ಲೇಖನ: ಕಿಲಾರದ ಕಿಲಾಡಿ ಜಲಯೋಧರು
ನನ್ನ ಕವನಗಳು
ನನ್ನ ಕವನಗಳು, ಬರೀ ನನ್ನ ಕನಸುಗಳಲ್ಲ, ಅವು ಬರೀ ಜೀವನ ಪಾಠಗಳು ಅಥವಾ ಅನುಭವಗಳೂ ಅಲ್ಲ, ಅವು ಕೇವಲ ನನ್ನ ಕಣ್ಣ ಬಿಂಬಗಳಲ್ಲ.
ಇವುಗಳಾಚೆಗೆ ನನ್ನ ಕವನಗಳು, ನನಗೆ ಬೇರೆಯ ಅನುಭವವನ್ನೇ ನೀಡುತ್ತವೆ, ಹಾಗೆಂದು ನನ್ನ ಕವನಗಳು ನನಗೆ ತುಂಬಾ ಖುಷಿ ನೀಡಿವೆ ಎಂದಲ್ಲ.. ಕೆಲವೊಮ್ಮೆ, ನನ್ನ ಕೆಲವು ಕವನಗಳೊಂದಿಗೆ ನಾನು ಅಸಂತುಷ್ಟನೆ..... ನಾ ಬರೆದ ಆ ಕವನ ಹೇಳುವುದರಾಚೆಗೂ ಇನ್ನೂ ಉಳಿದಿದೆ ಎಂದೆನಿಸಿ ನನ್ನ ಕವನ ನನಗೆಯೇ ಅಪೂರ್ಣ ಎಂದೆನಿಸಿ ಬಿಡುತ್ತದೆ.
ಆ ಅಪೂರ್ಣತೆ ಏನೆಂಬುದನ್ನ ತೋರಿಸುವ ಹೊಣೆ ನಿಮ್ಮದಾಗಿದೆ...
ನನ್ನ ಕವನಗಳನ್ನ ಓದಿ, ನಿಮ್ಮ ಸಲಹೆ ಅಥವಾ ವಿಮರ್ಷೆಗಳನ್ನ ನೀಡಿ......
ತುಡಿತ
ತುಡಿತ
ಅಕ್ಕ, ನೆನಪಿದಯೇ ನಮ್ಮ ಬಾಲ್ಯದ ದಿನಗಳು?
ಇಬ್ಬರೂ ಒಟ್ಟಿಗೆ ಆಡುತ್ತಾ, ಬೀಳುತ್ತಾ, ಜಗಳವಾಡಿದ ಕ್ಷಣಗಳು.
ಆ ದಿನಗಳ ಮಧುರತೆ, ಸಂತೋಷ ಇಂದು ದೊರಕೀತೆ?
ಮರಳಿ ಹೋಗೋಣವೆ, ಆ ಗತಿಸಿದ ದಿನಗಳ ಬಳಿಗೆ
ಕಿತ್ತು ತರೋಣವೆ ನಮ್ಮೆಲ್ಲಾ ಹರುಷವನ್ನು...
ಅಕ್ಕ, ನೆನಪಿದಯಾ, ನಾವಿಬ್ಬರು ಅಪ್ಪನಿಂದ ಒದೆ ತಿಂದದ್ದು,
ನೀನು ಒಮ್ಮೆ ಹೊಸ ಬಟ್ಟೆಗಾಗಿ ಮತ್ತೊಮ್ಮೆ ಲೆಕ್ಕ ಮಾಡದಿದ್ದಕ್ಕಾಗಿ
ನಾನು ಚಾಕೋಲೇಟಿಗಾಗಿ, ಕ್ರಿಕೆಟ್ ಗಾಗಿ......... ಎಲ್ಲವೂ ಬೇಕೆಂದು
ಒದೆ ತಿಂದರೂ, ಆ ದಿನಗಳ ಸಂತೋಷ ಮರಳಿ ದೊರಕೀತೆ?
ಅದು ಹಾಗೆಯೇ ಕಾಲದ ಮಹತ್ವ, ಅದರ ಅರಿವು
ನಮಗಾಗುವುದು ಅದು ಗತಿಸಿದ ಮೇಲೆಯೆ..
ಕಳೆದು ಹೋಗುವ ಮೊದಲು ಇಂದಿನ ದಿನವು
ಈ ದಿನದ ಸಂತೋಷವನ್ನೆಲ್ಲಾ ಹೀರಿಬಿಡೋಣ
--ಅರುಣ ಸಿರಿಗೆರೆ

- arunasirigere ರವರ ಬ್ಲಾಗ್
- Login or register to post comments
- 202 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ

RSS: