ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

ಪ್ರಯಾಸ ಕಥನ, 1/4 ಭಾಗ

November 21, 2006 - 9:07am — BogaleRagale

ಎಲ್ಲರೂ ಪ್ರಯಾಣ ಮಾಡುತ್ತಾರೆ, ಎಲ್ಲರೂ ಪ್ರಯಾಸ ಕಥನ ಬರೆಯುತ್ತಾರೆ, ನಿಮ್ಮ ಬೊಗಳೆಯಲ್ಲೇಕಿಲ್ಲ ಎಂಬ ಅಪವಾದದಿಂದ ಅವಮಾನಿತನಾಗಿ ಉಜ್ಜೈನಿ ಯಾತ್ರೆಗೆ ತೆರಳಿದ ಅಸತ್ಯಾನ್ವೇಷಿಯಿಂದ ಬೊಗಳೆ-ರಗಳೆಗಾಗಿಯೇ ವಿಶೇಷವಾಗಿ ಸಿದ್ಧಪಡಿಸಲಾದ ದಯನೀಯ ಪ್ರಯಾಸ ಕಥನವಿದು. (ಚಿತ್ರ ಸಹಿತ Bogaleragale.blogspot.com)

ಪ್ರಯಾಸ ಕಥನ ಜವಾಬ್ದಾರಿಯನ್ನು ಬೊಗಳೆ-ರಗಳೆಯ ಏಕಸದಸ್ಯ ಬ್ಯುರೋ ನನಗೊಪ್ಪಿಸಿದ ಪರಿಣಾಮ ಬೇತಾಳನನ್ನೇ ಕಾಡಿದ ವಿಕ್ರಮಾದಿತ್ಯ ಆಳಿದ ಮತ್ತು ಕಳ್ಳಭಟ್ಟಿ ನೆನಪಿಸುವ ಭಟ್ಟಿ ಇರುವ ನಾಡಿಗೆ ತೆರಳಲು ನಿರ್ಧರಿಸಿದೆ. ಭಾರತದ ದೇಶದ ನಾಭಿ ಪ್ರದೇಶ ಎಂದೇ ಕರೆಯಲಾಗುವ ಉಜ್ಜಯಿನಿಗೆ ಬಹಳ ದೂರವಿದೆ. ರೈಲು ಏರಿದರೆ ಅದು ತುಂಬಾ ಉದ್ದವಿದೆ, ತಲುಪುವುದು ತಡವಾಗುತ್ತದೆ, ವಿಮಾನ ಏರಿದರೆ ಇಳಿಯುವುದಾದರೂ ಎಲ್ಲಿ? ಆಕಾಶದಲ್ಲೇ ಟ್ರಾಫಿಕ್ ಜಾಮ್ ಆದರೆ ಎಂಬ ಆತಂಕ, ಕಾರಿನಲ್ಲಿ ಹೋದರೆ ಏಕಸದಸ್ಯ ಬ್ಯುರೋದ ಸಮಸ್ತ ಸಿಬ್ಬಂದಿಗೆ ಜಾಗ ಸಾಕಾಗದು. (ಎಡಚಿತ್ರ: ಉಜ್ಜಯಿನಿಯಲ್ಲಿ ಆಪ್ತವಾಗಿಬಿಟ್ಟ 'ಮೃಚ್ಛಕಟಿಕ!')

ಈ ರೀತಿ ಯೋಚನೆ ಮಾಡಿಮಾಡಿ ಕೊನೆಗೆ ಧೂಮ್ರಶಕಟವನ್ನೇರಿದಾಗ ಹೊತ್ತು ಮೀರಿತ್ತು. ಇಂದೋರಿನಿಂದ ಹೊರಟ ಈ ಧೂಮ್ರಶಕಟವು ಕಟಕಟ ಎಂದು ಸದ್ದು ಮಾಡುತ್ತಾ, ಅಕಟಕಟಾ, ನಾವೇಕೆ ಈ ಬಸ್ಸೇರಿದೆವು ಎಂದು ಚೆನ್ನಾಗಿ ಯೋಚಿಸುವಂತೆ ಮಾಡಿತು. ಧೂಳು ತುಂಬಿದ, ಹೊಂಡಾ-ಗುಂಡಿ ತುಂಬಿದ ಮಾರ್ಗದಲ್ಲಿ ಹೋಗುವಾಗ ಮನಸ್ಸು ಮಾತ್ರ "ಕಾಶೀಲಿ ಸ್ನಾನ ಮಾಡು, ಕಾಶ್ಮೀರ ಸುತ್ತಿ ನೋಡು, ಜೋಗಾದ ಗುಂಡಿ ಒಡೆಯ ನಾನೆಂದು ತುಂಬಿ ಹಾಡು" ಅನ್ನೋ ರಾಜಕುಮಾರರ ಹಾಡು ಈ ಗುಂಡಿಗಳನ್ನೇ ನೋಡಿ ಮೂಡಿಬಂದಿರಬೇಕು ಅನ್ನೋದನ್ನೇ ಯೋಚಿಸುತ್ತಿತ್ತು. (ಬಲಚಿತ್ರ: ಉಜ್ಜಯಿನಿ ಮಹಾಕಾಲೇಶ್ವರ ಮಂದಿರ)

ಒಬ್ಬನೇ ಉಜ್ಜಯಿನಿಗೆ ತೆರಳುವುದೆಂದು ತೀರ್ಮಾನಿಸಿದರೂ, ನಿಲ್ದಾಣದಲ್ಲಿ ನಿಂತಿದ್ದವರೆಲ್ಲಾ ಅದೇ ಬಸ್ಸನ್ನೇರುವವರೇ! ಕೊನೆಗೆ 62 ಮಂದಿ ನನ್ನ ಜತೆಗೆ, ನಾನೆಲ್ಲಿ ಹೋಗುತ್ತಿದ್ದೇನೆ ಎಂದು ತಿಳಿದುಕೊಳ್ಳುವ ಕುತೂಹಲದಿಂದಲೋ ಏನೋ ಬಂದೇ ಬಿಟ್ಟರು.

ಹೆಸರಿಗೆ ಮಾತ್ರ ಎಂಪಿಎಸ್ಆರ್ಟಿಸಿ, ನಿರ್ವಹಣೆಯೆಲ್ಲವೂ ಖಾಸಗಿಯೇ ಆದುದರಿಂದ ಈ ಧೂಮ್ರಶಕಟದೊಳಗೆ ಜನ ಗಿಜಿಗಿಜಿಗುಟ್ಟುತ್ತಿದ್ದರೂ "ಖಾಲೀ ಹೈ, ಖಾಲಿ ಹೈ, ಕೋಯೀ ನಹೀ ಹೈಂ" ಎನ್ನುತ್ತಾ ನಿರ್ವಾಹಕ ಮಹಾಶಯ ಮತ್ತಷ್ಟು ಜನರನ್ನು ಕೂಗಿ ಕೂಗಿ ಕರೆಯುತ್ತಾ ಬಸ್ಸೇರಿಸುವ ಹವಣಿಕೆಯಲ್ಲಿರುವುದು ಆತನ ಆತ್ಮವಿಶ್ವಾಸದ ಬಗ್ಗೆ ಹುಬ್ಬೇರಿಸುವಂತೆ ಮಾಡಿತು. ಎಲ್ಲಿ ತುಂಬಿಸುತ್ತಾನೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿತ್ತು.

ಅಂತೂ ಒತ್ತಿ ಒತ್ತಿ ಕುಳಿತಾಗ ಮೊದಲು ನೋವಾದರೂ, ಸ್ವಲ್ಪ ಸಮಯದ ಬಳಿಕ ಒಂಥರಾ ಸಮಾಧಾನಕರ ಮನೋಭಾವನೆ! ಯಾಕೇಂತ ತಪ್ಪು ತಿಳಿದುಕೊಳ್ಳಬಾರದು. ಇಷ್ಟರಲ್ಲೇ ಕಾರಣ ಹೇಳುತ್ತೇನೆ.

ಅಂತೂ ಬಸ್ಸಿನಲ್ಲಿ ಕೂತಾಗ "ಪರ್‌ದೇಸೀ ಪರ್‌ದೇಸೀ ಜಾನಾ ನಹೀಂ" ಎಂಬ ಹಾಡು ಕಿವಿ ತಮಟೆ ಹರಿಯುವಷ್ಟು ಇಂಪಾಗಿ ಮೂಡಿಬರುತ್ತಿತ್ತು. ನಾನು ಪರ-ದೇಸಿಯೇ ಆಗಿದ್ದುದರಿಂದ ನನ್ನನ್ನೇ ಉಲ್ಲೇಖಿಸಿ ಹೇಳುತ್ತಿದ್ದಾರೆ ಎಂದುಕೊಂಡು ಸಮಾಧಾನಗೊಂಡೆ.

ದಾರಿಯುದ್ದಕ್ಕೂ ಬಯಲು ಪ್ರದೇಶ. ದಖ್ಖಣದ ಪ್ರಸ್ಥಭೂಮಿ ಎಂದು ನಮಗೆ ಭೂಗೋಳ ಮೇಷ್ಟ್ರು ಹೇಳಿದ್ದು ನೆನಪಾಯಿತು. ಕಪ್ಪು ಮಣ್ಣು ಅಂತಲೂ ಹೇಳಿದ್ದರು. ಪೂರ್ತಿ ಕರ್ರಗೆ ಕಪ್ಪು ಅಲ್ಲ, ಕಡು ಬಣ್ಣದ ಮಣ್ಣು, ಸಮೃದ್ಧ ಕೃಷಿಯೋಗ್ಯ ಭೂಮಿ. ಕಣ್ಣು ಹಾಯಿಸಿದಾಗ ಯಾವುದೇ ಗಿಡ, ಮರಗಳಿಲ್ಲದಿರುವುದರಿಂದ, ದೂರಕ್ಕೆ ಕಣ್ಣು ಹಾಯಿಸಿದರೆ ಅಮೆರಿಕ, ಕೆನಡಾ, ಫ್ರಾನ್ಸ್, ನ್ಯೂಜಿಲೆಂಡ್, ಇಂಗ್ಲೆಂಡ್, ಇರಾನ್, ಫ್ರಾನ್ಸ್ ಮಾತ್ರವಲ್ಲ ಭಾರತದಲ್ಲಿರುವ ಬೊಗಳೆ ರಗಳೆಯ ಓದುಗ ಮಿತ್ರರನ್ನು ನೋಡಬಹುದಾಗಿತ್ತು!

ಅಂತೂ ಸುಮಾರು 60 ಕಿ.ಮೀ. ದೂರಕ್ಕೆ ಒಂದೂ ಮುಕ್ಕಾಲು ಗಂಟೆ ಬೇಕಾಯಿತು. ಧೂಳು ತುಂಬಿದ ಮಾರ್ಗ ಉಜ್ಜಯಿನಿಯಲ್ಲಿ ಇಳಿಯುವಾಗಲೇ ಗೊತ್ತಾದದ್ದು, ನನ್ನ ಅಕ್ಕ ಪಕ್ಕ ಕೂತವರೆಲ್ಲರೂ ಬಣ್ಣ ಬದಲಿಸಿದ್ದರು, ನಾನು ಮಾತ್ರ ಧೂಳಿನ ಕಣವೂ ತಗುಲದೆ ಸ್ವಚ್ಛವಾಗಿದ್ದೆ! ಇದಕ್ಕಾಗಿಯೇ ಒತ್ತಿ ಒತ್ತಿ ಕೂತಾಗ ಮನಸ್ಸು ಸಮಾಧಾನಗೊಂಡದ್ದು! ಬೇರೆ ಯಾವ ಕಾರಣವೂ ಇಲ್ಲ. ಇಷ್ಟು ಮಾತ್ರವಲ್ಲ, ನನ್ನ ಎಲುಬುಗಳು ಕೂಡ ಸರಿಯಾಗಿದ್ದವು. ಬೇರೆಯವರೆಲ್ಲಾ ತಮ್ಮ ತಮ್ಮ ತಪ್ಪಿದ ಕೀಲುಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು!

ಮೂಲತಃ ಉಜ್ಜಯಿನಿ ಎಂಬ ಊರನ್ನು ನಾಲಿಗೆ ತಿರುಗದ ಹಿಂದಿ ಭಾಷಿಗರು ಉಜೇನ್ ಎಂದೇ ಕರೆಯುತ್ತಾರೆ. ಆವಂತಿಕಾಪುರಿ, ಪದ್ಮಾವತಿ, ಕನಕಶೃಂಗ, ಕುಶಸ್ಥಲೀ, ಕುಮುದಾವತಿ, ಅಮರಾವತಿ, ವಿಶಾಲಾ ಎಂಬ ಹೆಸರುಗಳೂ ಈ ಊರಿಗಿದೆ ಎಂದು ತಿಳಿದು ಇಂಥ ಪುಣ್ಯ ನಗರಿಗೆ ಕಾಲಿಟ್ಟಾಗ ಮನಸ್ಸು ತುಂಬಿ ಬಂತು.

ಪ್ರಯಾಣಕ್ಕಾಗಿ ಮೊದಲೇ ಶೂದ್ರಕನಿಗೆ ಫೋನ್ ಮಾಡಿ ಹೇಳಲಾಗಿತ್ತು. ಅವನು ತನ್ನ "ಮೃಚ್ಛಕಟಿಕ"ವನ್ನು ಸಿದ್ಧಪಡಿಸಿಟ್ಟು ಕಳುಹಿಸಿದ್ದ. ಅದರ ಚಿತ್ರ ಪಕ್ಕದಲ್ಲೇ ಇದೆ. (ಮೃಚ್ಛಕಟಿಕ ಎಂದರೆ ಮಣ್ಣಿನ ಗಾಡಿ ಎಂದರ್ಥವೇ? ಬಲ್ಲವರು ಹೇಳಿ.)

ಗಡಗಡ ಸದ್ದು ಮಾಡುತ್ತಾ, ಪ್ರಿಯಕರನಲ್ಲಿ ಕೋಪಗೊಂಡ ಪ್ರಿಯತಮೆ ಮೂತಿ ಬಾಪಿಸಿಕೊಂಡಂತೆ ಕಂಡುಬಂದ ಮತ್ತು ನನ್ನ ಪ್ರೀತಿಯ ಗಾಡಿಯಾಗಿ ಪರಿವರ್ತನೆಗೊಂಡ ಬಜಾಜ್ ಕಂಪನಿಯ ಈ ಮೃಚ್ಛಕಟಿಕವು 2 ರೂಪಾಯಿಯಲ್ಲಿ ನನ್ನನ್ನು ಮಹಾಕಾಲೇಶ್ವರನ ಮಂದಿರಕ್ಕೆ ತಲುಪಿಸಿತು. ಬಸ್ಸಿನೊಳಗಿದ್ದ 60ಕ್ಕೂ ಹೆಚ್ಚು ಮಂದಿ ಎಲ್ಲಿ ಹೋದರೆಂಬುದೇ ತಿಳಿಯಲಿಲ್ಲ. ಯಾಕೆಂದರೆ ಈ ಮೃಚ್ಛಕಟಿಕದಲ್ಲಿ ಅವಕಾಶವಿದ್ದದ್ದು 10-12 ಮಂದಿಗೆ ಮಾತ್ರ.

(ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಲಾಗುತ್ತಿದೆ.)

~.~
  • BogaleRagale ರವರ ಬ್ಲಾಗ್
  • Login or register to post comments
  • 298 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬರಲಿದೆ ಪ್ರಯಾಸ ಕಥನ!!!
  • (ಹಿಂ)ಬಾಲಕರಿಗೂ ಸೈಕಲ್: ಸರ್ಕಾರಿ ಯೋಜನೆ ವಿಫಲ
  • OBC ಸರ್ಟಿಫಿಕೆಟ್ ಬಿಕರಿ
  • ಮಾತು ಮದಿರೆಯೇ ಮಾನಿನಿಯರಿಗೆ ?
  • ಉಜ್ಜಯಿನಿ ದಂಡಯಾತ್ರೆ ಪೂರ್ಣತೆಯ ಭಾಗ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 234 ಅತಿಥಿಗಳು ಆನ್ಲೈನ್ ಇರುವರು.


ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator