ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

ನರ್ಸರಿ... ಸಂದರ್ಶನವೇ ಸರಿ: ಪುಟಾಣಿ ಪರಿಷತ್ ಆಗ್ರಹ

October 18, 2006 - 2:25pm — BogaleRagale

(ಬೊಗಳೂರು ನರ್ಸರಿ-ನರ್ತಪ್ಪು ಬ್ಯುರೋದಿಂದ)
ಬೊಗಳೂರು, ಅ.18- ನರ್ಸರಿ ಶಿಕ್ಷಣಕ್ಕೆ ಸೇರಿಸಿಕೊಳ್ಳಲು ಸಂದರ್ಶನ ನಡೆಸಲಾಗದು ಎಂಬ ಕೋರ್ಟ್ ಆದೇಶದಿಂದ ತೀವ್ರವಾಗಿ ಆಕ್ರೋಶಗೊಂಡಿರುವ ಪುಟಾಣಿಗಳನ್ನೊಳಗೊಂಡ ನರ್ಸರಿ ವಿದ್ಯಾರ್ಥಿ ಪರಿಷತ್ ಸಂಘಟನೆಯು ಭಾರತ್ ಬಂದ್‌ಗೆ ಕರೆ ನೀಡಿದೆ.

ಇಂದಿನ ಈ ಹೈ ಕೆಟ್ ಯುಗದಲ್ಲಿ ಪ್ರತಿಯೊಂದಕ್ಕೂ ಇಂಟರ್ವ್ಯೂ ನೀಡಬೇಕಾಗುತ್ತದೆ. ಹಾಗಿರುವಾಗ ನಮಗೆ ಇಂಟರ್ವ್ಯೂ ನಡೆಸದೆ ಅಪಮಾನ ಮಾಡಲಾಗುತ್ತಿದೆ ಎಂದು ಹೇಳಿರುವ ಪುಟಾಣಿ ಪರಿಷತ್ ಅಧ್ಯಕ್ಷ ಪುಟ್ಟು ಕುಮಾರ್, ನಮ್ಮ ಅಪ್ಪ ಅಮ್ಮಂದಿರಿಗೂ ಇಂಟರ್ವ್ಯೂ ನಡೆಸಬಾರದೆಂಬ ಆದೇಶ ಶುದ್ಧ ತಪ್ಪು ಎಂದು ಸಾರಿದ್ದಾರೆ.

ಇದೇ ರೀತಿಯಲ್ಲಿ ದೇಶ ವಿದೇಶದಲ್ಲಿ ಭಾರಿ ಪ್ರಮಾಣದಲ್ಲಿ ಪ್ರತಿಭಟನೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಪುಟ್ಟು ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೊಗಳೆ ರಗಳೆ ಬ್ಯುರೋ ನೇರವಾಗಿ ಪುಟ್ಟು ಮತ್ತು ಪುಟ್ಟಿಯರ ಕಿವಿ ಹಿಡಿದು ಸಂದರ್ಶನ ನಡೆಸಿತು.

ತಮ್ಮ ಚಿತ್ರ ಸಹಿತ ತೊದಲು ನುಡಿಗಳು ಬೊಗಳೆ ರಗಳೆ ಪತ್ರಿಕೆಯಲ್ಲಿ ಪ್ರಕಟವಾಗುತ್ತದೆ ಎಂದು ತೀವ್ರವಾಗಿ ಉತ್ಸಾಹದಿಂದ ಕುದಿದು ಹೋದ ಈ ಪುಟ್ಟು-ಪುಟ್ಟಿಗೆ ಒಂದು ಪ್ರಶ್ನೆ ಹಾಕಲಾಯಿತು.

ನ್ಯಾಯಾಲಯವೇ ಇಂಟರ್ವ್ಯೂ ಮಾಡಬಾರದು ಎಂದು ಹೇಳಿದಾಗ ನೀವೇಕೆ ಬೇಕು ಅನ್ನುತ್ತಿದ್ದೀರಿ? ಎಂದು ಕೇಳಿದಾಗ ಉತ್ತರ ಬಂತು: "ನೋಡಿ, ಮೊದಲನೆಯದಾಗಿ ನೀವೇ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ನಮ್ಮ ಸಂದರ್ಶನ ಮಾಡುತ್ತಿದ್ದೀರಿ" ಎಂದು ರಪ್ಪನೆ ಪೀಪಿ ಊದಿತು ಪುಟ್ಟಿ.

ಆದರೂ ಸುಧಾರಿಸಿಕೊಂಡ ಬ್ಯುರೋ ಸಿಬ್ಬಂದಿ, ಪುಟಾಣಿ ಪುಟ್ಟುವಿನತ್ತ ಮುಖ ಮಾಡಿದಾಗ, ಅದರ ಬಾಯಿಯಿಂದ ಉದುರಿದ ಅಣಿಮುತ್ತುಗಳು: "ನೋಡಣ್ಣಾ... ನಮ್ಮದು ಇದು ಕಲಿಯುವ ವಯಸ್ಸಾ? ಏನಿದ್ದರೂ ಆಟವಾಡುತ್ತಾ ಇರಬೇಕಾದವರು ನಾವು. ನಮ್ಮನ್ನು ಸಂದರ್ಶನ ಮಾಡಿದ್ರೆ ನಾವು ತಪ್ಪು ತಪ್ಪಾಗಿ ಉತ್ತರಿಸಿ ಬಚಾವ್ ಆಗುತ್ತೇವೆ. ಹಾಗೆಯೇ ಅಪ್ಪ ಅಮ್ಮಂದಿರನ್ನೂ ಸಂದರ್ಶನ ಮಾಡುತ್ತಾರೆ. ಅವರಿಗೂ ಸರಿಯಾಗಿ ಠುಸ್ ಪುಸ್ ಇಂಗ್ಲಿಷ್ ಬರೋದಿಲ್ಲ. ಅವರೂ ಎಡವುತ್ತಾರೆ. ಮತ್ತೆ ಶಾಲೆಗಳ ಆಡಳಿತ ಮಂಡಳಿಗಳಿಗೆ ಮಕ್ಕಳ ಅಪ್ಪಂದಿರ ಜೇಬಿನ ಮೇಲೆಯೇ ಕಣ್ಣು ಇರೋದ್ರಿಂದ ನಮ್ಮಪ್ಪನ ಜೇಬು ಕೂಡ ಅಷ್ಟೇನೂ ದಪ್ಪವಿಲ್ಲ. ಹಾಗಾಗಿ ಸಂದರ್ಶನದ ವೇಳೆ ಅವರು ಫೇಲ್ ಆಗೋದು ಗ್ಯಾರಂಟಿ. ಹೀಗಾದರೆ ನಮಗೆ ಶಾಲೆಗೆ ಹೋಗುವ ಕೆಲಸವೇ ಉಳಿಯುತ್ತಲ್ಲಾ...?"

ಈ ಕಾರಣ ಕೇಳಿದ್ದೇ ತಡ, ನಮ್ಮ ಸಿಬ್ಬಂದಿ ಯಾರದ್ದು ಅಂತಾನೂ ನೋಡದೆ ಅಲ್ಲಿದ್ದ ಗಂಟುಮೂಟೆ ಕಟ್ಟಿಕೊಂಡು, ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿದರೆ ಎಂಬ ಭಯದಿಂದ ಅಲ್ಲಿಂದ ಕಾಲ್ಕಿತ್ತರು ಎಂದು ನಮ್ಮ ಪ್ರತಿಸ್ಪರ್ಧಿ ಪತ್ರಿಕಾ ವರದಿಗಾರರು ವರದಿ ಮಾಡಿದ್ದಾರೆ.

BogaleRagale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 455 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮನಸು ಕದ್ದ ಹಸುಳೆ ಮೇಲೆ ದರೋಡೆ ಕೇಸು!
  • Theft Tech. ಕೋರ್ಸ್
  • ಮಾತು ಮದಿರೆಯೇ ಮಾನಿನಿಯರಿಗೆ ?
  • ಮಲೇಷ್ಯಾದಲ್ಲಿ ಬಾಲಿವುಡ್ ಚಿತ್ರೀಕರಣ ನಿಷೇಧ ಚಿಂತನೆ !
  • ಬಿಹಾರದಲ್ಲಿ ಬ್ರೇಕ್ಲಾ ತಂತ್ರ-ಜ್ಞಾನ ವಿವಿ ಆರಂಭ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 195 ಅತಿಥಿಗಳು ಆನ್ಲೈನ್ ಇರುವರು.


ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಸತ್ವದಾಶೆಯ ನೀಗಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator