ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

ನಮ್ಮ ಪಾ(ತ)ಕಿ ಮಿತ್ರ ಪರೀಕ್ಷೆಯಲ್ಲಿ ಪಾಸಾಗಲಿ

October 19, 2006 - 4:15pm — BogaleRagale

(ಬೊಗಳೂರು ಭಯೋತ್ಪಾದನಾ ಬ್ಯುರೋದಿಂದ)
ಬೊಗಳೂರು, ಅ.19- ಪಾತಕಿಸ್ತಾನಕ್ಕೆ ಪರೀಕ್ಷೆ ನಡೆಸುವುದಾಗಿ ನಿಧಾನಿ ಮನಮೋಹಕ ಸಂಗ್ ಮತ್ತೆ ಮತ್ತೆ ಘೋಷಿಸಿದ್ದಾರೆ.

ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಮುಂಬಯಿ ಬಾಂಬ್ ಸ್ಫೋಟದಲ್ಲಿ ಪಾಕಿಸ್ತಾನದ ಐಎಸ್ಐ ಕೈವಾಡವಿದೆ ಎಂದೆಲ್ಲಾ ನಮ್ಮ ಕೆಲಸವಿಲ್ಲದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಾಗಾಗಿ ಪಾತಕಿಸ್ತಾನಕ್ಕೆ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ನಮ್ಮ ಬೇಹುಗಾರಿಕಾ ಏಜೆನ್ಸಿಗಳು, ರಕ್ಷಣಾ ಪಡೆಗಳು ಮತ್ತಿತರ ದೇಶರಕ್ಷಣೆಯಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವ ಇಲಾಖೆಗಳು ಮಾಡಿರುವ ಪರೀಕ್ಷೆ ಸರಿ ಇಲ್ಲ. ಇವೆಲ್ಲದರಲ್ಲಿ ನಮ್ಮ ನೆರೆಯ ಮಿತ್ರ ರಾಷ್ಟ್ರವಾಗಿರುವ ಪಾತಕಿಸ್ತಾನ ಅನುತ್ತೀರ್ಣವಾಗಿದೆ. ಮಿತ್ರರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾದುದರಿಂದ ಅದಕ್ಕೆ ನಾವೇ ಪರೀಕ್ಷೆ ನಡೆಸುತ್ತೇವೆ, ಹೇಗಾದರೂ ಅವರು ಉತ್ತೀರ್ಣರಾಗಬೇಕು ಎಂದು ಅವರು ಹೇಳಿದರು.

ಭಯೋತ್ಪಾದಕ ಚಟುವಟಿಕೆಯಲ್ಲಿ ಎತ್ತಿದ ಕೈ ಆಗಿರುವ ಮತ್ತು ನರ್ಸರಿಯಿಂದಲೇ ಭಯೋತ್ಪಾದಕ ಶಿಕ್ಷಣದಲ್ಲಿ ಪಳಗಿರುವ ಅನುಭವಿ ರಾಷ್ಟ್ರವೊಂದರ ಸಹಾಯ ಪಡೆದು ಉಗ್ರವಾದದ ವಿರುದ್ಧ ಹೋರಾಡಲು ರೂಪಿಸಲಾಗಿರುವ ಭಾರತ-ಪಾತಕಿಸ್ತಾನ ಜಂಟಿ ಕಾರ್ಯತಂತ್ರ ವ್ಯವಸ್ಥೆಯ ಕುರಿತು ಪುತ್ರಿಕರ್ತರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಸಿದ್ಧಾಂತ ನಮ್ಮದು ಎಂದ ಅವರು, ಈಗೆಲ್ಲಾ ಚುಚ್ಚುತ್ತಿರುವುದು ಸಣ್ಣ ಮುಳ್ಳುಗಳು. ಕಣ್ಣಿಗೇ ಕಾಣಿಸುವುದಿಲ್ಲ. ಇನ್ನೂ ದೊಡ್ಡ ಮುಳ್ಳು ಚುಚ್ಚಿದ ನಂತರ, ಅದು ಕಣ್ಣಿಗೆ ಕಂಡರೆ ಅದನ್ನು ತೆಗೆಯುವ ಪ್ರಯತ್ನ ಮಾಡಲಾಗುತ್ತದೆ ಎಂದು ಅವರು ಅಳಿದುಳಿದಿರುವ ಸ್ವದೇಶೀಯರಿಗೆ ಭರವಸೆ ನೀಡಿದರು.

ಮಿತ್ರರ ರಕ್ಷಣೆಯೇ ನಮ್ಮ ಕರ್ತವ್ಯ. ಮಿತ್ರರು ಏನು ಮಾಡಿದರೂ ಸಹಿಸಬೇಕು ಎನ್ನುವುದು ಮೈತ್ರಿ ಧರ್ಮ. ಅವರೆಲ್ಲಾ ವಿಭಿನ್ನ ರೀತಿಯ (ಮಾರಣ) ಹೋಮಗಳನ್ನು ನಡೆಸುತ್ತಾ ಸುಭಿಕ್ಷೆಗಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದ ಅವರು, ಭಯೋತ್ಪಾದನೆ ಸೃಷ್ಟಿಸುವುದು ಪಾತಕಿಸ್ತಾನಕ್ಕೆ ರಾಜಕೀಯ ಅನಿವಾರ್ಯವಾಗಿದ್ದರೆ, ಅದನ್ನು ಸಹಿಸಿಕೊಂಡು ಭಾರತವೊಂದು ಸಹಿಷ್ಣು ರಾಷ್ಟ್ರ ಎಂದು ಜಗತ್ತಿಗೇ ತೋರಿಸಿಕೊಡುವುದು ನಮ್ಮ ರಾಜಕೀಯ ಅನಿವಾರ್ಯ ಎಂದು ವಿವರಿಸಿದರು.

ಪಾತಕಿಸ್ತಾನದಲ್ಲಿ ಬಹುಸಂಖ್ಯಾತರ ರಕ್ಷಣೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆಯೋ, ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೂ ಅದೇ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಅವರು, ಇಲ್ಲದಿದ್ದರೆ ನಾವು ಮತ್ತೊಮ್ಮೆ ಆರಿಸಿಬಂದು ದೇಶ ಸೇವೆ ಮಾಡುವುದಾದರೂ ಹೇಗೆ ಎಂದವರು ಪ್ರಶ್ನಿಸಿದರು.

bogaleragale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 652 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಿನೂತನ ಉದ್ಯೋಗ ಯೋಜನೆ: ನಿಧಾನಿ ಪ್ರಶಂಸೆ
  • ಪಟಾಕಿ ಸಿಡಿಸಿದ್ದಕ್ಕೆ ಪಾತಕಿ ಪಟ್ಟವೇ?!
  • ಮುಂಬಯಿಯನ್ನು ಬೊಂ'ಬಾಯಿ'ಯಾಗಿಸಲು ಸಂಚು !
  • ದಾಖಲೆ: ಅಮಿತಾಭ್‌ಗೆ ಸೆಡ್ಡು ಹೊಡೆದ ಜಾರಕಾರಣಿಗಳು!
  • ಅರಣ್ಯ ನಾಶ ಮಾಡಿದ ಮಗು ಮೇಲೆ ಕೇಸು
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 195 ಅತಿಥಿಗಳು ಆನ್ಲೈನ್ ಇರುವರು.


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator