ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಮಂಪರಿನಲ್ಲಿ ಘಾಟಿ

October 22, 2007 - 7:49pm — anivaasi
ಬೆಂಗಳೂರಿನಿಂದ ಮೂಡುಬಿದ್ರೆಯ ದಾರಿಯಲ್ಲಿ ತೆವಳುತ್ತಿರುವ ಬಸ್ಸು. ನಡುರಾತ್ರಿ. ಬಸ್ಸಿನ ಅಲ್ಪ ಬೆಳಕಿನಲ್ಲಿ ಸರಿದು ಹೋಗುತ್ತಿದ್ದ ಮನೆ, ಅಂಗಳ, ಹಿತ್ತಲು, ಹಾಡಿ, ಕಾಡು... ಬಸ್ಸಿನ ಕ್ಷಣಿಕ ಬೆಳಕಿನಲ್ಲಿ ತೋರಿ ಕಾಣೆಯಾಗುತ್ತಿದ್ದ ದೇವಸ್ಥಾನ, ಮಸೀದಿ, ಇಗರ್ಜಿ ಗೋಪುರಗಳು... ಮತ್ತೆ ಕತ್ತಲೆಯಲ್ಲಿ ಕಾಡು ಬೇಲಿ ಇತ್ಯಾದಿ.

ಸಣ್ಣವನಿದ್ದಾಗ ಘಾಟಿ ಇಳಿದು ಹತ್ತುವುದನ್ನು ನೋಡುವ ಕುತೂಹಲದಲ್ಲಿ ಇವೆಲ್ಲವನ್ನು ಅರ್ಧ ಮಂಪರಿನಲ್ಲಿ ನೋಡುತ್ತಾ ನಿದ್ದೆ ಹತ್ತಿಬಿಡುತ್ತಿತ್ತು. ಘಾಟಿ ಹತ್ತಿ ಇಳಿಯುವುದು ಹಲವು ಸಲ ಸಿಕ್ಕುತ್ತಿರಲಿಲ್ಲ. ಆದರೆ, ಈ ಸಲ ಹಾಗಾಗಲಿಲ್ಲ. ಜೆಟ್‌ಲಾಗಿನ ಅವಾಂತರದಲ್ಲಿ ಎಚ್ಚರವಿತ್ತು. ಮನಸ್ಸಿನಲ್ಲಿ ನೆನಪುಗಳು ಬೆಚ್ಚಗೆ ಅರಳುತ್ತಿದ್ದವು. ಸಣ್ಣ ಮಗುವಿನ ಹಾಗೇ ಇವನ್ನೆಲ್ಲಾ ನೋಡುತ್ತಿದ್ದೇನೆ, ಅದೇ ಮಂಪರಿನಲ್ಲಿ, ಘಾಟಿಯ ಬರುವಿಕೆಯ ಕುತೂಹಲದಲ್ಲಿ ಅನಿಸುತ್ತಿತ್ತು!

ಬಸ್ಸು ಯಾಕೋ ತುಂಬಾ ತಡವಾಗಿ ಚಾರ್ಮಾಡಿ ಘಾಟಿ ತಲುಪಿತ್ತು. ಮುಂಜಾವದ ಬೆಳಕಲ್ಲಿ ಕಾತರದ ಮನಸ್ಸನ್ನು ಚೇಡಿಸುವಂತೆ ಮೆಲ್ಲನೆ ದೂರದ ಗುಡ್ಡ ಬೆಟ್ಟ ಮೋಡ ಎಲ್ಲ ಕಾಣತೊಡಗಿತು.

ಸರಕ್ಕನೆ ಇಳಿಯಬೇಕಾದ ಘಾಟಿಯ ಇಳಿಜಾರಿನಲ್ಲಿ ಏಕಾಏಕಿ ನಿಂತುಬಿಟ್ಟ ಬಸ್ಸು. ಮುಂದೆ ಹತ್ತಾರು ಬಸ್ಸು ಲಾರಿ ವಾಹನಗಳ ಸಾಲು. ತುಂಬಾ ಇಕ್ಕಟ್ಟಾದ ದಾರಿಯಲ್ಲಿ ಮುಂದಿಂದ ಬರುವ ವಾಹನಗಳನ್ನು ಸಂಬಾಳಿಸಿಕೊಂಡು ಹೋಗಬೇಕು. ಕೆಲವು ತಿರುವುಗಳಲ್ಲಿ ಅರ್ಧ ಮುಕ್ಕಾಲು ಗಂಟೆ ನಿಂತುಬಿಡುತಿತ್ತು. ಶಿರಾಡಿ ಘಾಟಿ ಮುಚ್ಚಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡರಷ್ಷು ಗಾಡಿಗಳು. ನಿಂತ ಬಸ್ಸಿಂದ ಇಳಿದು ಅಡ್ಡಾಡುತ್ತಾ, ಸರ್ಕಾರವನ್ನು ಬಯ್ಯುತ್ತಾ ಕಾಲದೂಡುತ್ತಿದ್ದ ಮಂದಿ. ಹೀಗೆ ಮೆಲ್ಲನೆ ತೆವಳಿ ಇಳಿಯುವಾಗ ನಾಕೈದು ಗಂಟೆ ಕಳೆದು ಬಿಟ್ಟಿತ್ತು. ಬೆಳಕು ಚೆನ್ನಾಗಿಯೇ ಹರಿದಿತ್ತು.

ಅರೆ ಮಂಪರಿನಲ್ಲಿ ಘಾಟಿ ಇಳಿಯುವ ಕಾರ್ಯಕ್ರಮವನ್ನು ಇಷ್ಟವಿಲ್ಲದಿದ್ದರೂ ಮತ್ತೊಂದು ದಿನಕ್ಕೆ ಮುಂದೂಡಬೇಕಾಯಿತು.

~.~
  • anivaasi ರವರ ಬ್ಲಾಗ್
  • Login or register to post comments
  • 323 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 22, 2007 - 8:52pm — ವೈಭವ

ಉ: ಮಂಪರಿನಲ್ಲಿ ಘಾಟಿ

ವೈಭವ's picture

ಮೂಡುಬಿದಿರೆ ಅಂದೊಡನೆ ನೆನಪಿಗೆ ಬರುವ ಸಾವಿರ ಕಂಬದ ಬಸದಿ ಚಿತ್ರ ಹಾಕಿದ್ದರೆ ಚೆನ್ನಾಗಿತ್ತು.

ಆದರೂ ಎಲ್ಲವನ್ನು ಬರೆವಣಿಗೆಗೆ ಇಳಿಸುವ ನಿಮ್ಮ ಅಲುವಾಟ/ಅಬ್ಯಾಸ ಸಕ್ಕತ್.

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 22, 2007 - 10:19pm — anivaasi

ಉ: ಮಂಪರಿನಲ್ಲಿ ಘಾಟಿ

anivaasi's picture

ಸಾವಿರ ಕಂಬದ ಬಸದಿ ಒಳಗೆ ಚಿತ್ರ ತೆಗೆಯಲು ಬಿಡಲ್ಲ... ಹೊರಗೆ ಸುತ್ತ ಮುತ್ತ ಒಂದೆರಡು ಚಿತ್ರ ತೆಗೆದೆ.. ಯಾವಾಗಲಾದರೂ ಹಾಕ್ತೀನಿ... ಆದರೆ ಇಲ್ಲಿ ಘಾಟಿ ಚಿತ್ರ ಸಾಕು ಅನ್ನಿಸಿತು Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
October 23, 2007 - 12:13am — ಗಣೇಶ

ಉ: ಮಂಪರಿನಲ್ಲಿ ಘಾಟಿ

ಗಣೇಶ's picture

ಹಲವಾರು ವರ್ಷಗಳ ಹಿಂದೆ ಹೋಗಿ ಬರುತ್ತಿದ್ದ ದಾರಿ ಚಾರ್ಮಾಡಿ ಘಾಟ್.
ಶಿರಾಡಿ ಘಾಟ್ ರಿಪೇರಿ ಇನ್ನೆಷ್ಟು ವರ್ಷಗಳಾಗುವುದೋ.
ಈಗ ಕೆಲವೊಮ್ಮೆ ರಾತ್ರಿ ಮಂಗಳೂರಿಂದ ಹೊರಟವರು ಮಾರನೇ ಮಧ್ಯಾಹ್ನ ೨ ಗಂಟೆಗೆ ಬೆಂಗಳೂರು ತಲಪುವರು.
ಏನೇ ಆಗಲಿ ಮಂಗಳೂರಿನ ಜನ ಶಾಂತಿಪ್ರಿಯರು.ಮಂಗಳೂರು-ಬೆಂಗಳೂರು ರೈಲ್ -ರೈಲ್ ಬಿಟ್ಟರೂ-ಬೇಜಾರಿಲ್ಲ.
ಶಿರಾಡಿಘಾಟ್ ಹಾಳಾಯಿತೋ,ಚಾರ್ಮಾಡಿಯಿಂದಬರುವರು.ಅದೂ ಹಾಳಾದರೆ ಕೇರಳಕ್ಕಾಗಿಯಾದ್ರೂ ಬಂದಾರು.
ಮಂಗಳೂರನ್ನು ಕೇರಳಕ್ಕೆ ಸೇರಿಸಿದರೂ ಬೇಸರಿಸುವುದಿಲ್ಲ.ಸರಕಾರವನ್ನು ಬೈದು,ಹೊಂದಿಕೊಂಡು ಹೋಗುವರು.
ಏನೇ ಇರಲಿ.ಚಾರ್ಮಾಡಿ ಚಿತ್ರ ಚೆನ್ನಾಗಿದೆ.
ಇರೋದ್ರೊಳಗೆ ಒಮ್ಮೆ ನೋಡಿ ಚಾರ್ಮಾಡಿ ಘಾಟಿ.
ಏನಂತೀರಿ..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೈ ಕೊಟ್ಟ ಸಖಿ
  • ಬಯಲು
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • "ಕಲಾ-ಪದ" - ದೃಶ್ಯಮಾಧ್ಯಮದ ವೇದಿಕೆ
  • ಏಕೆ ಹೀಗೆ ಮಾಡಿದೆ ನೀನು?
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:51pm
  • csomsekraiah
    ಉ: ಕೊಲಂಬಿಯ ಪಟ್ಟಣದ ಸಂತೆ !
    September 8, 2008 - 7:28pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 154 ಅತಿಥಿಗಳು ಆನ್ಲೈನ್ ಇರುವರು.


ವಯಸ್ಸಾಗುತ್ತ ಹೋದಂತೆ ಈ ಮೂರು ಘಟನೆಗಳು ಜರುಗುತ್ತವೆ. ಮೊದಲನೆಯದಾಗಿ ನಿಮ್ಮ ಸ್ಮರಣ ಶಕ್ತಿ ಹೋಗುತ್ತದೆ, ಮತ್ತು .... ಕ್ಷಮಿಸಿ ಇನ್ನೂ ಎರಡು ನೆನಪಾಗ್ತಾ ಇಲ್ಲ...

— ಸರ್ ನಾರ್ಮನ್ ವಿಸ್ಡಮ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator