ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › arunhegde ರವರ ಬ್ಲಾಗ್

ಮುದನೀಡುವ "ಮೀರಾ ಮಾಧವ ರಾಘವ"

July 27, 2007 - 10:07pm — arunhegde

ಕಿರುತೆರೆಯ ಜನಪ್ರಿಯ ನಿರ್ದೇಶಕ ಟಿ.ಎನ್.ಸೀತಾರಾಂ ನಿರ್ದೇಶನದ ಹಿರಿತೆರೆಯ ಚಿತ್ರ ಮೀರಾ ಮಾಧವ ರಾಘವ ನೋಡಲು ಇಂದು ಪಿ.ವಿ.ಆರ್ ಗೆ 4.20 ರ ಆಟಕ್ಕೆ ಹೋಗಿದ್ದೆ. ಚಿತ್ರಮಂದಿರ ಭಾಗಶಃ ತುಂಬಿತ್ತು. ಕಿರುತೆರೆಯ ಕೆಲವು ಕಲಾವಿದರೂ ಸಹ ಸಿನಿಮಾ ನೋಡಲು ಬಂದಿದ್ದರು.

ಚಿತ್ರ ಅತ್ಯದ್ಭುತವಲ್ಲದಿದ್ದರೂ ಒಂದು ಉತ್ತಮ ಸಾಂಸಾರಿಕ ಚಿತ್ರವಾಗಿ ಮೂಡಿಬಂದಿದೆ. ಮಧ್ಯಮ ವರ್ಗದ ಹೆಣ್ಣು ಮಗಳೊಬ್ಬಳ ಜೀವನದಲ್ಲಿ ನಡೆಯುವ ಸಂಘರ್ಷದ ಕಥೆಯನ್ನು ಸೀತಾರಾಂ ಸಮರ್ಥವಾಗಿ ನಿರೂಪಿಸಿದ್ದಾರೆ. ಕಥೆಯ ವಿಚಾರಕ್ಕೆ ಬರೋಣ. ಮೀರಾ-ಮಾಧವ-ರಾಘವ ಮೂರು ಪಾತ್ರಗಳು. ಮೀರಾ (ರಮ್ಯಾ) ಮಧ್ಯಮ ವರ್ಗದ ಹುಡುಗಿ. ಈಕೆ ಗಾಯಕಿ ಕೂಡ. ಈಕೆಯನ್ನು ರಾಘವ ಎಂಬ ಶ್ರೀಮಂತ ರೌಡಿ (ತಿಲಕ್) ಇಷ್ಟಪಡುತ್ತಾನೆ ಮತ್ತು ಮದುವೆಯಾಗುವಂತೆ ಪೀಡಿಸುತ್ತಾನೆ. ಆದರೆ ರೌಡಿಗೆ ಮಗಳನ್ನು ಕೊಡಲೊಪ್ಪದ ಮೀರಾಳ ಹೆತ್ತವರು ಆಕೆಯ ಮದುವೆಯನ್ನು ಮಾಧವನೆಂಬ (ದಿಗಂತ್) ಕಾಲೇಜು ಉಪನ್ಯಾಸಕನ ಜೊತೆ ನಡೆಸುತ್ತಾರೆ. ಬಡಕುಟುಂಬಕ್ಕೆ ಸೇರಿದ ಮಾಧವನಿಗೆ ಐ.ಎ.ಎಸ್. ಅಧಿಕಾರಿಯಾಗುವ ಆಸೆ. ಆದರೆ ಆರ್ಥಿಕವಾಗಿ ಸಶಕ್ತನಾಗಿರದ ಕಾರಣ ಆಸೆ ಆಸೆಯಾಗಿಯೇ ಉಳಿದಿರುತ್ತದೆ. ಹೀಗಿರುವಾಗ ಗಂಡನ ಐ.ಎ.ಎಸ್. ಆಸೆಯನ್ನು ಪೂರೈಸಲು ಬಯಸುವ ಮೀರಾ ಅನಿವಾರ್ಯ ಕಾರಣಗಳಿಂದ ರಾಘವನ ಬಳಿ ೧೦ ಲಕ್ಷ ಸಾಲ ಪಡೆಯುತ್ತಾಳೆ. ಸಾಲ ಮಾಡಲು ವಿರೋಧಿಯಾಗಿರುವ ಮಾಧವನಲ್ಲಿ ಈ ವಿಚಾರವನ್ನು ಮುಚ್ಚಿಡುತ್ತಾಳೆ. ಇಲ್ಲಿಂದ ಮೀರಾಳ ಬದುಕಿನಲ್ಲಿ ಮತ್ತೊಮ್ಮೆ ರಾಘವನ ಪ್ರವೇಶವಾಗುತ್ತದೆ. ಮೀರಾಳ ಸುಂದರ ಜೀವನದಲ್ಲಿ ಆತಂಕದ ಬಿರುಗಾಳಿಯೇಳುತ್ತದೆ. ತನ್ನ ಜೀವನದಲ್ಲಿ ತಲೆದೋರುವ ಈ ಸಂಕಟಗಳನ್ನು ಮೀರಾ ಹೇಗೆ ಎದುರಿಸುತ್ತಾಳೆ... ಮಾಧವನಿಗೆ ಸತ್ಯದ ಅರಿವಾದಾಗ ಹೇಗೆ ಪ್ರತಿಕ್ರಿಯಿಸುತ್ತಾನೆ... ಎಂಬುದನ್ನು ಸೀತಾರಾಂ ತಮ್ಮದೇ ಶೈಲಿಯಲ್ಲಿ ನಿರೂಪಿಸಿದ್ದಾರೆ.

ನಿರ್ದೇಶನದ ಜೊತೆಗೆ ಕಥೆ-ಚಿತ್ರಕಥೆ-ಸಂಭಾಷಣೆಗಳ ಜವಾಬ್ದಾರಿಯನ್ನೂ ಸೀತಾರಾಂರವರೇ ನಿಭಾಯಿಸಿದ್ದಾರೆ. ಸಂಭಾಷಣೆಯಲ್ಲಿ ಸೀತಾರಾಂ ಮಿಂಚಿದ್ದಾರೆ. ಚಿತ್ರಕಥೆ ಬಿಗುವಾಗಿದ್ದು ಎಲ್ಲಿಯೂ ಹಳಿತಪ್ಪದಂತೆ ಸೀತಾರಾಂ ಎಚ್ಚರವಹಿಸಿದ್ದಾರೆ. ಆದರೂ ಕೆಲವೊಂದು ಕಡೆಗಳಲ್ಲಿ ಸ್ವಲ್ಪ ಎಳೆದಂತೆ ಕಂಡುಬಂದು ಬೇಸರತರಿಸುತ್ತದೆ. ಹಾಸ್ಯದ ಸನ್ನಿವೇಶಗಳೇ ವಿರಳ.. ಇರುವ ಕಡೆಗಳಲ್ಲೂ ಹಾಸ್ಯ ಅಂತಹ ನಗುವನ್ನೇನೂ ತರಿಸುವುದಿಲ್ಲ. ಒಂದೆರಡು ಸನ್ನಿವೇಶಗಳು, ಸಂಭಾಷಣೆಗಳಲ್ಲಿ ಸೀತಾರಾಂ ಪ್ರಯತ್ನ ಸಾಲದು.ಇನ್ನಷ್ಟು ಉತ್ತಮವಾಗಿ ತೆಗೆಯಬಹುದಾಗಿತ್ತು ಎಂದು ಅನಿಸಿದರೆ ಆಶ್ಚರ್ಯವಿಲ್ಲ.

ತಮ್ಮ ಇಂಪಾದ ಸಂಗೀತ-ಸಾಹಿತ್ಯದಿಂದ ಹಂಸಲೇಖಾ ಚಿತ್ರಕ್ಕೆ ಇನ್ನಷ್ಟು ಮೆರುಗನ್ನು ಕೊಟ್ಟಿದ್ದಾರೆ. ಹಾಡುಗಳ ಚಿತ್ರೀಕರಣವೂ ಪರವಾಗಿಲ್ಲ. ಹಿನ್ನೆಲೆ ಗಾಯಕಿಯರು ನಿಜವಾಗಿಯೂ ಉತ್ತಮವಾಗಿ ಹಾಡಿದ್ದಾರೆ.

ಅಭಿನಯದಲ್ಲಿ ರಮ್ಯಾ ಮಿಂಚಿದ್ದಾರೆ. ಭಾವನಾತ್ಮಕ ಸನ್ನಿವೇಶಗಳಲ್ಲಿ ರಮ್ಯಾ ಸಮರ್ಥವಾಗಿ ಅಭಿನಯಿಸಿದ್ದಾರೆ. ದಿಗಂತ್ ಅಭಿನಯದಲ್ಲಿ ಇನ್ನೂ ಪಳಗಬೇಕು. ಸಹ ಕಲಾವಿದರಾದ ಸುಧಾ ಬೆಳವಾಡಿ, ಸೀತಾ ಕೋಟೆ, ಮಾಸ್ಟರ್ ಆನಂದ್, ಹರಿಣಿ, ಮಂಡ್ಯ ರಮೇಶ್, ಜಯಶ್ರೀ ಎಲ್ಲರೂ ತಮಗಿರುವ ಅಲ್ಪಾವಕಾಶದಲ್ಲಿಯೇ ಸಹಜವಾಗಿ ನಟಿಸಿ ತಮ್ಮ ತಮ್ಮ ಪಾತ್ರಗಳಿಗೆ ನ್ಯಾಯವೊದಗಿಸಿದ್ದಾರೆ. ಬಹುತೇಕ ಎಲ್ಲರೂ ಕಿರುತೆರೆಯ ಕಲಾವಿದರುಗಳೆ ಅಭಿನಯಿಸಿರುವುದು ಇನ್ನೊಂದು ವಿಶೇಷ. ಆದರೆ ಚಿತ್ರದ ನಿಜವಾದ ನಾಯಕ ನಮ್ಮ ರಾಘವನೆಂದರೆ ತಪ್ಪಾಗಲಾರದು. ತಿಲಕ್ ಅಭಿನಯದ ಬಗ್ಗೆ ಎಷ್ಟು ಹೊಗಳಿದರೂ ಕಡಿಮೆಯೇ. ಖಳನಾಯಕನಾಗಿದ್ದರೂ ಚಿತ್ರದ ಅಂತ್ಯದಲ್ಲಿ ನಿಮಗೆ ಇಷ್ಟವಾಗುವುದು ರಾಘವನೇ ಹೊರತು ಮಾಧವನಲ್ಲ. ತಮ್ಮ ಹಾವ ಭಾವ, ಸಂಭಾಷಣೆಯೊನ್ನೊಪ್ಪಿಸುವ ರೀತಿಗಳಿಂದ ಇಡೀ ಚಿತ್ರವನ್ನು ಆವರಿಸಿ ಬಿಡುತ್ತಾರೆ.. ಮೀರಾ ರಾಘವನಿಗೇ ಸಿಗಬಾರದಿತ್ತೇ ಎಂಬಷ್ಟರ ಮಟ್ಟಿಗೆ ರಾಘವನ ಪಾತ್ರ ಆಪ್ತವಾಗಿಬಿಡುತ್ತದೆ. HATS OFF TILAK. ಕನ್ನಡಕ್ಕೆ ಮತ್ತೊಬ್ಬ ಯೋಗ್ಯ ನಟನ ಸೇರ್ಪಡೆಯಾಗಿದೆ.

ಒಟ್ಟಿನಲ್ಲಿ ಇದೊಂದು ಸದಭಿರುಚಿಯ, ಯಾವುದೇ ಅಶ್ಲೀಲತೆ, ಹಿಂಸೆ, ರಕ್ತಪಾತಗಳಿಲ್ಲದ ಸುಂದರ ಸಾಂಸಾರಿಕ ಚಿತ್ರ. ಆದರೆ ಇದನ್ನು ಗೆಲ್ಲಿಸಬೇಕಾದರೆ ಮನೆಗಳಲ್ಲಿ ದೈನಂದಿನ ಧಾರಾವಾಹಿಗಳಿಗೆ ಅಂಟಿಕೊಂಡಿರುವ ಮಹಿಳಾ ಮಣಿಗಳು ಮತ್ತು ಕುಟುಂಬಗಳು ಥಿಯೇಟರ್ ಕಡೆಗೆ ಪಯಣಿಸಬೇಕು. ಮಾಸ್ ಚಿತ್ರಪ್ರಿಯರಿಗೆ ಚಿತ್ರ ಇಷ್ಟವಾಗದೇ ಇರಬಹುದು. ಆದರೂ ಇದು ನಮ್ಮ ಚಿತ್ರ. ಕಲಾವಿದರೆಲ್ಲರೂ ನಮ್ಮವರು. ಇಂತಹ ಚಿತ್ರ ಗೆಲ್ಲಬೇಕು. ಗೆಲ್ಲಿಸುವ ಹೊಣೆ ನಮ್ಮೆಲ್ಲ ಕನ್ನಡಿಗರದ್ದು.

  • ಸಿನಿಮಾ ವಿಮರ್ಶೆ
~.~
  • arunhegde ರವರ ಬ್ಲಾಗ್
  • Login or register to post comments
  • 439 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 28, 2007 - 9:06pm — ವೈಭವ

ಉ: ಮುದನೀಡುವ "ಮೀರಾ ಮಾಧವ ರಾಘವ"

ವೈಭವ's picture

ನಿಮ್ಮ ಕನ್ನಡ ಸಿನಿಮಾಗಳ ಬಗ್ಗೆ ಒಲವು ಬೇರೆಯವರನ್ನು ನಾಚಿಸುವಂತಿದೆ. ಹೀಗೆ ಮುಂದುವರೆಸಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 28, 2007 - 9:36pm — mahesha

ಉ: ಮುದನೀಡುವ "ಮೀರಾ ಮಾಧವ ರಾಘವ"

mahesha's picture

ನನಗೆ ಇದು ಮುಕ್ತ - ೨ ಅನ್ನಿಸಿತು. !!

Smiling ಗಮನಿಸಿ ನಾನು ಚನ್ನಾಗಿಲ್ಲ ಅಂದಿಲ್ಲ!!
====================================
ತಿಳಿದಷ್ಟು ತಿಳಿಯಾಗುವುದು ತಿಳಿವು !

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 30, 2007 - 2:36pm — ಕರಿ ತವಳೆ

ಉ: ಮುದನೀಡುವ "ಮೀರಾ ಮಾಧವ ರಾಘವ"

ಕರಿ ತವಳೆ's picture

ಸರಿಯಾಗ್ ಹೇಳಿದ್ರಿ. ನನಗೂ ಹಾಗೇ ಅನ್ನಿಸ್ತು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೀರಾ ಮಾಧವ ರಾಘವ ಚಿತ್ರದ ಹಾಡುಗಳು
  • ಸಾಹಿತ್ಯ
  • ವಿಶ್ವೇಶ್ವರ ಭಟ್ ಅವರ ಪುಸ್ತಕಗಳ ಬಿಡುಗಡೆ ಸಮಾರಂಭ
  • *ಸ್ಪೂರ್ತಿಯ ಲೈಟು*
  • ವಚನ
Syndicate content

ಲೇಖಕರು

arunhegde's picture

ಪೂರ್ಣ ಹೆಸರು
ಅರುಣ್ ಹೆಗಡೆ

ಪರಿಚಯ

ನಾನು ಅರುಣ್ ಕುಮಾರ್ ಡಿ. ವೃತ್ತಿಯಿಂದ ಸಾಫ್ಟ್ ವೇರ್ ಇಂಜಿನಿಯರ್. ಮೂಲತಃ ಉತ್ತರ ಕನ್ನಡ ಜಿಲ್ಲೆಗೆ ಸೇರಿದವನು. ಕನ್ನಡದ ಬಗ್ಗೆ ಗೌರವ ಅಭಿಮಾನವಿದ್ದು ಕನ್ನಡ ಅಂತರ್ಜಾಲ ತಾಣಗಳಿಗೆ ಭೇಟಿ ಕೊಡುವುದು, ಸಾಧ್ಯವಾದರೆ ನಾನೂ ಒಂದಿಷ್ಟು ಬರೆಯುವುದು ನನ್ನ ಹವ್ಯಾಸಗಳಲ್ಲೊಂದು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಚುಕ್ಕಿಗಳಂತ ಹಲ್ಲು
  • ಹಗಲು-ಇರುಳು
  • ನಿನ್ನ ಪೂಜೆಗೆ ಬಂದ ಮಹದೇಸ್ವರಾ
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
  • ಮೊಬೈಲ್ ಕಥೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Deeparavishankar
    ಉ: ಬೈಟೊ ಕಾಫಿ !!! - ೧
    July 9, 2008 - 6:10pm
  • ಸಂಗನಗೌಡ
    ಉ: ಅಬ್ಬಾ!
    July 9, 2008 - 6:01pm
  • yuvapremi
    ಉ: ವರದಕ್ಷಿಣೆ;/ಪ್ರದಕ್ಷಿಣೆ;
    July 9, 2008 - 5:55pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 5:53pm
  • yuvapremi
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 5:46pm
  • veena
    ಉ: ಸುಮ್ನೆ 1 ಮದ್ವೆ ಬ್ಲಾಗು :)
    July 9, 2008 - 5:41pm
  • girish.rajanal
    ಉ: ಹಣ "investment"
    July 9, 2008 - 5:03pm
  • cmariejoseph
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 4:50pm
  • cmariejoseph
    ಉ: ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
    July 9, 2008 - 4:47pm
  • cmariejoseph
    ಉ: ಕನ್ನಡ ರಸಪ್ರಶ್ನೆ:೮
    July 9, 2008 - 4:41pm
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator