಮಾತಾಡಲಿಲ್ಲ.............ಭಾವುಕನಾಗಿರಲು ಬೆಂಗಳೂರು ಬಿಡುವುದಿಲ್ಲ.

ಇ೦ತಹ ಅನುಭವಗಳು ನನಗ೦ತೂ ಪ್ರೀತಿಯನ್ನೂ ನಗುವನ್ನೂ ತ೦ದುಕೊಡಲಿಲ್ಲ, ನಿಮಗೆ ಅಡ್ಡಬೀಳಲೇ ಬೇಕು. Eye-wink
_______________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೃಷ್ಣಪ್ರಕಾಶ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 17, 2007 - 9:41am — mahesha

ಉ: ಬೆಂಗಳೂರಿನ ನೆಲ

mahesha's picture

ನಮ್ಮ ಬೆಂಗಳೂರಿಗೆ ನಿಮಗೆ ನಲ್ವರವು! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 17, 2007 - 12:02pm — hpn

ಉ: ಬೆಂಗಳೂರಿನ ನೆಲ

hpn's picture

ಬೆಂಗಳೂರಿಗೆ ಸ್ವಾಗತ. Smiling

ಅನಿವಾಸಿಯವರು ಹಾಗಾದರೆ ಇನ್ನು ಕೆಲವು ದಿನಗಳ ಮಟ್ಟಿಗೆ ಬೆಂಗಳೂರು ನಿವಾಸಿ. Eye-wink
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.
  • ಬೆಂಗಳೂರಿಗೆ ವಿದಾಯ
  • ಒಂದು ಜೋಕ್ಸ (??????)
  • ಮೇ, 23, ರಿಂದ ದೇವನಹಳ್ಳಿಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಧಿಕೃತವಾಗಿ ವಿಮಾನಯಾನ ಪ್ರಾರಂಭಿಸಲಿದೆ !
  • ಬೆಂಗಳೂರು ವಿಮಾನ ನಿಲ್ದಾಣ
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಮಳೆನೀರು ಹಿಡಿದ ಎಲೆಗಳು

(ಫೋಟೋ: Girish M G)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೇ ನೀರೆ
  • ಸಂಗಾತಿ
  • ಮೌನ
  • 'ರೀ’ ಅನ್ನುವ ಒಂದೇ ಸ್ವರ
  • ಓದಿದ್ದು ಕೇಳಿದ್ದು ನೋಡಿದ್ದು-86 ನಗೆಪತ್ರಿಕೆ "ವಾರೆಕೋರೆ" ಓದಿ; ಇನ್ನು ನೀವೂ 32 ಹಲ್ಲುಗಳನ್ನು ತೂರಿಸಿ ನಗಬಲ್ಲಿರಿ!
  • ನವಗ್ರಹ ಚಿತ್ರದ ಬಗ್ಗೆ ನನ್ನ ವಿಮರ್ಶೆ/ಅನಿಸಿಕೆ.
  • ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
  • ಕದ್ದ ಹಾಸ್ಯ ಚಟಾಕಿಗಳು
  • ಧ್ವನಿ ಮತ್ತು ವೀಡಿಯೊ ಚಾಟ್
  • ನಾನು ಈರುಳ್ಳಿ ಆಲುಗೆಡ್ಡೆ ಹುಳಿ ಮಾಡುವ ವಿಧಾನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • manjunath s reddy
    ಉ: ನವೆಂಬರ್ ೧೮
    November 21, 2008 - 12:09am
  • manjunath s reddy
    ಉ: ನವೆಂಬರ್ ೧೮
    November 21, 2008 - 12:06am
  • manjunath s reddy
    ಉ: ಈರುಳ್ಳಿ ಆಲುಗೆಡ್ಡೆ ಹುಳಿ ಮತ್ತು ನನ್ನ ಧರ್ಮಪತ್ನಿ
    November 20, 2008 - 11:41pm
  • kalpana
    ಉ: 'ರೀ’ ಅನ್ನುವ ಒಂದೇ ಸ್ವರ
    November 20, 2008 - 11:19pm
  • kalpana
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:11pm
  • hamsanandi
    ಉ: ಕನ್ನಡೀಕರಿಸಿದ ಶ್ಲೋಕಗಳು - ೧
    November 20, 2008 - 11:04pm
  • palachandra
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 11:02pm
  • hamsanandi
    ಉ: ನಿದಾನ, ನಿಧಾನ
    November 20, 2008 - 10:55pm
  • hamsanandi
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 20, 2008 - 10:49pm
  • kannadakanda
    ಉ: ತರುಣ, ತಱುಣ
    November 20, 2008 - 10:28pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 277 ಅತಿಥಿಗಳು ಆನ್ಲೈನ್ ಇರುವರು.


"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."

— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator