Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

"ಕುವೆಂಪು ಕವಿಯೇ ಅಲ್ಲ"

July 23, 2007 - 5:46pm — anivaasi

ಪೂರ್ಣಚಂದ್ರ ತೇಜಸ್ವಿಯವರ "ಅಣ್ಣನ ನೆನಪು" ಪುಸ್ತಕದಲ್ಲಿ ಕುವೆಂಪುರವರ "ರಾಮಾಯಣ ದರ್ಶನಂ" ಗೆ ಜ್ಞಾನಪೀಠ ಪ್ರಶಸ್ತಿ ಬಂದ ಹೊತ್ತಿನ ಬಗ್ಗೆ ಪ್ರಸ್ತಾಪವಿದೆ. "ರಾಮಾಯಣ ದರ್ಶನಂ ಗಾತ್ರದಲ್ಲಿ ಮಾತ್ರ ಮಹಾಕಾವ್ಯ. ಕುವೆಂಪು ಕವಿ ಎನ್ನುವುದಾದರೆ ನಾನು ಕವಿಯೇ ಅಲ್ಲ, ನಾನು ಕವಿ ಎನ್ನುವುದಾದರೆ ಅವರು ಕವಿಯೇ ಅಲ್ಲ ಎಂದೆಲ್ಲ ಅಡಿಗರು ಕಿಡಿಕಾರಿದ್ದರು" ಎಂದು ನೆನಪಿಸಿಕೊಳ್ಳುತ್ತಾರೆ.
ಕನ್ನಡ ಕಾವ್ಯಲೋಕಕ್ಕೆ ಹೊಸ ತಿರುವನ್ನು ಕೊಟ್ಟ ಅತ್ಯಂತ ಪ್ರಭಾವಶಾಲಿ ಕವಿಯಾದ ಅಡಿಗರ ಎಷ್ಟೋ ಪದ್ಯಗಳು ಮತ್ತೆ ಮತ್ತೆ ಓದಿಸಿಕೊಳ್ಳುತ್ತವೆ, ಪ್ರತಿಸಲವೂ ಮತ್ತೇನೋ ಹೊಸದು ಕಾಣುತ್ತದೆ. ಮುಂದೆ "ನಾನು ಹಿಂದು, ನಾನು ಬ್ರಾಹ್ಮಣ" ಎಂದು ಪದ್ಯ ಬರೆದು, ಜನಸಂಘಕ್ಕಾಗಿ ಚುನಾವಣೆಗೆ ಕೂಡ ಅಡಿಗರು ನಿಂತಿದ್ದರು. ಯಾಕೋ ತೇಜಸ್ವಿಯವರ ನೆನಪು ಓದುವಾಗ ಅಡಿಗರ ಈ ಎಲ್ಲ ಮಗ್ಗಲು ನೆನಪಾಯಿತು.
ಅಷ್ಟು ತೀಕ್ಷ್ಣವಾಗಿ ಕುವೆಂಪು ಕಾವ್ಯದ ಬಗ್ಗೆ ಪ್ರತಿಕ್ರಯಿಸುವುದಕ್ಕೆ ಅಡಿಗರಿಗಿದ್ದ ಒತ್ತಡದ ಬಗ್ಗೆ ಯೋಚಿಸಿದೆ. ತನ್ನ ಕಾವ್ಯದ ಬಗ್ಗೆ, ಕಾವ್ಯದ ಶೈಲಿಯ ಬಗ್ಗೆ ಆಳವಾದ ವಿಶ್ವಾಸವನ್ನು ಇಂಥ ಪ್ರತಿಕ್ರಿಯೆಗಳು ತೋರುತ್ತವೆಯೆ? ಒಬ್ಬ ಬರಹಗಾರನಿಗೆ, ಅದರಲ್ಲೂ ಅಡಿಗರಂಥ ಪ್ರತಿಭಾವಂತರಿಗೆ ಅಂಥ ಆತ್ಮವಿಶ್ವಾಸ ಸಹಜವೇನೋ? ಅಂಥ ಆತ್ಮವಿಶ್ವಾಸದ ಬಲದ ಮೇಲೇ ಸೂಕ್ಷ್ಮವಾದ, ಗಟ್ಟಿಯಾದ ಕೃತಿಗಳು ಹುಟ್ಟಲು ಸಾಧ್ಯವೇನೋ? ಈಗ ಅನಂತಮೂರ್ತಿಯವರು ಭೈರಪ್ಪನವರ ಬಗ್ಗೆ ಆಡಿದ ಮಾತುಗಳನ್ನು ಈ ವಿಚಾರಗಳ ಬೆಳಕಿನಲ್ಲಿ ನೋಡುವುದು ವಿವಾದದ ಬಿಸಿ ತಗ್ಗಿರುವಾಗ ಸಾಧ್ಯ ಎಂದು ಬಗೆಯುತ್ತೇನೆ. ಅದರಿಂದ ಪ್ರಯೋಜನವೂ ಇದೆ ಎಂದು ನನ್ನ ಎಣಿಕೆ.

ತೇಜಸ್ವಿಯವರು ಅಡಿಗ-ಕುವೆಂಪು ವಿವಾದದ ಬಗ್ಗೆ ಮಾತು ಮುಂದುವರಿಸಿ ಮತ್ತೂ ಮಹತ್ವದ ಮಾತುಗಳನ್ನು ಹೇಳಿದ್ದಾರೆ. ಆಗಿನ ಕಾಲದ ಹೊಸ ಪೀಳಿಗೆಯ ಬರಹಗಾರರು ಆ ವಿವಾದದ ಬಗ್ಗೆ ತಲೆ ಕೆಡಿಸಿಕೊಳಲಿಲ್ಲ ಎಂದು ಹೇಳುತ್ತಾ ಅದಕ್ಕೆ ಮೂರು ಕಾರಣಗಳನ್ನು ಕೊಡುತ್ತಾರೆ.
ಮೊದಲನೆಯದಾಗಿ - "ಸಮಾಜವಾದೀ ಆಂದೋಳನದಲ್ಲಿ ಭಾಗಿಗಳಾಗಿ ಸಾಹಿತ್ಯ ಕ್ಷೇತ್ರದಿಂದಲೇ ದೂರಾಗುತ್ತಿದ್ದುದು. ಸಾಹಿತ್ಯವನ್ನು ವಿಪರೀತ ಗಂಭೀರವಾಗಿ ಪರಿಗಣಿಸಿ ಶ್ರೇಷ್ಠತೆ ನಮ್ಮ ಜೀವನ್ಮರಣದ ಪ್ರಶ್ನೆ ಎಂದು ಪರಿಭಾವಿಸುವುದು ನಮಗೆ ಆಗ ಭ್ರಾಂತಿಯ ಪರಮಾವಧಿಯಂತೆ ಕಾಣುತ್ತಿತ್ತು."
ಎರಡನೆಯದಾಗಿ - "ಬೇರೆ ಬೇರೆ ಕ್ಷೇತ್ರಗಳ ಚಟುವಟಿಕೆಗಳಿಂದಾಗಿ ದೊರತ ಹೊಸ ಹೊಸ ಮೌಲ್ಯ, ಅಳತೆಗೋಲುಗಳಿಂದ ಇಡೀ ಸಾಹಿತ್ಯ ಕ್ಷೇತ್ರದಲ್ಲೇ ಅರ್ಥವಂತಿಕೆಗಾಗಿ ಹುಡುಕಾಟ ನಡೆಯುತ್ತಿತ್ತು"
ಮೂರನೆಯದಾಗಿ- "ಬಹುಮುಖ್ಯವಾಗಿ ... ಪ್ರತಿಕ್ರಯಿಸಲು ಅಗತ್ಯವಾದ ಧಾರ್ಮಿಕತೆ, ಮತ್ತು ಶ್ರದ್ಧೆಗಳು ಹೊಸ ಪೀಳಿಗೆಯ ಬರಹಗಾರರಲ್ಲಿ ಯಾರಲ್ಲೂ ಇರಲೇ ಇಲ್ಲ ... ಕುವೆಂಪು ಕವಿಯೇ ಅಲ್ಲದೆ ಅಡಿಗರು ಮಾತ್ರವೇ ಕವಿಯೆಂದಾದರೂ ನಮಗೆ ಆಕಾಶವೇನೂ ಕಳಚಿ ಬೀಳುವುದಿಲ್ಲ ಎಂದು ಸ್ಪಷ್ಟವಾಗಿ ಪ್ರಾಮಾಣಿಕವಾಗಿ ಅನ್ನಿಸಿತು"
ಇಷ್ಟು ಹೇಳಿ ನಂತರ ಒಂದು ರೀತಿಯಲ್ಲಿ ಕುವೆಂಪುರವರು ಅಪ್ರಸ್ತುತ ಮತ್ತು ಅರ್ಥಹೀನ ಆಗಿದ್ದರು ಎನ್ನುತ್ತಾರೆ. ಹಾಗೆಯೇ - "ಆಗಿನ ನವ್ಯಕಾವ್ಯದ ಮುಂಚೂಣಿಯಲ್ಲಿದ್ದ ವಿಪ್ರೋತ್ತಮರಿಗೆ ಕುವೆಂಪು ಅವರನ್ನು ಅಮಾನ್ಯಗೊಳಿಸುವ ಭರದಲ್ಲಿ ಅದಕ್ಕಿಂತಲೂ ಆಳವಾಗಿ ತಮ್ಮನ್ನೇ ತಾವು ಅಮಾನ್ಯಗೊಳಿಸಿಕೊಳ್ಳುತ್ತಿರುವುದರ ಪರಿವೆಯೇ ಇರಲಿಲ್ಲ" ಎನ್ನುತ್ತಾರೆ.

ತೇಜಸ್ವಿಯವರ ಈ ಮೇಲಿನ ಮಾತುಗಳ ಬೆಳಕಲ್ಲಿ ನನಗೆ ಒಂದು ಅನುಮಾನ. ಅಂದಿನ ಕುವೆಂಪುವಿನ ಹಾಗೆ, ಭೈರಪ್ಪನವರು ಸಾಹಿತ್ಯಿಕವಾಗಿ ಇಂದು ಅಪ್ರಸ್ತುತರೇ ಮತ್ತು ಅರ್ಥಹೀನರೆ? ಅನಂತಮೂರ್ತಿಯವರ ಮಾತು ಯಾವುದೇ ನಿಜವಾದ ಸಾಹಿತ್ಯಕ ವಿವಾದಕ್ಕೂ ಇಲ್ಲಿ ಎಡೆಮಾಡಿ ಕೊಟ್ಟೇ ಇಲ್ಲ, ಅಲ್ಲವೆ? ಪತ್ರಿಕೆಗಳು ಮತ್ತೊಂದು ಬಿಸಿ ಸುದ್ದಿ ಸಿಕ್ಕುವವರೆಗೂ ಎಡೆಬಿಡದೆ ವಿವಾದವನ್ನು ವರದಿ ಮಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ ಅದರಲ್ಲಿ ತಾವೂ ತೊಡಗಿಕೊಂಡಿದ್ದಾರೆ. ಆದರೂ ಇಂದಿನ ಹೊಸ ಪೀಳಿಗೆಯ ಸಾಹಿತಿಗಳು ಈ ವಿವಾದದ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಬಣಗಳಾಗಿ ಒಡೆಯದೆ ಉಳಿದಿದ್ದಾರೆ ಅಲ್ಲವೆ? ಹೊಸ ಪೀಳಿಗೆಯ ಬರಹಗಾರರು ಯಾವ ಹೊಸ ಮಗ್ಗುಲಿನ ಶೋಧದಲ್ಲಿ ನಿರತರಾಗಿ ಈ ವಿವಾದವನ್ನು ಕಡೆಗಣಿಸಿದ್ದಾರೆ? ಅವರ ಮೌನ ತಾವು ತಳೆದ ಯಾವ ಆಳದ ತಾತ್ವಿಕ ನಿಲುವನ್ನು ತೋರಿಸುತ್ತದೆ? ಅಥವಾ ಬರೇ ಅವಕಾಶವಂಚಿತರಾಗುವುದಕ್ಕೆ ಹೆದರಿದ ಸಮಯಸಾಧಕತನವೋ ಎಂಬ ಪ್ರಶ್ನೆಯೂ ಕಾಡುತ್ತದೆ. ಉತ್ತರಕ್ಕಾಗಿ ಕಾದು ನೋಡಬೇಕು.

  • ಯೋಚನೆ
  • ಸಾಹಿತ್ಯ
Ornamental seperator
  • anivaasi ರವರ ಬ್ಲಾಗ್
  • Login or register to post comments
  • 375 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಂದಿನ ಸುದ್ದಿ...!
  • "ಓದುವ ಸುಖ, ಬರೆಯುವ ಸುಖ....." - ಒಂದು ಚಿಂತನೆಗೆ ಹಚ್ಚುವ ಲೇಖನ
  • ಮುಕ್ತಾಯ
  • "ಮೌಲ್ಯ ವರ್ಧಿತ" ಸರಿಯೆ!?
  • ಕನ್ನಡದಲ್ಲಿ ಸೈನ್ಸ್ ಫಿಕ್ಷನ್
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 9 ಅತಿಥಿಗಳು ಆನ್ಲೈನ್ ಇರುವರು.

"ಎಂಥ ನಾಡಿದು ಯೆಂಥ ಕಾಡಾಯಿತೋ"

— ರಂ. ಶ್ರೀ. ಮುಗಳಿ.

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator