ನನ್ನ ಕವನಗಳು
ನನ್ನ ಕವನಗಳು, ಬರೀ ನನ್ನ ಕನಸುಗಳಲ್ಲ, ಅವು ಬರೀ ಜೀವನ ಪಾಠಗಳು ಅಥವಾ ಅನುಭವಗಳೂ ಅಲ್ಲ, ಅವು ಕೇವಲ ನನ್ನ ಕಣ್ಣ ಬಿಂಬಗಳಲ್ಲ.
ಇವುಗಳಾಚೆಗೆ ನನ್ನ ಕವನಗಳು, ನನಗೆ ಬೇರೆಯ ಅನುಭವವನ್ನೇ ನೀಡುತ್ತವೆ, ಹಾಗೆಂದು ನನ್ನ ಕವನಗಳು ನನಗೆ ತುಂಬಾ ಖುಷಿ ನೀಡಿವೆ ಎಂದಲ್ಲ.. ಕೆಲವೊಮ್ಮೆ, ನನ್ನ ಕೆಲವು ಕವನಗಳೊಂದಿಗೆ ನಾನು ಅಸಂತುಷ್ಟನೆ..... ನಾ ಬರೆದ ಆ ಕವನ ಹೇಳುವುದರಾಚೆಗೂ ಇನ್ನೂ ಉಳಿದಿದೆ ಎಂದೆನಿಸಿ ನನ್ನ ಕವನ ನನಗೆಯೇ ಅಪೂರ್ಣ ಎಂದೆನಿಸಿ ಬಿಡುತ್ತದೆ.
ಆ ಅಪೂರ್ಣತೆ ಏನೆಂಬುದನ್ನ ತೋರಿಸುವ ಹೊಣೆ ನಿಮ್ಮದಾಗಿದೆ...
ನನ್ನ ಕವನಗಳನ್ನ ಓದಿ, ನಿಮ್ಮ ಸಲಹೆ ಅಥವಾ ವಿಮರ್ಷೆಗಳನ್ನ ನೀಡಿ......
ಸ್ನೇಹ - ಹಣತೆ
ಸ್ನೇಹ - ಹಣತೆ
ಕಳೆದು ಹೋಗುತಿದೆ ಮನವು
ಕಾಣದ ಕೈಗಳ ಸ್ವಾರ್ಥದಲಿ
ಕಳೆದುಕೊಳ್ಳದಿರು ನಿನ್ನತನವ
ಪರರ ಆಸೆಗಳ ಸಾರ್ಥಕತೆಯಲಿ.
ಭ್ರಮಿಸಿ ನಿರಾಶೆಗೊಳ್ಳುವಿಯೇಕೆ?
ತೊಡೆದು ಹಾಕು, ಕವಿದ ಮೋಡಗಳು
ಮಳೆ ಸುರಿಸಬಹುದೆಂಬ ಬಯಕೆ,
ಏಕೆಂದರೆ, ಚದುರುವುದು ಮೋಡಗಳು
ಬೀಸುವ ಗಾಳಿಯ ರಭಸಕೆ.
ಕತ್ತಲೇ ಜಗವೆಂದು ತಿಳಿದ ಮನಕೆ
ಬೆಳಕಾಗಿ ಮೂಡಿತ್ತು, ಸ್ನೇಹದ ಹಣತೆ.
ಹಬ್ಬಿತ್ತು ಮನದಲ್ಲಿ ಸಾಂತ್ವಾನದ ಅಲೆ.
ಬೀಸಿತೊಮ್ಮೆ ಗಾಳಿ, ನಂದಿ ಹೋಯಿತು ಹಣತೆ,
ಹರೆಡಿತು ಮತ್ತೆ ಎಲ್ಲೆಲ್ಲೂ ಕತ್ತಲೆ.
ಅರುಣ ಸಿರಿಗೆರೆ

- arunasirigere ರವರ ಬ್ಲಾಗ್
- Login or register to post comments
- 147 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: