ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › BogaleRagale ರವರ ಬ್ಲಾಗ್

(ಹಿಂ)ಬಾಲಕರಿಗೂ ಸೈಕಲ್: ಸರ್ಕಾರಿ ಯೋಜನೆ ವಿಫಲ

November 14, 2006 - 9:37am — BogaleRagale

ಬೊಗಳೂರು, ನ.14- ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಪ್ರಕಟವಾದಾಗ ಹುಡುಗಿಯರೇ ಮೇಲುಗೈ ಸಾಧಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ವೇದ್ಯವಾದ ಸಂಗತಿ. ಇತ್ತೀಚೆಗೆ ಕರ್ನಾಟಕ ಸರಕಾರವು ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್‌ಗಳನ್ನು ವಿತರಿಸಿ ಅವರನ್ನು ಮತ್ತಷ್ಟು ವೇಗವಾಗಿ ಮುಂದುವರಿಯುವಂತೆ ಮಾಡಿರುವುದರಿಂದ ಆತಂಕಗೊಂಡಿರುವ ಹುಡುಗ ವಿದ್ಯಾರ್ಥಿ ಸಮುದಾಯವು ಸರಕಾರಕ್ಕೆ ಮೊರೆ ಹೋಗಿದೆ. ಒಟ್ಟಿನಲ್ಲಿ ಸರಕಾರದ ಯೋಜನೆಯೊಂದು ಅಸಫಲವಾಗುವ ಮೂಲಕ ಬಾಲಕರು ಹಿಂ-ಬಾಲಕರೇ ಆಗಿಯೂ, ಬಾಲಕಿಯರು ಮುಂ-ಬಾಲಕಿಯರೇ ಆಗಿಯೂ ಉಳಿಯುವಂತಾದ ಕತೆಯಿದು. (Bogaleragale.blogspot.com)

ನಮಗೆ ಈ ಹುಡುಗಿಯರನ್ನು ಹಿಂಬಾಲಿಸಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಒಕ್ಕೊರಲ ಬೇಡಿಕೆಗೆ ಮಣಿದ ಸರಕಾರವು, ಹುಡುಗಿಯರನ್ನು ಹಿಂಬಾಲಿಸಲು ಅನುವಾಗುವಂತೆ ಹುಡುಗರಿಗೂ ಸೈಕಲ್‌ಗಳನ್ನು ವಿತರಿಸಲು ನಿರ್ಧರಿಸಿತ್ತು ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಸೈಕಲೇರಿ ಹುಡುಗಿಯರನ್ನು ಹಿಂಬಾಲಿಸಲು ಹೊರಟ ಹುಡುಗರ ದಂಡು ಅಲ್ಲಲ್ಲಿ ಮುಗ್ಗರಿಸುತ್ತಾ ಮುಂದೆ ಸಾಗುತ್ತಿರುವುದು ಗಮನಕ್ಕೆ ಬಂದಿದೆ. ಎಷ್ಟು ಮುಂದುವರಿದಿದ್ದಾರೆ ಎನ್ನುವುದನ್ನು ಪರೀಕ್ಷಾ ಫಲಿತಾಂಶದಿಂದಲೇ ಅರಿಯಬಹುದಾಗಿರುವುದರಿಂದ ಈ ಕುರಿತು ಅವಸರ ಮಾಡಿದ ಬೊಗಳೆ ರಗಳೆಯು ಭವಿಷ್ಯ ವಾಣಿ ಬ್ಯುರೋದ ಮೊರೆ ಹೋಗಲಾಯಿತು.

ಈ ಭವಿಷ್ಯ ನುಡಿಯ ಪ್ರಕಾರ, ಹುಡುಗಿಯರ ಹಿಂದೆ ಬಿದ್ದ ಹುಡುಗ ವಿದ್ಯಾರ್ಥಿಗಳು ಸೈಕಲೇರಿ ಮುಂದೆ ನಡೆಯುವ ಬದಲು ಮತ್ತಷ್ಟು ಹಿಂದೆ ಬೀಳಲಿದ್ದಾರೆ. ಇದಕ್ಕೆ ಕಾರಣವನ್ನೂ ಪತ್ತೆ ಹಚ್ಚಲಾಗಿದ್ದು, ಅವರ "ಹುಡುಗಿಯರ ಹಿಂದೆ ಬೀಳುವಿಕೆ" ಪ್ರಕ್ರಿಯೆಯಿಂದಾಗಿ ಅವರು ಓದಿನಲ್ಲೂ ಹಿಂದೆ ಬಿದ್ದಿದ್ದರು!

ಈ ವರದಿಯನ್ನು ತೀವ್ರವಾಗಿ ಪ್ರತಿಭಟಿಸಿರುವ ಹುಡುಗ ವಿದ್ಯಾರ್ಥಿಗಳು, ತಾವು ಹಿಂದೆ ಬೀಳಲು ಕಾರಣವನ್ನೂ ನೀಡಿದ್ದಾರೆ.

"ಈ ಹುಡುಗಿಯರು ನಮ್ಮ ಸೈಕಲನ್ನು (ಮನಸ್ಸನ್ನು ಎಂದು ಓದಿಕೊಳ್ಳುವುದು) ಹಾಳು ಮಾಡುತ್ತಾರೆ, ಅವರು ನಮ್ಮ ಸೈಕಲ್ ಚಕ್ರದ (ಕನಸಿನ ಬಲೂನಿನ ಅಂತ ಓದಿಕೊಳ್ಳುವುದು) ಗಾಳಿ ಠುಸ್ಸೆಂದು ತೆಗೆದುಬಿಡುತ್ತಾರೆ. ಹಾಗಾಗಿ ಎದ್ದು ಬಿದ್ದು ಸರಿಪಡಿಸಿಕೊಂಡು ಮುಂದೆ ಬರುವಾಗ ವಿಳಂಬವಾಗಿದೆ!!!" ಎಂಬುದು ಅವರಿಂದ ದೊರೆತ ಉತ್ತರ.

------------------
ಬರಲಿದೆ ಪ್ರಯಾಸ ಕಥನ!!!
ಬೊಗಳೆ ರಗಳೆ ಬ್ಯುರೋದಿಂದ ಆವಂತಿಕಾಪುರಿ(ಉಜ್ಜಯಿನಿ) ಪ್ರಯಾಸ ಕಥನ!
ಭಟ್ಟಿ ವಿಕ್ರಮಾದಿತ್ಯನ ನಾಡಿಗೆ ಅಸತ್ಯಾನ್ವೇಷಿ ಭೆಟ್ಟಿ!
ಎಂದೂ ಕಂಡು ಕೇಳರಿಯದ ಪ್ರಯಾಸ ಕಥನ ಶೀಘ್ರವೇ
ಸಚಿತ್ರವಾಗಿ ಮೂಡಿಬರಲಿದೆ.
ನಿರೀಕ್ಷಿಸಬೇಡಿ...

~.~
  • BogaleRagale ರವರ ಬ್ಲಾಗ್
  • Login or register to post comments
  • 301 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬರಲಿದೆ ಪ್ರಯಾಸ ಕಥನ!!!
  • ವಿದ್ಯಾರ್ಥಿನಿಯರು ಮದ್ಯಾರ್ಥಿನಿಯರಾದಾಗ!
  • ಮಾತು ಮದಿರೆಯೇ ಮಾನಿನಿಯರಿಗೆ ?
  • ಅರಣ್ಯ ನಾಶ ಮಾಡಿದ ಮಗು ಮೇಲೆ ಕೇಸು
  • OBC ಸರ್ಟಿಫಿಕೆಟ್ ಬಿಕರಿ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಶರಣರ ಸಾವನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
  • ಕುಮಾರವ್ಯಾಸ ಭಾರತ
  • ಬನವಾಸಿ ಆಸುಪಾಸಿನ ಕನ್ನಡ
  • ಬಾರೋ ಸಾಧನಕೇರಿಗೆ...
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿವಾಸ ವೀ. ಬ೦ಗೋಡಿ
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 24, 2008 - 11:18am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
ಇನ್ನಷ್ಟು
ಈಗಿನಂತೆ 8 ಸದಸ್ಯರು ಮತ್ತು 52 ಅತಿಥಿಗಳು ಆನ್ಲೈನ್ ಇರುವರು.


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator