ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

'ಕೌನ್ ಬನೇಗಾ ಕಾಮಿಡಿಪತಿ' ಕ್ವಿಜ್ !

January 2, 2007 - 4:10pm — BogaleRagale

ಬೊಗಳೂರು, ಜ.2- KBC (ಕೌನ್ ಬನೇಗಾ ಕಾಮಿಡಿಪತಿ) ಸ್ಪರ್ಧೆಯಲ್ಲಿ ಲಾಕ್ ಮಾಡುವವರು ಬದಲಾದ ಹಿನ್ನೆಲೆಯಲ್ಲಿ ದೇಶದಲ್ಲಿ ವಿಚಿತ್ರ ವಿದ್ಯಮಾನಗಳೂ ನಡೆಯುತ್ತಿದ್ದು, ಕೆಬಿಸಿಯಲ್ಲಿ ಕೇಳಬಹುದಾದ ಪ್ರಶ್ನೆ ಪತ್ರಿಕೆ ಬಯಲಾಗಿದೆ. ಈ ಪ್ರಶ್ನೆ ಪತ್ರಿಕೆ ಬೊಗಳೆ ರಗಳೆ ಕೈಗೆ ಸಿಕ್ಕಿದ್ದು, ಅದನ್ನು ಓದುಗರಿಗಾಗಿ ಇಲ್ಲಿ ಬಯಲು ಮಾಡಲಾಗುತ್ತಿದೆ. ( http://bogaleragale.blogspot.com/ )
ಕ..ಕ..ಕ..ಕ...ಕೌನ್ ಬನೇಗಾ ಕ...ಕ...ಕ...ಕ...ಕಾಮಿಡಿಪತಿ ಪ್ರಶ್ನೆ ಪತ್ರಿಕೆಯ ಪ್ರಮುಖ ಪ್ರಶ್ನೆಗಳು ಈ ರೀತಿಯಾಗಿರುತ್ತವೆ.

1. ಕ್ಲೂ: ಇದು ಎಡಪಕ್ಷಗಳಿಗೆ ಕೇಳಲಾಗುವ ಪ್ರಶ್ನೆ.
ಮುಷ್ಕರ ಅಂದರೇನು?
ಎ) ವೇತನಸಹಿತ ರಜಾದಿನ
ಬಿ) ಉಸಿರಿನಷ್ಟೇ ನೈಸರ್ಗಿಕವಾದ ಒಂದು ಕ್ರಿಯೆ
ಸಿ) ಇದನ್ನು ಮಮತಾ ಬ್ಯಾನರ್ಜಿಯಂಥವರು ನಕಲಿ ಹೊಡೆದರೆ ಅದನ್ನೇ ನಾಚಿಕೆಗೇಡಿನ ಸಂಗತಿ ಎಂದು ಹೇಳಲಾಗುತ್ತದೆ.
ಡಿ) ನೀವು ಯಾವತ್ತೂ ಮಾಡುತ್ತಿರುವುದನ್ನು ಜನತೆ ಮಾಡುವಂತೆ ಪ್ರೇರೇಪಿಸುವುದು. (ಅಂದರೆ ಏನೂ ಇಲ್ಲ!)
ಯಾವ ಮಿತ್ರನಿಗೆ ಫೋನ್ ಕರೆ ಮಾಡಲು ಬಯಸುತ್ತೀರಿ?
ಮನಮೋಹನ್ ಸಿಂಗ್‌ಗೆ ಖಂಡಿತಾ ಬೇಡ ಎಂಬ ಉತ್ತರ.
2. ಜನತಾ ದಳ ಎಂಬ ವಿದಳನಾ ಪಕ್ಷಕ್ಕೆ ಕೇಳುವ ಪ್ರಶ್ನೆ.
ಪಕ್ಷ ಎಂದರೇನು?
ಎ) ಅವಕಾಶಕ್ಕಾಗಿ ಹಾತೊರೆಯುತ್ತಾ ಅದು ಸಿಕ್ಕಿದ ತಕ್ಷಣ ಒಡೆದು ಚೂರಾಗುವುದು.
ಬಿ) ಅಧಿಕಾರಕ್ಕಾಗಿ ಚೌಕಾಶಿಯ ಪ್ರಧಾನ ಅಸ್ತ್ರ
ಸಿ) ಪರಮಾಣುವಿಗಿಂತಲೂ ಕಿರಿದಾದ ಗಾತ್ರದಷ್ಟಕ್ಕೆ ಒಡೆಯಬಲ್ಲ ಒಂದು ವೈಜ್ಞಾನಿಕ ಅದ್ಭುತ
ಡಿ) ಚುನಾವಣೆಗಳು ಬಂದಾಗ ರಾಜಕಾರಣಿಗಳು ಅತ್ಯಂತ ಇಷ್ಟಪಡುವ ವಸ್ತು
ಯಾವ ಮಿತ್ರನಿಗೆ ಕರೆ ಮಾಡಲು ಬಯಸುತ್ತೀರಿ?
ರಾಜಕೀಯದಲ್ಲಿ ಯಾರು ಕೂಡ ಯಾವಾಗ ಬೇಕಾದರೂ ಮಿತ್ರರಾಗಬಹುದು, ಶತ್ರುಗಳೂ ಆಗಬಹುದು. ಹಾಗಿರುವುದರಿಂದ ಯಾರಿಗೆ ಬೇಕಾದರೂ ಕರೆ ಮಾಡುತ್ತೇವೆ!

3. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಗೆ ಪ್ರಶ್ನೆ.
ತಮಿಳು ಅಂದರೇನು?
ಎ) ಚಿತ್ರೋದ್ಯಮಕ್ಕೆ ತೆರಿಗೆ ಉಳಿಸುವ ಒಂದು ಅಸ್ತ್ರ
ಬಿ) ಅಕ್ಷರಗಳು, ಉಚ್ಚಾರಣೆಗಳು ಕಡಿಮೆ ಇದ್ದರೂ ಶಾಸ್ತ್ರೀಯ ಭಾಷೆ ಸ್ಥಾನಕ್ಕೆ ಅರ್ಹವಾದ ಸಂಗತಿ
ಸಿ) ಆಂಗ್ಲ ಹೆಸರುಳ್ಳ ತಮ್ಮ ಕೌಟುಂಬಿಕ ಒಡೆತನದ ಚಾನೆಲ್‌ನಲ್ಲಿ ಕಡಿಮೆ ಬಳಸಲಾಗುವ ಭಾಷೆ
ಡಿ) ತಮಿಳುನಾಡಿನಾದ್ಯಂತ ಇದೇ ಚಾನೆಲನ್ನೇ ಬಲವಂತವಾಗಿ ನೋಡಬೇಕಾಗಿರುವುದರಿಂದ ತಮಿಳು ಬಗ್ಗೆ ಯೋಚಿಸಲು ಯಾರಿಗಾದರೂ ಸಮಯವೆಲ್ಲಿದೆ?
ಯಾರಿಗೆ ಫೋನ್ ಮಾಡಲು ಬಯಸುತ್ತೀರಿ?
ತಮಿಳು ಕುರಿತಾಗಿ ವಿಶೇಷಣ ಸೇರಿಸಿ ಮಾತನಾಡುವ ಯಾರಿಗಾದರೂ ಸೈ!

~.~
  • BogaleRagale ರವರ ಬ್ಲಾಗ್
  • Login or register to post comments
  • 350 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 3, 2007 - 2:18am — Shyam Kishore

Re: 'ಕೌನ್ ಬನೇಗಾ ಕಾಮಿಡಿಪತಿ' ಕ್ವಿಜ್ !

Shyam Kishore's picture

ನನಗೆ ಹೊಳೆದ ಒಂದು ಪ್ರಶ್ನೆ (ಕಾಮಿಡಿ ಅಲ್ಲ ಅಂತ ಅನ್ನಿಸಿದರೆ ಬೇಸರಿಸದಿರಿ):

೧. ಭಾರತದಲ್ಲಿ ಚುನಾವಣೆಗಳು ಎಷ್ಟು ವರ್ಷಕ್ಕೊಮ್ಮೆ ನಡೆಯುತ್ತವೆ?

(ಅ) ಐದು ವರ್ಷ   (ಬ) ಎರಡು ವರ್ಷ  (ಕ) ಯಾವಾಗ ಬೇಕಾದರೂ  (ಡ) ಆ ದೇವರಿಗೂ ಗೊತ್ತಿಲ್ಲ!

- ಶ್ಯಾಮ್ ಕಿಶೋರ್

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
January 3, 2007 - 8:43am — BogaleRagale

Re: 'ಕೌನ್ ಬನೇಗಾ ಕಾಮಿಡಿಪತಿ' ಕ್ವಿಜ್ !

BogaleRagale's picture

ಶ್ಯಾಮ್ ಕಿಶೋರ್ ಅವರೆ,
ನಿಮ್ಮ ಈ ಪ್ರಶ್ನೆಗೆ ಉತ್ತರಿಸಿದವರಿಗೆ ಒಂದು ಕೋಟಿಯಲ್ಲ, ದುಪ್ಪಟ್ಟು ಕೋಟಿ ಕೋಟಿ ಬಹುಮಾನ ಕೊಡಲು ಕೂಡ ಸಿದ್ಧ! Smiling
- ಅನ್ವೇಷಿ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಶ್ನೆ - ಉತ್ತರ
  • ಎ ಬಿ ತಪ್ಪಿದ್ದೆಲ್ಲಿ?
  • ಸಂಪದ Podcastನ ೧೧ನೇ ಸಂಚಿಕೆಯಲ್ಲಿ ಡಾ. ಉಲ್ಲಾಸ್ ಕಾರಂತ
  • ದಿನಕ್ಕೊಂದು ಪ್ರಶ್ನೆ (೩)
  • ಮ್ಲೇಚ್ಚ ಭಾಷೆ ಅಂದರೇನು?
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 189 ಅತಿಥಿಗಳು ಆನ್ಲೈನ್ ಇರುವರು.


ಕವಿತೆಯೆಂದರೆ ಶಬ್ದಗಳ ಹಂದರವಲ್ಲ, ಜೀವನದೆಡೆಗಿನ ಅನುಸಂಧಾನದ ದೃಷ್ಟಿಕೋನ.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator