ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › BogaleRagale ರವರ ಬ್ಲಾಗ್

ಮುಂಬಯಿಯನ್ನು ಬೊಂ'ಬಾಯಿ'ಯಾಗಿಸಲು ಸಂಚು !

June 22, 2006 - 7:46pm — BogaleRagale

(ಬೊಗಳೂರು ಸಂಚಾರಿ ಬ್ಯುರೋದಿಂದ)
ಬೊಗಳೂರು, ಜೂ.22- ಇದೀಗ ಸದ್ದಾದ ಸುದ್ದಿ. ದೇಶದ ವಾಣಿಜ್ಯ ರಾಜಧಾನಿ ಹೆಗ್ಗಳಿಕೆಯ ಮುಂಬಯಿಯ ಹೆಸರನ್ನು ಬೊಂಬಾಯಿ ಎಂದು ಬದಲಿಸಲು ಭಾರಿ ಒಳ ಸಂಚು ನಡೆಸುತ್ತಿರುವ ವಿಷಯವೊಂದು ಇಲ್ಲಿ ಬೆಳಕಿಗೆ ಬಂದಿದೆ.

ಈ ಭಾರೀ ಕಾರ್ಯತಂತ್ರದ ಹಿಂದೆ ಬೊಗಳಿಯರ ಮತ್ತು ವಾಚಾಳಿಯರ ಜಿಹ್ವಾಡ... ಅಲ್ಲಲ್ಲ, ಕೈವಾಡ ಇರುವುದು ಕಂಡುಬಂದಿದೆ.

ಎಲ್ಲೆಡೆ ಮಾತಿನ ಮಲ್ಲಿಯರನ್ನು ಮಾತ್ರವೇ ಅಲ್ಲ ಅಲ್ಪ ಸ್ವಲ್ಪ ಮಟ್ಟಿಗೆ ಮಲ್ಲರನ್ನು ಕೂಡ "ಬೊಂಬಾಯಿ" ಅಂತ ಪ್ರೀತಿಯಿಂದ ಉದ್ದಹೆಸರಿಟ್ಟು ಹಿಂದೆಲ್ಲಾ ಕರೆಯುತ್ತಿದ್ದರು. ಅಷ್ಟೊಳ್ಳೆ ಹೆಸರು ಗಳಿಸಲು ನಾವು ಪುಣ್ಯ ಮಾಡಬೇಕಿತ್ತು. ಆದರೆ ಈಗ ಮುಂಬಯಿ ಅಂತ ಕರೆದರೆ ಏನೋ ಇರಿಸುಮುರಿಸಾಗುತ್ತೆ ಅನ್ನೋದು ಬೊಂಬಾಯಿ ವಾಚಾಳಿಯರ ಸಂಘದ ಅಧ್ಯಕ್ಷೆ ವಾಚಾಳೀಶ್ವರಿ ಬಾಯಿ ಅವರ ಅಳಲು.

ಈ ಒಳ ಸಂಚಿನ ಬಗ್ಗೆ ಬೊಂಬಾಯಿಯನ್ನು ಕಿರಿದಾಗಿಸಿ ಮುಂಬಯಿಯಾಗಿಸಿದ ಠಾಳ್ ಬಾಕ್ರೆ ಅವರು ಈ ಸುದ್ದಿ ತಿಳಿಸಿದ ಬೊಗಳೆ ಬ್ಯುರೋದ ರಗಳೆ ಮೇಲೇ ಬಾರ್ಕಿಂಗ್ ಮಾಡಿದ್ದಾರೆ.

ಮಾತ್ರವಲ್ಲ, ಮುಂಬಯಿಗಿಂತ ಬೊಂಬಾಯಿಯೇ 100 ಪಟ್ಟು ಹೆಚ್ಚು ಉತ್ತಮವಾಗಿತ್ತು ಅಂತ ತಿಳಿಸಿದ ಖ್ಯಾತ ನಾಮ-ಶಾಸ್ತ್ರಜ್ಞ ಬೇಜಾನ್ ದಾರೂ ಪೀನೇವಾಲ ವಿರುದ್ಧ ಕೂಡ ಬಾಕ್ರೆ ಘರ್ಜಿಸಿದ್ದಾರೆ. ಬೊಂಬಾಯಿಯನ್ನು ಇಂಗ್ಲಿಷ್‌ನಲ್ಲಿ Bomb-bay ಎಂದು ಕರೆದ ಕಾರಣಕ್ಕಾಗಿಯೇ ಅಷ್ಟೊಂದು ಬಾಂಬ್ ಸ್ಫೋಟಗಳಾದವು. ಆ ಪ್ರಮಾಣದ ಬಾಂಬ್ ಸ್ಫೋಟಗಳು ಮುಂಬಯಿ ಆದ ಮೇಲೆ ನಡೆಯಲಿಲ್ಲವಲ್ಲ ಎಂಬುದು ಅವರ ಸಮರ್ಥನೆ.

1996ರಲ್ಲಿ ಅಸತ್ಯಾನ್ವೇಷಿ ಮುಂಬಯಿಯಲ್ಲಿದ್ದ ಸಂದರ್ಭದಲ್ಲಿ, "ನಮ್ಮ ಮನೆಯಲ್ಲೂ ಗಣಪತಿ ವಿಗ್ರಹ ಹಾಲು ಕುಡಿದಿದೆ" ಅಂತ ಕಣ್ಣಾರೆ ಹೇಳಿದ್ದ ಅಂದಿನ ಮುಖ್ಯಮಂತ್ರಿ- ರಮಣಿಯರ ಮನೋಹರಿಸಿದ್ದ ಜೋಷಿ ಅವರು ಕೂಡ ಪ್ರತಿಕ್ರಿಯೆ ನೀಡಿ, ಮುಂಬಯಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಪ್ರವಾಹ, ಕಟ್ಟಡಕುಸಿತ ಇತ್ಯಾದಿ ದುರಂತಗಳ ಸರಮಾಲೆಗೆ ಏಳೂವರೆ ಶನಿ ದೋಷವಿದೆ, ಮುಂಬಯಿ ಮತ್ತೆ ಬೊಂಬಾಯಿಯಾಗಬೇಕು ಎಂದೆಲ್ಲಾ ಹೇಳುವುದು ಮೂಢ ನಂಬಿಕೆ ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೆ ಮುಂಬಯಿಯನ್ನು ಬೊಚ್ಚುಬಾಯಿ ಬೇಕಾದರೂ ಮಾಡುತ್ತೇವೆ, ಮತ್ತೆ ಬೊಂಬಾಯಿ ಮಾಡಲು ಖಂಡಿತಾ ಬಿಡುವುದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

BogaleRagale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 497 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಟ್ರಾಫಿಕ್' ಜಾಮ್‌ನಗರ ವಿರುದ್ಧ ಟ್ರಾಫಿಕ್ ಜಾಮ್ !
  • ನಮ್ಮ ಪಾ(ತ)ಕಿ ಮಿತ್ರ ಪರೀಕ್ಷೆಯಲ್ಲಿ ಪಾಸಾಗಲಿ
  • ಮಾತು ಮದಿರೆಯೇ ಮಾನಿನಿಯರಿಗೆ ?
  • (ಅಫ್ಜಲ್) ಗುರು ಹತ್ಯೆ ಮಹಾಪಾಪ!
  • ವಿದ್ಯಾರ್ಥಿನಿಯರು ಮದ್ಯಾರ್ಥಿನಿಯರಾದಾಗ!
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬರಾಕ್ ಒಬಾಮ ಮತ್ತು ಜಾನ್ ಮೆಕೈನ್: ಯಾರು ಸರಿ?
  • ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
  • ಪುರಂದರದಾಸರ ಎರಡು ಪದಗಳು
  • IT - ಸಿಂಪ್ಟಮ್ಸ
  • ಬಿಟ್ಟು ಹೋದವಳಿಗಾಗಿ
  • ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
  • ನೀರವತೆ!
  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 110 ಅತಿಥಿಗಳು ಆನ್ಲೈನ್ ಇರುವರು.


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator