ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › BogaleRagale ರವರ ಬ್ಲಾಗ್

ಹೋರಾಟಕ್ಕೆ ಕಿಡಿ ಹಚ್ಚಿಸಿದ ವಿಪರೀತ ಸಿಂಗ್!

November 8, 2006 - 5:26pm — BogaleRagale

(ಬೊಗಳೂರು ಮೀಸಲಾತಿ ಬ್ಯುರೋದಿಂದ)
ಬೊಗಳೂರು, ನ.8- MTVಯಲ್ಲಿ ಕೌಸಲ್ಯಾ ಸುಪ್ರಜಾ ರಾಮ.... ಅಂತ ಸುಪ್ರಭಾತ ಕೇಳಿ ಬಂದರೆ ಹೇಗಿರುತ್ತೆ? ನಿರೀಕ್ಷಿಸುವುದು ಸಾಧ್ಯವೇ ಇಲ್ಲ ಎಂದು ಇಡೀ ಜಗತ್ತು ಅಂದುಕೊಳ್ಳುವ ಮಾತು ಉಲ್ಟಾ ಹೊಡೆದಿದೆ.

ಒಂದು ಕಾಲದಲ್ಲಿ ದೇಶಾದ್ಯಂತ ಮನೆ ಮನೆಯಲ್ಲಿ ಅಡುಗೆ ಮಾಡಲು ಕಿಚ್ಚು ಹತ್ತಿಸಿದ್ದ ಮತ್ತು ಹಲವು ಮನೆಗಳ ದೀಪ ನಂದಿಸಲು ಕಾರಣರಾಗಿದ್ದ ಮಾಜಿ ನಿಧಾನಿ ವಿಪರೀತ ಸಿಂಗ್ ಅವರ ಹೇಳಿಕೆಯೇ ಎಲ್ಲ ಗೊಂದಲಕ್ಕೂ ಕಾರಣ.

ಅತ್ಯಂತ ಅಪರೂಪದ ಪ್ರಕರಣವೊಂದರಲ್ಲಿ, ಉನ್ನತ ಹುದ್ದೆಗೆ ನೇಮಿಸುವಾಗ ಪ್ರತಿಭೆಯೇ ಅರ್ಹತೆಯಾಗಲಿ ಎಂದು ಹೋರಾಟದ ಕಿಚ್ಚು ಹಚ್ಚಿಸುವಲ್ಲಿ ನಿಷ್ಣಾತರಾಗಿರುವ ಅವರು ಸ್ವರ್ಗಕ್ಕೇ ಕಿಚ್ಚು ಹಚ್ಚಲು ಹೊರಟಿದ್ದು, ಮತ್ತೊಂದು ಕಿಡಿ ಹತ್ತಿಸುವ ಸಿದ್ಧತೆ ಮಾಡಿದ್ದಾರೆ. ಇಷ್ಟಕ್ಕೂ ಅವರು ಹೇಳಿದ್ದೇನು? ಮೆರಿಟ್ ಆಧಾರದಲ್ಲೇ ನ್ಯಾಯಾಧೀಶರನ್ನು ನೇಮಿಸಬೇಕೆಂಬುದು.... ಅಷ್ಟೆ.

ಮೊನ್ನೆ ಮೊನ್ನೆವರೆಗೂ ಮಂಡಲ ಜಪ ಮಾಡುತ್ತಾ, ಮೀಸಲಾತಿ ನೀಡಿದರೆ ಮಾತ್ರವೇ ದೇಶ ಉದ್ಧಾರವಾಗುತ್ತದೆ ಎಂದೆಲ್ಲಾ ಹೇಳುತ್ತಾ ಇದ್ದ ತಮ್ಮ ನೇತಾರನ ಬಾಯಲ್ಲಿ ಇಂಥ ಮಾತುಗಳನ್ನು ಕೇಳಿ ಸ್ವತಃ ಅವರ ಬೆಂಬಲಿಗರು ರೋಷದಿಂದ ಕುದಿಯಲಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿಭೆಗೆ ಮಣೆ ಹಾಕಿದರೆ ಈ ದೇಶ ಉದ್ಧಾರವಾಗುವುದಾದರೂ ಹೇಗೆ, ರಾಜಕಾರಣಿಗಳು ಬದುಕುವುದಾದರೂ ಹೇಗೆ, ಓಟಿನ ಬ್ಯಾಂಕು ನಿರ್ನಾಮವಾಗಿಬಿಡುತ್ತದೆ ಎಂಬುದು ಅವರ ರೋಷಕ್ಕೆ ಕಾರಣ.
ಈ ಬಗ್ಗೆ ಸಿಂಗರನ್ನು ಮಾತನಾಡಿಸಿದಾಗ, ತಾನು ಆ ರೀತಿ ಹೇಳಲೇ ಇಲ್ಲ, ಹೇಳುವ ಮೊದಲೇ ಯಾರೋ ಬರೆದುಬಿಟ್ಟಿದ್ದಾರೆ ಎಂದು ಕಟ್ಟಾ ರಾಜಕಾರಣಿಯಂತೆ ಸ್ಪಷ್ಟಪಡಿಸಿದರು.

Bogaleragale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 413 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • OBC ಸರ್ಟಿಫಿಕೆಟ್ ಬಿಕರಿ
  • ರಾಜಕಾರಣಿಗಳ ಬಾಯಲ್ಲಿ 'ಬೊಗಳೆ' ಮಂತ್ರ!
  • ಸ್ತ್ರೀದೌರ್ಜನ್ಯ ಕಾಯಿದೆ: ಪುರುಷಮಣಿಗಳ ಸ್ವಾಗತ!
  • ಪ್ರಧಾನಿ ಪದೇ ಪದೇ ವಿದೇಶ ಪ್ರಯಾಣ ಗುಟ್ಟು ರಟ್ಟು
  • ಪ್ರೇಮಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಾರಣ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator