ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ರಾಜಕುಮಾರನ ಕಿವಿಗಳು

April 29, 2007 - 2:51pm — anivaasi

ತನ್ನ ಅಣ್ಣ ಹುಡುಗಿಯೊಬ್ಬಳ ಜತೆ ಪಕ್ಕದ ಕೋಣೆಯಲ್ಲಿ ರಾತ್ರಿಯೆಲ್ಲಾ ಆಡುತ್ತಿದ್ದ ಚೆಲ್ಲಾಟವನ್ನು ರಾಜಕುಮಾರ ನಿದ್ದೆ ಬಿಟ್ಟು ಕದ್ದು ನೋಡುತ್ತಿದ್ದನಂತೆ. ಈಚೀಚೆಗೆ ಅವರ ಅತಿಯಾದ ಚೆಲ್ಲಾಟ ನೋಡಿ ಬೆವರುತ್ತಿದ್ದನಂತೆ. ಚೆಲ್ಲಾಟ ವಿಕೃತವಾದಾಗ ತಡೆದುಕೊಳ್ಳಲಾಗದೆ ಅಣ್ಣನ ಗೆಳತಿ ಅರಮನೆ ವಾಸವೂ ಬೇಡ, ರಾಜಕುಮಾರನ ಸಹವಾಸವೂ ಬೇಡ ಅಂತ ಅಣ್ಣನ ಮುಖಕ್ಕೆ ಉಗಿದು ಅರೆಬಟ್ಟೆಯಲ್ಲೇ ನಡುರಾತ್ರಿ ಕಿಟಕಿ ಹಾರಿ ಹೋಗಿದ್ದನ್ನೂ ನೋಡಿದನಂತೆ. ಅಂದಿನಿಂದ ನಮ್ಮ ರಾಜಕುಮಾರನಿಗೆ ಮಾಡಲು ಏನೂ ಇಲ್ಲದೆ, ಜೀವನವೇ ಬೇಸರವಾಗಿ ಯುದ್ಧಕ್ಕೆ ಹೋಗಿ ತಾನೂ ಏನಾದರೂ ಸಾಧಿಸಬೇಕು ಅಂತ ಅನಿಸಿತಂತೆ. ಏಳು ಸಾಗರದಾಚೆ ಯಾವುದೋ ದೇಶದ ಮೇಲೆ ಯುದ್ಧವೊಂದು ನಡೆಯುತ್ತಿರುವುದನ್ನು ಯಾರಿಂದಲೋ ಅರಿತುಕೊಂಡು ತನ್ನನ್ನೂ ಕಳಿಸಿ ಎಂದು ಜಾರುತ್ತಿದ್ದ ಚಡ್ಡಿ ಎಳೆದುಕೊಂಡು ಅಳತೊಡಗಿದನಂತೆ. ಸೇನಾನಿಗೆ ತಲೆನೋವಾಗಿ ಮುದಿರಾಣಿಗೆ ದೂರು ಹೊತ್ತೋಯ್ದನಂತೆ.
ಸುದ್ದಿ ಕೇಳಿ ರಾಜಕುಮಾರನ ಅಜ್ಜಿ ಮುದಿರಾಣಿ, ಕಟ್ಟಿಸಿದ ತನ್ನ ಹಲ್ಲನ್ನು ಕಟಕಟ ಕಡಿದ ಸದ್ದು ಅರಮನೆಯಲ್ಲಾ ಮಾರ್ದನಿಗೊಂಡು ಎಲ್ಲರ ಎದೆ ನಡುಗಿಸಿತಂತೆ. ಸಾಯಲು ಬೇಕಾದಷ್ಟು ಜನರಿದ್ದಾರೆ ಬೇಡ ಎಂದು ಸೇನಾನಿ ಎಷ್ಟು ಬುದ್ಧಿ ಹೇಳಿದರೂ ಕೇಳದ ರಾಜಕುಮಾರ ಹಟ ಹಿಡಿದು ಬಾಯಿಗಿಟ್ಟ ಹೆಬ್ಬೆಟ್ಟನ್ನು ಚೀಪುವ ಬದಲು ಕಚ್ಚಿಕೊಳ್ಳುತ್ತಿದ್ದಾನೆ ಎಂದು ಎಚ್ಚರಿಸಿದನಂತೆ. ಮಕ್ಕಳನ್ನು ಮುಟ್ಟಬಾರದ ಖಾಯಿಲೆಯಿರುವ ಮುದಿರಾಣಿ ರಾಜಕುಮಾರನನ್ನು ದೂರದಿಂದಲೇ ಮುದ್ದಿಸಿದ ದಿನಗಳನ್ನು ನೆನೆಸಿಕೊಂಡು ತಡೆಯಲಾರದ ನೋವಿನಿಂದ ಕಿವಿಗಳಿರುವ ಅರಮನೆ ಕಂಬ, ಗೋಡೆ, ಬಾಗಿಲುಗಳನ್ನು ಉಗುರಿಂದ ಪರಪರ ಕೆರೆದಳಂತೆ. ಅದನ್ನು ನೋಡಲಾರದೆ ಸೇನಾನಿ ಗಡಗಡ ನಡುಗುತ್ತಾ ಏನಾದರೂ ಉಪಾಯ ಮಾಡುತ್ತೇನೆಂದು ಅಲ್ಲಿಂದ ಕಾಲ್ಕಿತ್ತನಂತೆ.
ಏಳು ಸಮುದ್ರದಾಚೆಯ ದೇಶದವರು ರಾಜಕುಮಾರ ಬಂದರೆ ಅವನ ಕಿವಿಯನ್ನು ನೀಟಾಗಿ ಕೊಯ್ದು, ಹಳೆ ಪೇಪರಿನಲ್ಲಿ ಪೊಟ್ಟಣ ಕಟ್ಟಿ ಅವನೊಂದಿಗೆ ಕಳಿಸುತ್ತೇವೆ ಎಂದು ನಗುತ್ತಿದ್ದಾರೆಂಬ ಸುದ್ದಿಯನ್ನು ಸೇನಾನಿಯೇ ಹಬ್ಬಿಸಿದನಂತೆ. ಇದನ್ನು ಕೇಳಿ ರಾಜಕುಮಾರನ ಜತೆ ಇರಬೇಕಾದ ಸೈನಿಕರು, ಒಂದ ಮಾಡಬೇಕು ಎಂದು ಹೇಳಿ ಹೋದವರು ಪಾಯಿಖಾನೆ ಹಿಂದಿನ ದಿಡ್ಡಿ ಗೋಡೆ ಹಾರಿ ಪರಾರಿಯಾಗುತ್ತಿದ್ದಾರಂತೆ. ಸುದ್ದಿಯನ್ನು ನಂಬಿ ರಾಜಕುಮಾರನ ಕಿವಿ ಕೆಂಪಾದುದನ್ನು ನೋಡಿ ಅವನ ಅಣ್ಣ ಲೊಚಗೊಟ್ಟಿದನಂತೆ. ಎಳೆ ಹೂವಿನಂತಿರುವ ರಾಜಕುಮಾರನ ಕಿವಿಯಲ್ಲಿ ಯಾರಾದರೂ ಹುಡುಗಿಯ ಹತ್ತಿರ ಕಿವಿ ಕಚ್ಚಿಸಿಕೊಂಡರೆ ಎಷ್ಟು ಹಿತವಾಗಿರುತ್ತದೆ ಗೊತ್ತ ಎಂದು ಪಿಸುಗುಟ್ಟಿದನಂತೆ.
ರಾಜಕುಮಾರನ ಕಿವಿಗೂ ನಮಗೂ ಸಂಬಂಧವಿಲ್ಲ ಅಂತ ನೀವೇನಾದರೂ ನಿಶ್ಚಿಂತೆಯಿಂದ ಇದ್ದು ಬಿಟ್ಟರೆ ನಿಮ್ಮ ಜೀವನವೇ ವ್ಯರ್ಥ ಎಂದು ಡಂಗುರದವರು ಎಚ್ಚರಿಕೆ ನೀಡಿದ್ದಾರೆ.

~.~
  • anivaasi ರವರ ಬ್ಲಾಗ್
  • Login or register to post comments
  • 313 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸೃಷ್ಟಿ(ಮೂರು)-ಹೀಗೊಂದು ಜೀವನದ ಕಥೆ
  • ಪ್ರಿನ್ಸ್ ಆಫ್ ವೇಲ್ಸ್ :
  • ಸಾವು
  • ಮೊಘಲ್ ರಾಜಕುಮಾರನ ಕನಸಿನಲ್ಲಿ ಶ್ರೀ ರಾಮಚಂದ್ರ!
  • ನನ್ನ ರಾಜಕುಮಾರ
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 25 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator