ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › arunasirigere ರವರ ಬ್ಲಾಗ್

ನನ್ನ ಕವನಗಳು

ನನ್ನ ಕವನಗಳು, ಬರೀ ನನ್ನ ಕನಸುಗಳಲ್ಲ, ಅವು ಬರೀ ಜೀವನ ಪಾಠಗಳು ಅಥವಾ ಅನುಭವಗಳೂ ಅಲ್ಲ, ಅವು ಕೇವಲ ನನ್ನ ಕಣ್ಣ ಬಿಂಬಗಳಲ್ಲ.
ಇವುಗಳಾಚೆಗೆ ನನ್ನ ಕವನಗಳು, ನನಗೆ ಬೇರೆಯ ಅನುಭವವನ್ನೇ ನೀಡುತ್ತವೆ, ಹಾಗೆಂದು ನನ್ನ ಕವನಗಳು ನನಗೆ ತುಂಬಾ ಖುಷಿ ನೀಡಿವೆ ಎಂದಲ್ಲ.. ಕೆಲವೊಮ್ಮೆ, ನನ್ನ ಕೆಲವು ಕವನಗಳೊಂದಿಗೆ ನಾನು ಅಸಂತುಷ್ಟನೆ..... ನಾ ಬರೆದ ಆ ಕವನ ಹೇಳುವುದರಾಚೆಗೂ ಇನ್ನೂ ಉಳಿದಿದೆ ಎಂದೆನಿಸಿ ನನ್ನ ಕವನ ನನಗೆಯೇ ಅಪೂರ್ಣ ಎಂದೆನಿಸಿ ಬಿಡುತ್ತದೆ.

ಆ ಅಪೂರ್ಣತೆ ಏನೆಂಬುದನ್ನ ತೋರಿಸುವ ಹೊಣೆ ನಿಮ್ಮದಾಗಿದೆ...
ನನ್ನ ಕವನಗಳನ್ನ ಓದಿ, ನಿಮ್ಮ ಸಲಹೆ ಅಥವಾ ವಿಮರ್ಷೆಗಳನ್ನ ನೀಡಿ......

ಪ್ರೇಮ ಭಾವ

January 4, 2008 - 3:42pm — arunasirigere

ಪ್ರೇಮ ಭಾವ

ನನ್ನ ಮನದಾಳದ ಭಾವನೆಗಳ
ಕೆದಕಿದ ಚೆಲುವೆ,
ಹೀಗೇಕೆ ನನ್ನನು
ಕನಸಿನಲಿ ಕಾಡಿ ಕೊಲುವೆ?

ನನ್ನ ಪ್ರೀತಿಗೆ ನೀನೇಕೆ ಅಂಧಳಾಗಿರುವೆ?
ನಿನ್ನ ಮನದಿಂದ ಏಕೆ ನನ್ನ ದೂರ ಮಾಡಿರುವೆ?
ನಿನ್ನ ಪ್ರೀತಿಯೊಂದನ್ನೇ ನಾ ಬಯಸುವೆ
ಆದರೆ ಹೀಗೇಕೆ ನೀ ನನ್ನ ಕಾಡಿ ಕೊಲ್ಲುವೆ?

ಬೇರೆಯ ಲೋಕದಲ್ಲಿ ವಿಹರಿಸುತ್ತಿದ್ದ ನನ್ನ
ಏಕೆ ಮಾಡಿಕೊಂಡೆ ಗುಲಾಮನಾಗಿ ನಿನ್ನ,
ಅರ್ಥವಿರದ ಭಾವನೆಗಳಿಗೆ ನೀಡಿದೆ ನೀ ಮೆರುಗು
ದೂರ ಮಾಡಿದೆ ನಾ ಅನಾಥನೆಂಬ ಕೊರಗು.

ನೋಡಿದಾಗ ನಿನ್ನ ಬೆಳದಿಂಗಳ ಮುಗುಳ್ನಗೆ
ಅಮಿತಾನಂದ ನನ್ನ ಮನದೊಳಗೆ
ನಿನ್ನ ಪ್ರೀತಿಯ ಆರಾಧಕ ನಾನು,
ದೂರ ಮಾಡದಿರು ನನ್ನ ನೀನು.
-- ಅರುಣ ಸಿರಿಗೆರೆ

  • kannada
  • kavana
  • ಕನ್ನಡ
  • ಕವನ
  • ಪ್ರೇಮ
~.~
  • arunasirigere ರವರ ಬ್ಲಾಗ್
  • Login or register to post comments
  • 304 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೀಗೇಕೆ ನೀ ಮಾಡಿದೆ?
  • ಓ ನಲ್ಲೇ
  • ನಲ್ಲನಲ್ಲೂಂದು ಕೋರಿಕೆ..
  • ನಾ ನಿನ್ನ
  • ನಿನ್ನ ನನ್ನ ನಡುವೆ..
Syndicate content

ಲೇಖಕರು

arunasirigere's picture

ಪೂರ್ಣ ಹೆಸರು
ಅರುಣ ಸಿರಿಗೆರೆ

ಪರಿಚಯ

ನನ್ನ ಹೆಸರು ಅರುಣ ಸಿರಿಗೆರೆ, ಮೂಲತಃ ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಹಳ್ಳಿಯವನು....
ಸಿರಿಗೆರೆ, ಶಿವಮೊಗ್ಗ, ರಾಣೆಬೆನ್ನೂರು, ಬೆಂಗಳೂರು, ಈ ಎಲ್ಲಾ ಕಡೆ ನನ್ನ ವಿದ್ಯಾಭ್ಯಾಸದ ವಿವಿಧ ಮಜಲುಗಳನ್ನ ಮುಗಿಸಿ ಈ ಬೆಂಗಳೂರಿನಲ್ಲಿಯೆ ನೆಲೆಸಿದ್ದೇನೆ.

ನಾನು ತಂತ್ರಾಂಶ ಅಭಿಯಂತರನಾಗಿ ಕೆಲಸ ನಿರ್ವಹಿಸಿತ್ತಿದ್ದೇನೆ.

ಒಮ್ಮೆ ನಾನು 8ನೇ ತರಗತಿಯಲ್ಲಿದ್ದಾಗ, ಒಮ್ಮೆ ಹೀಗೆ ಪದಗಳ ಜೋಡಣೆ ಮಾಡಿ, ಆದು ನನ್ನ ಕವನ ಎಂದು ನನ್ನ ಗೆಳೆಯರಿಗೆಲ್ಲಾ ತೋರಿಸಿದೆ, ಅವರೆಲ್ಲಾ ಚೆನ್ನಾಗಿದೆ ಅಂತ ಹೇಳಿದ್ರು... ಅಷ್ಟೆ, ಮತ್ತೆ ಕವನಗಳ ಬಗ್ಗೆ ಯಾವತ್ತು ಯೋಚಿಸಿರಲಿಲ್ಲ, ಆದರೂ ಆಗೊಮ್ಮೆ ಹೀಗೊಮ್ಮೆ ಏನಾದರೂ ಗೀಚುತ್ತಲೇ ಇರುತ್ತಿದ್ದೆ, ಅವುಗಳನ್ನ ಎಂದಿಗೂ ಗಂಭೀರವಾಗಿ ಪರಿಗಣಿಸರಲಿಲ್ಲ.... ಆದರೆ ನಾನು ನನ್ನ ಪದವಿ ತರಗತಿಗೆ ಬಂದ ಮೇಲೆ ಅವುಗಳ ಬಗ್ಗೆ ಯೋಚಿಸ್ತಾ ಇದ್ದ್ದೆ.. ಆದ್ರೂ ಅಷ್ಟೇನು ಗಂಭೀರವಾಗಿ ಅಲ್ಲ... ನನ್ನ ವಿದ್ಯಾಭ್ಯಾಸ ಮುಗಿದ ಮೇಲೆ ಈ ಕವನದ ಗೀಳು ತುಂಬಾ ಬಂದಿದೆ... ಮೊದಲಿನಿಂದ ಇಲ್ಲಿಯವರೆಗೆ ನಾನು ಗೀಚಿದ ಕೆಲವು ಕವನಗಳು ಇಲ್ಲಿವೆ, ಓದಿ ನಿಮ್ಮ ಸಲಹೆಗಳನ್ನ ನೀಡಿ, ನನ್ನನ್ನ ತಿದ್ದಿಕೊಳ್ಳಲು, ಉತ್ತಮಪಡಿಸಿಕೊಳ್ಳಲು ಅವು ದಾರಿಯಾಗಲಿ .

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 29 ಅತಿಥಿಗಳು ಆನ್ಲೈನ್ ಇರುವರು.


ಭಾರತ ದಾತ್ಮ೦ ಕ೦ಗೆಡುತಿದೆ ಪರ
ಸಾರಸ್ವತ ಸ೦ಪದ ಭರದಿ೦
ತಾರಿ ಹೋಗಿತಿದೆ ತಾಯ್ನಾಡಿನ ಮನ
ಏರುವಿದೇ ಸ್ವಪ್ರತ್ಯಯದಿ೦

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator