ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › BogaleRagale ರವರ ಬ್ಲಾಗ್

ಬಡವರ ನಿರ್ಮೂಲನೆಯೇ UPA ಗುರಿ: ನಿಧಾನಿ

June 7, 2006 - 11:12am — BogaleRagale

(ಬೊಗಳೂರು ಜನಪರ ಬ್ಯುರೋದಿಂದ)
ಬೊಗಳೂರು, ಜೂ.6- ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಬಗ್ಗೆ ಕೇಂದ್ರದಲ್ಲಿರುವ Unprecedented Price Agenda ಸರಕಾರ ಸ್ಪಷ್ಟನೆ ನೀಡಿದ್ದು, ಕೃಷಿ ಆಧಾರಿತ ರಾಷ್ಟ್ರವಾದ ಭಾರತದಲ್ಲಿ ಕೃಷಿ ಸಂಪನ್ಮೂಲ ರಕ್ಷಣೆಗೆ ಇದು ಪೂರಕ ಎಂದು ಸ್ಪಷ್ಟಪಡಿಸಿದೆಯಲ್ಲದೆ ಬಡವರ ನಿರ್ಮೂಲನೆಯೇ ಸರಕಾರದ ಗುರಿ ಎಂದು (ಜನಸಾಮಾನ್ಯರನ್ನು ಕಾಲಿನಿಂದ) ಒತ್ತಿ ಒತ್ತಿ ಹೇಳಿದೆ.
ನಾವು ಅಧಿಕಾರಕ್ಕೆ ಬಂದ ಎರಡು ವರ್ಷದೊಳಗೆ ಪೆಟ್ರೋಲಿಯಂ ಉತ್ಪನ್ನದ ಬೆಲೆಯನ್ನು ದಾಖಲೆ 7ನೇ ಬಾರಿ ಏರಿಸಿದ್ದೇವೆ ಎಂದು ಕೊಚ್ಚಿಕೊಂಡ ನಿಧಾನಿ ಮನಮೋಹಕ್ ಅವರು, ಇದರಿಂದ ಸರಕು ಸಾಗಾಟ ಬೆಲೆ ಏರಿಕೆಯೊಂದಿಗೆ ತರಕಾರಿ ಬೆಲೆಯೂ ಏರುತ್ತದೆ. ಮತ್ತೆ ರಿಕ್ಷಾ, ಟ್ಯಾಕ್ಸಿ, ಬಸ್ ಪ್ರಯಾಣದರ ಹೆಚ್ಚಳ ಅನಿವಾರ್ಯ. ಒಟ್ಟಿನಲ್ಲಿ ಜನಸಾಮಾನ್ಯರು ಬದುಕಲು ಬೇಕಾದ ಜೀವನಾವಶ್ಯಕ ವಸ್ತುಗಳನ್ನು ಆಕಾಶದೆತ್ತರಕ್ಕೆ ಯಾರಿಗೂ ಸಿಗದಷ್ಟು ಹಾರಿಸುವ ಸಾಧನೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದರಿಂದ ಈ ದೇಶದಲ್ಲಿ ಬಡವರೇ ಇನ್ನಿಲ್ಲದಂತೆ ಮಾಡುವ ನಮ್ಮ (ತುಳಿಯುವ) ಕಾರ್ಯಾಚರಣೆಗೆ ಆನೆ ಬಲ ಬಂದಂತಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಕೃಷಿ ಸಂಪನ್ಮೂಲ ಸುರಕ್ಷಿತ: ಪೆಟ್ರೋಲ್ ಬೆಲೆಯನ್ನು ಆಗಾಗ ಏರಿಸುತ್ತಲೇ ಇರುತ್ತೇವೆ, ತತ್ಪರಿಣಾಮವಾಗಿ ತರಕಾರಿ, ಹಣ್ಣು ಹಂಪಲುಗಳ ಬೆಲೆ ಗಗನಕ್ಕೇರುತ್ತದೆ. ಏರಿದ ಬೆಲೆಯಿಂದಾಗಿ ಅದನ್ನು ಯಾರೂ ಖರೀದಿಸಲು ಅಸಾಧ್ಯ. ಹೀಗಿರುವಾಗ ದೇಶದ ಬೆಳೆಗಳು ಸಮೃದ್ಧವಾಗಿ ಕೃಷಿಕರ ಬಳಿಯಲ್ಲೇ ಸುರಕ್ಷಿತವಾಗಿ ಉಳಿಯುತ್ತವೆ. ಈ ರೀತಿ ಬೆಲೆ ಕೈಗೆಟುಕದಷ್ಟು ಎತ್ತರಕ್ಕೇರಿದರೆ ಯಾವ ನನ್ಮಗ ತಾನೇ ತರಕಾರಿ ತಿನ್ನುವ ದುಸ್ಸಾಹಸಕ್ಕಿಳಿಯುತ್ತಾನೆ? ಇದರಿಂದ ಕೃಷಿಯ ರಕ್ಷಣೆಯಾದಂತಾಗುವುದಿಲ್ಲವೇ? ಎಂದು ಪೆಟ್ರೋಲಿಯಂ ಸಚಿವ ಮುರಳಿ (ಅಯ್ಯೋ) ದೇವ್ರೇ ಪ್ರಶ್ನಿಸಿದ್ದಾರೆ.

ನರಕ ಶಿಕ್ಷೆಗೆ "ಅನುಭವ" ಅಗತ್ಯ: ಬೆಲೆ ಹೆಚ್ಚಳದಿಂದಾಗಿ ಜನ ಜೀವನ ನರಕ ಸದೃಶವಾಗುತ್ತದೆ. ಜನರು ಎಷ್ಟು ಚೆನ್ನಾಗಿ ನರಕಸದೃಶ ಜೀವನ ಅನುಸರಿಸುತ್ತಾರೆ ಎಂಬುದನ್ನು ನೋಡಲು ನಮಗೆ ತುಂಬಾ ಆಸೆಯಾಗಿದೆ. ಜನರಿಗೂ ಭೂಮಿಯಲ್ಲಿದ್ದುಕೊಂಡೇ ನರಕದಲ್ಲಿ ಯಾವ ರೀತಿಯೆಲ್ಲಾ ಶಿಕ್ಷೆ ಎದುರಿಸಬಹುದು ಎಂಬುದರ ಅನುಭವ ದೊರೆಯುತ್ತದೆ. ಮುಂದೆ ನರಕಕ್ಕೆ ಹೋದಾಗ ಈ Experience ಅವರಿಗೆ ತುಂಬಾ ಪ್ರಯೋಜನಕ್ಕೆ ಬರುತ್ತದೆ. ಅಲ್ಲಿ ಕೂಡ ಅನುಭವವಿದ್ದವರಿಗೆ ಪ್ರಾಶಸ್ತ್ಯವಿರುವುದರಿಂದ ಭಾರತದಿಂದ ಬಂದವರಿಗೆ ಮನ್ನಣೆ ದೊರೆಯುತ್ತದೆ ಎಂದು ನಿಧಾನಿ ಕಾರ್ಯಾಲಯವು ಸ್ಪಷ್ಟನೆಯಲ್ಲಿ ತಿಳಿಸಿದೆ.

ಇದಲ್ಲದೆ, ಈ ಜನ್ಮದಲ್ಲಿ ಮಾಡಿದ ಪಾಪಕರ್ಮಗಳಿಗೆ ಇಲ್ಲೇ ಶಿಕ್ಷೆ ಅನುಭವಿಸಿದರೆ, ನರಕಕ್ಕೆ ಹೋದ ಮೇಲೆ ಕುದಿಯುವ ಎಣ್ಣೆಯಲ್ಲಿ ತೇಲಾಡುವ ಶಿಕ್ಷೆಯಿಂದ ಕಡಿತ ದೊರೆಯಬಹುದು ಎನ್ನುವುದು ನಿಧಾನಿ ಕಾರ್ಯಾಲಯದ ವಿಶ್ವಾಸ.
ಬೆಲೆಗಳ ರಾಕೆಟ್: ಅಮೆರಿಕ, ರಷ್ಯಾ ಮುಂತಾದ ರಾಷ್ಟ್ರಗಳು ಮಂಗಳ ಗ್ರಹ, ಚಂದ್ರ ಮುಂತಾದ ಗ್ರಹಗಳಿಗೆ ರಾಕೆಟ್ ಹಾರಿಬಿಡುತ್ತಾರೆ. ಈ ನಿಟ್ಟಿನಲ್ಲಿ ನಮ್ಮದು ಬೆಲೆಯನ್ನಾದರೂ ಬಾಹ್ಯಾಕಾಶಕ್ಕೆ ಹಾರಿಬಿಡುವ ಸಣ್ಣ ಪ್ರಯತ್ನವಷ್ಟೆ ಎಂದು ಪ್ರಧಾನಿ ಕಾರ್ಯಾಲಯದ ಪರವಾಗಿ ಪತ್ರಿಕಾ ಹೇಳಿಕೆ ಪ್ರಕಟಿಸಿರುವ ಸಾನಿಯಾ ಗಾಂಧಿ ಕಾರ್ಯ ಲಯ ತಿಳಿಸಿದೆ.
Read http://BogaleRagale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 456 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಧಾನಿ ಪದೇ ಪದೇ ವಿದೇಶ ಪ್ರಯಾಣ ಗುಟ್ಟು ರಟ್ಟು
  • ಬಡತನ ಹೆಸರು ಚಿರಸ್ಥಾಯಿಯಾಗಿಸಲು ಪಣ
  • ಸಾವು
  • ವಿನೂತನ ಉದ್ಯೋಗ ಯೋಜನೆ: ನಿಧಾನಿ ಪ್ರಶಂಸೆ
  • ನಮ್ಮ ಪಾ(ತ)ಕಿ ಮಿತ್ರ ಪರೀಕ್ಷೆಯಲ್ಲಿ ಪಾಸಾಗಲಿ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
  • ಕ್ರುಶ್ಣಾನೀ ಬ್ಯಾಗನೆ ಬಾರೋ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ತೋಡು ಮತ್ತು ಮೊಗೆ
    October 7, 2008 - 3:03pm
  • harsha.st
    ಉ: ತೋಡು ಮತ್ತು ಮೊಗೆ
    October 7, 2008 - 2:48pm
  • girish.rajanal
    ಉ: ಹೀಗೆ ಒಂದು ಮಾತುಕತೆ(ಹೆಂಗಳೆಯರ)
    October 7, 2008 - 2:45pm
  • createam
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:42pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 2:22pm
  • createam
    ಉ: ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
    October 7, 2008 - 2:21pm
  • mahesha
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:16pm
  • savithasr
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:15pm
  • anivaasi
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:08pm
  • mahesha
    ಉ: ಕಡೇಹುಟ್ಟು
    October 7, 2008 - 1:51pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 145 ಅತಿಥಿಗಳು ಆನ್ಲೈನ್ ಇರುವರು.


ನಾನು ಸೋತಿಲ್ಲ. ಪ್ರಯೋಗ ಸಾಧ್ಯವಗದಂತಹ 10000 ದಾರಿಗಳನ್ನು ಕಂಡು ಕೊಂಡಿದ್ದೇನೆ.

— ಥಾಮಸ್ ಅಲ್ವಾ ಎಡಿಸನ್ (ತಮ್ಮ ವಿದ್ಯುತ್ ಬಲ್ಪ್ ಪ್ರಯೋಗ 10000 ನೇ ಪ್ರಯತ್ನದಲ್ಲಿ ಸಫಲವಾದಾಗ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator