Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಮೈಸೂರಿನಲ್ಲಿ ಮಳೆ

October 29, 2007 - 7:40am — anivaasi

ಮೈಸೂರಿನಲ್ಲಿ ಮೊನ್ನೆ ಎಂಬತ್ತರ ಬೆಂಗಳೂರು ಧುತ್ತನೆ ಎದುರಾಯಿತು.

ಮೈಸೂರಿನ ಹೊರವಲಯದ ಬಡಾವಣೆಯಲ್ಲಿ ಇರುವ "ನಟನ" ಎಂಬ ಪುಟ್ಟ ರಂಗಮಂದಿರ. ಸ್ವಲ್ಪ ಉದ್ದವೇ ಅನಿಸಿದ ಈ ವರ್ಷದ ತಿರುಗಾಟದ ನಾಟಕ - 'ಈ ನರಕ... ಆ ಪುಳಕ...'. ತೆರೆಗಳು, ಟಿ.ಪ್ರಸನ್ನನ ಗೃಹಸ್ಥಾಶ್ರಮ, ನನ್ನ ತಂಗಿಗೊಂದು ಗಂಡು ಕೊಡಿ, ಕ್ರಾಂತಿ ಬಂತು ಕ್ರಾಂತಿ, ಗಿಳಿಯು ಪಂಜರದೊಳ್ಳಿಲ್ಲ, ಸಿದ್ಧತೆ, ಪೋಲೀಸರಿದ್ದಾರೆ ಎಚ್ಚರಿಕೆ - ಈ ಏಳು ಲಂಕೇಶರ ನಾಟಕಗಳನ್ನು ಕೂಡಿಸಿ ರಘುನಂದನ್ ಈ ನಾಟಕವನ್ನು ರೂಪಿಸಿದ್ದಾರೆ. ಲಂಕೇಶರ ಹರಿತವಾದ ಮಾತುಗಳು, ಸಾಮಾನ್ಯ ನುಡಿಗಳಲ್ಲೇ ಕಾವ್ಯವನ್ನು ಮಿಂಚಿಸುತ್ತಾ ಗಾಢವಾಗುವುದು ತುಂಬಾ ಕುಶಿ ಕೊಟ್ಟಿತು. ನೀನಾಸಂರಿಗರ ನುಡಿರೀತಿ ಯಾಕೋ ಈ ಬಾರಿ, ಈ ನಾಟಕಕ್ಕೆ ಅತಿ ಭಾರವಾದಂತೆ ಅನಿಸಿತು. ಸುಲಭ ವಾಚನದಿಂದ ಪ್ರಭಾವ ಬೀರಬಹುದಾದ ಮಾತುಗಳು ಇಲ್ಲಿ ಹೇಳುವ ರೀತಿಯ ಒತ್ತಿನಿಂದ ಕುಂದಿದಂತೆ ಅನಿಸಿತು. ಏನೋ ಕಳಕೊಂಡಂತೆ ಅನಿಸಿತು. ಇದು ಉದ್ದೇಶಪೂರ್ಣವಿರಬಹುದೆ. ಹೌದಾದರೆ ಏತಕ್ಕಾಗಿರಬಹುದು ಎಂದು ಯೋಚಿಸಿದೆ. ಆದರೆ ಎರಡೂ ಮುಕ್ಕಾಲು ಗಂಟೆಗೂ ಮೀರಿದ ಅವಧಿಯ ಬಗ್ಗೆ ನೀನಾಸಂ ಯೋಚಿಸಿದರೆ ಒಳ್ಳೆಯದಿತ್ತು ಅನಿಸಿತು.

ಹತ್ತು ಗಂಟೆಯ ಸುಮಾರಿಗೆ ಮುಗಿದ ನಾಟಕದಿಂದ ಹೊರಬಂದೆವು. ಸಣ್ಣಕೆ ಮಳೆ ಹನಿಯ ತೊಡಗಿತು. ಜನರೆಲ್ಲಾ ಸ್ಕೂಟರ್‍ ಕಾರುಗಳನ್ನು ಹತ್ತಿ ಕತ್ತಲಲ್ಲಿ ಕರಗಿಹೋಗುತ್ತಿದ್ದರು. ಆಟೋ ಹಿಡಿಯಲು ದೂರದಲ್ಲಿದ್ದ ಮುಖ್ಯ ಬೀದಿಗೆ ಬಂದೆವು. ಯಾರೂ ಓಡಾಡದ ದೊಡ್ಡ ಬೀದಿ. ಇರುಳಲ್ಲಿ ಅಲ್ಲಲ್ಲಿ ಉರಿಯುತ್ತಿದ್ದ ದೀಪಗಳು. ಆಗೊಂದು ಈಗೊಂದು ಓಡಾಡುತ್ತಿದ್ದ ವಾಹನಗಳು. ಆದರೆ ಆಟೋಗಳು ಮಾತ್ರ ಒಂದೂ ಇಲ್ಲ. ದಿಕ್ಕು ತಪ್ಪಿದವರಂತೆ ಅತ್ತಿತ್ತ ಓಡಾಡುತ್ತಿದ್ದಾಗ ಇದ್ದಕಿದ್ದ ಹಾಗೆ ಧೋ ಎಂದು ಸುರಿದ ಮಳೆ. ದೂರದಲ್ಲಿ ಕಾಣುತ್ತಿದ್ದ ಮುಚ್ಚಿದ ಅಂಗಡಿಗೆ ಓಟ. ಅದರ ಮುಂದಿನ ಛಾವಣಿಯಡಿ ಸ್ವಲ್ಪ ಸುಧಾರಿಸಿಕೊಂಡೆವು. ಮುಂದೇನು ಎಂದು ಹೊಳೆಯಲಿಲ್ಲ. ರಂಗಮಂದಿರದ ಕಡೆಯಿಂದಲೇ ತೆವಳುತ್ತಾ ಬರುತ್ತಿದ್ದ ಕಾರಿಗೆ ಅಡ್ಡಹಾಕಿದೆ. ಬೆಳಿಗ್ಗೆ ಸಿಕ್ಕಿದ್ದ ಗೆಳೆಯ ಅದರಲ್ಲಿದ್ದರು. ತುಂಬಿಕೊಂಡಿದ್ದ ಕಾರಿನಲ್ಲಿ ನಾವೂ ತೂರಿಕೊಂಡೆವು. ಮನೆಯ ಹತ್ತಿರ ಬಿಟ್ಟರು.

ಹತ್ತು ನಿಮಿಷದ ಹಿಂದೆ ಮಳೆಯಲ್ಲಿ ಸಿಕ್ಕಿಕೊಂಡು ಚಡಪಡಿಸಿ ದಿಕ್ಕು ತಪ್ಪಿದ್ದು. ನಿರ್ಜನ ಬೀದಿ. ಸಿಗದ ಆಟೋ. ಈಗ ಮನೆಯ ಎದುರು ಕಾರಿನಿಂದ ಇಳಿದದ್ದು. ಎಂಬತ್ತರ ಬೆಂಗಳೂರಿನ ನೆನಪು.

Ornamental seperator
  • anivaasi ರವರ ಬ್ಲಾಗ್
  • Login or register to post comments
  • 380 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 29, 2007 - 10:35pm — hpn

ಉ: ಮೈಸೂರಿನಲ್ಲಿ ಮಳೆ

hpn's picture

ಬಹುಶಃ ಇನ್ನು ಹತ್ತು ವರ್ಷಗಳು ಕಳೆದ ನಂತರ ನಾವುಗಳು ಮೈಸೂರಿಗೆ ಹೋದರೆ ಈಗಿನ ಬೆಂಗಳೂರು ಕಾಣಸಿಗಬಹುದು ಅನ್ಸತ್ತೆ Smiling
ಆಗಲೇ ಎಲ್ಲೆಡೆಯಿಂದ ಜನರು ಬಂದು ಮೈಸೂರಿನಲ್ಲಿ ನೆಲೆಸೋದು ಜಾಸ್ತಿಯಾಗ್ತಿದೆ ಅಂತ ಕೇಳಿದೀನಿ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • Email this ಪ್ರತಿಕ್ರಿಯೆ
November 1, 2007 - 4:20am — tarlesubba

ಉ: ಮೈಸೂರಿನಲ್ಲಿ ಮಳೆ

tarlesubba's picture

ಪಾಕು?

  • Login or register to post comments
  • link
  • Email this ಪ್ರತಿಕ್ರಿಯೆ
November 1, 2007 - 9:26am — anivaasi

ಉ: ಮೈಸೂರಿನಲ್ಲಿ ಮಳೆ

anivaasi's picture

ಇಲ್ಲ.
ಮಲ್ಲಿಗೆಯೂ ಕಾಣಲಿಲ್ಲ Smiling
ಆದರೆ ವಿ.ವಿಗೆ ಹೋಗಿದ್ದೆ.
ಅರಮನೆಯನ್ನು ಹಾದೆ.
ಅಷ್ಟೆ.

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೂವೆ ನಿನ್ನ ನಗುವ ನೋಡೆ...
  • ಲಂಕೇಶ್ ಬ್ಲಾಗ್: ನೀಲು ಕಾವ್ಯ ಮತ್ತು ನೀಲುಗಳು
  • ಅಯ್ಯೋ! ನಾವು ಯಾವ ಕಾಲದಲ್ಲಿದ್ದೀವಿ?
  • ಇಂದಿನ ಸುದ್ದಿ...!
  • ಈ ಮಾತುಗಳಿಗೆ ಕನ್ನಡದಲ್ಲಿ ಏನನ್ನುತ್ತಾರೆ
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ರಾಜ ಮುದ್ದು ರಾಜ
  • ಚುನಾವಣೆ - ಗುರುತಿನ ಚೀಟಿ - ಪಾಸ್-ಪೋರ್ಟ್
  • ತೆರೆದ ಕಣ್ಣು
  • ಅನುಭವ
  • ಮುಕ್ತಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
  • ವೈಭವ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 11, 2008 - 8:45pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 11, 2008 - 8:29pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 4 ಅತಿಥಿಗಳು ಆನ್ಲೈನ್ ಇರುವರು.

ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ |
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ ||

— ಡಿ.ವಿ.ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator